Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 14:14 - ಪರಿಶುದ್ದ ಬೈಬಲ್‌

14 ಸಂಸೋನನು ಅವರಿಗೆ ಈ ಒಗಟನ್ನು ಹೇಳಿದನು: “ತಿಂದುಬಿಡುವಂಥದರಿಂದ ತಿನ್ನತಕ್ಕದ್ದು ದೊರಕಿತು. ಕ್ರೂರವಾದದ್ದರಿಂದ ಮಧುರವಾದದ್ದು ಸಿಕ್ಕಿತು.” ಆ ಮೂವತ್ತು ಜನರು ಮೂರು ದಿನಗಳವರೆಗೆ ಒಗಟಿನ ಅರ್ಥವನ್ನು ಕಂಡುಹಿಡಿಯಲು ಪ್ರಯತ್ನ ಮಾಡಿದರು. ಆದರೆ ಅವರಿಂದ ಸಾಧ್ಯವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಅವನು, “ತಿಂದುಬಿಡುವಂಥದರಿಂದ ತಿನ್ನತಕ್ಕದ್ದು ದೊರಕಿತು; ಕ್ರೂರವಾದದ್ದರಿಂದ ಮಧುರವಾದದ್ದು ಹುಟ್ಟಿತು” ಎಂದು ಹೇಳಿದನು. ಮೂರು ದಿನಗಳಾದರೂ ಅವರು ಅದನ್ನು ಬಿಡಿಸಲಾರದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆಗ ಅವನು, “ತಿಂದುಬಿಡುವಂಥದರಿಂದ ತಿನ್ನತಕ್ಕದ್ದು ದೊರಕಿತು ಕ್ರೂರವಾದದ್ದರಿಂದ ಮಧುರವಾದದ್ದು ಸಿಕ್ಕಿತು” ಎಂದು ಹೇಳಿದನು. ಮೂರು ದಿನಗಳಾದರೂ ಅವರು ಅದನ್ನು ಬಿಡಿಸಲಾರದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಗ ಅವನು - ತಿಂದುಬಿಡುವಂಥದರಿಂದ ತಿನ್ನತಕ್ಕದ್ದು ದೊರಕಿತು; ಕ್ರೂರವಾದದ್ದರಿಂದ ಮಧುರವಾದದ್ದು ಸಿಕ್ಕಿತು ಎಂದು ಹೇಳಿದನು. ಮೂರು ದಿನಗಳಾದರೂ ಅವರು ಅದನ್ನು ಬಿಚ್ಚಲಾರದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಅವನು ಅವರಿಗೆ ಹೇಳಿದ್ದೇನೆಂದರೆ, “ತಿಂದು ಬಿಡುವಂಥದ್ದರಿಂದ ತಿನ್ನತಕ್ಕದ್ದು ಹೊರಟಿತು. ಬಲಿಷ್ಠವಾದದ್ದರಿಂದ ಸಿಹಿಯು ಹೊರಟಿತು.” ಒಗಟನ್ನು ಅವರು ಮೂರು ದಿವಸ ಬಿಡಿಸಲಾರದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 14:14
20 ತಿಳಿವುಗಳ ಹೋಲಿಕೆ  

ಕಾಗೆಗಳು ಪ್ರತಿ ಮುಂಜಾನೆ ಮತ್ತು ಸಂಜೆ ಎಲೀಯನಿಗೆ ರೊಟ್ಟಿ ಮತ್ತು ಮಾಂಸವನ್ನು ತಂದುಕೊಡುತ್ತಿದ್ದವು. ಎಲೀಯನು ಹಳ್ಳದ ನೀರನ್ನು ಕುಡಿಯುತ್ತಿದ್ದನು.


ಆದರೆ ನಮಗೋಸ್ಕರ ತನ್ನ ಪ್ರೀತಿಯನ್ನು ತೋರಿಸಿದ ದೇವರ ಮೂಲಕವಾಗಿ ಈ ಎಲ್ಲಾ ಸಂಗತಿಗಳಲ್ಲಿ ನಮಗೆ ಪೂರ್ಣ ಜಯವಿದೆ.


ಕ್ರಿಸ್ತನು ನಮ್ಮ ಪಾಪಗಳನ್ನೆಲ್ಲಾ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನೇರಿದನು. ನಾವು ಪಾಪಕ್ಕೋಸ್ಕರ ಜೀವಿಸದೆ, ನೀತಿವಂತರಾಗಿ ಜೀವಿಸಬೇಕೆಂಬುದೇ ಆತನ ಉದ್ದೇಶವಾಗಿತ್ತು. ಆತನ (ಕ್ರಿಸ್ತನ) ಬಾಸುಂಡೆಗಳಿಂದ ನಿಮಗೆ ಗುಣವಾಯಿತು.


ಸ್ವಲ್ಪಕಾಲದವರೆಗೆ ನಮಗೆ ಚಿಕ್ಕಪುಟ್ಟ ಇಕ್ಕಟ್ಟುಗಳಿರುತ್ತವೆ. ಆದರೆ ನಿತ್ಯವಾದ ಮಹಿಮೆಯನ್ನು ಹೊಂದಿಕೊಳ್ಳಲು ಅವು ನಮಗೆ ಸಹಾಯಕವಾಗಿವೆ. ಆ ಮಹಿಮೆಯು ಇಂದಿನ ಇಕ್ಕಟ್ಟುಗಳಿಗಿಂತಲೂ ಮಹತ್ವವುಳ್ಳದ್ದಾಗಿದೆ.


ಆ ಅಧಿಕಾರಿಯು “ನಾನು ಹೇಗೆ ಅರ್ಥಮಾಡಿಕೊಳ್ಳಲಿ? ಬೇರೆ ಯಾರಾದರೂ ನನಗೆ ಅದನ್ನು ವಿವರಿಸಬೇಕು!” ಎಂದು ಉತ್ತರಕೊಟ್ಟನು. ಬಳಿಕ, ರಥವನ್ನು ಹತ್ತಿ ತನ್ನೊಂದಿಗೆ ಕುಳಿತುಕೊಳ್ಳುವಂತೆ ಅವನು ಫಿಲಿಪ್ಪನನ್ನು ಆಹ್ವಾನಿಸಿದನು.


ಯೇಸು, “ಪರಲೋಕರಾಜ್ಯದ ರಹಸ್ಯವಾದ ಸತ್ಯಗಳನ್ನು ನೀವು ಮಾತ್ರ ತಿಳಿದುಕೊಳ್ಳಬಲ್ಲಿರಿ. ಈ ಸತ್ಯಗಳ ರಹಸ್ಯವು ಬೇರೆ ಜನರಿಗೆ ತಿಳಿಯಲಾರದು.


ಮೂಢರು ಜ್ಞಾನವನ್ನು ಅರ್ಥಮಾಡಿಕೊಳ್ಳಲಾರರು; ಮುಖ್ಯವಾದ ವಿಷಯಗಳನ್ನು ಚರ್ಚಿಸುವಾಗ ಮೂಢನು ಏನೂ ಹೇಳಲಾರ.


ಯೆಹೋಷಾಫಾಟನೂ ಅವನ ಸೈನಿಕರೂ ಬಂದು ಸತ್ತವರ ದೇಹದಿಂದ ಬೆಲೆಬಾಳುವ ವಸ್ತುಗಳನ್ನು ಸೂರೆ ಮಾಡಿದರು. ಅವರು ಅನೇಕ ಪಶುಗಳನ್ನು, ಐಶ್ವರ್ಯವನ್ನು, ಬಟ್ಟೆಬರೆಗಳನ್ನು ಮತ್ತು ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಂಡರು. ಯೆಹೋಷಾಫಾಟನು ಮತ್ತು ಅವನ ಜನರು ಹೊತ್ತುಕೊಂಡು ಹೋಗಲಾರದಷ್ಟು ವಸ್ತುಗಳಿದ್ದವು; ಅವುಗಳನ್ನು ಶೇಖರಿಸಲು ಮೂರು ದಿವಸಗಳು ಬೇಕಾಯಿತು.


ಕೆಲವು ಜನರು ಯೆಹೋಷಾಫಾಟನ ಬಳಿಗೆ ಬಂದು, “ಎದೋಮ್ಯರ ದೊಡ್ಡ ಸೈನ್ಯವು ಲವಣಸಮುದ್ರದ ಆಚೆಕಡೆಯಿಂದ ನಿನಗೆ ವಿರುದ್ಧವಾಗಿ ಬರುತ್ತಿದೆ. ಈಗಾಗಲೇ ಅವರು ಹಚೆಚೋನ್ ತಾಮಾರಿನಲ್ಲಿದ್ದಾರೆ” (ಇದನ್ನು ಏಂಗೆದಿ ಎಂತಲೂ ಕರೆಯುತ್ತಾರೆ.) ಎಂದು ಹೇಳಿದರು.


ನೀನು ಮತ್ತು ಸ್ತ್ರೀಯು ಒಬ್ಬರಿಗೊಬ್ಬರು ವೈರಿಗಳಾಗಿರುವಂತೆ ಮಾಡುವೆನು. ನಿನ್ನ ಮಕ್ಕಳು ಮತ್ತು ಅವಳ ಮಕ್ಕಳು ಒಬ್ಬರಿಗೊಬ್ಬರು ವೈರಿಗಳಾಗಿರುವರು. ನೀನು ಆಕೆಯ ಮಗನ ಪಾದವನ್ನು ಕಚ್ಚುವೆ. ಆದರೆ ಅವನು ನಿನ್ನ ತಲೆಯನ್ನು ಜಜ್ಜಿ ಹಾಕುವನು” ಎಂದನು.


ಆದರೆ ಉತ್ತರ ಹೇಳಲು ನಿಮಗೆ ಸಾಧ್ಯವಾಗದಿದ್ದರೆ ನೀವು ನನಗೆ ಮೂವತ್ತು ನಾರುಬಟ್ಟೆಯ ಅಂಗಿಗಳನ್ನು ಮತ್ತು ಮೂವತ್ತು ವಿಶೇಷ ವಸ್ತ್ರಗಳನ್ನು ಕೊಡಬೇಕು” ಎಂದು ಹೇಳಿದನು. ಆ ಮೂವತ್ತು ಜನರು, “ನಮಗೆ ನಿನ್ನ ಒಗಟನ್ನು ಹೇಳು, ನಾವು ಅದನ್ನು ಕೇಳಬಯಸುತ್ತೇವೆ” ಎಂದರು.


ನಾಲ್ಕನೆಯ ದಿನ ಅವರು ಸಂಸೋನನ ಹೆಂಡತಿಯಲ್ಲಿಗೆ ಬಂದು, “ನೀನು ನಮ್ಮನ್ನು ಬಡವರನ್ನಾಗಿ ಮಾಡಲು ಇಲ್ಲಿಗೆ ಕರೆದಿರುವಿಯಾ? ನೀನು ನಿನ್ನ ಗಂಡನನ್ನು ಮರುಳುಗೊಳಿಸಿ ನಮಗೆ ಒಗಟಿನ ಅರ್ಥವನ್ನು ಹೇಳುವಂತೆ ಮಾಡು. ನೀನು ನಮಗೆ ಒಗಟಿನ ಅರ್ಥವನ್ನು ಹೇಳದಿದ್ದರೆ ನಾವು ನಿನ್ನನ್ನು ಮತ್ತು ನಿನ್ನ ತಂದೆಯ ಮನೆಯಲ್ಲಿರುವ ಎಲ್ಲರನ್ನೂ ಸುಟ್ಟುಹಾಕುತ್ತೇವೆ” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು