ನ್ಯಾಯಸ್ಥಾಪಕರು 1:4 - ಪರಿಶುದ್ದ ಬೈಬಲ್4 ಯೆಹೋವನು ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಸೋಲಿಸುವುದರಲ್ಲಿ ಯೆಹೂದ್ಯರಿಗೆ ಸಹಾಯ ಮಾಡಿದನು. ಯೆಹೂದ್ಯರು ಬೆಜೆಕ್ ನಗರದಲ್ಲಿ ಹತ್ತು ಸಾವಿರ ಜನರನ್ನು ಕೊಂದುಹಾಕಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವರು ಒಪ್ಪಿ ಯೆಹೂದ್ಯರ ಜೊತೆಯಲ್ಲಿ ಯುದ್ಧಕ್ಕೆ ಹೋದರು. ಆಗ ಯೆಹೋವನು ಕಾನಾನ್ಯರನ್ನೂ, ಪೆರಿಜ್ಜೀಯರನ್ನೂ ಅವರ ಕೈಗೆ ಒಪ್ಪಿಸಿದ್ದರಿಂದ ಅವರು ಅವರಲ್ಲಿ ಹತ್ತು ಸಾವಿರ ಮಂದಿಯನ್ನು ಬೆಜೆಕ್ ಎಂಬ ಸ್ಥಳದಲ್ಲಿ ಹತ್ಯೆಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅವರು ಒಪ್ಪಿ ಯೆಹೂದ ಕುಲದವರ ಜೊತೆ ಯುದ್ಧಕ್ಕೆ ಹೋದರು. ಸರ್ವೇಶ್ವರ ಕಾನಾನ್ಯರನ್ನು ಹಾಗು ಪೆರಿಜ್ಜೀಯರನ್ನು ಅವರ ಕೈವಶ ಮಾಡಲು ಅವರು ಹತ್ತುಸಾವಿರ ಶತ್ರುಗಳನ್ನು ಬೆಜೆಕಿನಲ್ಲಿ ಸೋಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವರು ಒಪ್ಪಿ ಯೆಹೂದ್ಯರ ಜೊತೆಯಲ್ಲಿ ಯುದ್ಧಕ್ಕೆ ಹೋದರು. ಆಗ ಯೆಹೋವನು ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಅವರ ಕೈಗೆ ಒಪ್ಪಿಸಿದ್ದರಿಂದ ಅವರು ಅವರಲ್ಲಿ ಹತ್ತು ಸಾವಿರ ಮಂದಿಯನ್ನು ಬೆಜೆಕಿನಲ್ಲಿ ಹತಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಯೆಹೂದ ಗೋತ್ರದವರು ಹೋದಾಗ, ಯೆಹೋವ ದೇವರು ಕಾನಾನ್ಯರನ್ನೂ ಪೆರಿಜೀಯರನ್ನೂ ಅವರ ಕೈಯಲ್ಲಿ ಒಪ್ಪಿಸಿಕೊಟ್ಟರು. ಅವರು ಬೆಜೆಕಿನಲ್ಲಿ ಹತ್ತು ಸಾವಿರ ಜನರನ್ನು ಕೊಂದರು. ಅಧ್ಯಾಯವನ್ನು ನೋಡಿ |
ನಂತರ ರಾಜನಾದ ಅಹಾಬನ ಎದುರಿನಲ್ಲಿ ಮೀಕಾಯೆಹು ನಿಂತುಕೊಂಡನು. ರಾಜನು ಅವನನ್ನು, “ಮೀಕಾಯೆಹುವೇ, ರಾಜನಾದ ಯೆಹೋಷಾಫಾಟನು ಮತ್ತು ನಾನು ನಮ್ಮ ಸೈನ್ಯಗಳನ್ನು ಒಟ್ಟುಗೂಡಿಸಬಹುದೇ? ಅರಾಮ್ಯರ ಸೇನೆಯ ವಿರುದ್ಧ ಹೋರಾಡಲು ರಾಮೋತಿಗೆ ನಾವೀಗ ಹೋಗಬೇಕೇ?” ಎಂದು ಕೇಳಿದನು. ಮೀಕಾಯೆಹು, “ಆಗಲಿ, ಈಗ ನೀವು ಹೋಗಿ, ಅವರ ವಿರುದ್ಧ ಯುದ್ಧಮಾಡಿ. ಯೆಹೋವನು ನಿಮಗೆ ಜಯವನ್ನು ಕೊಡುತ್ತಾನೆ” ಎಂದನು.
ಯೆಹೂದ್ಯರು ತಮ್ಮ ಸಹೋದರರಾದ ಸಿಮೆಯೋನ್ಯರಿಂದ ಸಹಾಯವನ್ನು ಕೇಳಿದರು; ಯೆಹೂದ್ಯರು, “ಸಹೋದರರೇ, ಯೆಹೋವನು ನಮ್ಮಲ್ಲಿ ಪ್ರತಿಯೊಬ್ಬರಿಗೂ ಸ್ವಲ್ಪಸ್ವಲ್ಪ ಭೂಮಿಯನ್ನು ಕೊಡುವುದಾಗಿ ವಾಗ್ದಾನ ಮಾಡಿದ್ದಾನೆ. ನೀವು ಬಂದು ನಮ್ಮ ಭೂಮಿಗಾಗಿ ಹೋರಾಡುವ ಯುದ್ಧದಲ್ಲಿ ಸಹಾಯ ಮಾಡಿದರೆ, ನಿಮ್ಮ ಭೂಮಿಗಾಗಿ ಹೋರಾಡುವ ಯುದ್ಧದಲ್ಲಿ ನಾವು ನಿಮಗೆ ಸಹಾಯ ಮಾಡುತ್ತೇವೆ” ಎಂದು ಹೇಳಿದರು. ಸಿಮೆಯೋನ್ಯರು ತಮ್ಮ ಸಹೋದರರಾದ ಯೆಹೂದ್ಯರಿಗೆ ಯುದ್ಧದಲ್ಲಿ ಸಹಾಯ ಮಾಡಲು ಒಪ್ಪಿಕೊಂಡರು.