Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 14:17 - ಪರಿಶುದ್ದ ಬೈಬಲ್‌

17 ಸಂಸೋನನ ಹೆಂಡತಿಯು ಔತಣದ ಏಳು ದಿನಗಳೆಲ್ಲಾ ಅಳುತ್ತಿದ್ದಳು. ಆದ್ದರಿಂದ ಏಳನೆಯ ದಿನ ಅವನು ಒಗಟಿನ ಅರ್ಥವನ್ನು ಅವಳಿಗೆ ಹೇಳಿದನು. ಅವಳು ಪೀಡಿಸಿದ್ದರಿಂದ ಅವನು ಹೇಳಿದನು. ಆಗ ಅವಳು ತನ್ನ ಜನರಲ್ಲಿಗೆ ಹೋಗಿ ಆ ಒಗಟಿನ ಅರ್ಥವನ್ನು ತಿಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಕೆಯು ಔತಣದ ಏಳು ದಿನಗಳಲ್ಲಿಯೂ ಅವನ ಮುಂದೆ ಅಳುತ್ತಿದ್ದಳು. ಏಳನೆಯ ದಿನದಲ್ಲಿ ಆಕೆಯು ಬಹಳವಾಗಿ ಪೀಡಿಸಿದ್ದರಿಂದ ಅವನು ಹೇಳಿಬಿಟ್ಟನು. ಆಕೆಯು ಒಗಟಿನ ಅರ್ಥವನ್ನು ತನ್ನ ಜನರಿಗೆ ತಿಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆಕೆ ಔತಣದ ಏಳು ದಿನಗಳಲ್ಲೂ ಅವನ ಮುಂದೆ ಅಳುತ್ತಿದ್ದಳು. ಏಳನೆಯ ದಿನ ಆಕೆ ಬಹಳವಾಗಿ ಪೀಡಿಸಿದ್ದರಿಂದ ಅವನು ಹೇಳೇಬಿಟ್ಟನು. ಆಕೆ ಒಗಟಿನ ಅರ್ಥವನ್ನು ತನ್ನ ಜನರಿಗೆ ತಿಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆಕೆಯು ಔತಣದ ಏಳು ದಿನಗಳಲ್ಲಿಯೂ ಅವನ ಮುಂದೆ ಅಳುತ್ತಿದ್ದಳು. ಏಳನೆಯ ದಿನದಲ್ಲಿ ಆಕೆಯು ಬಹಳವಾಗಿ ಪೀಡಿಸಿದ್ದರಿಂದ ಅವನು ಹೇಳಿಬಿಟ್ಟನು. ಆಕೆಯು ಒಗಟಿನ ಅರ್ಥವನ್ನು ತನ್ನ ಜನರಿಗೆ ತಿಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವಳು ಔತಣದ ಏಳು ದಿವಸಗಳಲ್ಲಿಯೂ ಅವನ ಮುಂದೆ ಅಳುತ್ತಿದ್ದಳು. ಆದರೆ ಏಳನೆಯ ದಿವಸದಲ್ಲಿ ಅವಳು, ಅವನನ್ನು ಬಹಳವಾಗಿ ಪೀಡಿಸಿದ್ದರಿಂದ ಒಗಟಿನ ಅರ್ಥವನ್ನು ತಿಳಿಸಿದನು. ಆಗ ಆಕೆ ತನ್ನ ಜನರಿಗೆ ಆ ಒಗಟನ್ನು ತಿಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 14:17
13 ತಿಳಿವುಗಳ ಹೋಲಿಕೆ  

ಅವಳು ಸಂಸೋನನನ್ನು ಪ್ರತಿದಿನ ಪೀಡಿಸತೊಡಗಿದಳು. ಅವನ ಶಕ್ತಿಯ ರಹಸ್ಯದ ಬಗ್ಗೆ ಅವಳು ಪದೇಪದೇ ಕೇಳುತ್ತಿದ್ದದರಿಂದ ಅವನಿಗೆ ಸಾಯುವಷ್ಟು ಬೇಸರವಾಯಿತು.


ಕೇವಲ ಸ್ನೇಹವೊಂದೇ ಅವನನ್ನು ಏಳಿಸಿ ರೊಟ್ಟಿ ಕೊಡುವಂತೆ ಮಾಡಲಾರದೆಂದು ನಾನು ನಿಮಗೆ ಹೇಳುತ್ತೇನೆ. ಆದರೆ ಅವನು ಎಡಬಿಡದೆ ಕೇಳುತ್ತಲೇ ಇದ್ದರೆ, ಅವನು ಎದ್ದು ತನ್ನ ಸ್ನೇಹಿತನಿಗೆ ಬೇಕಾಗಿರುವ ರೊಟ್ಟಿಯನ್ನು ಖಂಡಿತವಾಗಿ ಕೊಡುವನು.


ಅವಳು ಆ ಯೌವನಸ್ಥನನ್ನು ಪ್ರೇರೇಪಿಸಲು ಈ ಮಾತುಗಳನ್ನಾಡಿದಳು. ಆಕೆಯ ಸವಿನುಡಿಗಳು ಅವನನ್ನು ಮರುಳುಗೊಳಿಸಿತು.


ಯೋಬನ ಹೆಂಡತಿಯು ಅವನಿಗೆ, “ನೀನು ಇನ್ನೂ ದೇವರಿಗೆ ನಂಬಿಗಸ್ತನಾಗಿರುವೆಯೋ? ದೇವರನ್ನು ದೂಷಿಸಿ ಸಾಯಿ” ಎಂದು ಹೇಳಿದಳು.


ಆಗ ದೆಲೀಲಳು ಸಂಸೋನನಿಗೆ, “ನೀನು ನನಗೆ ಪುನಃ ಸುಳ್ಳು ಹೇಳಿದೆ. ನೀನು ನನ್ನನ್ನು ವಂಚಿಸಿದೆ. ನಿನ್ನನ್ನು ಬಂಧಿಸುವುದು ಹೇಗೆಂಬುದನ್ನು ಈಗ ನನಗೆ ತಿಳಿಸು” ಎಂದು ಕೇಳಿದಳು. ಸಂಸೋನನು, “ನನ್ನ ತಲೆಕೂದಲಿನ ಏಳು ಜಡೆಗಳನ್ನು ಮಗ್ಗದಲ್ಲಿ ನೇಯ್ದು ಕಟ್ಟಿದರೆ ನಾನು ಬೇರೆ ಮನುಷ್ಯರಂತೆ ದುರ್ಬಲನಾಗುತ್ತೇನೆ” ಎಂದು ಹೇಳಿದನು.


ದೆಲೀಲಳು ಸಂಸೋನನಿಗೆ, “ನಿನಗೆ ಇಂಥ ಮಹಾಶಕ್ತಿ ಹೇಗೆ ಬಂತು? ನಿನ್ನನ್ನು ನಿರ್ಬಲಗೊಳಿಸಿ ಬಂಧಿಸುವುದು ಹೇಗೆ?” ಎಂದು ಕೇಳಿದಳು.


ಸ್ತ್ರೀಗೆ ಆ ಮರ ಸುಂದರವಾಗಿ ಕಂಡಿತು. ಅದರ ಹಣ್ಣು ಆಕೆಗೆ ತಿನ್ನಲು ಯೋಗ್ಯವಾಗಿ ಕಂಡಿತು. ಆ ಮರ ತನ್ನನ್ನು ಜ್ಞಾನಿಯನ್ನಾಗಿ ಮಾಡುತ್ತದೆಯೆಂದು ಆಕೆ ಉತ್ಸಾಹಗೊಂಡಳು. ಆದ್ದರಿಂದ ಸ್ತ್ರೀಯು ಆ ಮರದ ಹಣ್ಣನ್ನು ಕಿತ್ತುಕೊಂಡು ತಿಂದಳು; ತನ್ನೊಂದಿಗಿದ್ದ ಗಂಡನಿಗೂ ಸ್ವಲ್ಪ ಹಣ್ಣನ್ನು ಕೊಟ್ಟಳು. ಅವನು ಸಹ ಅದನ್ನು ತಿಂದನು.


ಸಂಸೋನನ ಹೆಂಡತಿಯು ಅವನ ಹತ್ತಿರ ಹೋಗಿ ಅಳುವುದಕ್ಕೆ ಪ್ರಾರಂಭಿಸಿದಳು. ಅವಳು, “ನೀನು ನನ್ನನ್ನು ನಿಜವಾಗಿ ಪ್ರೀತಿಸುವುದಿಲ್ಲ, ನನ್ನನ್ನು ದ್ವೇಷಿಸುತ್ತಿ; ನೀನು ನಮ್ಮ ಜನರಿಗೆ ಒಗಟನ್ನು ಹೇಳಿರುವೆ; ಆದರೆ ಅದರ ಅರ್ಥವನ್ನು ನನಗೆ ಹೇಳಿಲ್ಲ” ಎಂದು ಗೋಳಾಡತೊಡಗಿದಳು. ಅದಕ್ಕೆ ಸಂಸೋನನು, “ನಾನು ನನ್ನ ತಂದೆತಾಯಿಯರಿಗೆ ಅದನ್ನು ತಿಳಿಸಲಿಲ್ಲ, ನಿನಗೆ ತಿಳಿಸುವೆನೋ?” ಎಂದನು.


ಔತಣದ ಏಳನೆಯ ದಿನ ಸೂರ್ಯಾಸ್ತಮಾನಕ್ಕಿಂತ ಮುಂಚೆ ಫಿಲಿಷ್ಟಿಯರಿಗೆ ಅರ್ಥ ಗೊತ್ತಾಯಿತು. ಅವರು ಸಂಸೋನನಲ್ಲಿಗೆ ಬಂದು ಅವನಿಗೆ, “ಜೇನಿಗಿಂತ ಸಿಹಿಯಾದದ್ದು ಯಾವುದು; ಸಿಂಹಕ್ಕಿಂತ ಕ್ರೂರವಾದದ್ದು ಯಾವುದು” ಎಂದರು. ಅದಕ್ಕೆ ಸಂಸೋನನು ಅವರಿಗೆ, “ನೀವು ನನ್ನ ಹಸುವಿನಿಂದ ನೇಗಿಲು ಹೊಡೆಯದ್ದಿದ್ದರೆ ಒಗಟನ್ನು ಬಿಡಿಸುವುದು ನಿಮ್ಮಿಂದ ಆಗುತ್ತಿರಲಿಲ್ಲ” ಎಂದನು.


“ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಉಪಯೋಗಿಸುತ್ತಿದ್ದಾರೆ. ಅವರ ಬಾಯಿಂದ ಬಾಣಗಳಂತೆ ಸುಳ್ಳುಗಳು ಬರುತ್ತಿವೆ. ಈ ನಾಡಿನಲ್ಲಿ ಸತ್ಯವಲ್ಲ, ‘ಅಸತ್ಯ’ ಪ್ರಬಲವಾಗುತ್ತಿದೆ. ಅವರು ಒಂದು ಪಾಪದಿಂದ ಮತ್ತೊಂದು ಪಾಪಕ್ಕೆ ಹೋಗುತ್ತಿದ್ದಾರೆ. ಅವರು ನನ್ನನ್ನು ಅರಿತಿಲ್ಲ.” ಯೆಹೋವನು ಈ ಮಾತನ್ನು ಹೇಳಿದನು.


ನಿನ್ನ ನೆರೆಯವನ ಮೇಲೆ ನಂಬಿಕೆ ಇಡಬೇಡ! ನಿನ್ನ ಸ್ನೇಹಿತನ ಮೇಲೆ ಭರವಸವಿಡಬೇಡ! ನಿನ್ನ ಹೆಂಡತಿಯೊಂದಿಗೂ ನಿನ್ನ ಮನಸ್ಸಿನಲ್ಲಿರುವ ವಿಷಯವನ್ನು ತಿಳಿಸಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು