Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 10:13 - ಪರಿಶುದ್ದ ಬೈಬಲ್‌

13 ಆದರೆ ನೀವು ನನ್ನನ್ನು ತ್ಯಜಿಸಿದಿರಿ. ನೀವು ಬೇರೆ ದೇವರುಗಳನ್ನು ಪೂಜಿಸಿದಿರಿ. ಆದ್ದರಿಂದ ನಾನು ಮತ್ತೆ ನಿಮ್ಮನ್ನು ರಕ್ಷಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೀವು ಪುನಃ ನನ್ನನ್ನು ಬಿಟ್ಟು, ಅನ್ಯದೇವತೆಗಳನ್ನು ಸೇವಿಸುತ್ತಾ ಬಂದಿರಿ. ಆದುದರಿಂದ ನಾನು ಇನ್ನು ಮುಂದೆ ನಿಮ್ಮನ್ನು ರಕ್ಷಿಸುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆದರೂ ನೀವು ಮತ್ತೆ ನನ್ನನ್ನು ಬಿಟ್ಟು ಅನ್ಯದೇವತೆಗಳನ್ನು ಪೂಜಿಸುತ್ತಾ ಬಂದಿರಿ; ಆದುದರಿಂದ ನಾನು ಇನ್ನು ಮುಂದೆ ನಿಮ್ಮನ್ನು ರಕ್ಷಿಸುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನೀವು ತಿರಿಗಿ ನನ್ನನ್ನು ಬಿಟ್ಟು ಅನ್ಯದೇವತೆಗಳನ್ನು ಸೇವಿಸುತ್ತಾ ಬಂದಿರಿ; ಆದದರಿಂದ ನಾನು ಇನ್ನು ಮುಂದೆ ನಿಮ್ಮನ್ನು ರಕ್ಷಿಸುವದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದರೂ ನೀವು ನನ್ನನ್ನು ಬಿಟ್ಟು ಅನ್ಯದೇವರುಗಳನ್ನು ಸೇವಿಸುತ್ತಾ ಬಂದಿರಿ; ಆದ್ದರಿಂದ ಇನ್ನು ನಾನು ನಿಮ್ಮನ್ನು ರಕ್ಷಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 10:13
11 ತಿಳಿವುಗಳ ಹೋಲಿಕೆ  

“ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ. ಅವರು ನನ್ನಿಂದ ಮುಖ ತಿರುವಿದ್ದಾರೆ. ನಾನು ಜೀವಜಲದ ಬುಗ್ಗೆಯಾಗಿದ್ದೇನೆ. ಅವರು ತಮ್ಮದೇ ಆದ ನೀರಿನ ತೊಟ್ಟಿಗಳನ್ನು ನಿರ್ಮಿಸಿಕೊಂಡಿದ್ದಾರೆ. ಅವರು ಇತರ ದೇವರುಗಳ ಕಡೆಗೆ ತಿರುಗಿಕೊಂಡಿದ್ದಾರೆ. ಅವರ ತೊಟ್ಟಿಗಳು ಒಡೆದಿವೆ. ಅವುಗಳಲ್ಲಿ ನೀರು ತುಂಬಿಡಲು ಸಾಧ್ಯವಿಲ್ಲ.


“ನನ್ನ ಮಗನಾದ ಸೊಲೊಮೋನನೇ, ನಿನ್ನ ತಂದೆಯ ದೇವರನ್ನು ನೀನು ಚೆನ್ನಾಗಿ ಅರಿತುಕೋ. ನೀನು ಪೂರ್ಣಹೃದಯದಿಂದಲೂ ಪೂರ್ಣಮನಸ್ಸಿನಿಂದಲೂ ನಿನ್ನ ದೇವರನ್ನು ಸೇವಿಸು. ದೇವರು ಪ್ರತಿಯೊಬ್ಬನ ಹೃದಯ ಮನಸ್ಸುಗಳನ್ನು ನೋಡುತ್ತಾನೆ. ನೀನು ದೇವರ ಸಹಾಯವನ್ನು ಕೇಳಿದರೆ ಆತನು ನಿನ್ನ ಪ್ರಾರ್ಥನೆಯನ್ನು ಲಾಲಿಸುವನು. ಆದರೆ ನೀನು ದೇವರನ್ನು ಬಿಟ್ಟರೆ ಆತನು ನಿನ್ನನ್ನು ಬಿಟ್ಟುಹೋಗುವನು.


ಯೆಹೋವನು ಇಸ್ರೇಲರನ್ನು ಈಜಿಪ್ಟಿನಿಂದ ಬಿಡಿಸಿಕೊಂಡು ಬಂದಿದ್ದನು. ಅವರ ಪೂರ್ವಿಕರು ಯೆಹೋವನನ್ನು ಆರಾಧಿಸುತ್ತಿದ್ದರು. ಆದರೆ ಇಸ್ರೇಲರು ಯೆಹೋವನನ್ನು ಅನುಸರಿಸದೆ ತಮ್ಮ ಸುತ್ತಮುತ್ತಲಿನ ಜನರ ಸುಳ್ಳುದೇವರುಗಳನ್ನು ಪೂಜಿಸಲು ಆರಂಭಿಸಿದರು. ಆದ್ದರಿಂದ ಯೆಹೋವನಿಗೆ ಕೋಪ ಬಂತು.


“ಕೆಲವು ಜನರು ಪ್ರಯೋಜನವಿಲ್ಲದ ವಿಗ್ರಹಗಳನ್ನು ಪೂಜಿಸುತ್ತಾರೆ. ಆದರೆ ಆ ವಿಗ್ರಹಗಳು ಅವರಿಗೆ ಸಹಾಯ ಮಾಡುವುದಿಲ್ಲ.


“ಆದರೆ ಯೆಶುರೂನು ಕೊಬ್ಬಿದನು; ಕೊಬ್ಬಿದ ಹೋರಿಯಂತೆ ಒದ್ದನು; ಅವನು ಚೆನ್ನಾಗಿ ತಿಂದು ಕೊಬ್ಬಿ ಊದಿಕೊಂಡನು; ತನ್ನ ನಿರ್ಮಾಣಿಕನಾದ ಯೆಹೋವನನ್ನು ತೊರೆದನು; ತನ್ನನ್ನು ಸಂರಕ್ಷಿಸಿದ ಬಂಡೆಯಿಂದ ಓಡಿಹೋದನು;


ನೀವು ಆ ದೇವರುಗಳನ್ನು ಪೂಜಿಸಲು ಇಷ್ಟಪಡುತ್ತೀರಿ. ಆದ್ದರಿಂದ ಹೋಗಿ ಅವರನ್ನೇ ಸಹಾಯಕ್ಕಾಗಿ ಮೊರೆಯಿಡಿ. ನೀವು ಕಷ್ಟದಲ್ಲಿರುವಾಗ ಆ ದೇವರುಗಳೇ ನಿಮ್ಮನ್ನು ರಕ್ಷಿಸಲಿ” ಎಂದು ಉತ್ತರಿಸಿದನು.


ಆದರೆ ಪ್ರತಿಯೊಬ್ಬ ನ್ಯಾಯಾಧೀಶನು ಮರಣಹೊಂದಿದಾಗ ಇಸ್ರೇಲರು ಪುನಃ ಪಾಪ ಮಾಡುತ್ತಿದ್ದರು ಮತ್ತು ತಮ್ಮ ಪೂರ್ವಿಕರಿಗಿಂತಲೂ ಭ್ರಷ್ಠರಾಗಿ ಸುಳ್ಳುದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬೀಳಲಾರಂಭಿಸುತ್ತಿದ್ದರು. ಇಸ್ರೇಲರು ತುಂಬ ಮೊಂಡರಾಗಿದ್ದು ತಮ್ಮ ದುರ್ನಡತೆಗಳನ್ನು ಬಿಡಲು ಸಿದ್ಧರಾಗಿರಲಿಲ್ಲ.


ಆಗ ಪ್ರವಾದಿಯಾದ ಶೆಮಾಯನು, ಶೀಶಕನಿಗೆ ಹೆದರಿಕೊಂಡು ಜೆರುಸಲೇಮಿನಲ್ಲಿ ಒಟ್ಟಾಗಿ ಸೇರಿ ಬಂದಿದ್ದ ರೆಹಬ್ಬಾಮನ ಮತ್ತು ಇಸ್ರೇಲಿನ ಪ್ರಧಾನರ ಬಳಿಗೆ ಬಂದು, “ಯೆಹೋವನು ಹೇಳುವುದೇನೆಂದರೆ, ರೆಹಬ್ಬಾಮನೇ, ನೀನು ಮತ್ತು ಯೆಹೂದದ ಜನರು ನನ್ನನ್ನು ತೊರೆದಿದ್ದೀರಿ. ನನ್ನ ಕಟ್ಟಳೆಗಳನ್ನು ಅನುಸರಿಸಲು ನಿರಾಕರಿಸಿದ್ದೀರಿ. ಈಗ ನಾನು ನಿಮಗೆ ಸಹಾಯ ಮಾಡದೆ ಶೀಶಕನನ್ನು ಎದುರಿಸಲು ನಿಮ್ಮನ್ನು ಬಿಟ್ಟುಬಿಡುವೆನು” ಎಂದು ಹೇಳಿದನು.


ಅಂದಿನಿಂದ ಇಂದಿನ ತನಕವೂ ಎದೋಮ್ ರಾಜ್ಯವು ಯೆಹೂದರಾಜ್ಯಕ್ಕೆ ಒಳಗಾಗಲೇ ಇಲ್ಲ. ಲಿಬ್ನ ಪಟ್ಟಣದ ಜನರೂ ಯೆಹೋರಾಮನಿಗೆ ಎದುರುನಿಂತರು. ತನ್ನ ಪೂರ್ವಿಕರು ಆರಾಧಿಸುತ್ತಿದ್ದ ದೇವರಾದ ಯೆಹೋವನನ್ನು ಯೆಹೋರಾಮನು ತೊರೆದುಬಿಟ್ಟಿದ್ದರಿಂದ ಇವೆಲ್ಲಾ ಅವನಿಗೆ ಸಂಭವಿಸಿದವು.


ನೀವು ಕೆಟ್ಟದ್ದನ್ನು ಮಾಡಿದರೆ ಆ ಕೆಟ್ಟತನ ನಿಮಗೆ ಶಿಕ್ಷೆಯಾಗುವಂತೆ ಮಾತ್ರ ಮಾಡುತ್ತದೆ. ನಿಮಗೆ ವಿಪತ್ತು ಬರುತ್ತದೆ. ಆ ವಿಪತ್ತು ನಿಮಗೊಂದು ಪಾಠವನ್ನು ಕಲಿಸುತ್ತದೆ. ಅದರ ಬಗ್ಗೆ ಯೋಚಿಸಿರಿ. ಆಗ ನಿಮ್ಮ ದೇವರಿಗೆ ವಿಮುಖರಾಗುವುದು ಎಷ್ಟು ಕೆಟ್ಟದ್ದೆಂದು ನಿಮಗೆ ಗೊತ್ತಾಗುತ್ತದೆ. ನನಗೆ ಭಯಭಕ್ತಿ ತೋರದೆ ಇರುವದು ತಪ್ಪು.” ಈ ಸಂದೇಶವು ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಂದ ಬಂದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು