Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 15:8 - ಪರಿಶುದ್ದ ಬೈಬಲ್‌

8 ಅವರ ಮೇಲೆ ಆಕ್ರಮಣ ಮಾಡಿ ಅವರಲ್ಲಿ ಅನೇಕರನ್ನು ಕೊಂದುಹಾಕಿದನು. ಆಮೇಲೆ ಅವನು ಹೋಗಿ ಒಂದು ಗುಹೆಯಲ್ಲಿ ಇದ್ದುಬಿಟ್ಟನು. ಆ ಗುಹೆಯು ಏಟಾಮಿನ ಬಂಡೆಯ ಬಳಿಯಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರ ತೊಡೆ, ಸೊಂಟಗಳನ್ನು ಮುರಿದು, ಅವರನ್ನು ಸಂಹರಿಸಿ, ತಾನು ಹೋಗಿ ಏಟಾಮ್ ಗಿರಿಯ ಗುಹೆಯಲ್ಲಿ ವಾಸಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವರ ತೊಡೆ ಸೊಂಟಗಳನ್ನು ಮುರಿದು, ಅವರನ್ನು ಸಂಹರಿಸಿಬಿಟ್ಟನು. ಅನಂತರ ಹೋಗಿ ಏಟಾಮ್ ಗಿರಿಯ ಗುಹೆಯಲ್ಲಿ ವಾಸಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವರ ತೊಡೆ ಸೊಂಟಗಳನ್ನು ಮುರಿದು ಅವರನ್ನು ಸಂಹರಿಸಿ ತಾನು ಹೋಗಿ ಏಟಾಮ್ ಗಿರಿಯ ಗುಹೆಯಲ್ಲಿ ವಾಸಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರ ಮೇಲೆ ಬಲವಾಗಿ ಬಿದ್ದು, ಅವರಲ್ಲಿ ಅನೇಕರನ್ನು ಕೊಂದುಹಾಕಿ ತಾನು ಹೋಗಿ ಏಟಾಮ್ ಗಿರಿಯ ಗುಹೆಯಲ್ಲಿ ವಾಸಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 15:8
9 ತಿಳಿವುಗಳ ಹೋಲಿಕೆ  

ನಾನು ಕೋಪಗೊಂಡಾಗ ಜನಾಂಗಗಳ ಮೇಲೆ ತುಳಿದಾಡಿದೆನು. ನಾನು ಸಿಟ್ಟುಗೊಂಡಾಗ ಅವರನ್ನು ಶಿಕ್ಷಿಸಿದೆನು. ಅವರ ರಕ್ತವನ್ನು ನೆಲದ ಮೇಲೆ ಚೆಲ್ಲಿದೆನು.”


ಅವನ ಉತ್ತರ: “ದ್ರಾಕ್ಷಿತೊಟ್ಟಿಯಲ್ಲಿ ನಾನೊಬ್ಬನೇ ತುಳಿದೆನು. ಯಾರೂ ನನಗೆ ಸಹಾಯ ಮಾಡಲಿಲ್ಲ. ನಾನು ಕೋಪಗೊಂಡು ದ್ರಾಕ್ಷಿಹಣ್ಣಿನ ಮೇಲೆ ತುಳಿದೆನು. ಅದರ ರಸ ನನ್ನ ಬಟ್ಟೆಯ ಮೇಲೆ ಹಾರಿತು. ಆದ್ದರಿಂದ ನನ್ನ ಬಟ್ಟೆಗಳು ಮಲಿನವಾದವು.


ಏಕೆಂದರೆ ಯೆಹೋವನ ಬಲವು ಈ ಪರ್ವತದಲ್ಲಿದೆ. ಮೋವಾಬ್ ಸೋಲಿಸಲ್ಪಡುವದು. ಯೆಹೋವನು ವೈರಿಯನ್ನು ಹುಲ್ಲಿನಂತೆ ತುಳಿದುಬಿಡುವನು.


ಕೆಲವರು ಉರಿಯುವ ಬೆಂಕಿಯನ್ನು ನಂದಿಸಿದರು; ಇನ್ನು ಕೆಲವರು ಕತ್ತಿಗಳ ಬಾಯಿಂದ ಪಾರಾದರು; ದುರ್ಬಲರಾಗಿದ್ದವರು ತಮ್ಮ ನಂಬಿಕೆಯಿಂದ ಪ್ರಬಲರಾದರು; ಯುದ್ಧದಲ್ಲಿ ಶಕ್ತಿಶಾಲಿಗಳಾಗಿ ಶತ್ರುಗಳನ್ನು ಸೋಲಿಸಿದರು.


ಸಂಸೋನನು ಫಿಲಿಷ್ಟಿಯರಿಗೆ, “ನೀವು ನನಗೆ ಈ ದುಷ್ಕೃತ್ಯವನ್ನು ಮಾಡಿರುವುದರಿಂದ ನಾನೂ ನಿಮಗೆ ಕೇಡನ್ನು ಮಾಡುತ್ತೇನೆ” ಎಂದು ಹೇಳಿ,


ಆಗ ಫಿಲಿಷ್ಟಿಯರು ಯೆಹೂದಕ್ಕೆ ಹೋಗಿ, ಅವರು ಲೆಹೀ ಎಂಬ ಸ್ಥಳದ ಬಳಿ ಪಾಳೆಯಮಾಡಿಕೊಂಡರು ಮತ್ತು ಯುದ್ಧದ ಸಿದ್ಧತೆ ಮಾಡತೊಡಗಿದರು.


ಆಗ ಯೆಹೂದಕುಲದ ಮೂರು ಸಾವಿರ ಜನರು ಸಂಸೋನನಲ್ಲಿಗೆ ಹೋದರು. ಅವರು ಏಟಾಮಿನ ಬಂಡೆಯ ಬಳಿಯಲ್ಲಿದ್ದ ಗುಹೆಗೆ ಬಂದು ಅವನಿಗೆ, “ನೀನು ನಮಗೆ ಮಾಡಿರುವುದೇನು? ಫಿಲಿಷ್ಟಿಯರು ನಮ್ಮನ್ನು ಆಳುತ್ತಿದ್ದಾರೆ ಎಂಬುದು ನಿನಗೆ ಗೊತ್ತಿಲ್ಲವೇ?” ಎಂದು ಕೇಳಿದರು. ಸಂಸೋನನು, “ಅವರು ನನಗೆ ಮಾಡಿದ ದ್ರೋಹಕ್ಕಾಗಿ ನಾನು ಅವರನ್ನು ಶಿಕ್ಷಿಸಿದೆ” ಎಂದನು.


ಯೆಹೂದ್ಯರು ಅವರಿಗೆ, “ಫಿಲಿಷ್ಟಿಯರಾದ ನೀವು ನಮ್ಮ ಸಂಗಡ ಯುದ್ಧ ಮಾಡುವುದಕ್ಕೆ ಇಲ್ಲಿಗೇಕೆ ಬಂದಿದ್ದೀರಿ?” ಎಂದು ಕೇಳಿದರು. ಅದಕ್ಕೆ ಅವರು, “ನಾವು ಸಂಸೋನನನ್ನು ಹಿಡಿಯಲು ಬಂದಿದ್ದೇವೆ. ನಾವು ಅವನನ್ನು ಬಂಧಿಸಬೇಕಾಗಿದೆ. ಅವನು ನಮ್ಮ ಜನರಿಗೆ ಮಾಡಿದ ದ್ರೋಹಕ್ಕಾಗಿ ಅವನನ್ನು ಶಿಕ್ಷಿಸಬೇಕು” ಎಂದು ಉತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು