Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 1:33 - ಪರಿಶುದ್ದ ಬೈಬಲ್‌

33 ನಫ್ತಾಲ್ಯರಿಗೂ ಹೀಗೆಯೇ ಆಯಿತು. ನಫ್ತಾಲ್ಯರು ಅಲ್ಲಿಯ ಜನರನ್ನು ಬೇತ್‌ಷೆಮೆಷ್, ಬೇತನಾತ್ ನಗರಗಳಿಂದ ಹೊರದೂಡಲಿಲ್ಲ. ಹೀಗಾಗಿ ನಫ್ತಾಲ್ಯರು ಆ ನಗರಗಳ ಜನರೊಡನೆ ವಾಸಮಾಡ ತೊಡಗಿದರು. ಆ ಕಾನಾನ್ಯರು ನಫ್ತಾಲ್ಯರ ಗುಲಾಮರಾಗಿ ಕೆಲಸ ಮಾಡಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ನಫ್ತಾಲಿ ಕುಲದವರು ಬೇತ್ ಷೆಮೆಷ್, ಬೇತನಾತ್ ಎಂಬ ಊರುಗಳಲ್ಲಿ ಸ್ವಾಧೀನ ಮಾಡಿಕೊಳ್ಳದೆ ಅಲ್ಲಿಯ ನಿವಾಸಿಗಳಾದ ಕಾನಾನ್ಯರ ಮಧ್ಯದಲ್ಲೇ ವಾಸಮಾಡಿದರು ಮತ್ತು ಬೇತ್ ಷೆಮೆಷ್, ಬೇತನಾತ್ ಊರುಗಳ ಜನರು ಅವರಿಗೆ ಗುಲಾಮರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ನಫ್ತಾಲಿ ಕುಲದವರು ಬೇತ್ ಷೆಮೆಷ್, ಬೇತನಾತ್ ಎಂಬ ಊರುಗಳನ್ನು ಸ್ವತಂತ್ರಿಸಿಕೊಳ್ಳದೆ ಅಲ್ಲಿಯ ನಿವಾಸಿಗಳಾದ ಕಾನಾನ್ಯರ ಮಧ್ಯದಲ್ಲೇ ವಾಸಮಾಡಿದರು. ಮತ್ತು ಆ ಬೇತ್ ಷೆಮೆಷ್, ಬೇತನಾತ್ ಊರುಗಳ ಜನರು ಅವರಿಗೆ ಗುಲಾಮರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ನಫ್ತಾಲ್ಯರು ಬೇತ್‍ಷೆಮೆಷ್, ಬೇತನಾತ್ ಎಂಬ ಊರುಗಳನ್ನು ಸ್ವತಂತ್ರಿಸಿಕೊಳ್ಳದೆ ಅಲ್ಲಿಯ ನಿವಾಸಿಗಳಾದ ಕಾನಾನ್ಯರ ಮಧ್ಯದಲ್ಲೇ ವಾಸಮಾಡಿದರು. ಮತ್ತು ಆ ಬೇತ್‍ಷೆಮೆಷ್ ಬೇತನಾತ್ ಊರುಗಳ ಜನರು ಅವರಿಗೆ ದಾಸರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ನಫ್ತಾಲಿ ಗೋತ್ರದವರು ಬೇತ್ ಷೆಮೆಷ್ ವಾಸಿಗಳನ್ನೂ ಹೊರಡಿಸಿಬಿಡದೆ, ಆ ದೇಶವಾಸಿಗಳಾದ ಕಾನಾನ್ಯರ ಮಧ್ಯದಲ್ಲಿ ವಾಸಿಸಿದ್ದರು. ಆದರೆ ಬೇತ್ ಷೆಮೆಷ್, ಬೇತ್ ಅನಾತ್ ಪಟ್ಟಣ ವಾಸಿಗಳು ಅವರಿಗೆ ದಾಸರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 1:33
7 ತಿಳಿವುಗಳ ಹೋಲಿಕೆ  

ಯೆಹೋವನ ದೃಷ್ಟಿಯಲ್ಲಿ ನಾನು ನೀತಿವಂತನೂ ನಿರಪರಾಧಿಯೂ ಆಗಿರುವುದರಿಂದ ಆತನು ನನಗೆ ತಕ್ಕ ಪ್ರತಿಫಲವನ್ನು ಕೊಟ್ಟನು.


ಅಮೋರಿಯರು ಹರ್‌ಹೆರೆಸ್ ಪರ್ವತ, ಅಯ್ಯಾಲೋನ್ ಮತ್ತು ಶಾಲ್ಬೀಮ್‌ಗಳಲ್ಲಿ ವಾಸಿಸಬೇಕೆಂದು ನಿರ್ಧರಿಸಿದರು. ತರುವಾಯ ಯೋಸೇಫ್ಯರು ಪ್ರಬಲರಾದರು. ಆಗ ಅವರು ಅಮೋರಿಯರನ್ನು ತಮ್ಮ ಗುಲಾಮರನ್ನಾಗಿ ಮಾಡಿಕೊಂಡರು.


ಜೆಬುಲೂನ್ಯರ ಸಂಗಡವೂ ಹೀಗೆಯೇ ಆಯಿತು. ಕಿಟ್ರೋನ್ ಮತ್ತು ನಹಲೋಲ್ ನಗರಗಳಲ್ಲಿ ಕೆಲವು ಕಾನಾನ್ಯರು ವಾಸಮಾಡಿಕೊಂಡಿದ್ದರು. ಜೆಬುಲೂನ್ಯರು ಅವರನ್ನು ಆ ಪ್ರದೇಶದಿಂದ ಹೊರದೂಡಲಿಲ್ಲ. ಆ ಕಾನಾನ್ಯರು ಅಲ್ಲಿಯೇ ಉಳಿದುಕೊಂಡು ಜೆಬುಲೂನ್ಯರೊಂದಿಗೆ ವಾಸಮಾಡಿದರು. ಆದರೆ ಜೆಬುಲೂನ್ಯರು ಅವರನ್ನು ತಮ್ಮ ಗುಲಾಮರಂತೆ ಕೆಲಸಮಾಡಲು ಹಚ್ಚಿದರು.


ಬಾಲಾದಲ್ಲಿ ಆ ಸೀಮೆಯು ಪಶ್ಚಿಮಕ್ಕೆ ತಿರುಗಿಕೊಂಡು ಸೇಯೀರ್ ಬೆಟ್ಟಪ್ರದೇಶಕ್ಕೆ ಹೋಗುತ್ತದೆ; ಅಲ್ಲಿಂದ ಅದು ಕೆಸಾಲೋನ್ ಎಂಬ ಯಾರೀಮ್ ಬೆಟ್ಟದ ಉತ್ತರ ಮಾರ್ಗವಾಗಿ ಇಳಿಯುತ್ತಾ ಬೇತ್‌ಷೆಮೆಷಿಗೂ ಅಲ್ಲಿಂದ ತಿಮ್ನಾ ಊರಿಗೂ ಹೋಗುತ್ತದೆ.


ಆಶೇರ್ಯರು ತಮ್ಮ ಪ್ರದೇಶವನ್ನು ಬಿಡುವಂತೆ ಕಾನಾನ್ಯರನ್ನು ಒತ್ತಾಯಿಸಲಿಲ್ಲ. ಹೀಗಾಗಿ ಕಾನಾನ್ಯರು ಆಶೇರ್ಯರೊಡನೆ ಇರತೊಡಗಿದರು.


ಅಮೋರಿಯರು ದಾನ್ ಕುಲದವರನ್ನು ಬೆಟ್ಟಪ್ರದೇಶದಲ್ಲಿಯೇ ವಾಸಿಸುವಂತೆ ಮಾಡಿದರು. ಅಮೋರಿಯರು ಕಣಿವೆಗೆ ಬರಲು ಅವಕಾಶ ಕೊಡಲಿಲ್ಲವಾದ್ದರಿಂದ ದಾನ್ ಕುಲದವರು ಬೆಟ್ಟಪ್ರದೇಶದಲ್ಲಿಯೇ ಉಳಿಯಬೇಕಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು