Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 10:6 - ಪರಿಶುದ್ದ ಬೈಬಲ್‌

6 ಇಸ್ರೇಲರು ಮತ್ತೆ ದೇವರಿಗೆ ವಿರೋಧವಾಗಿ ದುಷ್ಕೃತ್ಯಗಳನ್ನು ಮಾಡಿದರು. ಅವರು ಸುಳ್ಳುದೇವರಾದ ಬಾಳನನ್ನೂ ಸುಳ್ಳುದೇವತೆಯಾದ ಅಷ್ಟೋರೆತಳನ್ನೂ ಪೂಜಿಸತೊಡಗಿದರು. ಅವರು ಅರಾಮ್ಯರ, ಚೀದೋನ್ಯರ, ಮೋವಾಬ್ಯರ, ಅಮ್ಮೋನಿಯರ ಮತ್ತು ಫಿಲಿಷ್ಟಿಯರ ದೇವರುಗಳನ್ನು ಸಹ ಪೂಜಿಸಿದರು. ಇಸ್ರೇಲರು ಯೆಹೋವನನ್ನು ಮರೆತುಬಿಟ್ಟು ಆತನ ಸೇವೆಯನ್ನು ನಿಲ್ಲಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇಸ್ರಾಯೇಲರು ಪುನಃ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು. ಅವರು ಆತನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನೂ, ಅರಾಮ್ಯರು, ಚೀದೋನ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಇವರ ದೇವತೆಗಳನ್ನೂ ಪೂಜಿಸತೊಡಗಿದರು. ಯೆಹೋವನನ್ನು ಮರೆತು ಆತನನ್ನು ಆರಾಧಿಸುವುದನ್ನು ಬಿಟ್ಟೇಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇಸ್ರಯೇಲರು ಇನ್ನೊಮ್ಮೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಗಳಾದರು; ಅವರು ಸರ್ವೇಶ್ವರನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನು ಮತ್ತು ಅರಾಮ್ಯರು, ಚೀದೋನ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಇವರ ದೇವತೆಗಳನ್ನೂ ಪೂಜಿಸತೊಡಗಿದರು. ಸರ್ವೇಶ್ವರನನ್ನಾದರೋ ಬಿಟ್ಟೇಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇಸ್ರಾಯೇಲ್ಯರು ತಿರಿಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು; ಅವರು ಆತನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನೂ ಅರಾಮ್ಯರು, ಚೀದೋನ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಇವರ ದೇವತೆಗಳನ್ನೂ ಪೂಜಿಸಹತ್ತಿ ಯೆಹೋವನನ್ನು ಬಿಟ್ಟೇ ಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಇಸ್ರಾಯೇಲರು ಪುನಃ ಯೆಹೋವ ದೇವರ ಮುಂದೆ ಕೆಟ್ಟತನವನ್ನು ಮಾಡಿ, ಬಾಳನನ್ನೂ, ಅಷ್ಟೋರೆತನ್ನೂ, ಅರಾಮ್ ದೇಶದ ದೇವರುಗಳನ್ನೂ, ಸೀದೋನಿನ ದೇವರುಗಳನ್ನೂ, ಮೋವಾಬಿನ ದೇವರುಗಳನ್ನೂ, ಅಮ್ಮೋನಿಯರ ದೇವರುಗಳನ್ನೂ ಫಿಲಿಷ್ಟಿಯರ ದೇವರುಗಳನ್ನೂ ಸೇವಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 10:6
32 ತಿಳಿವುಗಳ ಹೋಲಿಕೆ  

ಪೂರ್ವಕಾಲದಲ್ಲಿ, ರಾಜನಾದ ಸೊಲೊಮೋನನು ಜೆರುಸಲೇಮಿನ ಬಳಿಯಲ್ಲಿದ್ದ ವಿಘ್ನಪರ್ವತದ ಮೇಲೆ ಕೆಲವು ಉನ್ನತಸ್ಥಳಗಳನ್ನು ನಿರ್ಮಿಸಿದ್ದನು. ಆ ಉನ್ನತಸ್ಥಳಗಳು ಪರ್ವತದ ದಕ್ಷಿಣದಿಕ್ಕಿನ ಮೇಲಿದ್ದವು. ರಾಜನಾದ ಸೊಲೊಮೋನನು ಚೀದೋನ್ಯರ ಅಷ್ಟೋರೆತ್, ಮೋವಾಬ್ಯರ ಕೆಮೋಷ್, ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹಗಳಿಗಾಗಿ ಆ ಉನ್ನತಸ್ಥಳಗಳನ್ನು ನಿರ್ಮಿಸಿದ್ದನು. ಆದರೆ ರಾಜನಾದ ಯೋಷೀಯನು ಆ ಪೂಜಾಸ್ಥಳಗಳನ್ನೆಲ್ಲಾ ನಾಶಪಡಿಸಿದನು.


ಸೊಲೊಮೋನನು ನನ್ನನ್ನು ಅನುಸರಿಸುವುದನ್ನು ನಿಲ್ಲಿಸಿದ ಕಾರಣ ನಾನು ಅವನ ರಾಜ್ಯವನ್ನು ಅವನಿಂದ ತೆಗೆದುಕೊಳ್ಳುವೆನು. ಅವನು ಚೀದೋನ್ಯರ ದೇವತೆಯಾದ ಅಷ್ಟೋರೆತಳನ್ನೂ ಮೋವಾಬ್ಯರ ದೇವರಾದ ಕೆಮೋಷನನ್ನೂ ಅಮ್ಮೋನಿಯರ ದೇವರಾದ ಮಿಲ್ಕೋಮನನ್ನೂ ಪೂಜಿಸಿದನು. ಸೊಲೊಮೋನನು ತಾನು ಮಾಡುತ್ತಿದ್ದ ಸರಿಯಾದ ಮತ್ತು ಉತ್ತಮವಾದ ಕಾರ್ಯಗಳನ್ನು ನಿಲ್ಲಿಸಿದನು. ಅವನು ನನ್ನ ಕಟ್ಟಳೆಗಳನ್ನು ಮತ್ತು ಆಜ್ಞೆಗಳನ್ನು ಅನುಸರಿಸಲಿಲ್ಲ. ತನ್ನ ತಂದೆಯಾದ ದಾವೀದನು ಜೀವಿಸಿದಂತೆ ಅವನು ಜೀವಿಸುತ್ತಿಲ್ಲ.


ಸೊಲೊಮೋನನು ಕೆಮೋಷನನ್ನು ಆರಾಧಿಸಲು ಒಂದು ಸ್ಥಳವನ್ನು ನಿರ್ಮಿಸಿದನು. ಮೋವಾಬ್ಯರ ಭಯಂಕರ ವಿಗ್ರಹವೇ ಕೆಮೋಷ್. ಜೆರುಸಲೇಮಿನ ಪಕ್ಕದಲ್ಲಿದ್ದ ಬೆಟ್ಟದ ಮೇಲೆ ಸೊಲೊಮೋನನು ಆರಾಧನೆಯ ಸ್ಥಳವನ್ನು ನಿರ್ಮಿಸಿದನು. ಆ ಬೆಟ್ಟದ ಮೇಲೆಯೇ ಸೊಲೊಮೋನನು ಮೋಲೆಕ್ ದೇವತೆಯ ಪೂಜಾಸ್ಥಳವನ್ನು ನಿರ್ಮಿಸಿದನು. ಅಮ್ಮೋನಿಯರ ಭಯಂಕರ ವಿಗ್ರಹವೇ ಮೋಲೆಕ್.


ಸೊಲೊಮೋನನು ಅಷ್ಟೋರೆತ್ ದೇವತೆಯನ್ನು ಪೂಜಿಸಿದನು. ಇದು ಚೀದೋನ್ಯರ ದೇವತೆ. ಸೊಲೊಮೋನನು ಮಿಲ್ಕೋಮನನ್ನು ಆರಾಧಿಸಿದನು. ಇದು ಅಮ್ಮೋನಿಯರ ಭಯಂಕರ ವಿಗ್ರಹ.


“ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ. ಅವರು ನನ್ನಿಂದ ಮುಖ ತಿರುವಿದ್ದಾರೆ. ನಾನು ಜೀವಜಲದ ಬುಗ್ಗೆಯಾಗಿದ್ದೇನೆ. ಅವರು ತಮ್ಮದೇ ಆದ ನೀರಿನ ತೊಟ್ಟಿಗಳನ್ನು ನಿರ್ಮಿಸಿಕೊಂಡಿದ್ದಾರೆ. ಅವರು ಇತರ ದೇವರುಗಳ ಕಡೆಗೆ ತಿರುಗಿಕೊಂಡಿದ್ದಾರೆ. ಅವರ ತೊಟ್ಟಿಗಳು ಒಡೆದಿವೆ. ಅವುಗಳಲ್ಲಿ ನೀರು ತುಂಬಿಡಲು ಸಾಧ್ಯವಿಲ್ಲ.


ಅವರು ದೇವಜನರಿಗೆ ಉರುಲಿನಂತಾದರು. ಅವರ ದೇವರುಗಳನ್ನು ದೇವಜನರು ಪೂಜಿಸತೊಡಗಿದರು.


ಜನರು ತಮ್ಮ ದೇವರಾದ ಯೆಹೋವನ ಆಜ್ಞೆಗಳನ್ನು ಅನುಸರಿಸುವುದನ್ನು ನಿಲ್ಲಿಸಿದರು. ಅವರು ಚಿನ್ನದ ಎರಡು ಬಸವನ ಮೂರ್ತಿಗಳನ್ನು ನಿರ್ಮಿಸಿದರು. ಅವರು ಅಶೇರ ಸ್ತಂಭಗಳನ್ನು ನಿರ್ಮಿಸಿದರು. ಅವರು ಪರಲೋಕದ ಎಲ್ಲಾ ನಕ್ಷತ್ರಗಳನ್ನು ಮತ್ತು ಬಾಳ್ ದೇವರನ್ನು ಪೂಜಿಸಿದರು.


ಫಿಲಿಷ್ಟಿಯ ಅಧಿಪತಿಗಳು ಒಂದು ಉತ್ಸವವನ್ನು ಮಾಡಲು ಸೇರಿಬಂದಿದ್ದರು. ಅವರು ತಮ್ಮ ದೇವರಾದ ದಾಗೋನನಿಗೆ ಒಂದು ಮಹಾಯಜ್ಞವನ್ನು ಸಮರ್ಪಿಸಬೇಕೆಂದಿದ್ದರು. “ನಮ್ಮ ಶತ್ರುವಾದ ಸಂಸೋನನನ್ನು ಸೋಲಿಸಲು ನಮ್ಮ ದೇವರು ನಮಗೆ ಸಹಾಯ ಮಾಡಿದನು” ಎಂದು ಅವರು ಭಾವಿಸಿದ್ದರು.


ದಮಸ್ಕದ ಜನರು ಆರಾಧಿಸುವ ಆ ದೇವರುಗಳಿಗೆ ಆಹಾಜನು ಯಜ್ಞಗಳನ್ನರ್ಪಿಸಿದನು. ದಮಸ್ಕದ ಜನರು ಆಹಾಜನನ್ನು ಸೋಲಿಸಿದ್ದರು. ಆಗ ಆಹಾಜನು, “ಅರಾಮ್ಯರು ಪೂಜಿಸುವ ದೇವರು ಅವರಿಗೆ ಸಹಾಯ ಮಾಡಿದನು. ಆದ್ದರಿಂದ ನಾನು ಆ ದೇವರಿಗೆ ಯಜ್ಞವನ್ನರ್ಪಿಸಿ ಆರಾಧಿಸಿದರೆ ಆ ದೇವರು ನನಗೂ ಸಹಾಯ ಮಾಡುವನು” ಎಂದುಕೊಂಡನು. ಆಹಾಜನು ಆ ದೇವರುಗಳನ್ನು ಪೂಜಿಸುವುದರ ಮೂಲಕ ತಾನೂ ಪಾಪಮಾಡಿ ತನ್ನ ಪ್ರಜೆಗಳನ್ನೂ ಪಾಪಮಾಡುವದಕ್ಕೆ ಪ್ರೋತ್ಸಾಹಿಸಿದನು.


ನೆಬಾಟನ ಮಗನಾದ ಯಾರೊಬ್ಬಾಮನು ಮಾಡಿದಂತಹ ಪಾಪಗಳನ್ನೇ ಅಹಾಬನು ಮಾಡಿದರೂ ಅವು ಅವನಿಗೆ ಸಾಕಾಗಲಿಲ್ಲ. ಆದ್ದರಿಂದ ಅಹಾಬನು ಎತ್ಬಾಳನ ಮಗಳಾದ ಈಜೆಬೆಲಳನ್ನು ಮದುವೆಯಾದನು. ಎತ್ಬಾಳನು ಚೀದೋನ್ಯರ ರಾಜನಾಗಿದ್ದನು. ನಂತರ ಅಹಾಬನು ಬಾಳ್ ದೇವರನ್ನು ಪೂಜಿಸಿ ಅದರ ಸೇವೆ ಮಾಡಲಾರಂಭಿಸಿದನು.


ಅವರು ದೇವರ ಪವಿತ್ರ ಪೆಟ್ಟಿಗೆಯನ್ನು ದಾಗೋನನ ಗುಡಿಗೆ ತೆಗೆದುಕೊಂಡು ಹೋಗಿ ದಾಗೋನಿನ ಪಕ್ಕದಲ್ಲಿಟ್ಟರು.


ಇಸ್ರೇಲರು ಮತ್ತೆ ಯೆಹೋವನಿಗೆ ವಿರೋಧವಾಗಿ ದುಷ್ಕೃತ್ಯಗಳನ್ನು ಮಾಡಿದರು. ಆದ್ದರಿಂದ ಫಿಲಿಷ್ಟಿಯರು ನಲವತ್ತು ವರ್ಷ ಅವರನ್ನು ಆಳುವಂತೆ ಯೆಹೋವನು ಮಾಡಿದನು.


ಇಸ್ರೇಲರು ಯೆಹೋವನಿಗೆ ವಿರೋಧವಾಗಿ ಮತ್ತೆ ದುಷ್ಕೃತ್ಯಗಳನ್ನೇ ಮಾಡಿದರು. ಆದ್ದರಿಂದ ಮಿದ್ಯಾನ್ಯರು ಇಸ್ರೇಲರ ಮೇಲೆ ಏಳುವರ್ಷ ಪ್ರಭುತ್ವ ನಡೆಸುವಂತೆ ಯೆಹೋವನು ಆಸ್ಪದ ಮಾಡಿದನು.


ಏಹೂದನು ಮರಣಹೊಂದಿದ ಮೇಲೆ ಇಸ್ರೇಲರು ಮತ್ತೆ ಯೆಹೋವನ ವಿರೋಧವಾಗಿ ಪಾಪ ಮಾಡಿದರು.


ಇಸ್ರೇಲರ ದುಷ್ಕೃತ್ಯಗಳನ್ನು ಯೆಹೋವನು ನೋಡಿದನು. ಇಸ್ರೇಲರು ತಮ್ಮ ದೇವರಾದ ಯೆಹೋವನನ್ನು ಮರೆತು ಬಾಳ್ ಮತ್ತು ಅಶೇರ್ ಎಂಬ ಸುಳ್ಳುದೇವರುಗಳ ಸೇವೆ ಮಾಡುತ್ತಿದ್ದರು.


“ಆದರೆ ಯೆಶುರೂನು ಕೊಬ್ಬಿದನು; ಕೊಬ್ಬಿದ ಹೋರಿಯಂತೆ ಒದ್ದನು; ಅವನು ಚೆನ್ನಾಗಿ ತಿಂದು ಕೊಬ್ಬಿ ಊದಿಕೊಂಡನು; ತನ್ನ ನಿರ್ಮಾಣಿಕನಾದ ಯೆಹೋವನನ್ನು ತೊರೆದನು; ತನ್ನನ್ನು ಸಂರಕ್ಷಿಸಿದ ಬಂಡೆಯಿಂದ ಓಡಿಹೋದನು;


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ನೀನು ಬೇಗನೇ ಸಾಯುವೆ. ನಿನ್ನ ಪೂರ್ವಿಕರ ಬಳಿಗೆ ನೀನು ಸೇರಿದಾಗ ಈ ಜನರು ನನಗೆ ನಂಬಿಗಸ್ತರಾಗಿರುವುದಿಲ್ಲ. ನಾನು ಅವರೊಡನೆ ಮಾಡಿರುವ ಒಡಂಬಡಿಕೆಯನ್ನು ಅವರು ಮುರಿಯುವರು. ಅವರು ನನ್ನನ್ನು ತೊರೆದು ತಾವು ಸ್ವಾಧೀನಮಾಡಿಕೊಳ್ಳುವ ದೇಶದ ಅನ್ಯದೇವತೆಗಳನ್ನು ಪೂಜಿಸುವರು.


ಆಗ ನಾನು ಅವರ ಮೇಲೆ ತುಂಬಾ ಕೋಪವುಳ್ಳವನಾಗಿರುವೆನು. ಅವರಿಗೆ ಸಹಾಯ ಮಾಡದೆ ಅವರನ್ನು ಬಿಟ್ಟುಬಿಡುವೆನು; ಅವರು ನಾಶವಾಗುವರು; ಅವರಿಗೆ ಭಯಂಕರ ಸಂಗತಿಗಳು ಸಂಭವಿಸುವವು; ಅನೇಕ ಕೇಡುಗಳಾಗುವುವು; ಆಗ, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದಿರುವ ಕಾರಣ ಇವೆಲ್ಲಾ ನಮಗೆ ಸಂಭವಿಸುತ್ತವೆ’ ಎಂದು ಅವರು ಹೇಳುವರು.


ಗಿಲ್ಯಾದಿನ ಅರ್ಧಭಾಗವು, ಅಷ್ಟರೋತ್, ಎದ್ರೈ ಎಂಬ ಪಟ್ಟಣಗಳೂ ಇದರಲ್ಲಿ ಸೇರಿವೆ. (ಗಿಲ್ಯಾದ್, ಅಷ್ಟರೋತ್ ಮತ್ತು ಎದ್ರೈ ಎಂಬ ಪಟ್ಟಣಗಳಲ್ಲಿ ರಾಜನಾದ ಓಗ್ ವಾಸವಾಗಿದ್ದನು.) ಈ ಎಲ್ಲ ಪ್ರದೇಶವನ್ನು ಮನಸ್ಸೆಯ ಮಗನಾದ ಮಾಕೀರನ ಅರ್ಧಗೋತ್ರದವರಿಗೆ ಕೊಡಲಾಯಿತು.


ಯಾಯೀರನು ಸತ್ತನು. ಅವನನ್ನು ಕಾಮೋನಿನಲ್ಲಿ ಹೂಳಿಟ್ಟರು.


ನಿಮ್ಮ ದೇವರಾದ ಕೆಮೋಷನು ನಿಮಗೆ ಕೊಟ್ಟ ಪ್ರದೇಶದಲ್ಲಿ ನೀವು ಖಂಡಿತವಾಗಿ ವಾಸಮಾಡಬಹುದು. ಹಾಗೆಯೇ ಯೆಹೋವನಾದ ನಮ್ಮ ದೇವರು ನಮಗೆ ಕೊಟ್ಟ ಪ್ರದೇಶದಲ್ಲಿ ನಾವೂ ವಾಸಮಾಡುವೆವು.


ಚೀದೋನೇ, ನೀನು ತುಂಬಾ ದುಃಖದಿಂದಿರಬೇಕು. ಯಾಕೆಂದರೆ ಸಮುದ್ರವೂ ಸಮುದ್ರದ ಕೋಟೆಯೂ ಹೇಳುವುದೇನೆಂದರೆ, “ನನಗೆ ಮಕ್ಕಳಿಲ್ಲ, ನಾನು ಪ್ರಸವವೇದನೆ ಅನುಭವಿಸಲಿಲ್ಲ. ನಾನು ಮಕ್ಕಳನ್ನು ಹೆರಲಿಲ್ಲ. ನಾನು ಗಂಡುಮಕ್ಕಳನ್ನಾಗಲಿ ಹೆಣ್ಣುಮಕ್ಕಳನ್ನಾಗಲಿ ಬೆಳೆಸಲಿಲ್ಲ.”


ನಿನ್ನಲ್ಲಿ ಅನೇಕ ಬೆಲೆಬಾಳುವ ವಸ್ತುಗಳಿದ್ದುದರಿಂದ ಅರಾಮ್ ನಿನ್ನೊಂದಿಗೆ ವ್ಯಾಪಾರ ಮಾಡಿತು. ಅವರು ಇಂದ್ರನೀಲ, ಧೂಮ್ರ ಬಣ್ಣದ ಬಟ್ಟೆ, ಕಸೂತಿ ಕೆಲಸ, ನಯವಾದ ಬಟ್ಟೆ, ಹವಳ, ಕೆಂಪು ಹರಳು ಇತ್ಯಾದಿಗಳನ್ನು ಕೊಟ್ಟು ವಸ್ತುಗಳನ್ನು ನಿನ್ನಿಂದ ಕೊಂಡುಕೊಂಡರು.


“ನಿಮ್ಮ ಹತ್ತಿರದ ಸಂಬಂಧಿಕರಲ್ಲಿ ಯಾರಾದರೂ ಇತರ ದೇವರುಗಳನ್ನು ಅನುಸರಿಸಲು ನಿಮ್ಮನ್ನು ಗುಪ್ತವಾಗಿ ಒತ್ತಾಯ ಮಾಡಬಹುದು. ಅವರು ನಿಮ್ಮ ಸ್ವಂತ ಸಹೋದರನಾಗಿರಬಹುದು, ನಿಮ್ಮ ಮಕ್ಕಳಾಗಿರಬಹುದು, ನಿಮ್ಮ ಹೆಂಡತಿಯಾಗಿರಬಹುದು, ಅಥವಾ ಆಪ್ತಗೆಳೆಯನಾಗಿರಬಹುದು. ಅವರು ಬಂದು, ‘ಬಾ, ನಾವು ಬೇರೆ ದೇವರನ್ನು ಹಿಂಬಾಲಿಸೋಣ’ (ಈ ದೇವರನ್ನು ನೀವಾಗಲಿ ನಿಮ್ಮ ಪೂರ್ವಿಕರಾಗಲಿ ತಿಳಿದಿರಲಿಲ್ಲ.


ಎಂದರೆ ಆ ವ್ಯಕ್ತಿಯ ಸಲಹೆಗೆ ನೀವು ಒಪ್ಪಬಾರದು. ಅವನಿಗೆ ಕಿವಿಗೊಡಬೇಡಿ; ಅವನಿಗೆ ಕನಿಕರತೋರಬೇಡಿ; ಅವನು ಸ್ವತಂತ್ರನಾಗಿ ಹೋಗಲು ಬಿಡಬೇಡಿ; ಅವನನ್ನು ಸಂರಕ್ಷಿಸಬೇಡಿ.


ಗಿದ್ಯೋನನು ಸತ್ತಮೇಲೆ ಇಸ್ರೇಲರು ಯೆಹೋವನಿಗೆ ನಂಬಿಗಸ್ತರಾಗಿರಲಿಲ್ಲ. ಅವರು ಬಾಳನನ್ನು ಪೂಜಿಸಿದರು. ಬಾಳ್‌ಬೇರಿತನನ್ನು ತಮ್ಮ ದೇವರನ್ನಾಗಿ ಮಾಡಿಕೊಂಡರು.


“ಯೆಹೂದವೇ, ಬಹಳ ದಿನಗಳ ಹಿಂದೆಯೇ ನೀನು ನಿನ್ನ ನೊಗವನ್ನು ಕಳಚಿ ಎಸೆದುಬಿಟ್ಟೆ. ನನ್ನೊಂದಿಗೆ ಬಂಧಿಸಿದ ಕಣ್ಣಿಗಳನ್ನು ಹರಿದುಬಿಟ್ಟೆ. ‘ನಾನು ನಿನ್ನನ್ನು ಸೇವಿಸುವದಿಲ್ಲ’ ವೆಂದು ನನಗೆ ಹೇಳಿಬಿಟ್ಟೆ. ನಿಜವಾಗಿ ನೋಡಿದರೆ ಎತ್ತರವಾದ ಎಲ್ಲಾ ಪರ್ವತಗಳ ಮೇಲೂ ಮತ್ತು ಸೊಂಪಾಗಿ ಬೆಳೆದ ಎಲ್ಲಾ ಮರಗಳ ಕೆಳಗೂ ನೀನು ಮಲಗಿಕೊಂಡು ವೇಶ್ಯೆಯರಂತೆ ವರ್ತಿಸಿದೆ.


ಇಸ್ರೇಲಿನ ಜನರು ಈ ಪ್ರದೇಶಕ್ಕೆ ಬಂದು ಅದನ್ನು ತಮ್ಮದನ್ನಾಗಿ ಮಾಡಿಕೊಂಡರು. ಆದರೆ ಅವರು ನಿನ್ನ ಆಜ್ಞೆಯನ್ನು ಪಾಲಿಸಲಿಲ್ಲ; ನಿನ್ನ ಉಪದೇಶಗಳನ್ನು ಅನುಸರಿಸಲಿಲ್ಲ; ನಿನ್ನ ಆಜ್ಞೆಯಂತೆ ಮಾಡಲಿಲ್ಲ. ಆದ್ದರಿಂದ ನೀನು ಇಸ್ರೇಲರಿಗೆ ಇಂಥಾ ದುರ್ಗತಿ ಬರುವಂತೆ ಮಾಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು