Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 10:4 - ಪರಿಶುದ್ದ ಬೈಬಲ್‌

4 ಯಾಯೀರನಿಗೆ ಮೂವತ್ತು ಗಂಡುಮಕ್ಕಳಿದ್ದರು. ಅವರು ಮೂವತ್ತು ಕತ್ತೆಗಳ ಮೇಲೆ ಸವಾರಿ ಮಾಡುತ್ತಿದ್ದರು. ಆ ಮೂವತ್ತು ಮಂದಿ ಗಂಡುಮಕ್ಕಳು ಗಿಲ್ಯಾದ್ ಪ್ರದೇಶದಲ್ಲಿ ಮೂವತ್ತು ಪಟ್ಟಣಗಳನ್ನು ತಮ್ಮ ಅಧೀನದಲ್ಲಿಟ್ಟುಕೊಂಡಿದ್ದರು. ಅವುಗಳಿಗೆ ಇಂದಿನವರೆಗೂ ಯಾಯೀರನ ಪಟ್ಟಣಗಳೆಂದು ಹೆಸರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇವನಿಗೆ ಮೂವತ್ತು ಮಂದಿ ಮಕ್ಕಳಿದ್ದರು. ಇವರಿಗೆ ಮೂವತ್ತು ಸವಾರಿ ಕತ್ತೆಗಳೂ, ಗಿಲ್ಯಾದ್ ದೇಶದಲ್ಲಿ ಮೂವತ್ತು ಊರುಗಳೂ ಇದ್ದವು. ಅವುಗಳಿಗೆ ಇಂದಿನ ವರೆಗೂ ಯಾಯೀರನ ಗ್ರಾಮಗಳೆಂದು ಹೆಸರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇವನಿಗೆ ಮೂವತ್ತು ಮಂದಿ ಮಕ್ಕಳಿದ್ದರು. ಇವರಿಗೆ ಮೂವತ್ತು ಸವಾರಿ ಕತ್ತೆಗಳೂ ಗಿಲ್ಯಾದ್ ದೇಶದಲ್ಲಿ ಮೂವತ್ತು ಊರುಗಳೂ ಇದ್ದವು. ಅವುಗಳಿಗೆ ಇಂದಿನವರೆಗೂ ಯಾಯೀರನ ಗ್ರಾಮಗಳೆಂದು ಹೆಸರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇವನಿಗೆ ಮೂವತ್ತು ಮಂದಿ ಮಕ್ಕಳಿದ್ದರು. ಇವರಿಗೆ ಮೂವತ್ತು ಸವಾರೀ ಕತ್ತೆಗಳೂ ಗಿಲ್ಯಾದ್ ದೇಶದಲ್ಲಿ ಮೂವತ್ತು ಊರುಗಳೂ ಇದ್ದವು. ಅವುಗಳಿಗೆ ಇಂದಿನವರೆಗೂ ಯಾಯೀರಿನ ಗ್ರಾಮಗಳೆಂದು ಹೆಸರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವನಿಗೆ ಮೂವತ್ತು ಕತ್ತೆಗಳ ಮೇಲೆ ಸವಾರಿ ಮಾಡುವ ಮೂವತ್ತು ಮಂದಿ ಪುತ್ರರು ಇದ್ದರು. ಗಿಲ್ಯಾದ್ ದೇಶದಲ್ಲಿ ಮೂವತ್ತು ಪಟ್ಟಣಗಳು ಅವರ ಅಧಿಕಾರದಲ್ಲಿದ್ದವು. ಅವುಗಳಿಗೆ ಈ ದಿನದವರೆಗೂ ಹವೋತ್ ಯಾಯೀರ್ ಎಂಬ ಹೆಸರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 10:4
8 ತಿಳಿವುಗಳ ಹೋಲಿಕೆ  

ಮನಸ್ಸೆಯ ಕುಲದವನಾದ ಯಾಯೀರನು ಅಮೋರಿಯರ ಕೋಟೆಗಳುಳ್ಳ ಹಳ್ಳಿಗಳನ್ನು ವಶಪಡಿಸಿಕೊಂಡು ಅವುಗಳಿಗೆ, “ಯಾಯೀರನ ಹಳ್ಳಿಗಳು” ಎಂದು ಹೆಸರಿಟ್ಟನು.


ಅಬ್ದೋನನಿಗೆ ನಲವತ್ತು ಮಕ್ಕಳೂ ಮೂವತ್ತು ಮೊಮ್ಮಕ್ಕಳೂ ಇದ್ದರು. ಇವರೆಲ್ಲರಿಗೆ ಸವಾರಿ ಮಾಡುವುದಕ್ಕೋಸ್ಕರ ಎಪ್ಪತ್ತು ಕತ್ತೆಗಳಿದ್ದವು. ಅಬ್ದೋನನು ಎಂಟು ವರ್ಷ ಇಸ್ರೇಲರಿಗೆ ನ್ಯಾಯಾಧೀಶನಾಗಿದ್ದನು.


“ಬಿಳಿಯ ಕತ್ತೆಗಳ ಮೇಲೆ ಸವಾರಿ ಮಾಡುವವರೇ, ರತ್ನಗಂಬಳಿಯ ಮೇಲೆ ಕುಳಿತುಕೊಳ್ಳುವವರೇ, ಮಾರ್ಗಗಳ ಮೇಲೆ ಹೋಗುವ ಪ್ರಯಾಣಿಕರೇ, ಗಮನಿಸಿರಿ!


ಮನಸ್ಸೆ ಕುಲದ ಯಾಯೀರ ಎಂಬಾತನು ಅರ್ಗೋಬ್ ಪ್ರದೇಶಗಳನ್ನು ವಶಪಡಿಸಿಕೊಂಡನು. ಆ ಪ್ರದೇಶ ಗೆಷೂರ್ಯರ ಮತ್ತು ಮಾಕಾತ್ಯರ ದೇಶದ ಮೇರೆಯ ತನಕ ಹಬ್ಬಿತ್ತು. ಆದ್ದರಿಂದ ಆ ಪ್ರದೇಶಕ್ಕೆ ಯಾಯೀರ್ ಎಂಬ ಹೆಸರು ಬಂತು. ಇಂದಿಗೂ ಜನರು ಆ ಊರುಗಳಿಗೆ, “ಯಾಯೀರನ ಬಾಷಾನ್ ಊರುಗಳು” ಎಂದು ಕರೆಯುತ್ತಾರೆ.)


ತೋಲನ ಮರಣದ ತರುವಾಯ ಯೆಹೋವನು ಮತ್ತೊಬ್ಬ ನ್ಯಾಯಾಧೀಶನನ್ನು ಕಳುಹಿಸಿದನು. ಅವನ ಹೆಸರು ಯಾಯೀರ. ಯಾಯೀರನು ಗಿಲ್ಯಾದ್ ಪ್ರದೇಶದಲ್ಲಿ ವಾಸವಾಗಿದ್ದನು. ಯಾಯೀರನು ಇಪ್ಪತ್ತೆರಡು ವರ್ಷ ಇಸ್ರೇಲರ ನ್ಯಾಯಾಧೀಶನಾಗಿದ್ದನು.


ಯಾಯೀರನು ಸತ್ತನು. ಅವನನ್ನು ಕಾಮೋನಿನಲ್ಲಿ ಹೂಳಿಟ್ಟರು.


ರಾಜನಾದ ದಾವೀದನು ಚೀಬನಿಗೆ, “ಈ ವಸ್ತುಗಳೆಲ್ಲ ಏತಕ್ಕಾಗಿ?” ಎಂದು ಕೇಳಿದನು. ಚೀಬನು, “ಹೇಸರಕತ್ತೆಗಳನ್ನು ರಾಜನ ಕುಟುಂಬದವರು ಸವಾರಿ ಮಾಡುವುದಕ್ಕಾಗಿಯೂ ರೊಟ್ಟಿಗಳನ್ನು ಮತ್ತು ಹಣ್ಣುಗಳನ್ನು ಸೇವಕರು ತಿನ್ನುವುದಕ್ಕಾಗಿಯೂ ತಂದಿದ್ದೇನೆ. ಅರಣ್ಯದಲ್ಲಿ ಶಕ್ತಿಗುಂದಿಹೋದವನು ದ್ರಾಕ್ಷಾರಸವನ್ನು ಕುಡಿಯಲಿ” ಎಂದು ಉತ್ತರಿಸಿದನು.


ಚೀಯೋನ್ ನಗರಿಯೇ, ಹರ್ಷಿಸು! ಜೆರುಸಲೇಮ್ ಜನರೇ, ಸಂತೋಷದಿಂದ ಆರ್ಭಟಿಸಿರಿ. ನಿಮ್ಮ ಅರಸನು ನಿಮ್ಮ ಬಳಿಗೆ ಬರುತ್ತಿದ್ದಾನೆ! ಆತನು ವಿಜಯಶಾಲಿಯಾದ ನೀತಿವಂತನಾಗಿದ್ದಾನೆ. ಆದರೆ ದೀನನಂತೆ ಕತ್ತೆಯ ಮೇಲೆ, ಹೌದು, ಕತ್ತೆಯ ಮರಿಯ ಮೇಲೆ ಸವಾರಿ ಮಾಡಿಕೊಂಡು ಬರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು