Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 12:8 - ಪರಿಶುದ್ದ ಬೈಬಲ್‌

8 ಯೆಫ್ತಾಹನ ತರುವಾಯ ಇಬ್ಜಾನ ಎಂಬವನು ಇಸ್ರೇಲರ ನ್ಯಾಯಾಧೀಶನಾಗಿದ್ದನು. ಇಬ್ಜಾನನು ಬೆತ್ಲೆಹೇಮ್ ನಗರದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಪ್ತಾಹನ ತರುವಾಯ ಬೇತ್ಲೆಹೇಮಿನವನಾದ ಇಬ್ಚಾನನು ಇಸ್ರಾಯೇಲರ ನ್ಯಾಯಪಾಲಕನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಯೆಪ್ತಾಹನ ತರುವಾಯ ಬೆತ್ಲೆಹೇಮಿನವನಾದ ಇಬ್ಚಾನನು ಇಸ್ರಯೇಲರ ನ್ಯಾಯಸ್ಥಾಪಕನಾದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವನ ತರುವಾಯ ಬೇತ್ಲೆಹೇವಿುನವನಾದ ಇಬ್ಚಾನನು ಇಸ್ರಾಯೇಲ್ಯರ ಪಾಲಕನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವನ ತರುವಾಯ ಬೇತ್ಲೆಹೇಮಿನವನಾದ ಇಬ್ಚಾನನು ಇಸ್ರಾಯೇಲಿಗೆ ನ್ಯಾಯತೀರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 12:8
10 ತಿಳಿವುಗಳ ಹೋಲಿಕೆ  

ಹೆರೋದನು ರಾಜನಾಗಿದ್ದ ಕಾಲದಲ್ಲಿ ಯೇಸು ಜುದೇಯದ ಬೆತ್ಲೆಹೇಮ್ ಎಂಬ ಊರಲ್ಲಿ ಹುಟ್ಟಿದನು. ಯೇಸು ಹುಟ್ಟಿದ ಮೇಲೆ, ಪೂರ್ವದೇಶದ ಕೆಲವು ಜ್ಞಾನಿಗಳು ಜೆರುಸಲೇಮಿಗೆ ಬಂದರು.


ಎಫ್ರಾತದ ಬೆತ್ಲೆಹೇಮೇ, ನೀನು ಯೆಹೂದದ ಪ್ರಾಂತ್ಯದಲ್ಲಿ ಅತಿ ಚಿಕ್ಕ ಊರು ಆಗಿರುವೆ. ನಿನ್ನಲ್ಲಿರುವ ಕುಟುಂಬಗಳು ಸ್ವಲ್ಪ ಮಾತ್ರವೇ. ಆದರೆ ಇಸ್ರೇಲನ್ನು ಆಳುವವನು ನನಗೋಸ್ಕರವಾಗಿ ನಿನ್ನಿಂದ ಹೊರಡುವನು. ಆತನ ಪ್ರಾರಂಭವು ಅನಾದಿ ಕಾಲದಿಂದಲೇ ಆಗಿದೆ.


ಯೆಹೋವನು ಸಮುವೇಲನಿಗೆ, “ನೀನು ಸೌಲನಿಗಾಗಿ ಎಷ್ಟುಕಾಲ ಶೋಕಿಸುವೆ? ನಾನು ಸೌಲನನ್ನು ಇಸ್ರೇಲರ ರಾಜತ್ವದಿಂದ ತಿರಸ್ಕರಿಸಿರುತ್ತೇನೆ. ನೀನು ಕೊಂಬಿನಲ್ಲಿ ಎಣ್ಣೆಯನ್ನು ತುಂಬಿಕೊಂಡು ಬಾ. ನಾನು ನಿನ್ನನ್ನು ಇಷಯನೆಂಬ ಮನುಷ್ಯನ ಬಳಿಗೆ ಕಳುಹಿಸುತ್ತೇನೆ. ಇಷಯನು ಬೆತ್ಲೆಹೇಮಿನಲ್ಲಿ ವಾಸಿಸುತ್ತಿದ್ದನು. ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಹೊಸ ರಾಜನನ್ನಾಗಿ ಆರಿಸಿದ್ದೇನೆ” ಎಂದು ಹೇಳಿದನು.


ಇದು ಕೇನಿಯರ, ಕೆನಿಜೀಯರ, ಕದ್ಮೋನಿಯರ,


ಯೆಫ್ತಾಹನು ಆರು ವರ್ಷ ಇಸ್ರೇಲರ ನ್ಯಾಯಾಧೀಶನಾಗಿದ್ದನು. ಆಮೇಲೆ ಗಿಲ್ಯಾದ್ಯನಾದ ಯೆಫ್ತಾಹನು ಮರಣಹೊಂದಿದನು. ಅವರು ಅವನ ಶವವನ್ನು ಗಿಲ್ಯಾದಿನ ಪಟ್ಟಣದಲ್ಲಿ ಸಮಾಧಿಮಾಡಿದರು.


ಇಬ್ಜಾನನಿಗೆ ಮೂವತ್ತು ಗಂಡುಮಕ್ಕಳು ಮತ್ತು ಮೂವತ್ತು ಹೆಣ್ಣುಮಕ್ಕಳು ಇದ್ದರು. ಅವನು ತನ್ನ ಮೂವತ್ತು ಹೆಣ್ಣುಮಕ್ಕಳಿಗೆ ತನ್ನ ರಕ್ತಸಂಬಂಧಿ ಅಲ್ಲದವರೊಂದಿಗೆ ಮದುವೆಯಾಗಬೇಕೆಂದು ಹೇಳಿದನು. ಅವನು ತನ್ನ ಸಂಬಂಧಿಗಳಲ್ಲದ ಮೂವತ್ತು ಕನ್ಯೆಯರನ್ನು ಹುಡುಕಿ ತನ್ನ ಗಂಡುಮಕ್ಕಳಿಗೆ ಅವರನ್ನು ಮದುವೆಮಾಡಿಸಿದನು. ಇಬ್ಜಾನನು ಏಳು ವರ್ಷ ಇಸ್ರೇಲರ ನ್ಯಾಯಾಧೀಶನಾಗಿದ್ದನು.


ಕಟ್ಟಾತ್, ನಹಲ್ಲಾಲ್, ಶಿಮ್ರೋನ್, ಇದಲ್ಲಾ, ಬೆತ್ಲೆಹೇಮ್ ಇವೇ ಮೊದಲಾದ ಹನ್ನೆರಡು ಪಟ್ಟಣಗಳು ಮತ್ತು ಅವುಗಳ ಸುತ್ತಮುತ್ತಲಿನ ಎಲ್ಲ ಹೊಲಗದ್ದೆಗಳು ಈ ಸೀಮೆಯಲ್ಲಿ ಸೇರಿವೆ.


ಅಬೀಮೆಲೆಕನು ಸತ್ತ ತರುವಾಯ ಇಸ್ರೇಲರನ್ನು ರಕ್ಷಿಸಲು ಯೆಹೋವನು ಮತ್ತೊಬ್ಬ ನ್ಯಾಯಾಧೀಶನನ್ನು ಕಳುಹಿಸಿದನು. ಅವನ ಹೆಸರು ತೋಲ. ತೋಲನು ಪೂವನ ಮಗನು. ಪೂವನು ದೋದೋ ಎಂಬವನ ಮಗನು. ತೋಲನು ಇಸ್ಸಾಕಾರ್ ಕುಲಕ್ಕೆ ಸೇರಿದವನೂ ಶಾಮೀರ ನಗರದ ವಾಸಿಯೂ ಆಗಿದ್ದನು. ಶಾಮೀರ ನಗರವು ಎಫ್ರಾಯೀಮ್ ಬೆಟ್ಟಪ್ರದೇಶದಲ್ಲಿತ್ತು.


ಲೇವಿಯ ಕುಲದ ಒಬ್ಬ ತರುಣನಿದ್ದನು. ಅವನು ಯೆಹೂದದ ಬೆತ್ಲೆಹೇಮಿನವನಾಗಿದ್ದು ಯೆಹೂದ್ಯರ ಸಂಗಡ ವಾಸಮಾಡುತ್ತಿದ್ದನು.


ಆಗಿನ ಕಾಲದಲ್ಲಿ ಇಸ್ರೇಲರಿಗೆ ಅರಸನಿರಲಿಲ್ಲ. ಎಫ್ರಾಯೀಮ್ ಬೆಟ್ಟಪ್ರದೇಶದ ಒಂದು ಮೂಲೆಯಲ್ಲಿ ಒಬ್ಬ ಲೇವಿಯು ವಾಸಮಾಡುತ್ತಿದ್ದನು. ಆ ಮನುಷ್ಯನಿಗೆ ಒಬ್ಬ ಉಪಪತ್ನಿ ಇದ್ದಳು. ಅವಳು ಯೆಹೂದದ ಬೆತ್ಲೆಹೇಮಿನವಳಾಗಿದ್ದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು