Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 15:19 - ಪರಿಶುದ್ದ ಬೈಬಲ್‌

19 ಲೆಹೀಯ ನೆಲದಲ್ಲಿ ಒಂದು ಸುರಂಗವಿದೆ. ದೇವರು ಆ ಸುರಂಗವನ್ನು ಸೀಳಿ ಅದರೊಳಗಿಂದ ನೀರು ಬರುವಂತೆ ಮಾಡಿದನು. ಸಂಸೋನನು ನೀರು ಕುಡಿದು ಪುನಃ ಚೈತನ್ಯ ಪಡೆದನು. ಆದ್ದರಿಂದ ಅವನು ಆ ನೀರಿನ ಬುಗ್ಗೆಗೆ ಏನ್ ಹಕ್ಕೋರೇ ಎಂದು ಕರೆದನು. ಅದು ಇಂದಿಗೂ ಲೆಹೀ ನಗರದಲ್ಲಿ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆತನು ಲೇಹಿಯಲ್ಲಿ ಒರಳಬಂಡೆಯನ್ನು ಸೀಳಿ ಅದರೊಳಗಿಂದ ನೀರು ಬರುವಂತೆ ಮಾಡಲು ಅವನು ಅದನ್ನು ಕುಡಿದು ಪುನಃ ಚೈತನ್ಯಹೊಂದಿದನು. ಆದ್ದರಿಂದ ಅದಕ್ಕೆ ಏನ್ ಹಕ್ಕೋರೇ ಎಂದು ಹೆಸರಾಯಿತು; ಅದು ಇಂದಿನ ವರೆಗೂ ಲೆಹೀಯಲ್ಲಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ದೇವರು ಲೆಹೀಯಲ್ಲಿ ಒರಳಬಂಡೆಯನ್ನು ಸೀಳಿ ಅದರೊಳಗಿಂದ ನೀರು ಬರುವಂತೆ ಮಾಡಿದರು. ಅವನು ಕುಡಿದು ಪುನಃ ಚೇತನಗೊಂಡನು. ಆದುದರಿಂದ ಅದಕ್ಕೆ ‘ಏನ್ ಹಕ್ಕೋರೇ’ ಎಂದು ಹೆಸರಾಯಿತು; ಅದು ಇಂದಿನವರೆಗೂ ಲೆಹೀಯಲ್ಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆತನು ಲೆಹೀಯಲ್ಲಿ ಒರಳಬಂಡೆಯನ್ನು ಸೀಳಿ ಅದರೊಳಗಿಂದ ನೀರು ಬರುವಂತೆ ಮಾಡಲು ಅವನು ಕುಡಿದು ಪುನಃ ಚೈತನ್ಯ ಹೊಂದಿದನು. ಆದದರಿಂದ ಅದಕ್ಕೆ ಏನ್‍ಹಕ್ಕೋರೇ ಎಂದು ಹೆಸರಾಯಿತು; ಅದು ಇಂದಿನವರೆಗೂ ಲೆಹೀಯಲ್ಲಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆಗ ದೇವರು ಲೇಹಿಯಲ್ಲಿ ಟೊಳ್ಳಾದ ಸ್ಥಳವನ್ನು ಸೀಳಿಬಿಟ್ಟರು. ಅದರೊಳಗಿಂದ ನೀರು ಹೊರಟು ಬಂತು. ಸಂಸೋನನು ಆ ನೀರನ್ನು ಕುಡಿದದ್ದರಿಂದ ಅವನ ಬಲ ತಿರುಗಿಬಂದು, ಅವನು ಚೇತರಿಸಿಕೊಂಡನು. ಆದ್ದರಿಂದ ಏನ್ ಹಕ್ಕೋರೇ ಎಂದು ಅದಕ್ಕೆ ಹೆಸರಾಯಿತು. ಈ ದಿವಸದವರೆಗೂ ಅದು ಲೇಹಿಯಲ್ಲಿ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 15:19
16 ತಿಳಿವುಗಳ ಹೋಲಿಕೆ  

“ಬಾಯಾರಿದ ಜನರಿ ಗೆ ನಾನು ನೀರು ಹೊಯ್ಯುವೆನು. ಬಂಜ ರು ಭೂಮಿಯಲ್ಲಿ ನಾನು ಹೊಳೆ ಹರಿಯುವಂತೆ ಮಾಡುವೆನು. ನಿನ್ನ ಸಂತಾನದ ಮೇಲೆ ನಾನು ನನ್ನ ಆತ್ಮವನ್ನು ಸುರಿಸುವೆನು; ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು. ಅದು ಹರಿಯುವ ಬುಗ್ಗೆಯ ನೀರಿನಂತಿರುವುದು.


ಆದರೆ ಯೋಸೇಫನು ತಮಗೆ ಹೇಳಿದ್ದೆಲ್ಲವನ್ನು ಸಹೋದರರು ತಮ್ಮ ತಂದೆಗೆ ಹೇಳಿದರು. ಆಮೇಲೆ ತನ್ನನ್ನು ಈಜಿಪ್ಟಿಗೆ ಕರೆದುಕೊಂಡು ಬರಲು ಯೋಸೇಫನು ಕಳುಹಿಸಿದ್ದ ರಥಗಳನ್ನು ಯಾಕೋಬನು ನೋಡಿ ಉಲ್ಲಾಸಪಟ್ಟನು.


ಕಷ್ಟದಲ್ಲಿದ್ದ ಈ ಬಡಮನುಷ್ಯನು ಮೊರೆಯಿಡಲು ಯೆಹೋವನು ಕೇಳಿ ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿದನು.


ಬಳಲಿಹೋದವರನ್ನು ಆತನು ಬಲಶಾಲಿಗಳನ್ನಾಗಿ ಮಾಡುತ್ತಾನೆ. ಬಲಹೀನರನ್ನು ಶಕ್ತಿವಂತರನ್ನಾಗಿ ಮಾಡುತ್ತಾನೆ.


ಆಕಾಶಮಂಡಲದ ಕಡೆಗೆ ನೋಡಿರಿ! ಆ ನಕ್ಷತ್ರಗಳನ್ನೆಲ್ಲಾ ಮಾಡಿದವರು ಯಾರು? ಆಕಾಶದಲ್ಲಿರುವ ಆ “ಸೈನ್ಯಗಳನ್ನು” ಸಿದ್ಧ ಮಾಡಿದವರು ಯಾರು? ಪ್ರತಿಯೊಂದು ನಕ್ಷತ್ರವನ್ನು ಹೆಸರೆತ್ತಿ ಕರೆಯುವವರು ಯಾರು? ಆತನು ಬಲಿಷ್ಠನೂ ಪರಾಕ್ರಮಶಾಲಿಯೂ ಆಗಿದ್ದಾನೆ. ಆದ್ದರಿಂದ ಆ ನಕ್ಷತ್ರಗಳಲ್ಲಿ ಒಂದೂ ನಾಶವಾಗಲಿಲ್ಲ.


ನಾನು ಆಪತ್ತಿನಲ್ಲಿದ್ದಾಗ ಯೆಹೋವನಿಗೆ ಮೊರೆಯಿಟ್ಟೆನು. ಆತನು ನನಗೆ ಸದುತ್ತರವನ್ನು ದಯಪಾಲಿಸಿದನು.


ಅವರು ಈಜಿಪ್ಟಿನವನಿಗೆ ಅಂಜೂರದ ಹಣ್ಣಿನ ಉಂಡೆಯನ್ನೂ ಎರಡು ಗೊಂಚಲು ಒಣ ದ್ರಾಕ್ಷಿಯನ್ನೂ ಕೊಟ್ಟರು. ಅವನು ತಿಂದನಂತರ ಚೇತರಿಸಿಕೊಂಡನು. ಅವನು ಮೂರು ದಿವಸ ಹಗಲಿರುಳು ಆಹಾರವನ್ನೇನೂ ತಿಂದಿರಲಿಲ್ಲ; ನೀರನ್ನೂ ಕುಡಿದಿರಲಿಲ್ಲ.


ಆಗ ಮೋಶೆಯು ಒಂದು ಯಜ್ಞವೇದಿಕೆಯನ್ನು ಕಟ್ಟಿದನು. ಮೋಶೆಯು ಯಜ್ಞವೇದಿಕೆಗೆ, “ಯೆಹೋವನು ನನ್ನ ಧ್ವಜ” ಎಂದು ಹೆಸರಿಟ್ಟನು.


ನಾನು ಬಂದಾಗ ನಿನಗೆ ಸ್ವಲ್ಪವಿತ್ತು, ಈಗ ನಿನಗೆ ಬೇಕಾದಷ್ಟಿದೆ. ನಾನು ನಿನಗೋಸ್ಕರ ಮಾಡಿದ್ದನ್ನೆಲ್ಲ ಯೆಹೋವನು ಆಶೀರ್ವದಿಸಿದನು. ನಾನು ನನಗೋಸ್ಕರ ಕೆಲಸ ಮಾಡುವ ಸಮಯವಿದು. ನನ್ನ ಸ್ವಂತ ಮನೆಗೆ ಒದಗಿಸುವ ಸಮಯವಿದು” ಎಂದು ಹೇಳಿದನು.


ಆ ಸ್ಥಳದ ಹೆಸರು ಲೂಜ್. ಆದರೆ ಯಾಕೋಬನು ಅದಕ್ಕೆ ಬೇತೇಲ್ ಎಂದು ಹೆಸರಿಟ್ಟನು.


ಯೆಹೋವನು ತನ್ನೊಡನೆ ಮಾತಾಡಿದ್ದರಿಂದ ಹಾಗರಳು, “ಈ ಸ್ಥಳದಲ್ಲಿಯೂ ದೇವರು ನನ್ನನ್ನು ನೋಡಿ ನನಗಾಗಿ ಚಿಂತಿಸುತ್ತಾನೆ ಎಂದುಕೊಂಡು ಆತನಿಗೆ ‘ನನ್ನನ್ನು ನೋಡುವ ದೇವರು’” ಎಂದು ಹೆಸರಿಟ್ಟಳು.


ತನ್ನ ಕೈಯಲ್ಲಿದ್ದ ಕೋಲನ್ನು ಎತ್ತಿ ಎರಡು ಸಾರಿ ಬಂಡೆಯನ್ನು ಹೊಡೆದನು. ಬಂಡೆಯಿಂದ ನೀರು ಹರಿಯತೊಡಗಿತು. ಜನರಿಗೆ ಮತ್ತು ಪಶುಗಳಿಗೆ ಕುಡಿಯಲು ನೀರು ದೊರೆಯಿತು.


ಆಗ ಫಿಲಿಷ್ಟಿಯರು ಯೆಹೂದಕ್ಕೆ ಹೋಗಿ, ಅವರು ಲೆಹೀ ಎಂಬ ಸ್ಥಳದ ಬಳಿ ಪಾಳೆಯಮಾಡಿಕೊಂಡರು ಮತ್ತು ಯುದ್ಧದ ಸಿದ್ಧತೆ ಮಾಡತೊಡಗಿದರು.


ದೇವರು ಹೀಗೆನ್ನುತ್ತಾನೆ: “ಆಪತ್ಕಾಲಗಳಲ್ಲಿ ನನಗೆ ಮೊರೆಯಿಡಿರಿ! ನಾನು ನಿಮಗೆ ಸಹಾಯ ಮಾಡುವೆನು, ಆಗ ನೀವು ನನ್ನನ್ನು ಸನ್ಮಾನಿಸುವಿರಿ.”


ರಾಜನು ಮಾರ್ಗದಲ್ಲಿ ತೊರೆಯ ನೀರನ್ನು ಕುಡಿದು ಬಲ ಹೊಂದುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು