Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 10:15 - ಪರಿಶುದ್ದ ಬೈಬಲ್‌

15 ಆದರೆ ಇಸ್ರೇಲರು ಯೆಹೋವನಿಗೆ, “ನಾವು ಪಾಪ ಮಾಡಿದ್ದೇವೆ. ನಿನಗೆ ಸರಿಯೆನಿಸಿದಂತೆ ಮಾಡು. ಆದರೆ ದಯವಿಟ್ಟು ಇಂದು ನಮ್ಮನ್ನು ರಕ್ಷಿಸು” ಎಂದು ಪ್ರಾರ್ಥಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವರು ತಿರುಗಿ ಯೆಹೋವನಿಗೆ, “ನಾವು ಪಾಪ ಮಾಡಿದ್ದೇವೆ; ನಿನಗೆ ಸರಿಕಾಣುವ ಪ್ರಕಾರ ನಮಗೆ ಮಾಡು; ಆದರೆ ಈ ಸಾರಿ ಹೇಗೂ ನಮ್ಮನ್ನು ರಕ್ಷಿಸಬೇಕು” ಎಂದು ಮೊರೆಯಿಟ್ಟು ಅನ್ಯದೇವತೆಗಳನ್ನು ತಮ್ಮಲ್ಲಿಂದ ತೆಗೆದು ಹಾಕಿ ಯೆಹೋವನನ್ನು ಸೇವಿಸುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಇಸ್ರಯೇಲರು ಮರಳಿ ಸರ್ವೇಶ್ವರನಿಗೆ, “ಪಾಪ ಮಾಡಿದ್ದೇವೆ; ನಿಮಗೆ ಸರಿ ತೋರಿದಂತೆ ನಮಗೆ ಮಾಡಿ; ಆದರೆ ಈ ಸಾರಿ ಹೇಗೂ ನಮ್ಮನ್ನು ರಕ್ಷಿಸಬೇಕು,” ಎಂದು ಮೊರೆಯಿಟ್ಟರು. ಅನ್ಯದೇವತೆಗಳನ್ನು ಹೊರಗೆ ಹಾಕಿ ಸರ್ವೇಶ್ವರನನ್ನು ಪೂಜಿಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇಸ್ರಾಯೇಲ್ಯರು ತಿರಿಗಿ ಯೆಹೋವನಿಗೆ - ನಾವು ಪಾಪ ಮಾಡಿದ್ದೇವೆ; ನಿನಗೆ ಸರಿ ಕಾಣುವ ಪ್ರಕಾರ ನಮಗೆ ಮಾಡು; ಆದರೆ ಈ ಸಾರಿ ಹೇಗೂ ನಮ್ಮನ್ನು ರಕ್ಷಿಸಬೇಕು ಎಂದು ಮೊರೆಯಿಟ್ಟು ಅನ್ಯದೇವತೆಗಳನ್ನು ತಮ್ಮಲ್ಲಿಂದ ತೆಗೆದುಹಾಕಿ ಯೆಹೋವನನ್ನು ಸೇವಿಸುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಇಸ್ರಾಯೇಲರು ಯೆಹೋವ ದೇವರಿಗೆ, “ನಾವು ಪಾಪಮಾಡಿದೆವು. ನೀವು ನಿಮಗೆ ಒಳ್ಳೆಯದಾಗಿ ತೋರುವುದನ್ನೆಲ್ಲಾ ನಮಗೆ ಮಾಡಿರಿ. ಆದರೆ ಈ ಹೊತ್ತು ನಮ್ಮನ್ನು ರಕ್ಷಿಸಿರಿ,” ಎಂದು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 10:15
16 ತಿಳಿವುಗಳ ಹೋಲಿಕೆ  

ಸಮುವೇಲನು ಏನನ್ನೂ ಮುಚ್ಚಿಡದೆ, ಎಲ್ಲವನ್ನೂ ಏಲಿಗೆ ತಿಳಿಸಿದನು. ಏಲಿಯು, “ಆತನು ಯೆಹೋವ. ಆತನು ತನಗೆ ಸರಿಕಾಣುವದನ್ನೇ ಮಾಡಲಿ” ಎಂದು ಹೇಳಿದನು.


ಆದರೆ ನನ್ನ ಮೇಲೆ ಯೆಹೋವನಿಗೆ ಇಷ್ಟವಿಲ್ಲವೆಂದು ತೋರಿದರೆ, ಆಗ ನನ್ನ ವಿರುದ್ಧವಾಗಿ ಆತನು ತನಗೆ ತೋಚಿದ್ದನ್ನು ಮಾಡಲಿ” ಎಂದನು.


ಪಾಪಗಳನ್ನು ಅಡಗಿಸಿಕೊಳ್ಳುವವನಿಗೆ ಯಶಸ್ಸು ಇಲ್ಲವೇ ಇಲ್ಲ. ತನ್ನ ಪಾಪವನ್ನು ಅರಿಕೆಮಾಡಿ ಬಿಟ್ಟುಬಿಡುವವನಿಗೆ ಕರುಣೆ ದೊರೆಯುವುದು.


ದಾವೀದನು ಗಾದನಿಗೆ, “ನಾನು ನಿಜವಾಗಿಯೂ ತೊಂದರೆಗೆ ಒಳಗಾದೆ! ಆದರೆ ಯೆಹೋವನು ಕೃಪಾಪೂರ್ಣನಾಗಿದ್ದಾನೆ. ಆದ್ದರಿಂದ ಆತನು ನನ್ನನ್ನು ದಂಡಿಸಲಿ; ಆದರೆ ಅದು ಜನರಿಂದ ಬಾರದಿರಲಿ” ಎಂದು ಹೇಳಿದನು.


ನಾವು ಈಗ ನಿಮ್ಮ ಸೇವಕರು. ನಿಮಗೆ ಸರಿ ಎನಿಸಿದ್ದನ್ನು ನೀವು ಮಾಡಬಹುದು” ಎಂದು ಉತ್ತರಿಸಿದರು.


ಒಂದುವೇಳೆ ದೇವರು ತನ್ನ ಮನಸ್ಸನ್ನು ಬದಲಾಯಿಸಾನು. ತಾನು ಯೋಚಿಸಿದ್ದನ್ನು ನೆರವೇರಿಸದೆ ಇರುವನೋ ಏನೋ? ಆತನು ತನ್ನ ಯೋಜನೆಯನ್ನು ಹಿಂದೆಗೆದು, ಕೋಪಿಸಿಕೊಳ್ಳದೆ, ನಮ್ಮನ್ನು ಶಿಕ್ಷಿಸದೆ ಇರುವನೋ ಏನೋ! ಆಗ ನಾವು ನಾಶವಾಗದಿರಬಹುದು!


ನೀನು ಶಕ್ತನಾಗಿರು. ನಮ್ಮ ಜನರಿಗಾಗಿ ಮತ್ತು ನಮ್ಮ ದೇವರ ನಗರಗಳಿಗಾಗಿ ಧೈರ್ಯದಿಂದ ಹೋರಾಡೋಣ. ಯೆಹೋವನು ತನಗೆ ಸರಿಯೆನಿಸುವುದನ್ನು ಮಾಡಲಿ” ಎಂದು ಹೇಳಿದನು.


ಆಗ ನಾನು, ‘ನಾನು ನಿನ್ನ ಕಣ್ಣೆದುರಿನಿಂದ ಹೊರದೂಡಲ್ಪಟ್ಟಿದ್ದೇನೆ’ ಅಂದುಕೊಂಡೆನು. ಆದರೂ ನಾನು ನಿನ್ನ ಪರಿಶುದ್ಧಾಲಯದ ಕಡೆಗೆ ನೋಡುವೆನು.


ಬಳಿಕ ಅವನು ಜನರ ಮುಂದೆ ನಿಂತುಕೊಂಡು, ‘ನಾನು ಪಾಪಮಾಡಿದೆನು; ಒಳ್ಳೆಯದನ್ನು ಕೆಟ್ಟದ್ದನ್ನಾಗಿ ಮಾಡಿದೆನು. ಆದರೆ ದೇವರು ಅದಕ್ಕೆ ತಕ್ಕಂತೆ ನನ್ನನ್ನು ದಂಡಿಸಲಿಲ್ಲ!


ದಾವೀದನು ಜನರನ್ನು ಲೆಕ್ಕಹಾಕಿದ ನಂತರ ಅವಮಾನಗೊಂಡಂತೆ ಭಾವಿಸಿದನು. ದಾವೀದನು ಯೆಹೋವನಿಗೆ, “ನಾನು ಈ ಕಾರ್ಯವನ್ನು ಮಾಡಿ ಮಹಾಪಾಪಕ್ಕೆ ಒಳಗಾದೆನು! ಯೆಹೋವನೇ, ನನ್ನ ಪಾಪಕ್ಕಾಗಿ ನನ್ನನ್ನು ಕ್ಷಮಿಸೆಂದು ಬೇಡುತ್ತೇನೆ. ನಾನು ಬಹಳ ಮೂರ್ಖನಾಗಿಬಿಟ್ಟೆ” ಎಂದು ಹೇಳಿದನು.


ಆಗ ದಾವೀದನು ನಾತಾನನಿಗೆ, “ನಾನು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದೆನು” ಎಂದನು. ನಾತಾನನು ದಾವೀದನಿಗೆ, “ಯೆಹೋವನು ನಿನ್ನ ಪಾಪವನ್ನು ಕ್ಷಮಿಸಿದ್ದಾನೆ. ನೀನು ಸಾಯುವುದಿಲ್ಲ.


ಆದರೆ ನಿಮ್ಮ ಪೂರ್ವಿಕರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಟ್ಟು, ‘ನಾವು ಯೆಹೋವನಾದ ನಿನ್ನನ್ನು ಬಿಟ್ಟು ಸುಳ್ಳುದೇವರಾದ ಬಾಳನ ಮತ್ತು ಸುಳ್ಳುದೇವತೆಯಾದ ಅಷ್ಟೋರೆತಳ ಸೇವೆ ಮಾಡಿ ಪಾಪಮಾಡಿದ್ದೇವೆ. ಆದರೆ ಈಗ ನಮ್ಮನ್ನು ಶತ್ರುಗಳಿಂದ ರಕ್ಷಿಸು; ಆಗ ನಾವು ನಿನ್ನ ಸೇವೆಮಾಡುತ್ತೇವೆ’ ಎಂದು ಹೇಳಿದರು.


ಇಸ್ರೇಲರೆಲ್ಲರು ಮಿಚ್ಪೆಯಲ್ಲಿ ಒಟ್ಟುಗೂಡಿದರು. ಅವರು ನೀರನ್ನು ತೆಗೆದುಕೊಂಡು ಬಂದು ಯೆಹೋವನ ಮುಂದೆ ಅದನ್ನು ಸುರಿದರು. ಈ ರೀತಿ ಅಂದು ಅವರು ಉಪವಾಸವನ್ನು ಆರಂಭಿಸಿದರು. ಅಂದು ಅವರು ಯಾವ ಆಹಾರವನ್ನೂ ತೆಗೆದುಕೊಳ್ಳಲಿಲ್ಲ. ಅಲ್ಲದೆ ಅವರು ತಮ್ಮ ಪಾಪಗಳನ್ನು ಅರಿಕೆ ಮಾಡಿದರು. “ನಾವು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇವೆ” ಎಂದು ಅವರು ಹೇಳಿದರು. ಹೀಗಿರಲು, ಸಮುವೇಲನು ಇಸ್ರೇಲರ ನ್ಯಾಯಾಧೀಶನಾಗಿ ಮಿಚ್ಪೆಯಲ್ಲಿ ಸೇವೆ ಸಲ್ಲಿಸಿದನು.


ಯೆಹೋವನೇ, ಕಷ್ಟ ಬಂದಾಗ ಜನರಿಗೆ ನಿನ್ನ ನೆನಪಾಗುವುದು. ನೀನು ಅವರನ್ನು ಶಿಕ್ಷಿಸಿದಾಗ ಅವರು ನಿನಗೆ ಮೌನ ಪ್ರಾರ್ಥನೆ ಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು