Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 11:11 - ಪರಿಶುದ್ದ ಬೈಬಲ್‌

11 ಯೆಫ್ತಾಹನು ಗಿಲ್ಯಾದಿನ ಹಿರಿಯರ ಸಂಗಡ ಹೊರಟುಹೋದನು. ಅವರು ಯೆಫ್ತಾಹನನ್ನು ತಮ್ಮ ನಾಯಕನನ್ನಾಗಿಯೂ ಸೇನಾಧಿಪತಿಯನ್ನಾಗಿಯೂ ಮಾಡಿದರು. ಯೆಫ್ತಾಹನು ಮಿಚ್ಛೆ ನಗರದಲ್ಲಿ ಯೆಹೋವನ ಸಮ್ಮುಖದಲ್ಲಿ ತನ್ನ ಎಲ್ಲಾ ಮಾತುಗಳನ್ನು ಮತ್ತೊಮ್ಮೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಗ ಯೆಪ್ತಾಹನು ಗಿಲ್ಯಾದಿನ ಹಿರಿಯರ ಸಂಗಡ ಹೋದನು. ಜನರು ಅವನನ್ನು ಅಧಿಪತಿಯನ್ನಾಗಿಯೂ, ನಾಯಕನನ್ನಾಗಿಯೂ ನೇಮಿಸಿದರು. ಮತ್ತು ಯೆಪ್ತಾಹನು ತನ್ನ ಸಂಗತಿಗಳನ್ನೆಲ್ಲಾ ಮಿಚ್ಪೆಯಲ್ಲಿ ಯೆಹೋವನ ಮುಂದೆ ಅರಿಕೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆಗ ಯೆಪ್ತಾಹನು ಗಿಲ್ಯಾದಿನ ಹಿರಿಯರ ಸಂಗಡ ಹೋದನು; ಜನರು ಅವನನ್ನು ಅಧಿಪತಿಯನ್ನಾಗಿಯೂ ನಾಯಕನನ್ನಾಗಿಯೂ ನೇಮಿಸಿದರು. ಯೆಪ್ತಾಹನು ತನ್ನ ವಿಷಯಗಳನ್ನೆಲ್ಲಾ ಮಿಚ್ಫೆಯಲ್ಲಿ ಸರ್ವೇಶ್ವರನ ಮುಂದೆ ಅರಿಕೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆಗ ಯೆಪ್ತಾಹನು ಗಿಲ್ಯಾದಿನ ಹಿರಿಯರ ಸಂಗಡ ಹೋದನು; ಜನರು ಅವನನ್ನು ಅಧಿಪತಿಯನ್ನಾಗಿಯೂ ನಾಯಕನನ್ನಾಗಿಯೂ ನೇವಿುಸಿದರು. ಮತ್ತು ಯೆಪ್ತಾಹನು ತನ್ನ ಸಂಗತಿಗಳನ್ನೆಲ್ಲಾ ವಿುಚ್ಪೆಯಲ್ಲಿ ಯೆಹೋವನ ಮುಂದೆ ಅರಿಕೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಹಾಗೆಯೇ ಯೆಫ್ತಾಹನು ಗಿಲ್ಯಾದಿನ ಹಿರಿಯರ ಸಂಗಡ ಹೋದನು. ಆಗ ಜನರು ಅವನನ್ನು ತಮ್ಮ ಮೇಲೆ ನಾಯಕನನ್ನಾಗಿಯೂ, ಸೈನ್ಯಾಧಿಪತಿಯಾಗಿಯೂ ಇಟ್ಟುಕೊಂಡರು. ಯೆಫ್ತಾಹನು ತನ್ನ ಮಾತುಗಳನ್ನೆಲ್ಲಾ ಮಿಚ್ಪೆಯಲ್ಲಿ ಯೆಹೋವ ದೇವರ ಮುಂದೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 11:11
14 ತಿಳಿವುಗಳ ಹೋಲಿಕೆ  

ಸಮುವೇಲನು ಇಸ್ರೇಲರನ್ನು ಮಿಚ್ಪೆಗೆ ಕರೆಸಿ, ಯೆಹೋವನ ಸನ್ನಿಧಿಯಲ್ಲಿ ಸಭೆಸೇರಿಸಿದನು.


ಇಸ್ರೇಲಿನ ಜನರೆಲ್ಲರೂ ಒಟ್ಟುಗೂಡಿದರು. ಮಿಚ್ಛೆ ನಗರದಲ್ಲಿ ಯೆಹೋವನ ಎದುರಿಗೆ ನಿಲ್ಲುವುದಕ್ಕಾಗಿ ಅವರು ಒಂದು ಕಡೆ ಸೇರಿದ್ದರು. ಇಸ್ರೇಲಿನ ಎಲ್ಲ ಕಡೆಯಿಂದಲೂ ಜನರು ಬಂದರು. ಗಿಲ್ಯಾದಿನಲ್ಲಿದ್ದ ಇಸ್ರೇಲರು ಸಹ ಅಲ್ಲಿ ಬಂದಿದ್ದರು.


ಅಮ್ಮೋನಿಯರು ಯುದ್ಧಕ್ಕೆಂದು ಒಂದೆಡೆ ಸೇರಿದರು. ಅವರು ಗಿಲ್ಯಾದ್‌ನಲ್ಲಿ ಪಾಳೆಯ ಮಾಡಿಕೊಂಡಿದ್ದರು. ಇಸ್ರೇಲರು ಒಂದೆಡೆ ಸೇರಿಕೊಂಡರು. ಅವರ ಪಾಳೆಯವು ಮಿಚ್ಛೆಯಲ್ಲಿ ಇತ್ತು.


ಎಲ್ಲಾ ಒಳ್ಳೆಯ ದಾನಗಳೂ ಕುಂದಿಲ್ಲದ ವರಗಳೂ, ಎಲ್ಲಾ ಬೆಳಕುಗಳಿಗೆ (ಸೂರ್ಯ, ಚಂದ್ರ, ನಕ್ಷತ್ರಗಳು) ಮೂಲ ಕಾರಣನಾದ ಸೃಷ್ಟಿ ಕರ್ತನಿಂದ ಬರುತ್ತವೆ. ದೇವರು ಬದಲಾಗುವುದಿಲ್ಲ. ಆತನು ಎಲ್ಲಾ ಕಾಲದಲ್ಲಿಯೂ ಒಂದೇ ರೀತಿಯಲ್ಲಿರುತ್ತಾನೆ.


ಆದರೆ ನಿಮ್ಮಲ್ಲಿ ಯಾರಿಗಾದರೂ ಜ್ಞಾನವು ಬೇಕಾಗಿದ್ದರೆ ಅಂಥವರು ದೇವರಲ್ಲಿ ಕೇಳಿಕೊಳ್ಳಲಿ. ದೇವರು ಉದಾರಿಯಾಗಿರುವುದರಿಂದ ಮತ್ತು ಎಲ್ಲಾ ಜನರಿಗೆ ಸಂತೋಷದಿಂದ ಕೊಡುವುದರಿಂದ ನಿಮಗೆ ಜ್ಞಾನವನ್ನು ದಯಪಾಲಿಸುತ್ತಾನೆ.


ಜನರೆಲ್ಲ ಗಿಲ್ಗಾಲಿಗೆ ಹೋದರು. ಅಲ್ಲಿ ಯೆಹೋವನ ಸಮ್ಮುಖದಲ್ಲಿ ಜನರೆಲ್ಲ ಸೌಲನನ್ನು ರಾಜನನ್ನಾಗಿ ಮಾಡಿದರು. ಅವರೆಲ್ಲರು ಯೆಹೋವನಿಗೆ ಸಮಾಧಾನಯಜ್ಞಗಳನ್ನು ಅರ್ಪಿಸಿದರು. ಸೌಲನು ಮತ್ತು ಇಸ್ರೇಲರೆಲ್ಲಾ ಒಂದು ದೊಡ್ಡ ಉತ್ಸವವನ್ನೇ ಮಾಡಿದರು.


ದಿಲಾನ್, ಮಿಚ್ಪೆ, ಯೊಕ್ತೇಲ್,


ನಮ್ಮ ಸ್ವಂತ ಶಕ್ತಿಯಿಂದಲೇ ನಾವು ಯಾವ ಒಳ್ಳೆಯದನ್ನಾದರೂ ಮಾಡಬಲ್ಲೆವೆಂದು ನಾನು ಹೇಳುತ್ತಿಲ್ಲ. ನಾವು ಮಾಡುವ ಕಾರ್ಯಗಳನ್ನು ದೇವರು ಒದಗಿಸಿದ ಸಾಮರ್ಥ್ಯದಿಂದಲೇ ಮಾಡುತ್ತೇವೆ.


ಯೆಫ್ತಾಹನು ಅಮ್ಮೋನಿಯರ ಅರಸನಿಗೆ ತನ್ನ ದೂತರ ಮೂಲಕ, “ಅಮ್ಮೋನಿಯರ ಮತ್ತು ಇಸ್ರೇಲರ ಮಧ್ಯೆ ಯಾವ ಸಮಸ್ಯೆ ಇದೆ? ನೀವು ನಮ್ಮ ದೇಶದಲ್ಲಿ ಯುದ್ಧಮಾಡಲು ಏಕೆ ಬಂದಿರುವಿರಿ?” ಎಂಬ ಸಂದೇಶವನ್ನು ಕಳುಹಿಸಿದನು.


ಆಗ ಯೆಹೋವನ ಆತ್ಮವು ಯೆಫ್ತಾಹನ ಮೇಲೆ ಬಂತು. ಯೆಫ್ತಾಹನು ಗಿಲ್ಯಾದನ ಮತ್ತು ಮನಸ್ಸೆಯ ಪ್ರದೇಶಗಳಲ್ಲಿ ಸಂಚರಿಸಿದನು. ಅವನು ಗಿಲ್ಯಾದಿನ ಮಿಚ್ಛೆಗೆ ಬಂದನು. ಗಿಲ್ಯಾದಿನ ಮಿಚ್ಛೆಯ ನಗರದಿಂದ ಅವನು ಅಮ್ಮೋನಿಯರ ಪ್ರದೇಶಕ್ಕೆ ಹೋದನು.


ಯೆಫ್ತಾಹನು ಮಿಚ್ಛೆಗೆ ಹಿಂದಿರುಗಿದನು. ಯೆಫ್ತಾಹನು ತನ್ನ ಮನೆಗೆ ಹೋಗುತ್ತಿರಲು ಅವನನ್ನು ಎದುರುಗೊಳ್ಳಲು ಅವನ ಮಗಳು ಮನೆಯಿಂದ ಹೊರಗೆ ಬಂದಳು. ಅವಳು ದಮ್ಮಡಿ ಬಡಿಯುತ್ತ ನಾಟ್ಯವಾಡುತ್ತಿದ್ದಳು. ಅವಳು ಅವನ ಒಬ್ಬಳೇ ಮಗಳಾಗಿದ್ದಳು. ಯೆಫ್ತಾಹನಿಗೆ ಬೇರೆ ಗಂಡುಮಕ್ಕಳಾಗಲಿ ಹೆಣ್ಣುಮಕ್ಕಳಾಗಲಿ ಇರಲಿಲ್ಲ. ಯೆಫ್ತಾಹನು ಅವಳನ್ನು ತುಂಬ ಪ್ರೀತಿಸುತ್ತಿದ್ದನು.


ಸಮುವೇಲನು ಅವರ ಮಾತುಗಳನ್ನೆಲ್ಲಾ ಯೆಹೋವನಿಗೆ ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು