Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 13:5 - ಪರಿಶುದ್ದ ಬೈಬಲ್‌

5 ಏಕೆಂದರೆ ನೀನು ಗರ್ಭವತಿಯಾಗಿರುವೆ ಮತ್ತು ನಿನಗೊಬ್ಬ ಮಗನು ಹುಟ್ಟಲಿದ್ದಾನೆ. ಅವನು ಹುಟ್ಟಿದಂದಿನಿಂದಲೇ ದೇವರಿಗೆ ಪ್ರತಿಷ್ಠಿತನಾಗಿದ್ದಾನೆ. ಆದ್ದರಿಂದ ಅವನ ಕೂದಲನ್ನು ಕತ್ತರಿಸಕೂಡದು. ಅವನು ಇಸ್ರೇಲರನ್ನು ಫಿಲಿಷ್ಟಿಯರ ಹಿಡಿತದಿಂದ ಬಿಡಿಸುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೀನು ಗರ್ಭವತಿಯಾಗಿ ಹೆರುವ ಮಗನ ತಲೆಯ ಮೇಲೆ ಕ್ಷೌರದ ಕತ್ತಿಯನ್ನು ಉಪಯೋಗಿಸಲೇಬಾರದು; ಅವನು ಹುಟ್ಟಿದಂದಿನಿಂದ ದೇವರಿಗೆ ಪ್ರತಿಷ್ಠಿತನಾಗಿರುವನು; ಇಸ್ರಾಯೇಲರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಲು ಪ್ರಾರಂಭಿಸುವನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನೀನು ಗರ್ಭವತಿಯಾಗಿ ಹೆರುವ ಮಗನ ತಲೆಯ ಮೇಲೆ ಕ್ಷೌರದ ಕತ್ತಿಯನ್ನು ಉಪಯೋಗಿಸಲೇ ಬಾರದು. ಅವನು ಹುಟ್ಟಿನಿಂದ ದೇವರಿಗೆ ಪ್ರತಿಷ್ಠಿತನಾಗುವನು. ಅವನು ಇಸ್ರಯೇಲರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸುವುದಕ್ಕೆ ಪ್ರಾರಂಭಿಸುವನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀನು ಗರ್ಭವತಿಯಾಗಿ ಹೆರುವ ಮಗನ ತಲೆಯ ಮೇಲೆ ಕ್ಷೌರದ ಕತ್ತಿಯನ್ನು ಉಪಯೋಗಿಸಲೇಬಾರದು; ಅವನು ಹುಟ್ಟಿದಂದಿನಿಂದ ದೇವರಿಗೆ ಪ್ರತಿಷ್ಠಿತನಾಗಿರುವನು; ಇಸ್ರಾಯೇಲ್ಯರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸುವದಕ್ಕೆ ಪ್ರಾರಂಭಿಸುವನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನೀನು ಗರ್ಭವನ್ನು ಧರಿಸಿ, ಒಬ್ಬ ಮಗನನ್ನು ಹೆರುವೆ; ಅವನ ತಲೆಯ ಮೇಲೆ ಕ್ಷೌರದ ಕತ್ತಿ ಬರಬಾರದು. ಏಕೆಂದರೆ ಗರ್ಭದಿಂದಲೇ ಆ ಹುಡುಗನು ದೇವರಿಗೆ ಪ್ರತಿಷ್ಠಿತನಾದ ನಾಜೀರನಾಗಿರುವನು. ಅವನು ಇಸ್ರಾಯೇಲರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ, ರಕ್ಷಿಸಲು ಪ್ರಾರಂಭಿಸುವನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 13:5
9 ತಿಳಿವುಗಳ ಹೋಲಿಕೆ  

“ಅವನ ವ್ರತದ ಕಾಲದಲ್ಲಿ ಕ್ಷೌರದ ಕತ್ತಿಯು ಅವನ ತಲೆಯನ್ನು ಸೋಂಕಬಾರದು. ಯೆಹೋವನಿಗೋಸ್ಕರ ಪ್ರತಿಷ್ಠಿತವಾದ ತನ್ನ ಕಾಲವನ್ನು ಪೂರ್ಣಗೊಳಿಸುವ ತನಕ ಅವನು ಪರಿಶುದ್ಧನಾಗಿರಬೇಕು. ತನ್ನ ವ್ರತದ ದಿನಗಳು ಮುಗಿಯುವ ತನಕ ಅವನು ಕೂದಲನ್ನು ಬೆಳೆಸಿಕೊಳ್ಳಬೇಕು.


ಅವಳು ದೇವರಲ್ಲಿ ಒಂದು ವಿಶೇಷ ವಾಗ್ದಾನವನ್ನು ಮಾಡಿದಳು. ಅವಳು, “ಯೆಹೋವನೇ, ಸರ್ವಶಕ್ತನೇ, ನಾನು ಎಷ್ಟು ದುಃಖಿತಳೆಂಬುದನ್ನು ನೋಡು, ನನ್ನನ್ನು ಜ್ಞಾಪಿಸಿಕೊ! ನನ್ನನ್ನು ಮರೆಯದಿರು. ನೀನು ನನಗೊಬ್ಬ ಮಗನನ್ನು ಕರುಣಿಸಿದರೆ, ಅವನು ಜೀವದಿಂದಿರುವ ತನಕ ನಿನ್ನವನಾಗಿರುವಂತೆ ನಿನಗೇ ಪ್ರತಿಷ್ಠಿಸುತ್ತೇನೆ. ಅವನು ನಾಜೀರನಾಗಿರುವನು. ಅವನು ದ್ರಾಕ್ಷಾರಸವನ್ನಾಗಲಿ ಇತರೆ ಮದ್ಯವನ್ನಾಗಲಿ ಸೇವಿಸುವುದಿಲ್ಲ. ಅವನ ತಲೆಕೂದಲನ್ನು ಕ್ಷೌರ ಕತ್ತಿಯಿಂದ ಕತ್ತರಿಸುವುದಿಲ್ಲ” ಎಂದು ಹೇಳಿದಳು


ಅನಂತರ ದಾವೀದನು ಫಿಲಿಷ್ಟಿಯರ ಮೇಲೆ ಯುದ್ಧಕ್ಕೆ ಹೋದನು. ಅವರನ್ನು ಸೋಲಿಸಿ ಗತ್ ಪಟ್ಟಣ ಮತ್ತು ಅದರ ಸುತ್ತಮುತ್ತಲಿದ್ದ ಊರುಗಳನ್ನು ವಶಪಡಿಸಿಕೊಂಡನು.


ಫಿಲಿಷ್ಟಿಯರು ಸೋತುಹೋದರು. ಅವರು ಮತ್ತೆ ಇಸ್ರೇಲರ ಭೂಮಿಯಲ್ಲಿ ಹೆಜ್ಜೆ ಇಡಲಿಲ್ಲ. ಸಮುವೇಲನ ಜೀವಿತದ ಉಳಿದ ಭಾಗದಲ್ಲಿ ಯೆಹೋವನು ಫಿಲಿಷ್ಟಿಯರಿಗೆ ವಿರುದ್ಧವಾಗಿದ್ದನು.


ತರುವಾಯ, ದಾವೀದನು ಫಿಲಿಷ್ಟಿಯರನ್ನು ಸೋಲಿಸಿ ಬಹುವಿಸ್ತಾರವಾದ ಪ್ರದೇಶವನ್ನು ಹತೋಟಿಯಲ್ಲಿಟ್ಟುಕೊಂಡಿದ್ದ ಅವರ ರಾಜಧಾನಿಯನ್ನು ಸ್ವಾಧೀನಪಡಿಸಿಕೊಂಡನು.


ಪ್ರಭುವಿನ ದೃಷ್ಟಿಯಲ್ಲಿ ಯೋಹಾನನು ಮಹಾಪುರುಷನಾಗಿರುವನು. ಅವನು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿಯುವುದಿಲ್ಲ. ಯೋಹಾನನು ಹುಟ್ಟಿದಂದಿನಿಂದಲೇ ಪವಿತ್ರಾತ್ಮಭರಿತನಾಗಿರುವನು.


ಕೊನೆಗೆ ಸಂಸೋನನು ದೆಲೀಲಳಿಗೆ ಎಲ್ಲವನ್ನು ಹೇಳಿದನು. “ನಾನೆಂದೂ ನನ್ನ ತಲೆಕೂದಲನ್ನು ಕತ್ತರಿಸಿಕೊಂಡಿಲ್ಲ. ನಾನು ಹುಟ್ಟುವ ಮೊದಲೇ ನನ್ನನ್ನು ದೇವರಿಗೆ ಪ್ರತಿಷ್ಠಿಸಲಾಗಿತ್ತ್ತು. ಯಾರಾದರೂ ನನ್ನ ತಲೆಬೋಳಿಸಿದರೆ ನಾನು ನನ್ನ ಶಕ್ತಿಯನ್ನು ಕಳೆದುಕೊಳ್ಳುತ್ತೇನೆ. ನಾನು ಬೇರೆ ಮನುಷ್ಯರಷ್ಟೇ ದುರ್ಬಲನಾಗುತ್ತೇನೆ” ಎಂದು ಹೇಳಿದನು.


ನಿಮ್ಮ ಕೆಲವು ಗಂಡುಮಕ್ಕಳನ್ನು ನಾನು ಪ್ರವಾದಿಗಳನ್ನಾಗಿ ಮಾಡಿದೆನು. ಇನ್ನು ಕೆಲವರನ್ನು ನಾಜೀರರನ್ನಾಗಿ ಮಾಡಿದೆನು. ಇಸ್ರೇಲ್ ಜನರೇ, ಇವು ಸತ್ಯವಾದ ಮಾತುಗಳು,” ಇವು ಯೆಹೋವನ ನುಡಿಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು