Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 13:22 - ಪರಿಶುದ್ದ ಬೈಬಲ್‌

22 ನಂತರ ಮಾನೋಹನು ತನ್ನ ಹೆಂಡತಿಗೆ, “ನಾವು ದೇವರನ್ನು ಕಣ್ಣಾರೆ ಕಂಡೆವು, ಆದ್ದರಿಂದ ಖಂಡಿತವಾಗಿ ನಾವು ಸತ್ತುಹೋಗುತ್ತೇವೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ತನ್ನ ಹೆಂಡತಿಗೆ, “ನಾವು ಸಾಯುವುದು ನಿಜ, ದೇವರನ್ನು ಕಣ್ಣಾರೆ ಕಂಡೆವಲ್ಲಾ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆಗ ಮಾನೋಹನು ಆತ ಸರ್ವೇಶ್ವರನ ದೂತನೆಂದು ತಿಳಿದು ತನ್ನ ಹೆಂಡತಿಗೆ, “ನಾವು ಸಾಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನಾವು ಸಾಯಬೇಕು. ದೇವರನ್ನು ಕಣ್ಣಾರೆ ಕಂಡೆವಲ್ಲಾ ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಮಾನೋಹನು ತನ್ನ ಹೆಂಡತಿಗೆ, “ನಾವು ದೇವರನ್ನು ಕಂಡದ್ದರಿಂದ ನಿಶ್ಚಯವಾಗಿ ಸಾಯುವೆವು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 13:22
11 ತಿಳಿವುಗಳ ಹೋಲಿಕೆ  

ಜೀವಸ್ವರೂಪನಾದ ದೇವರ ನುಡಿಯನ್ನು ಪ್ರತ್ಯಕ್ಷವಾಗಿ ನಾವು ಕೇಳಿದ ಹಾಗೆ ಬೇರೆ ಯಾರೂ ಕೇಳಿಲ್ಲ. ಆದರೂ ನಾವು ಜೀವದಿಂದಿದ್ದೇವೆ.


ಆದ್ದರಿಂದ ಯಾಕೋಬನು, “ಈ ಸ್ಥಳದಲ್ಲಿ ನಾನು ದೇವರನ್ನು ಮುಖಾಮುಖಿಯಾಗಿ ನೋಡಿದರೂ ನನ್ನ ಜೀವ ಉಳಿಯಿತು” ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.


ದೇವರನ್ನು ಯಾರೂ ಎಂದೂ ಕಂಡಿಲ್ಲ. ಆದರೆ ಒಬ್ಬನೇ ಮಗನು (ಯೇಸು) ದೇವರಾಗಿದ್ದಾನೆ ಮತ್ತು ಆತನು ತಂದೆಯ (ದೇವರ) ಎದೆಯಲ್ಲಿದ್ದಾನೆ. ಆತನೇ ತಂದೆಯನ್ನು ತಿಳಿಯಪಡಿಸಿದ್ದಾನೆ.


ಅಲ್ಲದೆ ನನ್ನನ್ನು ಕಳುಹಿಸಿದ ತಂದೆಯು ನನ್ನ ಬಗ್ಗೆ ತಾನೇ ಸಾಕ್ಷಿ ಕೊಟ್ಟಿದ್ದಾನೆ. ಆದರೆ ನೀವು ಆತನ ಧ್ವನಿಯನ್ನು ಎಂದೂ ಕೇಳಿಲ್ಲ. ಆತನು ಹೇಗಿದ್ದಾನೆ ಎಂಬುದನ್ನು ನೀವು ಎಂದೂ ಕಂಡಿಲ್ಲ.


ಆಗ ನಾನು ಬಹು ಭಯಗೊಂಡು, “ಅಯ್ಯೋ, ನಾನು ನಾಶವಾಗುತ್ತಿದ್ದೇನೆ. ನಾನು ದೇವರೊಂದಿಗೆ ಮಾತನಾಡುವಷ್ಟು ಯೋಗ್ಯನಲ್ಲ. ದೇವರೊಂದಿಗೆ ಮಾತಾಡಲು ಯೋಗ್ಯರಲ್ಲದ ಜನರೊಂದಿಗೆ ನಾನು ಜೀವಿಸುತ್ತಿದ್ದೇನೆ. ಆದರೂ ನಾನು ಸರ್ವಶಕ್ತನಾದ ಯೆಹೋವನನ್ನು, ರಾಜಾಧಿರಾಜನನ್ನು ನೋಡಿದೆನು” ಎಂದೆನು.


ನನ್ನನ್ನು ಯಾರೂ ಮುಖಾಮುಖಿಯಾಗಿ ಕಾಣಲು ಸಾಧ್ಯವಿಲ್ಲ. ನನ್ನನ್ನು ನೋಡಿದ ಯಾವನೂ ಬದುಕಲಾರನು.


ತಾನು ಈವರೆಗೆ ಮಾತಾಡುತ್ತಿದ್ದದ್ದು ಯೆಹೋವನ ದೂತನೊಡನೆ ಎಂಬುದು ಗಿದ್ಯೋನನಿಗೆ ಆಗ ಅರಿವಾಯಿತು. ಗಿದ್ಯೋನನು, “ಸರ್ವಶಕ್ತನಾದ ಯೆಹೋವನೇ, ನಿನ್ನ ದೂತನನ್ನು ಮುಖಾಮುಖಿಯಾಗಿ ಕಂಡೆನು” ಎಂದು ಕೂಗಿಕೊಂಡನು.


ನೀವು ಮುಂದುವರಿಯುತ್ತಿದ್ದಾಗ ನಿಮಗಿಂತಲೂ ಮಹತ್ತಾದ ಮತ್ತು ಬಲಿಷ್ಠವಾಗಿದ್ದ ಜನಾಂಗಗಳನ್ನು ಹೊರಡಿಸಿಬಿಟ್ಟನು. ಅವರ ದೇಶದೊಳಗೆ ಯೆಹೋವನು ನಿಮ್ಮನ್ನು ನಡಿಸಿದನು. ಅಲ್ಲಿ ನೀವು ವಾಸಿಸುವುದಕ್ಕಾಗಿ ಆ ದೇಶವನ್ನು ನಿಮಗೆ ಕೊಟ್ಟನು. ಈಗಲೂ ಆತನು ಹಾಗೆಯೇ ಮಾಡುತ್ತಿದ್ದಾನೆ.


ನಾನು ನಿನ್ನ ಪೂರ್ವಿಕರ ದೇವರು, ನಾನು ಅಬ್ರಹಾಮನ ದೇವರು, ನಾನು ಇಸಾಕನ ದೇವರು, ನಾನು ಯಾಕೋಬನ ದೇವರು” ಎಂದು ಹೇಳಿದನು. ದೇವರನ್ನು ನೋಡುವುದಕ್ಕೆ ಭಯಪಟ್ಟು ಮೋಶೆ ತನ್ನ ಮುಖವನ್ನು ಮುಚ್ಚಿಕೊಂಡನು.


ಬಳಿಕ ಮೋಶೆ, ಆರೋನ, ನಾದಾಬ, ಅಬೀಹೂ ಮತ್ತು ಇಸ್ರೇಲರ ಎಪ್ಪತ್ತು ಮಂದಿ ಹಿರಿಯರು ಬೆಟ್ಟವನ್ನೇರಿದರು.


ಈ ಜನರು ಇಸ್ರೇಲರ ಯೆಹೋವನನ್ನು ನೋಡಿದರು. ದೇವರು ಆಕಾಶಮಂಡಲದಂತೆ ಅತಿ ನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟಿನ ಮೇಲೆ ನಿಂತುಕೊಂಡಿದ್ದನು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು