Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 10:1 - ಪರಿಶುದ್ದ ಬೈಬಲ್‌

1 ಅಬೀಮೆಲೆಕನು ಸತ್ತ ತರುವಾಯ ಇಸ್ರೇಲರನ್ನು ರಕ್ಷಿಸಲು ಯೆಹೋವನು ಮತ್ತೊಬ್ಬ ನ್ಯಾಯಾಧೀಶನನ್ನು ಕಳುಹಿಸಿದನು. ಅವನ ಹೆಸರು ತೋಲ. ತೋಲನು ಪೂವನ ಮಗನು. ಪೂವನು ದೋದೋ ಎಂಬವನ ಮಗನು. ತೋಲನು ಇಸ್ಸಾಕಾರ್ ಕುಲಕ್ಕೆ ಸೇರಿದವನೂ ಶಾಮೀರ ನಗರದ ವಾಸಿಯೂ ಆಗಿದ್ದನು. ಶಾಮೀರ ನಗರವು ಎಫ್ರಾಯೀಮ್ ಬೆಟ್ಟಪ್ರದೇಶದಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅಬೀಮೆಲೆಕನ ಮರಣದ ತರುವಾಯ ಇಸ್ಸಾಕಾರ್ ಕುಲದ ಪೂವನ ಮಗನೂ, ದೋದೋವಿನ ಮೊಮ್ಮಗನೂ ಆಗಿದ್ದ ತೋಲನು ಇಸ್ರಾಯೇಲ್ಯರನ್ನು ರಕ್ಷಿಸಿವುದಕ್ಕೋಸ್ಕರ ಎದ್ದನು. ಅವನು ಎಫ್ರಾಯೀಮ್ ಬೆಟ್ಟದ ಸೀಮೆಯ ಶಾಮೀರೆಂಬ ಊರಲ್ಲಿ ವಾಸವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅಬೀಮೆಲೆಕನ ತರುವಾಯ ಇಸ್ಸಾಕಾರ್ ಕುಲದ ಪೂವನ ಮಗನೂ ದೋದೋವಿನ ಮೊಮ್ಮಗನೂ ಆಗಿದ್ದ ತೋಲನು ಎದ್ದು ಇಸ್ರಯೇಲರನ್ನು ಕಾಪಾಡಿದನು. ಅವನು ಎಫ್ರಯಿಮ್ ಮಲೆನಾಡಿನ ಶಾಮೀರವೆಂಬ ಊರಲ್ಲಿ ವಾಸವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅಬೀಮೆಲೆಕನ ತರುವಾಯ ಇಸ್ಸಾಕಾರ್ ಕುಲದ ಪೂವನ ಮಗನೂ ದೋದೋವಿನ ಮೊಮ್ಮಗನೂ ಆಗಿದ್ದ ತೋಲನು ಎದ್ದು ಇಸ್ರಾಯೇಲ್ಯರನ್ನು ರಕ್ಷಿಸಿದನು. ಅವನು ಎಫ್ರಾಯೀಮ್ ಬೆಟ್ಟದ ಸೀಮೆಯ ಶಾಮೀರೆಂಬ ಊರಲ್ಲಿ ವಾಸವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅಬೀಮೆಲೆಕನ ತರುವಾಯ ಇಸ್ಸಾಕಾರನ ಕುಲದ ದೋದೋವಿನ ಮಗನಾದ ಪೂವನ ಮಗನಾದ ತೋಲನು ಇಸ್ರಾಯೇಲರನ್ನು ರಕ್ಷಿಸುವುದಕ್ಕೆ ಎದ್ದನು. ಅವನು ಎಫ್ರಾಯೀಮ್ ಬೆಟ್ಟದ ಸೀಮೆಯ ಶಾಮೀರೆಂಬ ಊರಲ್ಲಿ ವಾಸಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 10:1
8 ತಿಳಿವುಗಳ ಹೋಲಿಕೆ  

ಆಗ ಯೆಹೋವನು ನ್ಯಾಯಾಧೀಶರೆಂಬ ಕೆಲವು ನಾಯಕರನ್ನು ಆರಿಸಿದನು. ಈ ನಾಯಕರು ಇಸ್ರೇಲರನ್ನು ಅವರ ವೈರಿಗಳಿಂದ ಕಾಪಾಡಿದರು.


ಇಸ್ರೇಲರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಟ್ಟರು. ಅವರನ್ನು ರಕ್ಷಿಸಲು ಯೆಹೋವನು ಒಬ್ಬ ಮನುಷ್ಯನನ್ನು ಕಳುಹಿಸಿದನು. ಆ ಮನುಷ್ಯನ ಹೆಸರು ಒತ್ನೀಯೇಲ. ಅವನು ಕೆನಜ ಎಂಬವನ ಮಗನು. ಕೆನಜನು ಕಾಲೇಬನ ತಮ್ಮ. ಒತ್ನೀಯೇಲನು ಇಸ್ರೇಲರನ್ನು ರಕ್ಷಿಸಿದನು.


ಯೆಹೂದದ ಜನರಿಗೆ ಬೆಟ್ಟಪ್ರದೇಶದಲ್ಲಿಯೂ ಊರುಗಳನ್ನು ಕೊಡಲಾಗಿತ್ತು. ಆ ಊರುಗಳ ಪಟ್ಟಿ ಇಂತಿದೆ: ಶಾಮೀರ್, ಯತ್ತೀರ್, ಸೋಕೋ,


ಇಸ್ಸಾಕಾರನ ಮಕ್ಕಳು: ತೋಲಾ, ಪುವ್ವಾ, ಯೋಬ್ ಮತ್ತು ಶಿಮ್ರೋನ್.


ದೇವರು ಶೆಕೆಮ್ ನಗರದ ಜನರನ್ನೂ ಸಹ ಅವರು ಮಾಡಿದ ದುಷ್ಕೃತ್ಯಗಳಿಗಾಗಿ ದಂಡಿಸಿದನು. ಹೀಗೆ ಯೆರುಬ್ಬಾಳನ (ಗಿದ್ಯೋನ) ಕಿರಿಯ ಮಗನಾದ ಯೋತಾಮನು ನುಡಿದಂತೆಯೇ ಆಯಿತು.


ತೋಲನು ಇಪ್ಪತ್ತಮೂರು ವರ್ಷಗಳವರೆಗೆ ಇಸ್ರೇಲರ ನ್ಯಾಯಾಧೀಶನಾಗಿದ್ದನು. ಆಮೇಲೆ ತೋಲನು ಮರಣಹೊಂದಿದನು. ಶಾಮೀರಿನಲ್ಲಿ ಅವನ ಸಮಾಧಿ ಮಾಡಲಾಯಿತು.


ಸೆಯೀರಾ ಎಂಬ ಸ್ಥಳಕ್ಕೆ ಬಂದನು. ಅಲ್ಲಿ ಎಫ್ರಾಯೀಮ್ ಬೆಟ್ಟಪ್ರದೇಶದಲ್ಲಿ ಅವನು ತುತ್ತೂರಿಯನ್ನು ಊದಿದನು. ಇಸ್ರೇಲರು ತುತ್ತೂರಿಯ ಧ್ವನಿಯನ್ನು ಕೇಳಿ ಬೆಟ್ಟದಿಂದ ಇಳಿದು ಏಹೂದನನ್ನು ಹಿಂಬಾಲಿಸಿ ಹೋದರು.


ಯೆಫ್ತಾಹನ ತರುವಾಯ ಇಬ್ಜಾನ ಎಂಬವನು ಇಸ್ರೇಲರ ನ್ಯಾಯಾಧೀಶನಾಗಿದ್ದನು. ಇಬ್ಜಾನನು ಬೆತ್ಲೆಹೇಮ್ ನಗರದವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು