Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 13:7 - ಪರಿಶುದ್ದ ಬೈಬಲ್‌

7 ಆದರೆ ಅವನು ನನಗೆ, ‘ನೀನು ಗರ್ಭವತಿಯಾಗಿರುವೆ; ನಿನಗೊಬ್ಬ ಮಗನು ಹುಟ್ಟುತ್ತಾನೆ. ನೀನು ದ್ರಾಕ್ಷಾರಸವನ್ನಾಗಲಿ ಬೇರೆ ಯಾವ ಮದ್ಯವನ್ನಾಗಲಿ ಕುಡಿಯಬೇಡ. ಯಾವ ನಿಷಿದ್ಧ ಆಹಾರವನ್ನೂ ತಿನ್ನಬೇಡ. ಏಕೆಂದರೆ ಆ ಹುಡುಗನು ಹುಟ್ಟಿದಂದಿನಿಂದ ಸಾಯುವವರೆಗೂ ದೇವರಿಗೆ ಪ್ರತಿಷ್ಠಿತನಾಗಿರುವನು ಎಂದು ಹೇಳಿದನು’” ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದರೆ ನನಗೆ, ‘ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವಿ; ಆದುದರಿಂದ ನೀನು ದ್ರಾಕ್ಷಾರಸವನ್ನಾಗಲಿ, ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರು, ಯಾವ ನಿಷಿದ್ಧಾಹಾರವನ್ನೂ ಮುಟ್ಟಬೇಡ; ಆ ಹುಡುಗನು ಹುಟ್ಟಿದಂದಿನಿಂದ ಸಾಯುವ ವರೆಗೆ ದೇವರಿಗೆ ಪ್ರತಿಷ್ಠಿತನಾಗಿರುವನು’ ಎಂದು ಹೇಳಿದನು” ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆದರೆ ಆತ ನನಗೆ, ‘ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವೆ; ಆದ್ದರಿಂದ ನೀನು ದ್ರಾಕ್ಷಾರಸವನ್ನಾಗಲಿ, ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರು. ಯಾವ ನಿಷಿದ್ಧಾಹಾರವನ್ನೂ ಮುಟ್ಟಬೇಡ; ಆ ಮಗು ಹುಟ್ಟಿದಂದಿನಿಂದ ಸಾಯುವವರೆಗೆ ಪ್ರತಿಷ್ಠಿತನಾಗಿರುವನು,’ ಎಂದು ಹೇಳಿದನು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದರೆ ನನಗೆ - ನೀನು ಗರ್ಭವತಿಯಾಗಿ ಮಗನನ್ನು ಹೆರುವಿ; ಆದದರಿಂದ ನೀನು ದ್ರಾಕ್ಷಾರಸವನ್ನಾಗಲಿ ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರು, ಯಾವ ನಿಷಿದ್ಧಾಹಾರವನ್ನೂ ಮುಟ್ಟಬೇಡ; ಆ ಹುಡುಗನು ಹುಟ್ಟಿದಂದಿನಿಂದ ಸಾಯುವವರೆಗೆ ದೇವರಿಗೆ ಪ್ರತಿಷ್ಠಿತನಾಗಿರುವನು ಎಂದು ಹೇಳಿದನು ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವನು ನನಗೆ, ‘ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವೆ; ಈಗ ನೀನು ದ್ರಾಕ್ಷಾರಸವನ್ನೂ, ಮದ್ಯವನ್ನೂ ಕುಡಿಯದೆ, ಅಶುದ್ಧವಾದ ಒಂದನ್ನಾದರೂ ತಿನ್ನದೆ ಇರು. ಏಕೆಂದರೆ ಆ ಹುಡುಗನು ಹುಟ್ಟಿದಂದಿನಿಂದ ಮರಣಹೊಂದುವವರೆಗೆ ದೇವರಿಗೆ ಪ್ರತಿಷ್ಠಿತನಾಗಿರುವನು ಎಂದು ಹೇಳಿದನು,’ ಎಂದಳು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 13:7
6 ತಿಳಿವುಗಳ ಹೋಲಿಕೆ  

ದ್ರಾಕ್ಷಾರಸವನ್ನಾಗಲಿ ಬೇರೆ ಯಾವ ಮದ್ಯವನ್ನಾಗಲಿ ಕುಡಿಯಬೇಡ; ಯಾವ ನಿಷಿದ್ಧ ಪದಾರ್ಥವನ್ನೂ ಊಟಮಾಡಬೇಡ.


“ಈ ಸಂಗತಿಗಳನ್ನು ಇಸ್ರೇಲರಿಗೆ ಹೇಳು: ಯಾವ ಪುರುಷನಾಗಲಿ ಸ್ತ್ರೀಯಾಗಲಿ ನಾಜೀರವ್ರತವನ್ನು ಮಾಡುವುದರ ಮೂಲಕ ತನ್ನನ್ನು ಪ್ರತಿಷ್ಠಿಸಿಕೊಂಡರೆ, ಯೆಹೋವನಿಗೋಸ್ಕರ ಹರಕೆ ಮಾಡಿಕೊಂಡರೆ,


ಆಗ ಆ ಸ್ತ್ರೀಯು ತನ್ನ ಗಂಡನ ಬಳಿಗೆ ಹೋಗಿ, “ಒಬ್ಬ ದೇವಪುರುಷನು ನನ್ನಲ್ಲಿಗೆ ಬಂದನು. ಅವನು ದೇವರಿಂದ ಬಂದ ದೇವದೂತನಂತೆ ಕಂಡನು. ನನಗೆ ಭಯವಾಯಿತು. ನಾನು ಅವನಿಗೆ, ‘ನೀನು ಎಲ್ಲಿಂದ ಬಂದೆ?’ ಎಂದು ಕೇಳಲಿಲ್ಲ; ಅವನೂ ನನಗೆ ತನ್ನ ಹೆಸರನ್ನು ಹೇಳಲಿಲ್ಲ.


ಆಗ ಮಾನೋಹನು ಯೆಹೋವನಿಗೆ, “ಸ್ವಾಮೀ, ಆ ದೇವಪುರುಷನನ್ನು ನಮ್ಮಲ್ಲಿಗೆ ಇನ್ನೊಮ್ಮೆ ದಯವಿಟ್ಟು ಕಳುಹಿಸೆಂದು ಬೇಡಿಕೊಳ್ಳುತ್ತೇವೆ. ಹುಟ್ಟಿಲಿರುವ ಮಗನಿಗಾಗಿ ನಾವು ಮಾಡಬೇಕಾದದ್ದನ್ನು ಅವನು ನಮಗೆ ತಿಳಿಸಲಿ” ಎಂದು ಬೇಡಿಕೊಂಡನು.


ಆದರೆ ರೇಕಾಬ್ಯರು, “ನಾವು ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲ. ಏಕೆಂದರೆ ನಮ್ಮ ಪೂರ್ವಿಕನಾದ ರೇಕಾಬನ ಮಗನಾದ ಯೋನಾದಾಬನು ನಮಗೆ, ‘ನೀವು ಮತ್ತು ನಿಮ್ಮ ಸಂತಾನದವರು ಎಂದೆಂದಿಗೂ ದ್ರಾಕ್ಷಾರಸವನ್ನು ಕುಡಿಯಬಾರದು.


ನಿಮ್ಮ ಕೆಲವು ಗಂಡುಮಕ್ಕಳನ್ನು ನಾನು ಪ್ರವಾದಿಗಳನ್ನಾಗಿ ಮಾಡಿದೆನು. ಇನ್ನು ಕೆಲವರನ್ನು ನಾಜೀರರನ್ನಾಗಿ ಮಾಡಿದೆನು. ಇಸ್ರೇಲ್ ಜನರೇ, ಇವು ಸತ್ಯವಾದ ಮಾತುಗಳು,” ಇವು ಯೆಹೋವನ ನುಡಿಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು