Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 15:15 - ಪರಿಶುದ್ದ ಬೈಬಲ್‌

15 ಸಂಸೋನನು ಸತ್ತಕತ್ತೆಯ ದವಡೇ ಎಲುಬನ್ನು ಕಂಡನು. ಅವನು ಆ ದವಡೇ ಎಲುಬನ್ನು ತೆಗೆದುಕೊಂಡು ಅದರಿಂದ ಒಂದು ಸಾವಿರ ಫಿಲಿಷ್ಟಿಯರನ್ನು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅಲ್ಲಿ ಒಂದು ಕತ್ತೆಯ ದವಡೇ ಎಲುಬು ಬಿದ್ದಿತ್ತು. ಅದು ಇನ್ನೂ ಹಸಿದಾಗಿತ್ತು. ಅವನು ಅದನ್ನು ತೆಗೆದುಕೊಂಡು ಅದರಿಂದ ಸಾವಿರ ಜನರನ್ನು ಸಂಹರಿಸಿಬಿಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅಲ್ಲೇ ಒಂದು ಕತ್ತೆಯ ದವಡೆ ಎಲುಬು ಬಿದ್ದಿತ್ತು. ಅದು ಇನ್ನೂ ಹಸಿ ಇತ್ತು. ಅವನು ಅದನ್ನು ತೆಗೆದುಕೊಂಡು ಅದರಿಂದ ಸಾವಿರ ಜನರನ್ನು ಹತಿಸಿಬಿಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅಲ್ಲಿ ಒಂದು ಕತ್ತೆಯ ದವಡೇ ಎಲುಬು ಬಿದ್ದಿತು. ಅದು ಇನ್ನೂ ಹಸಿ ಇತ್ತು. ಅವನು ಅದನ್ನು ತೆಗೆದುಕೊಂಡು ಅದರಿಂದ ಸಾವಿರ ಜನರನ್ನು ಹತಿಸಿಬಿಟ್ಟು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅವನು ಒಂದು ಕತ್ತೆಯ ದವಡೆಯ ಹೊಸ ಎಲುಬನ್ನು ಕಂಡುಕೊಂಡು, ತನ್ನ ಕೈಯನ್ನು ಚಾಚಿ ತೆಗೆದುಕೊಂಡು, ಅದರಿಂದ ಸಾವಿರ ಜನರನ್ನು ವಧಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 15:15
14 ತಿಳಿವುಗಳ ಹೋಲಿಕೆ  

ಯೆಹೋವನ ಸಹಾಯದಿಂದ ನಿಮ್ಮಲ್ಲಿ ಒಬ್ಬ ಇಸ್ರೇಲಿಯು ಒಂದು ಸಾವಿರ ಮಂದಿ ಶತ್ರುಗಳನ್ನು ಸೋಲಿಸುವಂತಾಯಿತು; ಏಕೆಂದರೆ ನಿಮ್ಮ ದೇವರಾದ ಯೆಹೋವನು ನಿಮಗಾಗಿ ಯುದ್ಧ ಮಾಡುವುದಾಗಿ ಪ್ರಮಾಣ ಮಾಡಿದ್ದಾನೆ.


ನಿಮ್ಮಲ್ಲಿ ಐದು ಮಂದಿ ನೂರು ಮಂದಿಯನ್ನು ಓಡಿಸುವರು; ನಿಮ್ಮಲ್ಲಿ ನೂರು ಮಂದಿ ಹತ್ತು ಸಾವಿರ ಮಂದಿಯನ್ನು ಓಡಿಸುವರು; ನೀವು ನಿಮ್ಮ ವೈರಿಗಳನ್ನು ಸೋಲಿಸಿ ಕತ್ತಿಯಿಂದ ಕೊಲ್ಲುವಿರಿ.


ಏಹೂದನು ಇಸ್ರೇಲರನ್ನು ರಕ್ಷಿಸಿದ ತರುವಾಯ, ಇನ್ನೊಬ್ಬ ವ್ಯಕ್ತಿಯು ಇಸ್ರೇಲರನ್ನು ರಕ್ಷಿಸಿದನು. ಅವನು ಅನಾತನ ಮಗನಾದ ಶಮ್ಗರ. ಶಮ್ಗರನು ಎದ್ದು ಎತ್ತಿನ ಮುಳ್ಳುಗೋಲಿನಿಂದ ಆರುನೂರು ಮಂದಿ ಫಿಲಿಷ್ಟಿಯರನ್ನು ಕೊಂದನು.


ಯೋನಾತಾನನು ತನ್ನ ಆಯುಧಗಳನ್ನು ಹೊತ್ತುಕೊಂಡು ಬರುತ್ತಿದ್ದ ಯುವಸಹಾಯಕನಿಗೆ, “ಆ ಹೊರದೇಶಿಯರ ಪಾಳೆಯಕ್ಕೆ ಹೋಗೋಣ ಬಾ. ಈ ಜನರನ್ನು ಸೋಲಿಸಲು ಯೆಹೋವನು ಬಹುಶಃ ನಮ್ಮನ್ನು ಬಳಸಬಹುದು. ಯೆಹೋವನನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ. ನಮ್ಮಲ್ಲಿ ಅನೇಕ ಸೈನಿಕರಿದ್ದರೂ ಇಲ್ಲವೆ ಕೆಲವೇ ಸೈನಿಕರಿದ್ದರೂ ಅದು ಲೆಕ್ಕಕ್ಕೆ ಬರುವುದಿಲ್ಲ” ಎಂದು ಹೇಳಿದನು.


ಆಮೇಲೆ ಗಿದ್ಯೋನನು ಆ ಮುನ್ನೂರು ಜನರನ್ನು ಮೂರು ಗುಂಪುಗಳಾಗಿ ವಿಂಗಡಿಸಿದನು. ಗಿದ್ಯೋನನು ಪ್ರತಿಯೊಬ್ಬನಿಗೆ ಒಂದು ತುತ್ತೂರಿ ಮತ್ತು ಒಂದು ಬರಿದಾದ ಮಣ್ಣಿನ ಪಾತ್ರೆಯನ್ನು ಕೊಟ್ಟನು. ಪ್ರತಿಯೊಂದು ಪಾತ್ರೆಯ ಒಳಗಡೆ ಒಂದು ಉರಿಯುತ್ತಿರುವ ಪಂಜು ಇತ್ತು.


ಯಾಯೇಲಳು ಗುಡಾರದ ಗೂಟವನ್ನು ಮತ್ತು ಕೊಡತಿಯನ್ನು ತೆಗೆದುಕೊಂಡು ಶಬ್ದಮಾಡದೆ ಸೀಸೆರನ ಹತ್ತಿರ ಹೋದಳು. ಸೀಸೆರನು ಬಹಳ ದಣಿದಿದ್ದ ಕಾರಣ ಗಾಢನಿದ್ರೆ ಮಾಡುತ್ತಿದ್ದನು. ಯಾಯೇಲಳು ಗುಡಾರದ ಗೂಟವನ್ನು ಸೀಸೆರನ ತಲೆಯ ಒಂದು ಪಾರ್ಶ್ವದಲ್ಲಿ ಇಟ್ಟು ಕೊಡತಿಯಿಂದ ಬಲವಾಗಿ ಹೊಡೆದಳು. ಆ ಗುಡಾರದ ಗೂಟವು ಸೀಸೆರನ ತಲೆಯ ಮತ್ತೊಂದು ಪಾರ್ಶ್ವಕ್ಕೆ ತೂರಿಬಂದು ಭೂಮಿಯಲ್ಲಿ ಸೇರಿತು. ಸೀಸೆರನು ಸತ್ತನು.


ಕೆಲವರು ಉರಿಯುವ ಬೆಂಕಿಯನ್ನು ನಂದಿಸಿದರು; ಇನ್ನು ಕೆಲವರು ಕತ್ತಿಗಳ ಬಾಯಿಂದ ಪಾರಾದರು; ದುರ್ಬಲರಾಗಿದ್ದವರು ತಮ್ಮ ನಂಬಿಕೆಯಿಂದ ಪ್ರಬಲರಾದರು; ಯುದ್ಧದಲ್ಲಿ ಶಕ್ತಿಶಾಲಿಗಳಾಗಿ ಶತ್ರುಗಳನ್ನು ಸೋಲಿಸಿದರು.


ಆಗ ಸಂಸೋನನು, “ಕತ್ತೆಯ ದವಡೇ ಎಲುಬಿನಿಂದ ನಾನು ಒಂದು ಸಾವಿರ ಜನರನ್ನು ಕೊಂದೆನು, ಕತ್ತೆಯ ದವಡೇ ಎಲುಬಿನಿಂದ ನಾನು ಹೆಣಗಳನ್ನು ರಾಶಿರಾಶಿಯಾಗಿ ಬೀಳಿಸಿದೆನು” ಅಂದನು.


ಬಳಿಕ ಸಂಸೋನನು ದವಡೇ ಎಲುಬನ್ನು ಬಿಸಾಡಿದನು. ಆದ್ದರಿಂದ ಆ ಸ್ಥಳಕ್ಕೆ ರಾಮತ್ ಲೆಹೀ ಎಂದು ಹೆಸರಾಯಿತು.


“ನೀವು ನಿಮ್ಮ ವೈರಿಗಳನ್ನು ಸೋಲಿಸಿ ಓಡಿಸಿಬಿಡುವಿರಿ. ನಿಮ್ಮ ಕತ್ತಿಗಳಿಂದ ಅವರನ್ನು ಕೊಲ್ಲುವಿರಿ.


ದಾವೀದನ ಶೂರಸೈನಿಕರ ಹೆಸರುಗಳು ಹೀಗಿವೆ: ತಹ್ಕೆಮೋನ್ಯನಾದ ಯೋಷೆಬಷ್ಷೆಬೆತನು. ಮೂವರು ವೀರರಿಗೆ ಯೋಷೆಬಷ್ಷೆಬೆತನು ಮುಖ್ಯಸ್ಥನಾಗಿದ್ದನು. ಅವನನ್ನು ಎಚ್ನೀಯನಾದ ಅದೀನೋ ಎಂದೂ ಕರೆಯುತ್ತಿದ್ದರು. ಯೋಷೆಬಷ್ಷೆಬೆತನು ಏಕಕಾಲದಲ್ಲಿ ಎಂಟುನೂರು ಜನರನ್ನು ಕೊಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು