Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 16:16 - ಪರಿಶುದ್ದ ಬೈಬಲ್‌

16 ಅವಳು ಸಂಸೋನನನ್ನು ಪ್ರತಿದಿನ ಪೀಡಿಸತೊಡಗಿದಳು. ಅವನ ಶಕ್ತಿಯ ರಹಸ್ಯದ ಬಗ್ಗೆ ಅವಳು ಪದೇಪದೇ ಕೇಳುತ್ತಿದ್ದದರಿಂದ ಅವನಿಗೆ ಸಾಯುವಷ್ಟು ಬೇಸರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇದಲ್ಲದೆ ಅವಳು ಅವನನ್ನು ದಿನದಿನವೂ ಮಾತಿನಿಂದ ಪೀಡಿಸಿದ್ದರಿಂದ ಅವನಿಗೆ ಸಾಯುವುದು ಒಳ್ಳೆಯದು ಎನ್ನುವಷ್ಟು ಬೇಸರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಇದಲ್ಲದೆ, ಅವಳು ಅವನನ್ನು ದಿನದಿನವೂ ಮಾತಿನಿಂದ ಪೀಡಿಸುತ್ತಿದ್ದುದರಿಂದ ಅವನಿಗೆ ಸಾಯುವುದೇ ಒಳ್ಳೆಯದೆನ್ನುವಷ್ಟು ಬೇಸರ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇದಲ್ಲದೆ ಅವಳು ಅವನನ್ನು ದಿನ ದಿನವೂ ಮಾತಿನಿಂದ ಪೀಡಿಸಿದ್ದರಿಂದ ಅವನಿಗೆ ಸಾಯುವದು ಒಳ್ಳೇದನ್ನುವಷ್ಟು ಬೇಸರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವಳು ಅವನನ್ನು ದಿನದಿನವೂ ತನ್ನ ಮಾತುಗಳಿಂದ ಪೀಡಿಸಿ, ತೊಂದರೆ ಪಡಿಸಿದ್ದರಿಂದ, ಅವನ ಪ್ರಾಣವು ಸಾಯುವಷ್ಟು ವ್ಯಸನಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 16:16
11 ತಿಳಿವುಗಳ ಹೋಲಿಕೆ  

ಆದರೆ ಈ ಸ್ತ್ರೀ ಬಂದುಬಂದು ನನ್ನನ್ನು ಕುಗ್ಗಿಸಿಬಿಡುತ್ತಾಳೆ. ಈಕೆಗೆ ನಾನು ನ್ಯಾಯವನ್ನು ದೊರಕಿಸಿಕೊಟ್ಟರೆ, ಈಕೆ ನನ್ನನ್ನು ಕಾಡಿಸುವುದಿಲ್ಲ. ಇಲ್ಲವಾದರೆ, ಈಕೆಯು ನನ್ನನ್ನು ಕಾಡಿಸುತ್ತಲೇ ಇರುವಳು’ ಎಂದುಕೊಂಡನು.”


ಕೇವಲ ಸ್ನೇಹವೊಂದೇ ಅವನನ್ನು ಏಳಿಸಿ ರೊಟ್ಟಿ ಕೊಡುವಂತೆ ಮಾಡಲಾರದೆಂದು ನಾನು ನಿಮಗೆ ಹೇಳುತ್ತೇನೆ. ಆದರೆ ಅವನು ಎಡಬಿಡದೆ ಕೇಳುತ್ತಲೇ ಇದ್ದರೆ, ಅವನು ಎದ್ದು ತನ್ನ ಸ್ನೇಹಿತನಿಗೆ ಬೇಕಾಗಿರುವ ರೊಟ್ಟಿಯನ್ನು ಖಂಡಿತವಾಗಿ ಕೊಡುವನು.


ಯೇಸು, “ಇದು ನನ್ನ ರಕ್ತ. ಒಡಂಬಡಿಕೆಯ ರಕ್ತ. ಇದು ಬಹು ಜನರಿಗೋಸ್ಕರ ಸುರಿಸಲ್ಪಡುವ ರಕ್ತ.


ಆದರೆ ದೇವರು ಯೋನನಿಗೆ ಹೇಳಿದ್ದೇನೆಂದರೆ, “ಆ ಸೋರೆ ಗಿಡವು ಸತ್ತುಹೋದುದಕ್ಕೆ ನೀನು ಕೋಪಗೊಳ್ಳುವುದು ಸರಿಯೋ?” ಅದಕ್ಕುತ್ತರವಾಗಿ ಯೋನನು, “ಹೌದು! ನಾನು ಕೋಪಗೊಂಡದ್ದು ನಿಜ. ನಾನು ಸಾಯುವಷ್ಟು ಕೋಪಗೊಂಡಿದ್ದೇನೆ” ಅಂದನು.


“ನಾನು ಮನುಷ್ಯನ ವಿರೋಧವಾಗಿ ದೂರು ಹೇಳುತ್ತಿಲ್ಲ. ನನ್ನಲ್ಲಿ ತಾಳ್ಮೆಯಿಲ್ಲದಿರುವುದಕ್ಕೆ ಒಂದು ಒಳ್ಳೆಯ ಕಾರಣವಿದೆ.


ಆಗ ದೆಲೀಲಳು ಸಂಸೋನನಿಗೆ, “‘ನಾನು ನಿನ್ನನ್ನು ಪ್ರೀತಿಸುತ್ತೇನೆ’ ಎಂದು ನೀನು ಹೇಗೆ ಹೇಳಲು ಸಾಧ್ಯ? ನನ್ನನ್ನು ನೀನು ನಂಬುವುದೇ ಇಲ್ಲ. ನೀನು ನನಗೆ ನಿನ್ನ ರಹಸ್ಯವನ್ನು ತಿಳಿಸುವುದಿಲ್ಲ. ಮೂರನೆಯ ಸಲ ನೀನು ನನ್ನನ್ನು ವಂಚಿಸಿದೆ. ನೀನು ನನಗೆ ನಿನ್ನ ಶಕ್ತಿಯ ರಹಸ್ಯವನ್ನು ತಿಳಿಸಲಿಲ್ಲ” ಎಂದಳು.


ಕೊನೆಗೆ ಸಂಸೋನನು ದೆಲೀಲಳಿಗೆ ಎಲ್ಲವನ್ನು ಹೇಳಿದನು. “ನಾನೆಂದೂ ನನ್ನ ತಲೆಕೂದಲನ್ನು ಕತ್ತರಿಸಿಕೊಂಡಿಲ್ಲ. ನಾನು ಹುಟ್ಟುವ ಮೊದಲೇ ನನ್ನನ್ನು ದೇವರಿಗೆ ಪ್ರತಿಷ್ಠಿಸಲಾಗಿತ್ತ್ತು. ಯಾರಾದರೂ ನನ್ನ ತಲೆಬೋಳಿಸಿದರೆ ನಾನು ನನ್ನ ಶಕ್ತಿಯನ್ನು ಕಳೆದುಕೊಳ್ಳುತ್ತೇನೆ. ನಾನು ಬೇರೆ ಮನುಷ್ಯರಷ್ಟೇ ದುರ್ಬಲನಾಗುತ್ತೇನೆ” ಎಂದು ಹೇಳಿದನು.


ಸಂಸೋನನ ಹೆಂಡತಿಯು ಅವನ ಹತ್ತಿರ ಹೋಗಿ ಅಳುವುದಕ್ಕೆ ಪ್ರಾರಂಭಿಸಿದಳು. ಅವಳು, “ನೀನು ನನ್ನನ್ನು ನಿಜವಾಗಿ ಪ್ರೀತಿಸುವುದಿಲ್ಲ, ನನ್ನನ್ನು ದ್ವೇಷಿಸುತ್ತಿ; ನೀನು ನಮ್ಮ ಜನರಿಗೆ ಒಗಟನ್ನು ಹೇಳಿರುವೆ; ಆದರೆ ಅದರ ಅರ್ಥವನ್ನು ನನಗೆ ಹೇಳಿಲ್ಲ” ಎಂದು ಗೋಳಾಡತೊಡಗಿದಳು. ಅದಕ್ಕೆ ಸಂಸೋನನು, “ನಾನು ನನ್ನ ತಂದೆತಾಯಿಯರಿಗೆ ಅದನ್ನು ತಿಳಿಸಲಿಲ್ಲ, ನಿನಗೆ ತಿಳಿಸುವೆನೋ?” ಎಂದನು.


ಸಂಸೋನನ ಹೆಂಡತಿಯು ಔತಣದ ಏಳು ದಿನಗಳೆಲ್ಲಾ ಅಳುತ್ತಿದ್ದಳು. ಆದ್ದರಿಂದ ಏಳನೆಯ ದಿನ ಅವನು ಒಗಟಿನ ಅರ್ಥವನ್ನು ಅವಳಿಗೆ ಹೇಳಿದನು. ಅವಳು ಪೀಡಿಸಿದ್ದರಿಂದ ಅವನು ಹೇಳಿದನು. ಆಗ ಅವಳು ತನ್ನ ಜನರಲ್ಲಿಗೆ ಹೋಗಿ ಆ ಒಗಟಿನ ಅರ್ಥವನ್ನು ತಿಳಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು