Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 16:18 - ಪರಿಶುದ್ದ ಬೈಬಲ್‌

18 ಸಂಸೋನನು ತನ್ನ ರಹಸ್ಯವನ್ನು ತಿಳಿಸಿದನೆಂದು ದೆಲೀಲಳಿಗೆ ಗೊತ್ತಾಯಿತು. ಅವಳು ಫಿಲಿಷ್ಟಿಯ ಅಧಿಪತಿಗಳಿಗೆ ಸಂದೇಶವನ್ನು ಕಳುಹಿಸಿದಳು. ಅವಳು, “ಸಂಸೋನನು ನನಗೆ ಎಲ್ಲವನ್ನು ಹೇಳಿದ್ದಾನೆ, ಮತ್ತೊಮ್ಮೆ ಬನ್ನಿ” ಎಂದು ಹೇಳಿದಳು. ಫಿಲಿಷ್ಟಿಯ ಅಧಿಪತಿಗಳು ದೆಲೀಲಳ ಬಳಿಗೆ ಬಂದರು. ಅವರು ಅವಳಿಗೆ ಕೊಡುವುದಾಗಿ ಹೇಳಿದ್ದ ಹಣವನ್ನು ತಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವನು ಇದ್ದದ್ದನ್ನು ಇದ್ದ ಹಾಗೆಯೇ ಹೇಳಿದನೆಂದು ದೆಲೀಲಳು ತಿಳಿದು ಫಿಲಿಷ್ಟಿಯ ಪ್ರಭುಗಳ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ, “ಇದೊಂದು ಸಾರಿ ಬನ್ನಿರಿ: ಅವನು ನನಗೆ ತನ್ನ ಹೃದಯವನ್ನೆಲ್ಲಾ ತಿಳಿಸಿದ್ದಾನೆ” ಎಂದು ಹೇಳಿ, ಕರೆಕಳುಹಿಸಿದಳು. ಅವರು ಹಣವನ್ನು ತೆಗೆದುಕೊಂಡು ಆಕೆಯ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅವನು ಇದ್ದದ್ದನ್ನು ಇದ್ದ ಹಾಗೆಯೇ ಹೇಳಿದನೆಂದು ದೆಲೀಲಳು ತಿಳಿದು ಫಿಲಿಷ್ಟಿಯ ಮುಖಂಡರ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ, “ಇದೊಂದು ಸಾರಿ ಬನ್ನಿ; ಅವರು ನನಗೆ ತಮ್ಮ ಹೃದಯವನ್ನೆಲ್ಲಾ ಬಿಚ್ಚಿದ್ದಾರೆ,” ಎಂದು ಹೇಳಿ ಕರೆಸಿದಳು. ಅವರು ಹಣವನ್ನು ತೆಗೆದುಕೊಂಡು ಆಕೆಯ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವನು ಇದ್ದದ್ದನ್ನು ಇದ್ದ ಹಾಗೆಯೇ ಹೇಳಿದನೆಂದು ದೆಲೀಲಳು ತಿಳಿದು ಫಿಲಿಷ್ಟಿಯ ಪ್ರಭುಗಳ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ - ಇದೊಂದು ಸಾರಿ ಬನ್ನಿರಿ; ಅವನು ನನಗೆ ತನ್ನ ಹೃದಯವನ್ನೆಲ್ಲಾ ತಿಳಿಸಿದ್ದಾನೆ ಎಂದು ಹೇಳಿಸಿ ಕರಿಸಿದಳು. ಅವರು ಹಣವನ್ನು ತೆಗೆದುಕೊಂಡು ಆಕೆಯ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ದೆಲೀಲಳು, ಅವನು ತನಗೆ ತನ್ನ ಹೃದಯಲ್ಲಿರುವುದನ್ನೆಲ್ಲಾ ತಿಳಿಸಿದ್ದಾನೆಂದು ಕಂಡು, ಅವಳು ಫಿಲಿಷ್ಟಿಯರ ಅಧಿಪತಿಗಳಿಗೆ, “ನೀವು ಈ ಸಾರಿ ಬನ್ನಿರಿ. ಏಕೆಂದರೆ ಅವನು ತನ್ನ ಹೃದಯದಲ್ಲಿರುವುದನ್ನೆಲ್ಲಾ ನನಗೆ ತಿಳಿಸಿದನು,” ಎಂದು ಕರೆಕಳುಹಿಸಿದಳು. ಆಗ ಫಿಲಿಷ್ಟಿಯರ ಅಧಿಪತಿಗಳು ಅವಳ ಬಳಿಗೆ ಹಣವನ್ನು ತಮ್ಮ ಕೈಯಲ್ಲಿ ತೆಗೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 16:18
11 ತಿಳಿವುಗಳ ಹೋಲಿಕೆ  

ಹಣದಾಸೆಯು ಎಲ್ಲಾ ವಿಧವಾದ ಕೆಟ್ಟತನಕ್ಕೆ ಮೂಲವಾಗುತ್ತದೆ. ಕೆಲವು ಜನರು ಹೆಚ್ಚುಹೆಚ್ಚು ಹಣವನ್ನು ಗಳಿಸಿಕೊಳ್ಳುವುದಕ್ಕಾಗಿ ಸತ್ಯೋಪದೇಶವನ್ನು ತೊರೆದುಬಿಟ್ಟಿದ್ದಾರೆ. ಆದರೆ ಅವರು ತಮ್ಮನ್ನು ತಾವೇ ಹೆಚ್ಚು ವೇದನೆಗೆ ಗುರಿಪಡಿಸಿಕೊಂಡಿದ್ದಾರೆ.


“ಯೇಸುವನ್ನು ನಿಮಗೆ ಹಿಡಿದುಕೊಟ್ಟರೆ ನೀವು ನನಗೆ ಎಷ್ಟು ಹಣ ಕೊಡುವಿರಿ?” ಎಂದು ಕೇಳಿದನು. ಮಹಾಯಾಜಕರು ಮೂವತ್ತು ಬೆಳ್ಳಿಯ ನಾಣ್ಯಗಳನ್ನು ಯೂದನಿಗೆ ಕೊಟ್ಟರು.


ಫಿಲಿಷ್ಟಿಯ ಪ್ರಭುಗಳು ದೆಲೀಲಳ ಬಳಿಗೆ ಹೋಗಿ, “ಸಂಸೋನನು ಅಷ್ಟೊಂದು ಶಕ್ತಿಶಾಲಿಯಾಗಿರುವುದಕ್ಕೆ ಕಾರಣಗಳನ್ನು ನಾವು ತಿಳಿದುಕೊಳ್ಳಬೇಕಾಗಿದೆ. ಅವನನ್ನು ಮರುಳುಗೊಳಿಸಿ ಅವನ ರಹಸ್ಯವನ್ನು ತಿಳಿದುಕೊಳ್ಳಲು ಪ್ರಯತ್ನ ಮಾಡು. ಆಗ ನಾವು ಅವನನ್ನು ಸೋಲಿಸಿ, ಬಂಧಿಸಿ ನಮ್ಮ ಅಧೀನದಲ್ಲಿಟ್ಟುಕೊಳ್ಳಲು ಸಾಧ್ಯವಾಗುತ್ತದೆ. ನೀನು ಇದನ್ನು ಮಾಡಿದರೆ ನಮ್ಮಲ್ಲಿ ಪ್ರತಿಯೊಬ್ಬನೂ ನಿನಗೆ ಇಪ್ಪತ್ತೆಂಟು ಬೆಳ್ಳಿನಾಣ್ಯಗಳನ್ನು ಕೊಡುತ್ತೇವೆ” ಎಂದು ಹೇಳಿದರು.


ಇದು ನಿಮಗೆ ಚೆನ್ನಾಗಿ ತಿಳಿದಿರಲಿ: ಲೈಂಗಿಕ ಪಾಪಮಾಡುವವರಿಗೆ, ದುಷ್ಕೃತ್ಯಗಳನ್ನು ಮಾಡುವವರಿಗೆ, ಸ್ವಾರ್ಥಿಗಳಿಗೆ, ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಸ್ಥಳವೇ ಇಲ್ಲ. ಸ್ವಾರ್ಥತೆಯು ವಿಗ್ರಹಾರಾಧನೆಗೆ ಸಮಾನವಾಗಿದೆ.


ಜನರಿಗೆ ಹರಟೆಮಾತನ್ನು ಕೇಳಲು ಇಷ್ಟ. ಹರಟೆ ಮಾತುಗಳು ರುಚಿಕರವಾದ ಆಹಾರದಂತಿವೆ.


ಸಾಮಾನ್ಯ ಜನರು ಕೇವಲ ಉಸಿರಷ್ಟೇ. ಶ್ರೇಷ್ಠರು ಕೇವಲ ಕ್ಷಣಕಾಲವಷ್ಟೇ. ತೂಗಿನೋಡಿದರೆ ಅವರು ಕೇವಲ ಶೂನ್ಯ; ಉಸಿರಿಗಿಂತಲೂ ಹಗುರ.


ಎಲೀಯನು ಅಹಾಬನ ಹತ್ತಿರಕ್ಕೆ ಹೋದನು. ಅಹಾಬನು ಎಲೀಯನನ್ನು ಕಂಡು, “ನೀನು ನನ್ನನ್ನು ಮತ್ತೆ ಕಂಡುಹಿಡಿದೆ. ನೀನು ಯಾವಾಗಲೂ ನನಗೆ ವಿರೋಧವಾಗಿರುವೆ” ಎಂದನು. ಎಲೀಯನು, “ಹೌದು, ನಾನು ನಿನ್ನನ್ನು ಮತ್ತೆ ಕಂಡುಹಿಡಿದೆ. ಯೆಹೋವನ ವಿರುದ್ಧ ಪಾಪಮಾಡಲು ನೀನು ನಿನ್ನ ಜೀವನವನ್ನು ಯಾವಾಗಲೂ ಉಪಯೋಗಿಸುತ್ತಿರುವೆ.


ಮೋವಾಬ್ಯರ ಹಿರಿಯರು ಮತ್ತು ಮಿದ್ಯಾನ್ಯರ ಹಿರಿಯರು ಬಿಳಾಮನ ಸೇವೆಗೋಸ್ಕರ ಹಣ ಕೊಡಲು ಹಣವನ್ನು ತೆಗೆದುಕೊಂಡು ಹೊರಟು ಅವನ ಬಳಿಗೆ ಬಂದು ಬಾಲಾಕನ ಮಾತುಗಳನ್ನು ತಿಳಿಸಿದರು.


ಕೊನೆಗೆ ಸಂಸೋನನು ದೆಲೀಲಳಿಗೆ ಎಲ್ಲವನ್ನು ಹೇಳಿದನು. “ನಾನೆಂದೂ ನನ್ನ ತಲೆಕೂದಲನ್ನು ಕತ್ತರಿಸಿಕೊಂಡಿಲ್ಲ. ನಾನು ಹುಟ್ಟುವ ಮೊದಲೇ ನನ್ನನ್ನು ದೇವರಿಗೆ ಪ್ರತಿಷ್ಠಿಸಲಾಗಿತ್ತ್ತು. ಯಾರಾದರೂ ನನ್ನ ತಲೆಬೋಳಿಸಿದರೆ ನಾನು ನನ್ನ ಶಕ್ತಿಯನ್ನು ಕಳೆದುಕೊಳ್ಳುತ್ತೇನೆ. ನಾನು ಬೇರೆ ಮನುಷ್ಯರಷ್ಟೇ ದುರ್ಬಲನಾಗುತ್ತೇನೆ” ಎಂದು ಹೇಳಿದನು.


ಸಂಸೋನನು ಅವಳ ತೊಡೆಯ ಮೇಲೆ ಮಲಗಿ ನಿದ್ರೆಮಾಡಿದನು. ಆಗ ಅವಳು ಸಂಸೋನನ ಏಳುಜಡೆಗಳನ್ನು ಬೋಳಿಸಲು ಒಬ್ಬ ಮನುಷ್ಯನನ್ನು ಒಳಗೆ ಕರೆದಳು. ಅವನು ಆ ಏಳು ಜಡೆಗಳನ್ನು ಬೋಳಿಸಲು, ಅವನು ಇತರರಂತೆ ದುರ್ಬಲನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು