15 ನಾಲ್ಕನೆಯ ದಿನ ಅವರು ಸಂಸೋನನ ಹೆಂಡತಿಯಲ್ಲಿಗೆ ಬಂದು, “ನೀನು ನಮ್ಮನ್ನು ಬಡವರನ್ನಾಗಿ ಮಾಡಲು ಇಲ್ಲಿಗೆ ಕರೆದಿರುವಿಯಾ? ನೀನು ನಿನ್ನ ಗಂಡನನ್ನು ಮರುಳುಗೊಳಿಸಿ ನಮಗೆ ಒಗಟಿನ ಅರ್ಥವನ್ನು ಹೇಳುವಂತೆ ಮಾಡು. ನೀನು ನಮಗೆ ಒಗಟಿನ ಅರ್ಥವನ್ನು ಹೇಳದಿದ್ದರೆ ನಾವು ನಿನ್ನನ್ನು ಮತ್ತು ನಿನ್ನ ತಂದೆಯ ಮನೆಯಲ್ಲಿರುವ ಎಲ್ಲರನ್ನೂ ಸುಟ್ಟುಹಾಕುತ್ತೇವೆ” ಎಂದರು.
15 ಅವರು ಏಳನೆಯ ದಿನದಲ್ಲಿ ಸಂಸೋನನ ಹೆಂಡತಿಗೆ, “ನಿನ್ನ ಗಂಡನನ್ನು ಮರುಳುಗೊಳಿಸಿ ಅವನಿಂದ ಒಗಟಿನ ಅರ್ಥವನ್ನು ತಿಳಿದುಕೋ; ಇಲ್ಲವಾದರೆ ನಾವು ನಿನ್ನನ್ನೂ, ನಿನ್ನ ತಂದೆಯ ಮನೆಯವರನ್ನೂ ಬೆಂಕಿಯಿಂದ ಸುಟ್ಟುಬಿಡುವೆವು; ನಮಗಿರುವುದೆಲ್ಲವನ್ನೂ ಕಸಿದುಕೊಳ್ಳುವುದಕ್ಕೆ ನಮ್ಮನ್ನು ಇಲ್ಲಿಗೆ ಕರೆಸಿದಿರೋ” ಅಂದರು.
15 ಅವರು ಏಳನೆಯ ದಿನದಲ್ಲಿ ಸಂಸೋನನ ಹೆಂಡತಿಗೆ, “ನಿನ್ನ ಗಂಡನನ್ನು ಮರುಳುಗೊಳಿಸಿ ಅವನಿಂದ ಒಗಟಿನ ಅರ್ಥವನ್ನು ತಿಳಿದುಕೋ; ಇಲ್ಲವಾದರೆ ನಾವು ನಿನ್ನನ್ನೂ ನಿನ್ನ ತಂದೆಯ ಮನೆಯವರನ್ನೂ ಬೆಂಕಿಯಿಂದ ಸುಟ್ಟುಬಿಡುತ್ತೇವೆ; ನಮಗಿರುವುದೆಲ್ಲವನ್ನೂ ಕಸಿದುಕೊಳ್ಳುವುದಕ್ಕೆ ನಮ್ಮನ್ನು ಇಲ್ಲಿಗೆ ಕರಿಸಿದಿರೋ?” ಎಂದರು.
15 ಅವರು ಏಳನೆಯ ದಿನದಲ್ಲಿ ಸಂಸೋನನ ಹೆಂಡತಿಗೆ - ನಿನ್ನ ಗಂಡನನ್ನು ಮರುಳುಗೊಳಿಸಿ ಅವನಿಂದ ಒಗಟಿನ ಅರ್ಥವನ್ನು ತಿಳಿದುಕೋ; ಇಲ್ಲವಾದರೆ ನಾವು ನಿನ್ನನ್ನೂ ನಿನ್ನ ತಂದೆಯ ಮನೆಯವರನ್ನೂ ಬೆಂಕಿಯಿಂದ ಸುಟ್ಟುಬಿಡುವೆವು; ನಮಗಿರುವದೆಲ್ಲವನ್ನೂ ಕಸಕೊಳ್ಳುವದಕ್ಕೆ ನಮ್ಮನ್ನು ಇಲ್ಲಿಗೆ ಕರಿಸಿದಿರೋ ಅಂದರು.
15 ನಾಲ್ಕನೆಯ ದಿವಸದಲ್ಲಿ ಅವರು ಸಂಸೋನನ ಹೆಂಡತಿಗೆ, “ನಾವು ನಿನ್ನನ್ನೂ, ನಿನ್ನ ತಂದೆಯ ಮನೆಯನ್ನೂ ಬೆಂಕಿಯಿಂದ ಸುಟ್ಟು ಬಿಡದ ಹಾಗೆ ನೀನು ನಿನ್ನ ಗಂಡನ ಆ ಒಗಟನ್ನು ನಮಗೆ ತಿಳಿಸುವ ಹಾಗೆ ಅವನನ್ನು ಮರಳುಗೊಳಿಸು. ನೀನು ನಮಗಿರುವುದೆಲ್ಲವನ್ನು ಕಸಿದುಕೊಳ್ಳುವುದಕ್ಕೆ ಅಲ್ಲವೇ ನಮ್ಮನ್ನು ಇಲ್ಲಿಗೆ ಕರೆಸಿದೆ?” ಎಂದರು.
ಫಿಲಿಷ್ಟಿಯ ಪ್ರಭುಗಳು ದೆಲೀಲಳ ಬಳಿಗೆ ಹೋಗಿ, “ಸಂಸೋನನು ಅಷ್ಟೊಂದು ಶಕ್ತಿಶಾಲಿಯಾಗಿರುವುದಕ್ಕೆ ಕಾರಣಗಳನ್ನು ನಾವು ತಿಳಿದುಕೊಳ್ಳಬೇಕಾಗಿದೆ. ಅವನನ್ನು ಮರುಳುಗೊಳಿಸಿ ಅವನ ರಹಸ್ಯವನ್ನು ತಿಳಿದುಕೊಳ್ಳಲು ಪ್ರಯತ್ನ ಮಾಡು. ಆಗ ನಾವು ಅವನನ್ನು ಸೋಲಿಸಿ, ಬಂಧಿಸಿ ನಮ್ಮ ಅಧೀನದಲ್ಲಿಟ್ಟುಕೊಳ್ಳಲು ಸಾಧ್ಯವಾಗುತ್ತದೆ. ನೀನು ಇದನ್ನು ಮಾಡಿದರೆ ನಮ್ಮಲ್ಲಿ ಪ್ರತಿಯೊಬ್ಬನೂ ನಿನಗೆ ಇಪ್ಪತ್ತೆಂಟು ಬೆಳ್ಳಿನಾಣ್ಯಗಳನ್ನು ಕೊಡುತ್ತೇವೆ” ಎಂದು ಹೇಳಿದರು.
“ಇದನ್ನು ಮಾಡಿದವರು ಯಾರು?” ಎಂದು ಫಿಲಿಷ್ಟಿಯರು ವಿಚಾರಿಸಿದರು. ಒಬ್ಬನು, “ತಿಮ್ನಾ ನಗರದವನ ಅಳಿಯನಾದ ಸಂಸೋನನು ಇದನ್ನು ಮಾಡಿದನು. ಸಂಸೋನನ ಮಾವನು ಸಂಸೋನನ ಹೆಂಡತಿಯನ್ನು ಮದುವೆಯಲ್ಲಿದ್ದ ಉತ್ತಮ ಪುರುಷನೊಬ್ಬನಿಗೆ ಮದುವೆಮಾಡಿಕೊಟ್ಟಿದ್ದಕ್ಕಾಗಿ ಅವನು ಹೀಗೆಲ್ಲಾ ಮಾಡಿದನು” ಎಂದು ಹೇಳಿದನು. ಆಗ ಫಿಲಿಷ್ಟಿಯರು ಸಂಸೋನನ ಹೆಂಡತಿಯನ್ನು ಮತ್ತು ಅವಳ ತಂದೆಯನ್ನು ಸುಟ್ಟುಹಾಕಿದರು.
ಎಫ್ರಾಯೀಮ್ಯರು ತಮ್ಮ ಸೈನಿಕರೆಲ್ಲರನ್ನು ಒಂದು ಕಡೆ ಸೇರಿಸಿದರು. ಆಮೇಲೆ ಅವರು ನದಿಯನ್ನು ದಾಟಿ ಝಾಫೋನ್ ನಗರಕ್ಕೆ ಬಂದರು. ಅವರು ಯೆಫ್ತಾಹನಿಗೆ, “ನೀನು ಅಮ್ಮೋನಿಯರ ಸಂಗಡ ಯುದ್ಧ ಮಾಡುವಾಗ ಸಹಾಯಕ್ಕಾಗಿ ನಮ್ಮನ್ನು ಏಕೆ ಕರೆಯಲಿಲ್ಲ? ನಿನ್ನನ್ನು ಮನೆಯೊಳಗೆ ಹಾಕಿ ನಿನ್ನ ಮನೆಯನ್ನು ಸುಟ್ಟುಬಿಡುತ್ತೇವೆ” ಅಂದರು.
ಸಂಸೋನನು ಅವರಿಗೆ ಈ ಒಗಟನ್ನು ಹೇಳಿದನು: “ತಿಂದುಬಿಡುವಂಥದರಿಂದ ತಿನ್ನತಕ್ಕದ್ದು ದೊರಕಿತು. ಕ್ರೂರವಾದದ್ದರಿಂದ ಮಧುರವಾದದ್ದು ಸಿಕ್ಕಿತು.” ಆ ಮೂವತ್ತು ಜನರು ಮೂರು ದಿನಗಳವರೆಗೆ ಒಗಟಿನ ಅರ್ಥವನ್ನು ಕಂಡುಹಿಡಿಯಲು ಪ್ರಯತ್ನ ಮಾಡಿದರು. ಆದರೆ ಅವರಿಂದ ಸಾಧ್ಯವಾಗಲಿಲ್ಲ.