ನ್ಯಾಯಸ್ಥಾಪಕರು 16:2 - ಪರಿಶುದ್ದ ಬೈಬಲ್2 ಯಾರೋ ಒಬ್ಬರು, “ಸಂಸೋನನು ಇಲ್ಲಿಗೆ ಬಂದಿದ್ದಾನೆ” ಎಂದು ಗಾಜಾದ ಜನರಿಗೆ ಹೇಳಿದರು. ಅವರು ಅವನನ್ನು ಕೊಲ್ಲಬೇಕೆಂದಿದ್ದರು. ಅದಕ್ಕಾಗಿ ಅವರು ಆ ಸ್ಥಳವನ್ನು ಸುತ್ತುಗಟ್ಟಿದರು. ನಗರದ ಬಾಗಿಲುಗಳನ್ನು ಭದ್ರಪಡಿಸಿ ಅಡಗಿಕೊಂಡು ಸಂಸೋನನ ದಾರಿಕಾಯ್ದರು. ಇಡೀರಾತ್ರಿ ಅವರು ನಗರದ ಬಾಗಿಲಲ್ಲಿ ಸುಮ್ಮನಿದ್ದರು. “ಬೆಳಗಾದ ಮೇಲೆ ನಾವು ಸಂಸೋನನನ್ನು ಕೊಲ್ಲೋಣ” ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಸಂಸೋನನು ಬಂದಿರುವುದು ಗಾಜದವರಿಗೆ ಗೊತ್ತಾಗಲು ಅವರು ಬಂದು ಅವನನ್ನು ಸುತ್ತಿಕೊಂಡರು. ಸೂರ್ಯೋದಯವಾಗುತ್ತಲೆ ಅವನನ್ನು ಕೊಂದುಹಾಕೋಣ ಎಂದುಕೊಂಡು ರಾತ್ರಿಯೆಲ್ಲಾ ಊರುಬಾಗಲಲ್ಲಿ ಹೊಂಚಿನೋಡುತ್ತಾ ಸುಮ್ಮನಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಸಂಸೋನನು ಬಂದಿರುವುದು ಗಾಜಾದವರಿಗೆ ಗೊತ್ತಾಯಿತು? ಅವರು ಬಂದು ಅವನನ್ನು ಸುತ್ತಿಕೊಂಡರು. ಸೂರ್ಯೋದಯವಾಗುತ್ತಲೇ ಅವನನ್ನು ಕೊಂದು ಹಾಕಬೇಕೆಂದುಕೊಂಡು ರಾತ್ರಿಯೆಲ್ಲಾ ಊರಬಾಗಿಲಲ್ಲೇ ಹೊಂಚುಹಾಕುತ್ತಾ ಸುಮ್ಮನಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಸಂಸೋನನು ಬಂದಿರುವದು ಗಾಜದವರಿಗೆ ಗೊತ್ತಾಗಲು ಅವರು ಬಂದು ಅವನನ್ನು ಸುತ್ತಿಕೊಂಡರು; ಸೂರ್ಯೋದಯವಾಗುತ್ತಲೆ ಅವನನ್ನು ಕೊಂದುಹಾಕೋಣ ಎಂದುಕೊಂಡು ರಾತ್ರಿಯೆಲ್ಲಾ ಊರುಬಾಗಲಲ್ಲಿ ಹೊಂಚಿನೋಡುತ್ತಾ ಸುಮ್ಮನಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಗ ಸಂಸೋನನು ಅಲ್ಲಿಗೆ ಬಂದಿದ್ದಾನೆಂದು ಗಾಜದವರಿಗೆ ತಿಳಿದಿದ್ದರಿಂದ, ಅವರು ಅವನನ್ನು ಸುತ್ತಿಕೊಂಡು, ಪಟ್ಟಣದ ಬಾಗಿಲಲ್ಲಿ ಅವನಿಗಾಗಿ ಹೊಂಚಿಕೊಂಡಿದ್ದು, ರಾತ್ರಿಯೆಲ್ಲಾ ಕಾದುಕೊಂಡಿದ್ದರು. ಅವರು, “ಹೊತ್ತಾರೆ ಬೆಳಕಾದಾಗ ಅವನನ್ನು ಕೊಂದು ಹಾಕುವೆವು,” ಎಂದರು. ಅಧ್ಯಾಯವನ್ನು ನೋಡಿ |
ಆದ್ದರಿಂದ ಈಗ ನೀವು ಮಾಡಬೇಕಾದದ್ದೇನೆಂದರೆ, ಸೇನಾಧಿಪತಿಗೂ ಎಲ್ಲಾ ಯೆಹೂದ್ಯ ನಾಯಕರಿಗೂ ಒಂದು ಸಂದೇಶವನ್ನು ಕಳುಹಿಸಿಕೊಡಿರಿ. ಪೌಲನಿಗೆ ಇನ್ನೂ ಹೆಚ್ಚು ಪ್ರಶ್ನೆಗಳನ್ನು ಕೇಳಬೇಕಾಗಿರುವುದರಿಂದ ಪೌಲನನ್ನು ನಮ್ಮ ಬಳಿಗೆ ಕರೆದುಕೊಂಡು ಬರಬೇಕೆಂದು ಸೇನಾಧಿಪತಿಗೆ ತಿಳಿಸಿರಿ. ಪೌಲನು ಇಲ್ಲಿಗೆ ಬರುತ್ತಿರುವಾಗಲೇ ನಾವು ಮಾರ್ಗದಲ್ಲಿ ಕಾದುಕೊಂಡಿದ್ದು ಅವನನ್ನು ಕೊಲ್ಲುತ್ತೇವೆ” ಎಂದು ಹೇಳಿದರು.
ಸೌಲನು ದಾವೀದನ ಮನೆಗೆ ತನ್ನ ಜನರನ್ನು ಕಳುಹಿಸಿದನು. ಅವರು ದಾವೀದನ ಮನೆಯನ್ನು ಕಾಯ್ದರು. ಅವರು ರಾತ್ರಿಯೆಲ್ಲಾ ಅಲ್ಲಿಯೇ ಇದ್ದರು. ಅವರು ದಾವೀದನನ್ನು ಬೆಳಿಗ್ಗೆ ಕೊಲ್ಲಲು ಕಾಯುತ್ತಿದ್ದರು. ಆದರೆ ದಾವೀದನ ಹೆಂಡತಿಯಾದ ಮೀಕಲಳು ಅವನಿಗೆ, “ನೀನು ಈ ರಾತ್ರಿಯೇ ಓಡಿಹೋಗಿ, ನಿನ್ನ ಜೀವವನ್ನು ಕಾಪಾಡಿಕೋ. ಇಲ್ಲವಾದರೆ, ನಿನ್ನನ್ನು ಅವರು ಕೊಂದುಬಿಡುತ್ತಾರೆ” ಎಂದು ಎಚ್ಚರಿಸಿದಳು.
ಆದರೆ ಸಂಸೋನನು ಆ ವೇಶ್ಯೆಯ ಜೊತೆಯಲ್ಲಿ ಮಧ್ಯರಾತ್ರಿಯವರೆಗೆ ಮಾತ್ರ ಇದ್ದನು. ಸಂಸೋನನು ಮಧ್ಯರಾತ್ರಿಯಲ್ಲಿ ಎದ್ದುಬಿಟ್ಟನು. ಸಂಸೋನನು ನಗರ ದ್ವಾರದ ಬಾಗಿಲನ್ನು ಗಟ್ಟಿಯಾಗಿ ಹಿಡಿದು ಎಳೆದನು. ಕದಗಳು ಗೋಡೆಗಳಿಂದ ಕಿತ್ತುಬಂದವು. ಸಂಸೋನನು ಬಾಗಿಲಕದಗಳನ್ನೂ ಅದರ ನಿಲುವುಪಟ್ಟಿಗಳನ್ನೂ ಅಗುಳಿಗಳನ್ನೂ ಕಿತ್ತು ತನ್ನ ಹೆಗಲ ಮೇಲೆ ಹೊತ್ತು ಹೆಬ್ರೋನ್ ನಗರದ ಹತ್ತಿರವಿರುವ ಪರ್ವತ ಶಿಖರಕ್ಕೆ ತೆಗೆದುಕೊಂಡು ಹೋದನು.