Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 15:4 - ಪರಿಶುದ್ದ ಬೈಬಲ್‌

4 ಸಂಸೋನನು ಹೊರಗೆ ಹೋಗಿ ಮುನ್ನೂರು ನರಿಗಳನ್ನು ಹಿಡಿದನು. ಅವುಗಳಲ್ಲಿ ಎರಡೆರಡು ನರಿಗಳನ್ನು ಹಿಡಿದು ಒಂದರ ಬಾಲವನ್ನು ಮತ್ತೊಂದರ ಬಾಲಕ್ಕೆ ಕಟ್ಟಿದನು. ನರಿಗಳ ಪ್ರತಿಯೊಂದು ಜೋಡಿಯ ಬಾಲಗಳ ಮಧ್ಯದಲ್ಲಿ ಒಂದು ಪಂಜನ್ನು ಕಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮುನ್ನೂರು ನರಿಗಳನ್ನು ಹಿಡಿದು, ಬಾಲಕ್ಕೆ ಬಾಲವನ್ನು ಸೇರಿಸಿ ಕಟ್ಟಿ, ಅವುಗಳ ನಡುವೆ ಒಂದೊಂದು ಪಂಜನ್ನು ಸಿಕ್ಕಿಸಿ, ಪಂಜುಗಳಿಗೆ ಬೆಂಕಿಹೊತ್ತಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಮುನ್ನೂರು ನರಿಗಳನ್ನು ಹಿಡಿದನು. ಒಂದರ ಬಾಲಕ್ಕೆ ಇನ್ನೊಂದು ಬಾಲವನ್ನು ಸೇರಿಸಿ ಕಟ್ಟಿದನು. ಹೀಗೆ ಎರಡೆರಡು ಬಾಲಗಳ ನಡುವೆ ಒಂದೊಂದು ಪಂಜನ್ನು ಸಿಕ್ಕಿಸಿ ಪಂಜುಗಳಿಗೆ ಬೆಂಕಿಹೊತ್ತಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮುನ್ನೂರು ನರಿಗಳನ್ನು ಹಿಡಿದು ಬಾಲಕ್ಕೆ ಬಾಲವನ್ನು ಸೇರಿಸಿ ಕಟ್ಟಿ ಅವುಗಳ ನಡುವೆ ಒಂದೊಂದು ಪಂಜನ್ನು ಸಿಕ್ಕಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಮುನ್ನೂರು ನರಿಗಳನ್ನು ಹಿಡಿದು, ಪಂಜುಗಳನ್ನು ತೆಗೆದುಕೊಂಡು ಬಂದು, ಬಾಲಕ್ಕೆ ಬಾಲ ಸೇರಿಸಿ, ಎರಡು ಬಾಲಗಳ ನಡುವೆ ಒಂದು ಪಂಜನ್ನು ಕಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 15:4
8 ತಿಳಿವುಗಳ ಹೋಲಿಕೆ  

ಚೀಯೋನ್ ಪರ್ವತವು ನಿರ್ಜನ ಪ್ರದೇಶವಾಗಿದೆ. ಚೀಯೋನ್ ಪರ್ವತದ ಸುತ್ತಮುತ್ತಲೆಲ್ಲ ನರಿಗಳು ಓಡಾಡುತ್ತವೆ.


ದ್ರಾಕ್ಷಿತೋಟಗಳನ್ನು ಹಾಳುಮಾಡುವ ನರಿಗಳನ್ನೂ ನರಿಮರಿಗಳನ್ನೂ ಹಿಡಿಯಿರಿ! ನಮ್ಮ ದ್ರಾಕ್ಷಿತೋಟಗಳು ಈಗ ಹೂಬಿಡುತ್ತಿವೆ.


ಅವರು ಖಡ್ಗಗಳಿಂದ ಕೊಲ್ಲಲ್ಪಡುವರು. ಅವರ ಶವಗಳು ನರಿಗಳ ಪಾಲಾಗುವವು.


ಸಂಸೋನನು ಅವನಿಗೆ, “ಫಿಲಿಷ್ಟಿಯರಾದ ನಿಮಗೆ ತೊಂದರೆಕೊಡಲು ನನಗೊಂದು ಒಳ್ಳೆಯ ಕಾರಣ ಸಿಕ್ಕಿತು. ಈಗ ಯಾರೂ ನನ್ನದು ತಪ್ಪೆಂದು ಹೇಳುವುದಿಲ್ಲ” ಎಂದು ಹೇಳಿದನು.


ಸಂಸೋನನು ಆ ಪಂಜುಗಳಿಗೆ ಬೆಂಕಿ ಹಚ್ಚಿ ಆ ನರಿಗಳನ್ನು ಫಿಲಿಷ್ಟಿಯರ ಪೈರುಗಳಿದ್ದ ಹೊಲಗಳಲ್ಲಿ ಓಡಾಡಲು ಬಿಟ್ಟನು. ಈ ರೀತಿ ಅವನು ಅವರ ಹೊಲಗಳಲ್ಲಿ ಬೆಳೆದ ಪೈರನ್ನೂ ಮತ್ತು ಅವರು ಕೊಯ್ದುಹಾಕಿದ ತೆನೆಗೂಡುಗಳನ್ನೂ ಸುಟ್ಟುಹಾಕಿದನು. ಅವನು ಅವರ ದ್ರಾಕ್ಷಿಯ ತೋಟಗಳನ್ನು ಮತ್ತು ಆಲಿವ್ ಮರಗಳನ್ನು ಸುಟ್ಟುಹಾಕಿದನು.


ಮತ್ತೊಬ್ಬನನ್ನು ಮೋಸಗೊಳಿಸಿ ತಾನು ಕೇವಲ ತಮಾಷೆಮಾಡಿದ್ದಾಗಿ ಹೇಳುವವನು ಉರಿಯುವ ಬಾಣಗಳನ್ನು ಆಕಾಶದ ಕಡೆಗೆ ಎಸೆದು ಬೇರೊಬ್ಬನನ್ನು ಆಕಸ್ಮಿಕವಾಗಿ ಕೊಲ್ಲುವ ಹುಚ್ಚನಂತಿರುವನು.


“ಆಹಾಜನಿಗೆ ಹೀಗೆ ಹೇಳು: ‘ಶಾಂತನಾಗಿದ್ದು ಜಾಗ್ರತೆಯಿಂದಿರು. ಭಯಪಡಬೇಡ. ರೆಚೀನ್ ಮತ್ತು ರೆಮಲ್ಯನ ಮಗ ಇವರಿಬ್ಬರೂ ಸೇರಿ ನಿನ್ನನ್ನು ಬೆದರಿಸದಂತೆ ನೋಡಿಕೋ. ಅವರಿಬ್ಬರೂ ಸುಟ್ಟುಹೋದ ಕೋಲಿನಂತಿದ್ದಾರೆ. ಹಿಂದೆ ಅವರು ಬೆಂಕಿಯಿಂದ ಉರಿಯುತ್ತಿದ್ದರು. ಆದರೆ ಈಗ ಅವರು ಕೇವಲ ಹೊಗೆಯಾಡುತ್ತಿದ್ದಾರೆ. ರೆಚೀನ್, ಅರಾಮ್ ಮತ್ತು ರೆಮಲ್ಯನ ಮಗ ಕೋಪಗೊಂಡಿದ್ದಾರೆ.


ಆಗ ಅಬ್ಷಾಲೋಮನು ತನ್ನ ಸೇವಕರಿಗೆ, “ನೋಡಿರಿ, ನನ್ನ ಹೊಲದ ಪಕ್ಕದಲ್ಲಿ ಯೋವಾಬನ ಹೊಲವಿದೆ. ಅವನು ಆ ಹೊಲದಲ್ಲಿ ಜವೆಗೋಧಿಯನ್ನು ಬೆಳೆದಿದ್ದಾನೆ. ಹೋಗಿ ಆ ಜವೆಗೋಧಿಯನ್ನು ಸುಟ್ಟುಬಿಡಿರಿ” ಎಂದು ಹೇಳಿದನು. ಅಬ್ಷಾಲೋಮನ ಸೇವಕರು ಹೋಗಿ ಯೋವಾಬನ ಹೊಲದಲ್ಲಿ ಬೆಂಕಿಯನ್ನು ಹಚ್ಚಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು