Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 13:3 - ಪರಿಶುದ್ದ ಬೈಬಲ್‌

3 ಒಮ್ಮೆ ಯೆಹೋವನ ದೂತನು ಮಾನೋಹನ ಹೆಂಡತಿಗೆ ಪ್ರತ್ಯಕ್ಷನಾಗಿ, “ನೀನು ಮಕ್ಕಳನ್ನು ಪಡೆಯಲು ಸಾಧ್ಯವಾಗಿಲ್ಲ; ಆದರೆ ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಒಂದಾನೊಂದು ದಿನ ಯೆಹೋವನ ದೂತನು ಆಕೆಗೆ ಪ್ರತ್ಯಕ್ಷನಾಗಿ, “ಇಗೋ, ಬಂಜೆಯಾಗಿ ಮಕ್ಕಳಿಲ್ಲದಿರುವ ನೀನು ಗರ್ಭವತಿಯಾಗಿ ಮಗನನ್ನು ಹೆರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಒಂದಾನೊಂದು ದಿನ ಸರ್ವೇಶ್ವರನ ದೂತ ಆಕೆಗೆ ಪ್ರತ್ಯಕ್ಷನಾಗಿ, “ಇಗೋ, ಬಂಜೆಯಾಗಿ ಮಕ್ಕಳಿಲ್ಲದಿರುವ ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಒಂದಾನೊಂದು ದಿವಸ ಯೆಹೋವನ ದೂತನು ಆಕೆಗೆ ಪ್ರತ್ಯಕ್ಷನಾಗಿ - ಇಗೋ, ಬಂಜೆಯಾಗಿ ಮಕ್ಕಳಿಲ್ಲದಿರುವ ನೀನು ಗರ್ಭವತಿಯಾಗಿ ಮಗನನ್ನು ಹೆರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೆಹೋವ ದೇವರ ದೂತನು ಆ ಸ್ತ್ರೀಗೆ ಪ್ರತ್ಯಕ್ಷವಾಗಿ ಅವಳಿಗೆ, “ಇಗೋ, ನೀನು ಮಕ್ಕಳನ್ನು ಹೆರದೆ ಬಂಜೆಯಾಗಿದ್ದೀಯೆ. ಆದರೆ ನೀನು ಗರ್ಭಧರಿಸಿ ಒಬ್ಬ ಮಗನನ್ನು ಹೆರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 13:3
16 ತಿಳಿವುಗಳ ಹೋಲಿಕೆ  

ಆದರೆ ದೇವದೂತನು ಅವನಿಗೆ, “ಜಕರೀಯನೇ, ಹೆದರಬೇಡ. ನಿನ್ನ ಪ್ರಾರ್ಥನೆ ದೇವರಿಗೆ ಕೇಳಿಸಿತು. ನಿನ್ನ ಹೆಂಡತಿಯಾದ ಎಲಿಜಬೇತಳು ಒಂದು ಗಂಡುಮಗುವನ್ನು ಹೆರುವಳು. ನೀನು ಅವನಿಗೆ ಯೋಹಾನ ಎಂದು ಹೆಸರಿಡಬೇಕು.


ಆಗ, ಧೂಪಪೀಠದ ಬಲಗಡೆಯಲ್ಲಿ, ಪ್ರಭುವಿನ ದೂತನೊಬ್ಬನು ಬಂದು ಜಕರೀಯನ ಮುಂದೆ ನಿಂತನು.


ಆಗ ಮಾನೋಹನು ಯೆಹೋವನಿಗೆ, “ಸ್ವಾಮೀ, ಆ ದೇವಪುರುಷನನ್ನು ನಮ್ಮಲ್ಲಿಗೆ ಇನ್ನೊಮ್ಮೆ ದಯವಿಟ್ಟು ಕಳುಹಿಸೆಂದು ಬೇಡಿಕೊಳ್ಳುತ್ತೇವೆ. ಹುಟ್ಟಿಲಿರುವ ಮಗನಿಗಾಗಿ ನಾವು ಮಾಡಬೇಕಾದದ್ದನ್ನು ಅವನು ನಮಗೆ ತಿಳಿಸಲಿ” ಎಂದು ಬೇಡಿಕೊಂಡನು.


ಯೆಹೋವನ ದೂತನು ಗಿಲ್ಗಾಲ್ ನಗರದಿಂದ ಬೋಕೀಮ್ ನಗರದವರೆಗೆ ಹೋದನು. ಆ ದೂತನು ಇಸ್ರೇಲರಿಗೆ ಯೆಹೋವನ ಒಂದು ಸಂದೇಶವನ್ನು ತಿಳಿಸಿದನು. ಆ ಸಂದೇಶವು ಹೀಗೆದೆ: “ನಾನು ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿ ಹೊರಗೆತಂದೆ. ನಾನು ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ಪ್ರದೇಶಕ್ಕೆ ನಿಮ್ಮನ್ನು ಕರೆದುಕೊಂಡು ಬಂದೆನು. ‘ನಾನು ನಿಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಎಂದಿಗೂ ಮುರಿಯುವುದಿಲ್ಲ.


ಎಲೀಷನು ಆ ಸ್ತ್ರೀಗೆ, “ಮುಂದಿನ ವಸಂತಮಾಸದ ಈ ಕಾಲಕ್ಕೆ ನೀನು ನಿನ್ನ ಗಂಡುಮಗುವನ್ನು ಅಪ್ಪಿಕೊಂಡಿರುವೆ” ಎಂದು ಹೇಳಿದನು. ಆ ಸ್ತ್ರೀಯು, “ದೇವಮನುಷ್ಯನೇ, ಹೀಗೆ ಹೇಳಿ ನಿನ್ನ ಸೇವಕಿಯನ್ನು ವಂಚಿಸಬೇಡ” ಎಂದು ಹೇಳಿದಳು.


ಆಗ ಯೆಹೋವನು ಅವನಿಗೆ, “ನಾನು ಮತ್ತೆ ವಸಂತಕಾಲದಲ್ಲಿ ಬರುತ್ತೇನೆ. ಆ ಸಮಯದಲ್ಲಿ ನಿನ್ನ ಹೆಂಡತಿಯಾದ ಸಾರಳಿಗೆ ಒಬ್ಬ ಮಗನಿರುವನು” ಎಂದು ಹೇಳಿದನು. ಸಾರಳು ಗುಡಾರದಲ್ಲಿದ್ದುಕೊಂಡು ಇದನ್ನೆಲ್ಲಾ ಕೇಳಿಸಿಕೊಳ್ಳುತ್ತಿದ್ದಳು. ಅವಳಿಗೆ ಈ ಸಂಗತಿಯೂ ಕೇಳಿಸಿತು.


ನಾನು ಆಕೆಯನ್ನು ಆಶೀರ್ವದಿಸಿ ಆಕೆಗೆ ಒಬ್ಬ ಮಗನನ್ನು ದಯಪಾಲಿಸುವೆನು; ನೀನೇ ಅವನ ತಂದೆ. ಅನೇಕ ಜನಾಂಗಗಳಿಗೂ ರಾಜರುಗಳಿಗೂ ಆಕೆಯು ಮೂಲಮಾತೆಯಾಗಿರುವಳು” ಎಂದು ಹೇಳಿದನು.


ಹನ್ನಳು ಗರ್ಭಿಣಿಯಾಗಿ ಮಗನನ್ನು ಹೆತ್ತಳು. ಹನ್ನಳು ಆ ಮಗನಿಗೆ ಸಮುವೇಲನೆಂದು ಹೆಸರಿಟ್ಟಳು. ಅವಳು, “ಅವನ ಹೆಸರು ಸಮುವೇಲ, ಏಕೆಂದರೆ ನಾನು ಅವನಿಗಾಗಿ ಯೆಹೋವನಲ್ಲಿ ಪ್ರಾರ್ಥಿಸಿದ್ದೆ” ಎಂದಳು.


ಆ ಸ್ತ್ರೀಯು ಓಡಿಹೋಗಿ ತನ್ನ ಗಂಡನಿಗೆ, “ಆ ಮನುಷ್ಯನು ತಿರುಗಿ ಬಂದಿದ್ದಾನೆ, ಆ ದಿನ ನನ್ನಲ್ಲಿಗೆ ಬಂದ ಮನುಷ್ಯನು ಈಗ ಇಲ್ಲಿದ್ದಾನೆ” ಅಂದಳು.


ಆಗ ಆ ಸ್ತ್ರೀಯು ತನ್ನ ಗಂಡನ ಬಳಿಗೆ ಹೋಗಿ, “ಒಬ್ಬ ದೇವಪುರುಷನು ನನ್ನಲ್ಲಿಗೆ ಬಂದನು. ಅವನು ದೇವರಿಂದ ಬಂದ ದೇವದೂತನಂತೆ ಕಂಡನು. ನನಗೆ ಭಯವಾಯಿತು. ನಾನು ಅವನಿಗೆ, ‘ನೀನು ಎಲ್ಲಿಂದ ಬಂದೆ?’ ಎಂದು ಕೇಳಲಿಲ್ಲ; ಅವನೂ ನನಗೆ ತನ್ನ ಹೆಸರನ್ನು ಹೇಳಲಿಲ್ಲ.


ಯೆಹೋವನು ಗಿದ್ಯೋನನ ಕಡೆಗೆ ತಿರುಗಿ, “ನಿನ್ನ ಬಲವನ್ನು ಉಪಯೋಗಿಸು. ಹೋಗು, ಮಿದ್ಯಾನ್ಯರಿಂದ ಇಸ್ರೇಲರನ್ನು ರಕ್ಷಿಸು. ನಾನು ಅವರನ್ನು ರಕ್ಷಿಸುವುದಕ್ಕಾಗಿ ನಿನ್ನನ್ನು ಕಳುಹಿಸುತ್ತಿದ್ದೇನೆ” ಅಂದನು.


ಆಗ ಮಾನೋಹನು ಯೆಹೋವನ ದೂತನಿಗೆ, “ನೀನು ಸ್ವಲ್ಪಹೊತ್ತು ಇಲ್ಲಿಯೇ ಇರಬೇಕೆಂಬುದು ನಮ್ಮ ಇಚ್ಛೆ. ನಾವು ನಿನ್ನ ಊಟಕ್ಕಾಗಿ ಒಂದು ಮರಿಹೋತವನ್ನು ಬೇಯಿಸಿ ಬಡಿಸುತ್ತೇವೆ” ಎಂದನು.


ಯೆಹೋವನಿಗೆ ಅಸಾಧ್ಯವಾದುದುಂಟೇ? ನಾನು ಮತ್ತೆ ವಸಂತಕಾಲದಲ್ಲಿ ಬರುವೆನು. ಆಗ ನಿನ್ನ ಹೆಂಡತಿಯಾದ ಸಾರಳಿಗೆ ಒಬ್ಬ ಮಗನಿದ್ದೇ ಇರುವನು” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು