Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 14:6 - ಪರಿಶುದ್ದ ಬೈಬಲ್‌

6 ಯೆಹೋವನ ಆತ್ಮವು ಸಂಸೋನನ ಮೇಲೆ ಪ್ರಬಲವಾಗಿ ಬಂದುದರಿಂದ ಅವನು ಬರಿಗೈಯಿಂದಲೇ ಹೋತದ ಮರಿಯನ್ನೋ ಎಂಬಂತೆ ಅದನ್ನು ಎರಡು ಹೋಳಾಗಿ ಸೀಳಿಬಿಟ್ಟನು. ಆದರೆ ಸಂಸೋನನು ಇದನ್ನು ತನ್ನ ತಂದೆತಾಯಿಗಳಿಗೆ ಹೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನ ಕೈಯಲ್ಲಿ ಏನೂ ಇಲ್ಲದಿದ್ದರೂ, ಯೆಹೋವನ ಆತ್ಮವು ಅವನ ಮೇಲೆ ಫಕ್ಕನೆ ಬಂದದ್ದರಿಂದ ಆ ಸಿಂಹವನ್ನು ಹೋತ ಮರಿಯನ್ನೋ ಎಂಬಂತೆ ಸೀಳಿಬಿಟ್ಟನು. ಈ ಸಂಗತಿಯನ್ನು ತಂದೆತಾಯಿಗಳಿಗೆ ತಿಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸರ್ವೇಶ್ವರನ ಆತ್ಮ ಅವನ ಮೇಲೆ ಫಕ್ಕನೆ ಇಳಿದು ಬಂದಿತು. ಆಗ ಅವನು ಕೈಯಲ್ಲಿ ಏನೂ ಇಲ್ಲದಿದ್ದರೂ ಆ ಸಿಂಹವನ್ನು ಹೋತಮರಿಯನ್ನೋ ಎಂಬಂತೆ ಸೀಳಿಬಿಟ್ಟನು. ಈ ಸಂಗತಿಯನ್ನು ತಂದೆತಾಯಿಗಳಿಗೆ ತಿಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವನ ಕೈಯಲ್ಲಿ ಏನೂ ಇಲ್ಲದಿದ್ದರೂ ಯೆಹೋವನ ಆತ್ಮವು ಅವನ ಮೇಲೆ ಫಕ್ಕನೆ ಬಂದದರಿಂದ ಆ ಸಿಂಹವನ್ನು ಹೋತ ಮರಿಯನ್ನೋ ಎಂಬಂತೆ ಸೀಳಿಬಿಟ್ಟನು. ಈ ಸಂಗತಿಯನ್ನು ತಂದೆತಾಯಿಗಳಿಗೆ ತಿಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವನು ತನ್ನ ಕೈಯಲ್ಲಿ ಏನೂ ಇಲ್ಲದಿದ್ದರೂ, ಯೆಹೋವ ದೇವರ ಆತ್ಮ ಅವನ ಮೇಲೆ ಬಂದದ್ದರಿಂದ ಅದನ್ನು ಒಂದು ಮೇಕೆಯ ಮರಿಯ ಹಾಗೆ ಸೀಳಿ ಬಿಟ್ಟನು. ಆದರೆ ಅವನು ತಾನು ಮಾಡಿದ್ದನ್ನು ತನ್ನ ತಂದೆತಾಯಿಗಳಿಗೆ ತಿಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 14:6
21 ತಿಳಿವುಗಳ ಹೋಲಿಕೆ  

ಒತ್ನೀಯೇಲನ ಮೇಲೆ ಯೆಹೋವನ ಆತ್ಮ ಬಂದಿತು; ಆದ್ದರಿಂದ ಅವನು ಇಸ್ರೇಲರ ನ್ಯಾಯಾಧೀಶನಾದನು. ಒತ್ನೀಯೇಲನು ಇಸ್ರೇಲರನ್ನು ಯುದ್ಧಕ್ಕೆ ಕರೆದೊಯ್ದನು. ಅರಾಮಿನ ಅರಸನಾದ ಕೂಷನ್ ರಿಷಾತಯಿಮ್‌ನನ್ನು ಸೋಲಿಸಲು ಯೆಹೋವನು ಒತ್ನೀಯೇಲನಿಗೆ ಸಹಾಯ ಮಾಡಿದನು.


ಅವರು ಹೇಳಿದ್ದನ್ನು ಕೇಳಿದಾಗ ದೇವರಾತ್ಮನು ಸೌಲನ ಮೈಮೇಲೆ ಮಹಾಶಕ್ತಿಯೊಡನೆ ಬಂದಿತು. ಸೌಲನು ಬಹುಕೋಪಗೊಂಡನು.


ಅವನು ಮಾಹಾನೆಹದಾನ ನಗರದಲ್ಲಿದ್ದಾಗ ಯೆಹೋವನ ಆತ್ಮವು ಸಂಸೋನನನ್ನು ಪ್ರೇರೇಪಿಸತೊಡಗಿತು. ಈ ನಗರವು ಚೊರ್ಗ ಮತ್ತು ಎಷ್ಟಾವೋಲ್ ನಗರಗಳ ಮಧ್ಯದಲ್ಲಿದೆ.


ಸೈತಾನನು ಆರಂಭದಿಂದಲೂ ಪಾಪಗಳನ್ನು ಮಾಡುತ್ತಿದ್ದಾನೆ. ಪಾಪಗಳನ್ನು ಮಾಡುತ್ತಲೇ ಇರುವವನು ಸೈತಾನನಿಗೆ ಸೇರಿದವನಾಗಿದ್ದಾನೆ. ದೇವರ ಮಗನಾದ ಕ್ರಿಸ್ತನು ಸೈತಾನನ ಕಾರ್ಯವನ್ನು ನಾಶಪಡಿಸುವುದಕ್ಕಾಗಿಯೇ ಬಂದನು.


ನನ್ನ ನೊಗಕ್ಕೆ ಹೆಗಲು ಕೊಟ್ಟು ನನ್ನಿಂದ ಕಲಿತುಕೊಳ್ಳಿರಿ. ನಾನು ಸಾತ್ವಿಕನೂ ದೀನನೂ ಆಗಿರುವುದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.


ಅವನು ಅದಕ್ಕೆ ಉತ್ತರಿಸಿ, “ಇದು ಯೆಹೋವನಿಂದ ಜೆರುಬ್ಬಾಬೆಲನಿಗೆ ಕೊಟ್ಟ ಸಂದೇಶವಾಗಿದೆ. ‘ನಿನ್ನ ಸಹಾಯವು ನಿನ್ನ ಸ್ವಂತ ಶಕ್ತಿಸಾಮರ್ಥ್ಯದಿಂದ ಬರುವದಿಲ್ಲ. ಅದು ನನ್ನ ಆತ್ಮದಿಂದಲೇ ನಿನಗೆ ದೊರಕುವದು.’ ಇದು ಸರ್ವಶಕ್ತನಾದ ಯೆಹೋವನ ನುಡಿ.


ಆತನು ಬೀದಿಗಳಲ್ಲಿ ಗಟ್ಟಿಯಾಗಿ ಮಾತನಾಡನು, ಗಟ್ಟಿಯಾಗಿ ಕರೆಯುವದಿಲ್ಲ, ಕೂಗುವದಿಲ್ಲ.


ಇಂದು ನಾನು ನಿನ್ನನ್ನು ಸೋಲಿಸಲು ಯೆಹೋವನು ಸಹಾಯಮಾಡುತ್ತಾನೆ. ನಾನು ನಿನ್ನನ್ನು ಕೊಲ್ಲುತ್ತೇನೆ. ಇಂದು ನಾನು ನಿನ್ನ ತಲೆಯನ್ನು ಕತ್ತರಿಸಿ ನಿನ್ನ ದೇಹವನ್ನು ಪಕ್ಷಿಗಳಿಗೂ ಕ್ರೂರಮೃಗಗಳಿಗೂ ಆಹಾರವನ್ನಾಗಿ ಕೊಡುತ್ತೇನೆ. ಉಳಿದೆಲ್ಲ ಫಿಲಿಷ್ಟಿಯರಿಗೂ ಸಹ ನಾವು ಅದೇ ರೀತಿ ಮಾಡುತ್ತೇವೆ. ಆಗ ಇಸ್ರೇಲಿನಲ್ಲಿ ದೇವರಿದ್ದಾನೆಂಬುದು ಇಡೀ ಜಗತ್ತಿಗೆಲ್ಲ ಗೊತ್ತಾಗುವುದು!


“ಈ ಫಿಲಿಷ್ಟಿಯರ ಜೊತೆ ನಾನೂ ಸಾಯಲು ಸಿದ್ಧ” ಎಂದು ಹೇಳಿ ಆ ಎರಡೂ ಕಂಬಗಳನ್ನು ತನ್ನ ಎಲ್ಲಾ ಶಕ್ತಿಯಿಂದ ಎಳೆಯುತ್ತಾ ಬಾಗಿದನು. ಆಗ ಮಂದಿರವು ಅಧಿಪತಿಗಳ ಮೇಲೂ ಅಲ್ಲಿದ್ದ ಜನರೆಲ್ಲರ ಮೇಲೂ ಕುಸಿದು ಬಿತ್ತು. ಈ ಪ್ರಕಾರ ಸಂಸೋನನು ತಾನು ಜೀವದಿಂದಿದ್ದಾಗ ಕೊಂದ ಜನರಿಗಿಂತ ಹೆಚ್ಚು ಜನರನ್ನು ತಾನು ಸಾಯುವಾಗ ಕೊಂದನು.


ಸಂಸೋನನು ಸತ್ತಕತ್ತೆಯ ದವಡೇ ಎಲುಬನ್ನು ಕಂಡನು. ಅವನು ಆ ದವಡೇ ಎಲುಬನ್ನು ತೆಗೆದುಕೊಂಡು ಅದರಿಂದ ಒಂದು ಸಾವಿರ ಫಿಲಿಷ್ಟಿಯರನ್ನು ಕೊಂದುಹಾಕಿದನು.


ಅವರ ಮೇಲೆ ಆಕ್ರಮಣ ಮಾಡಿ ಅವರಲ್ಲಿ ಅನೇಕರನ್ನು ಕೊಂದುಹಾಕಿದನು. ಆಮೇಲೆ ಅವನು ಹೋಗಿ ಒಂದು ಗುಹೆಯಲ್ಲಿ ಇದ್ದುಬಿಟ್ಟನು. ಆ ಗುಹೆಯು ಏಟಾಮಿನ ಬಂಡೆಯ ಬಳಿಯಲ್ಲಿತ್ತು.


ಆಗ ಯೆಹೋವನ ಆತ್ಮವು ಯೆಫ್ತಾಹನ ಮೇಲೆ ಬಂತು. ಯೆಫ್ತಾಹನು ಗಿಲ್ಯಾದನ ಮತ್ತು ಮನಸ್ಸೆಯ ಪ್ರದೇಶಗಳಲ್ಲಿ ಸಂಚರಿಸಿದನು. ಅವನು ಗಿಲ್ಯಾದಿನ ಮಿಚ್ಛೆಗೆ ಬಂದನು. ಗಿಲ್ಯಾದಿನ ಮಿಚ್ಛೆಯ ನಗರದಿಂದ ಅವನು ಅಮ್ಮೋನಿಯರ ಪ್ರದೇಶಕ್ಕೆ ಹೋದನು.


ಆ ಜನರೆಲ್ಲರೂ ಬಲವಾದ ನಂಬಿಕೆಯುಳ್ಳವರಾಗಿದ್ದರು. ಆ ನಂಬಿಕೆಯಿಂದಲೇ ರಾಜ್ಯಗಳನ್ನು ಸೋಲಿಸಿದರು. ಅವರು ಯೋಗ್ಯವಾದ ಕಾರ್ಯಗಳನ್ನು ಮಾಡಿದರು ಮತ್ತು ದೇವರು ವಾಗ್ದಾನ ಮಾಡಿದ್ದವುಗಳನ್ನು ಪಡೆದುಕೊಂಡರು. ಅವರಲ್ಲಿ ಕೆಲವರು ತಮ್ಮ ನಂಬಿಕೆಯಿಂದ ಸಿಂಹಗಳ ಬಾಯಿಗಳನ್ನು ಮುಚ್ಚಿದರು;


ಸಂಸೋನನು ತನ್ನ ತಂದೆತಾಯಿಗಳೊಂದಿಗೆ ತಿಮ್ನಾ ನಗರಕ್ಕೆ ಹೋದನು. ಅವರು ನಗರದ ಸಮೀಪದ ದ್ರಾಕ್ಷಿತೋಟಗಳವರೆಗೆ ಹೋದರು. ಅಲ್ಲಿ ಹಠಾತ್ತಾಗಿ ಒಂದು ಪ್ರಾಯದ ಸಿಂಹವು ಘರ್ಜಿಸಿ ಸಂಸೋನನ ಮೇಲೆರಗಿತು.


ಸಂಸೋನನು ನಗರಕ್ಕೆ ಹೋಗಿ ಆ ಫಿಲಿಷ್ಟಿಯ ಸ್ತ್ರೀಯೊಂದಿಗೆ ಮಾತನಾಡಿ ಅವಳನ್ನು ಇಷ್ಟಪಟ್ಟನು.


ಆಗ ಯೆಹೋವನ ಆತ್ಮವು ಮಹಾಶಕ್ತಿಯೊಡನೆ ನಿನ್ನ ಮೈಮೇಲೆ ಬರುತ್ತದೆ. ನೀನು ಮಾರ್ಪಾಟಾಗಿ ಬೇರೊಬ್ಬ ಮನುಷ್ಯನಾಗುವೆ. ನೀನೂ ಆ ಪ್ರವಾದಿಗಳಂತೆ ಪ್ರವಾದಿಸಲು ಆರಂಭಿಸುವೆ.


ಸಿಂಹಗಳ ಮೇಲೆಯೂ ಮತ್ತು ವಿಷಸರ್ಪಗಳ ಮೇಲೆಯೂ ನಡೆಯಲು ನೀನು ಶಕ್ತನಾಗಿರುವೆ.


ಸಂಸೋನನು ಬಹಳ ಕೋಪಗೊಂಡನು. ಯೆಹೋವನ ಆತ್ಮವು ಸಂಸೋನನ ಮೇಲೆ ಪ್ರಬಲವಾಗಿ ಬಂತು. ಅವನು ಅಷ್ಕೆಲೋನ್ ನಗರಕ್ಕೆ ಧಾವಿಸಿದನು. ಆ ನಗರದಲ್ಲಿ ಅವನು ಮೂವತ್ತು ಜನ ಫಿಲಿಷ್ಟಿಯರನ್ನು ಕೊಂದನು. ಆಮೇಲೆ ಅವನು ಹೆಣಗಳ ಮೇಲಿನ ಎಲ್ಲ ಬಟ್ಟೆಗಳನ್ನೂ ಸ್ವತ್ತನ್ನೂ ಸುಲಿದುಕೊಂಡನು. ಆ ಬಟ್ಟೆಗಳನ್ನು ತಂದು ಒಗಟಿನ ಅರ್ಥ ಹೇಳಿದ ಜನರಿಗೆ ಕೊಟ್ಟನು. ಬಳಿಕ ಅವನು ತನ್ನ ತಂದೆಯ ಮನೆಗೆ ಹೋದನು.


ಸೌಲನು ಅವನಿಗೆ, “ಕತ್ತೆಗಳು ಈಗಾಗಲೇ ಸಿಕ್ಕಿವೆ ಎಂದು ಸಮುವೇಲನು ಹೇಳಿದನು” ಅಂದನು. ಸೌಲನು ತನ್ನ ಚಿಕ್ಕಪ್ಪನಿಗೆ ಎಲ್ಲವನ್ನೂ ತಿಳಿಸಲಿಲ್ಲ. ರಾಜ್ಯದ ಬಗ್ಗೆ ಸಮುವೇಲನು ಹೇಳಿದ ಮಾತುಗಳನ್ನು ಸೌಲನು ತನ್ನ ಚಿಕ್ಕಪ್ಪನಿಗೆ ತಿಳಿಸಲಿಲ್ಲ.


ಅಂದು ಸೌಲನ ಮಗನಾದ ಯೋನಾತಾನನು ತನ್ನ ಆಯುಧಗಳನ್ನು ಹೊತ್ತುತರುವ ಯುವಕನೊಂದಿಗೆ ಮಾತನಾಡುತ್ತಾ, “ಕಣಿವೆಯ ಆಚೆಗಿರುವ ಫಿಲಿಷ್ಟಿಯರ ಪಾಳೆಯಕ್ಕೆ ಹೋಗೋಣ” ಎಂದು ಹೇಳಿದನು. ಆದರೆ ಯೋನಾತಾನನು ತನ್ನ ತಂದೆಗೆ ಇದನ್ನು ತಿಳಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು