Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 11:13 - ಪರಿಶುದ್ದ ಬೈಬಲ್‌

13 ಅಮ್ಮೋನಿಯರ ಅರಸನು ಯೆಫ್ತಾಹನ ದೂತರಿಗೆ, “ಇಸ್ರೇಲರು ಈಜಿಪ್ಟಿನಿಂದ ಬಂದಾಗ ನಮ್ಮ ಪ್ರದೇಶವನ್ನು ತೆಗೆದುಕೊಂಡರು; ಆದ್ದರಿಂದ ಈಗ ನಾವು ಇಸ್ರೇಲರೊಂದಿಗೆ ಯುದ್ಧ ಮಾಡುತ್ತಿದ್ದೇವೆ. ಅವರು ಅರ್ನೋನ್ ನದಿಯಿಂದ ಯಬ್ಬೋಕ್ ನದಿಯವರೆಗೂ ಜೋರ್ಡನ್ ನದಿಯವರೆಗಿನ ಭೂಮಿಯನ್ನೂ ತೆಗೆದುಕೊಂಡಿದ್ದಾರೆ. ಈಗ ನಮ್ಮ ಭೂಮಿಯನ್ನು ನಮಗೆ ಶಾಂತಿಯಿಂದ ಹಿಂದಿರುಗಿಸಬೇಕು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆ ಅರಸನು ದೂತರಿಗೆ, “ಇಸ್ರಾಯೇಲರು ಐಗುಪ್ತದಿಂದ ಬಂದಾಗ ಅರ್ನೋನಿನಿಂದ ಯಬ್ಬೋಕ್ ಮತ್ತು ಯೊರ್ದನ್ ಹೊಳೆಗಳವರೆಗೂ ಇದ್ದ ನನ್ನ ದೇಶವನ್ನು ವಶಪಡಿಸಿಕೊಂಡರಲ್ಲಾ; ನೀನು ಈಗ ಅದನ್ನು ಸಮಾಧಾನದಿಂದ ಹಿಂದಕ್ಕೆ ಕೊಡು” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆ ಅರಸನು ದೂತರಿಗೆ, “ಇಸ್ರಯೇಲರು ಈಜಿಪ್ಟಿನಿಂದ ಬಂದಾಗ ಅರ್ನೋನಿನಿಂದ ಯಬ್ಬೋಕ್, ಜೋರ್ಡನ್ ನದಿಗಳವರೆಗೂ ಇದ್ದು ನನ್ನ ದೇಶವನ್ನು ಕಸಿದುಕೊಂಡರಲ್ಲವೆ? ನೀನು ಈಗ ಅದನ್ನು ಸಮಾಧಾನದಿಂದ ಹಿಂದಕ್ಕೆ ಕೊಡು,” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆ ಅರಸನು ದೂತರಿಗೆ - ಇಸ್ರಾಯೇಲ್ಯರು ಐಗುಪ್ತದಿಂದ ಬಂದಾಗ ಅರ್ನೋನಿನಿಂದ ಯಬ್ಬೋಕ್, ಯೊರ್ದನ್ ಹೊಳೆಗಳವರೆಗೂ ಇದ್ದ ನನ್ನ ದೇಶವನ್ನು ಕಸಕೊಂಡರಲ್ಲಾ; ನೀನು ಈಗ ಅದನ್ನು ಸಮಾಧಾನದಿಂದ ಹಿಂದಕ್ಕೆ ಕೊಡು ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅಮ್ಮೋನಿಯ ಅರಸನು ಯೆಫ್ತಾಹನ ದೂತರಿಗೆ, “ಇಸ್ರಾಯೇಲರು ಈಜಿಪ್ಟಿನಿಂದ ಬರುವಾಗ, ಅರ್ನೋನಿನಿಂದ ಯಬ್ಬೋಕಿನವರೆಗೂ ಮತ್ತು ಯೊರ್ದನಿನವರೆಗೂ ಇರುವ ನನ್ನ ದೇಶವನ್ನು ತೆಗೆದುಕೊಂಡರು. ಆದ್ದರಿಂದ ಈಗ ಅದನ್ನು ನನಗೆ ಸಮಾಧಾನವಾಗಿ ತಿರುಗಿಕೊಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 11:13
8 ತಿಳಿವುಗಳ ಹೋಲಿಕೆ  

ಆ ರಾತ್ರಿ, ಯಾಕೋಬನು ಎದ್ದು ತನ್ನ ಇಬ್ಬರು ಹೆಂಡತಿಯರನ್ನೂ ತನ್ನ ಇಬ್ಬರು ದಾಸಿಯರನ್ನೂ ತನ್ನ ಹನ್ನೊಂದು ಮಂದಿ ಗಂಡುಮಕ್ಕಳನ್ನೂ ಕರೆದುಕೊಂಡು ಹೊರಟು ಯಬ್ಬೋಕ್ ಹೊಳೆಯನ್ನು ದಾಟತಕ್ಕ ಸ್ಥಳಕ್ಕೆ ಬಂದನು.


ಸುಳ್ಳುಸಾಕ್ಷಿಯು ದಂಡಿಸಲ್ಪಡುವನು; ಸುಳ್ಳುಗಾರನು ನಾಶವಾಗುವನು.


ಮತ್ತೊಬ್ಬನ ಮೇಲೆ ಸುಳ್ಳುಹೇಳುವವನು ದಂಡಿಸಲ್ಪಡುವನು. ಸುಳ್ಳುಸಾಕ್ಷಿಗೆ ಸುರಕ್ಷತೆಯಿಲ್ಲ.


ರೂಬೇನ್ ಮತ್ತು ಗಾದ್ ಕುಲಗಳವರಿಗೆ ಗಿಲ್ಯಾದಿನಿಂದ ಪ್ರಾರಂಭವಾಗುವ ಪ್ರಾಂತ್ಯವನ್ನು ಕೊಟ್ಟೆನು. ಇದು ಅರ್ನೋನ್ ಕಣಿವೆಯಿಂದಿಡಿದು ಯಬ್ಬೋಕ್ ಹೊಳೆಯ ತನಕ ವಿಸ್ತಾರವಾಗಿದೆ. ಯಬ್ಬೋಕ್ ಹೊಳೆಯು ಅಮ್ಮೋನಿಯರ ಮೇರೆಯಾಗಿದೆ.


ಆದರೆ ಅಮ್ಮೋನಿಯರಿಗೆ ಸೇರಿದ ದೇಶದ ಸಮೀಪಕ್ಕೆ ನಾವು ಹೋಗಲಿಲ್ಲ: ಯಬ್ಬೋಕ್ ನದಿಯ ಬದಿಗೂ ನಾವು ಹೋಗಲಿಲ್ಲ: ಬೆಟ್ಟಪ್ರದೇಶಗಳ ಪಟ್ಟಣಗಳಿಗೂ ನಾವು ಹೋಗಲಿಲ್ಲ: ನಮ್ಮ ದೇವರಾದ ಯೆಹೋವನು ನಮಗೆ ಕೊಡದೆ ಇರುವ ದೇಶಗಳ ಬಳಿಗೆ ನಾವು ಹೋಗಲೇ ಇಲ್ಲ.


ಯೆಫ್ತಾಹನು ಅಮ್ಮೋನಿಯರ ಅರಸನಿಗೆ ತನ್ನ ದೂತರ ಮೂಲಕ, “ಅಮ್ಮೋನಿಯರ ಮತ್ತು ಇಸ್ರೇಲರ ಮಧ್ಯೆ ಯಾವ ಸಮಸ್ಯೆ ಇದೆ? ನೀವು ನಮ್ಮ ದೇಶದಲ್ಲಿ ಯುದ್ಧಮಾಡಲು ಏಕೆ ಬಂದಿರುವಿರಿ?” ಎಂಬ ಸಂದೇಶವನ್ನು ಕಳುಹಿಸಿದನು.


ಯೆಫ್ತಾಹನ ದೂತರು ಈ ಸಂದೇಶವನ್ನು ಯೆಫ್ತಾಹನಿಗೆ ಮುಟ್ಟಿಸಿದರು. ಆಗ ಯೆಫ್ತಾಹನು ಮತ್ತೊಮ್ಮೆ ಅಮ್ಮೋನಿಯರ ಅರಸನಲ್ಲಿಗೆ ದೂತರನ್ನು ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು