Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 13:1 - ಪರಿಶುದ್ದ ಬೈಬಲ್‌

1 ಇಸ್ರೇಲರು ಮತ್ತೆ ಯೆಹೋವನಿಗೆ ವಿರೋಧವಾಗಿ ದುಷ್ಕೃತ್ಯಗಳನ್ನು ಮಾಡಿದರು. ಆದ್ದರಿಂದ ಫಿಲಿಷ್ಟಿಯರು ನಲವತ್ತು ವರ್ಷ ಅವರನ್ನು ಆಳುವಂತೆ ಯೆಹೋವನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಸ್ರಾಯೇಲರು ತಿರುಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದುದರಿಂದ ಆತನು ಅವರನ್ನು ನಲ್ವತ್ತು ವರ್ಷಗಳ ಕಾಲ ಫಿಲಿಷ್ಟಿಯರ ಕೈಗೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲರು ಮತ್ತೊಮ್ಮೆ ಸರ್ವೇಶ್ವರಸ್ವಾಮಿಯ ದೃಷ್ಟಿಯಲ್ಲಿ ದ್ರೋಹಿಗಳಾದರು. ಆದುದರಿಂದ ಅವರನ್ನು ನಾಲ್ವತ್ತು ವರ್ಷಗಳ ತನಕ ಫಿಲಿಷ್ಟಿಯರ ಕೈಗೆ ಒಪ್ಪಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇಸ್ರಾಯೇಲ್ಯರು ತಿರಿಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದದರಿಂದ ಆತನು ಅವರನ್ನು ನಾಲ್ವತ್ತು ವರುಷಗಳ ತನಕ ಫಿಲಿಷ್ಟಿಯರ ಕೈಗೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇಸ್ರಾಯೇಲರು ತಿರುಗಿ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದರಿಂದ, ಯೆಹೋವ ದೇವರು ಅವರನ್ನು ನಾಲ್ವತ್ತು ವರ್ಷದವರೆಗೆ ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 13:1
16 ತಿಳಿವುಗಳ ಹೋಲಿಕೆ  

“ಆದರೆ ನಿಮ್ಮ ಪೂರ್ವಿಕರು ತಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟದ್ದರಿಂದ ಆತನು ಅವರನ್ನು ಸೀಸೆರನ ಗುಲಾಮರಾಗಲು ಬಿಟ್ಟುಬಿಟ್ಟನು. ಸೀಸೆರನು ಹಾಚೋರಿನ ಸೈನ್ಯಾಧಿಪತಿ. ನಂತರ ಯೆಹೋವನು ಅವರನ್ನು ಫಿಲಿಷ್ಟಿಯರ ಮತ್ತು ಮೋವಾಬ್ ರಾಜನ ಗುಲಾಮರಾಗುವಂತೆ ಬಿಟ್ಟುಬಿಟ್ಟನು. ಅವರೆಲ್ಲರು ನಿಮ್ಮ ವಂಶದವರ ವಿರುದ್ಧ ಹೋರಾಡಿದರು.


ಇಸ್ರೇಲರು ಯೆಹೋವನಿಗೆ ವಿರೋಧವಾಗಿ ಮತ್ತೆ ದುಷ್ಕೃತ್ಯಗಳನ್ನೇ ಮಾಡಿದರು. ಆದ್ದರಿಂದ ಮಿದ್ಯಾನ್ಯರು ಇಸ್ರೇಲರ ಮೇಲೆ ಏಳುವರ್ಷ ಪ್ರಭುತ್ವ ನಡೆಸುವಂತೆ ಯೆಹೋವನು ಆಸ್ಪದ ಮಾಡಿದನು.


ದೇವರು ಪ್ರತಿಯೊಬ್ಬರಿಗೂ ಅವರವರು ಮಾಡಿದ ಕಾರ್ಯಗಳಿಗಾಗಿ ಬಹುಮಾನವನ್ನಾಗಲಿ ದಂಡನೆಯನ್ನಾಗಲಿ ಕೊಡುವನು.


ಇಸ್ರೇಲರ ದುಷ್ಕೃತ್ಯಗಳನ್ನು ಯೆಹೋವನು ನೋಡಿದನು. ಇಸ್ರೇಲರು ತಮ್ಮ ದೇವರಾದ ಯೆಹೋವನನ್ನು ಮರೆತು ಬಾಳ್ ಮತ್ತು ಅಶೇರ್ ಎಂಬ ಸುಳ್ಳುದೇವರುಗಳ ಸೇವೆ ಮಾಡುತ್ತಿದ್ದರು.


ಇಸ್ರೇಲಿನ ಜನರು ದುಷ್ಕೃತ್ಯಗಳನ್ನು ಮಾಡಿದರು ಮತ್ತು ಸುಳ್ಳುದೇವರಾದ ಬಾಳನ ಸೇವೆ ಮಾಡಿದರು. ಯೆಹೋವನು ಇಸ್ರೇಲರ ಈ ದುಷ್ಕೃತ್ಯಗಳನ್ನು ನೋಡಿದನು.


ಇಸ್ರೇಲರು ಮತ್ತೆ ದೇವರಿಗೆ ವಿರೋಧವಾಗಿ ದುಷ್ಕೃತ್ಯಗಳನ್ನು ಮಾಡಿದರು. ಅವರು ಸುಳ್ಳುದೇವರಾದ ಬಾಳನನ್ನೂ ಸುಳ್ಳುದೇವತೆಯಾದ ಅಷ್ಟೋರೆತಳನ್ನೂ ಪೂಜಿಸತೊಡಗಿದರು. ಅವರು ಅರಾಮ್ಯರ, ಚೀದೋನ್ಯರ, ಮೋವಾಬ್ಯರ, ಅಮ್ಮೋನಿಯರ ಮತ್ತು ಫಿಲಿಷ್ಟಿಯರ ದೇವರುಗಳನ್ನು ಸಹ ಪೂಜಿಸಿದರು. ಇಸ್ರೇಲರು ಯೆಹೋವನನ್ನು ಮರೆತುಬಿಟ್ಟು ಆತನ ಸೇವೆಯನ್ನು ನಿಲ್ಲಿಸಿಬಿಟ್ಟರು.


ಏಹೂದನು ಮರಣಹೊಂದಿದ ಮೇಲೆ ಇಸ್ರೇಲರು ಮತ್ತೆ ಯೆಹೋವನ ವಿರೋಧವಾಗಿ ಪಾಪ ಮಾಡಿದರು.


ಕಪ್ಪಗಿರುವವನು ತನ್ನ ಚರ್ಮದ ಬಣ್ಣವನ್ನು ಬದಲಿಸಲಾರನು. ಚಿರತೆಯು ತನ್ನ ಮೈಮೇಲಿನ ಚುಕ್ಕೆಗಳನ್ನು ಬದಲಾಯಿಸಲಾರದು. ಅದೇ ರೀತಿ, ಜೆರುಸಲೇಮ್ ನಗರವೇ, ನೀನು ಸಹ ಮಾರ್ಪಾಟು ಹೊಂದಿ ಒಳ್ಳೆಯದನ್ನು ಮಾಡಲಾರೆ. ನೀನು ಯಾವಾಗಲೂ ಕೆಟ್ಟದ್ದನ್ನೇ ಮಾಡುವೆ.


ನಾನು ನಿಮಗೆ ಮತ್ತಷ್ಟು ದೃಷ್ಟಾಂತಗಳನ್ನು ಹೇಳುವ ಅಗತ್ಯವಿದೆಯೋ? ನಾನು ಗಿದ್ಯೋನನ, ಬಾರಾಕನ, ಸಂಸೋನನ, ಯೆಫ್ತಾಹನ, ದಾವೀದನ, ಸಮುವೇಲನ ಮತ್ತು ಪ್ರವಾದಿಗಳ ಕುರಿತು ನಿಮಗೆ ಹೇಳುವಷ್ಟು ಸಮಯ ನನಗಿಲ್ಲ.


ಆಮೇಲೆ ಹಿಲ್ಲೇಲನ ಮಗನಾದ ಅಬ್ದೋನನು ಮರಣಹೊಂದಿದನು. ಅವನ ಶವವನ್ನು ಪಿರಾತೋನ್ ನಗರದಲ್ಲಿ ಸಮಾಧಿಮಾಡಿದರು. ಪಿರಾತೋನ್ ನಗರವು ಎಫ್ರಾಯೀಮ್ ಪ್ರದೇಶದಲ್ಲಿದೆ. ಇದು ಅಮಾಲೇಕ್ಯರು ವಾಸಮಾಡುತ್ತಿದ್ದ ಬೆಟ್ಟಪ್ರದೇಶದಲ್ಲಿದೆ.


ಆಗ ಯೆಹೂದಕುಲದ ಮೂರು ಸಾವಿರ ಜನರು ಸಂಸೋನನಲ್ಲಿಗೆ ಹೋದರು. ಅವರು ಏಟಾಮಿನ ಬಂಡೆಯ ಬಳಿಯಲ್ಲಿದ್ದ ಗುಹೆಗೆ ಬಂದು ಅವನಿಗೆ, “ನೀನು ನಮಗೆ ಮಾಡಿರುವುದೇನು? ಫಿಲಿಷ್ಟಿಯರು ನಮ್ಮನ್ನು ಆಳುತ್ತಿದ್ದಾರೆ ಎಂಬುದು ನಿನಗೆ ಗೊತ್ತಿಲ್ಲವೇ?” ಎಂದು ಕೇಳಿದರು. ಸಂಸೋನನು, “ಅವರು ನನಗೆ ಮಾಡಿದ ದ್ರೋಹಕ್ಕಾಗಿ ನಾನು ಅವರನ್ನು ಶಿಕ್ಷಿಸಿದೆ” ಎಂದನು.


ಸಂಸೋನನು ಇಪ್ಪತ್ತು ವರ್ಷ ಇಸ್ರೇಲರ ನ್ಯಾಯಾಧೀಶನಾಗಿದ್ದನು. ಅದು ಫಿಲಿಷ್ಟಿಯರ ಕಾಲವಾಗಿತ್ತು.


ಫಿಲಿಷ್ಟಿಯರೇ, ಧೈರ್ಯದಿಂದಿರಿ! ಶೂರರಂತೆ ಹೋರಾಡಿ! ಇಬ್ರಿಯರು ಪುರಾತನ ಕಾಲದಲ್ಲಿ ನಮಗೆ ಗುಲಾಮರಾಗಿದ್ದರು. ಆದಕಾರಣ ಶೂರರಂತೆ ಹೋರಾಡಿರಿ, ಇಲ್ಲವಾದರೆ ನೀವು ಅವರಿಗೆ ಗುಲಾಮರಾಗುವಿರಿ!” ಎಂದು ಹೇಳಿದರು.


ಫಿಲಿಷ್ಟಿಯರು ಸೋತುಹೋದರು. ಅವರು ಮತ್ತೆ ಇಸ್ರೇಲರ ಭೂಮಿಯಲ್ಲಿ ಹೆಜ್ಜೆ ಇಡಲಿಲ್ಲ. ಸಮುವೇಲನ ಜೀವಿತದ ಉಳಿದ ಭಾಗದಲ್ಲಿ ಯೆಹೋವನು ಫಿಲಿಷ್ಟಿಯರಿಗೆ ವಿರುದ್ಧವಾಗಿದ್ದನು.


ಆದ್ದರಿಂದ ಯೆಹೋವನು ಇಸ್ರೇಲರ ಮೇಲೆ ಕೋಪಗೊಂಡನು. ಫಿಲಿಷ್ಟಿಯರು ಮತ್ತು ಅಮ್ಮೋನಿಯರು ಅವರನ್ನು ಸೋಲಿಸುವಂತೆ ಮಾಡಿದನು.


ಇದು ಯೆಹೋವನ ಚಿತ್ತವೆಂಬುದು ಸಂಸೋನನ ತಂದೆತಾಯಿಗಳಿಗೆ ತಿಳಿದಿರಲಿಲ್ಲ. ಫಿಲಿಷ್ಟಿಯರಿಗೆ ಕೇಡುಮಾಡಲು ಯೆಹೋವನು ತಕ್ಕಮಾರ್ಗವನ್ನು ಹುಡುಕುತ್ತಿದ್ದನು. ಆ ಸಮಯದಲ್ಲಿ ಫಿಲಿಷ್ಟಿಯರು ಇಸ್ರೇಲರ ಮೇಲೆ ಆಳ್ವಿಕೆ ಮಾಡುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು