Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 16:2 - ಪರಿಶುದ್ದ ಬೈಬಲ್‌

2 ಯಾರೋ ಒಬ್ಬರು, “ಸಂಸೋನನು ಇಲ್ಲಿಗೆ ಬಂದಿದ್ದಾನೆ” ಎಂದು ಗಾಜಾದ ಜನರಿಗೆ ಹೇಳಿದರು. ಅವರು ಅವನನ್ನು ಕೊಲ್ಲಬೇಕೆಂದಿದ್ದರು. ಅದಕ್ಕಾಗಿ ಅವರು ಆ ಸ್ಥಳವನ್ನು ಸುತ್ತುಗಟ್ಟಿದರು. ನಗರದ ಬಾಗಿಲುಗಳನ್ನು ಭದ್ರಪಡಿಸಿ ಅಡಗಿಕೊಂಡು ಸಂಸೋನನ ದಾರಿಕಾಯ್ದರು. ಇಡೀರಾತ್ರಿ ಅವರು ನಗರದ ಬಾಗಿಲಲ್ಲಿ ಸುಮ್ಮನಿದ್ದರು. “ಬೆಳಗಾದ ಮೇಲೆ ನಾವು ಸಂಸೋನನನ್ನು ಕೊಲ್ಲೋಣ” ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಸಂಸೋನನು ಬಂದಿರುವುದು ಗಾಜದವರಿಗೆ ಗೊತ್ತಾಗಲು ಅವರು ಬಂದು ಅವನನ್ನು ಸುತ್ತಿಕೊಂಡರು. ಸೂರ್ಯೋದಯವಾಗುತ್ತಲೆ ಅವನನ್ನು ಕೊಂದುಹಾಕೋಣ ಎಂದುಕೊಂಡು ರಾತ್ರಿಯೆಲ್ಲಾ ಊರುಬಾಗಲಲ್ಲಿ ಹೊಂಚಿನೋಡುತ್ತಾ ಸುಮ್ಮನಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಸಂಸೋನನು ಬಂದಿರುವುದು ಗಾಜಾದವರಿಗೆ ಗೊತ್ತಾಯಿತು? ಅವರು ಬಂದು ಅವನನ್ನು ಸುತ್ತಿಕೊಂಡರು. ಸೂರ್ಯೋದಯವಾಗುತ್ತಲೇ ಅವನನ್ನು ಕೊಂದು ಹಾಕಬೇಕೆಂದುಕೊಂಡು ರಾತ್ರಿಯೆಲ್ಲಾ ಊರಬಾಗಿಲಲ್ಲೇ ಹೊಂಚುಹಾಕುತ್ತಾ ಸುಮ್ಮನಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಸಂಸೋನನು ಬಂದಿರುವದು ಗಾಜದವರಿಗೆ ಗೊತ್ತಾಗಲು ಅವರು ಬಂದು ಅವನನ್ನು ಸುತ್ತಿಕೊಂಡರು; ಸೂರ್ಯೋದಯವಾಗುತ್ತಲೆ ಅವನನ್ನು ಕೊಂದುಹಾಕೋಣ ಎಂದುಕೊಂಡು ರಾತ್ರಿಯೆಲ್ಲಾ ಊರುಬಾಗಲಲ್ಲಿ ಹೊಂಚಿನೋಡುತ್ತಾ ಸುಮ್ಮನಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಸಂಸೋನನು ಅಲ್ಲಿಗೆ ಬಂದಿದ್ದಾನೆಂದು ಗಾಜದವರಿಗೆ ತಿಳಿದಿದ್ದರಿಂದ, ಅವರು ಅವನನ್ನು ಸುತ್ತಿಕೊಂಡು, ಪಟ್ಟಣದ ಬಾಗಿಲಲ್ಲಿ ಅವನಿಗಾಗಿ ಹೊಂಚಿಕೊಂಡಿದ್ದು, ರಾತ್ರಿಯೆಲ್ಲಾ ಕಾದುಕೊಂಡಿದ್ದರು. ಅವರು, “ಹೊತ್ತಾರೆ ಬೆಳಕಾದಾಗ ಅವನನ್ನು ಕೊಂದು ಹಾಕುವೆವು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 16:2
11 ತಿಳಿವುಗಳ ಹೋಲಿಕೆ  

ಸೌಲನು ಬೆಟ್ಟದ ಒಂದು ದಿಕ್ಕಿನಲ್ಲಿದ್ದನು. ದಾವೀದ ಮತ್ತು ಅವನ ಜನರು ಅದೇ ಬೆಟ್ಟದ ಮತ್ತೊಂದು ದಿಕ್ಕಿನಲ್ಲಿದ್ದರು. ದಾವೀದನು ಸೌಲನಿಂದ ದೂರ ಹೋಗಲು ತವಕಿಸುತ್ತಿದ್ದನು. ದಾವೀದನನ್ನು ಅವನ ಜನರೊಡನೆ ಬಂಧಿಸಲು ಸೌಲನು ತನ್ನ ಸೈನಿಕರೊಂದಿಗೆ ಬೆಟ್ಟದ ಸುತ್ತಲೂ ಹೋಗುತ್ತಿದ್ದನು.


ಯೆಹೂದ್ಯರು ಸೌಲನಿಗಾಗಿ ಎದುರುನೋಡುತ್ತಾ ನಗರದ ದ್ವಾರಗಳನ್ನು ಹಗಲಿರುಳು ಕಾಯುತ್ತಿದ್ದರು. ಆದರೆ ಅವರ ಯೋಜನೆ ಸೌಲನಿಗೆ ತಿಳಿಯಿತು.


ಆದ್ದರಿಂದ ಈಗ ನೀವು ಮಾಡಬೇಕಾದದ್ದೇನೆಂದರೆ, ಸೇನಾಧಿಪತಿಗೂ ಎಲ್ಲಾ ಯೆಹೂದ್ಯ ನಾಯಕರಿಗೂ ಒಂದು ಸಂದೇಶವನ್ನು ಕಳುಹಿಸಿಕೊಡಿರಿ. ಪೌಲನಿಗೆ ಇನ್ನೂ ಹೆಚ್ಚು ಪ್ರಶ್ನೆಗಳನ್ನು ಕೇಳಬೇಕಾಗಿರುವುದರಿಂದ ಪೌಲನನ್ನು ನಮ್ಮ ಬಳಿಗೆ ಕರೆದುಕೊಂಡು ಬರಬೇಕೆಂದು ಸೇನಾಧಿಪತಿಗೆ ತಿಳಿಸಿರಿ. ಪೌಲನು ಇಲ್ಲಿಗೆ ಬರುತ್ತಿರುವಾಗಲೇ ನಾವು ಮಾರ್ಗದಲ್ಲಿ ಕಾದುಕೊಂಡಿದ್ದು ಅವನನ್ನು ಕೊಲ್ಲುತ್ತೇವೆ” ಎಂದು ಹೇಳಿದರು.


ಮರುದಿನ ಮುಂಜಾನೆ, ಮಹಾಯಾಜಕರೆಲ್ಲರೂ ಮತ್ತು ಹಿರಿಯ ನಾಯಕರೆಲ್ಲರೂ ಯೇಸುವನ್ನು ಕೊಲ್ಲಲು ತೀರ್ಮಾನಿಸಿದರು.


“ಆದರೆ ರೈತರು ಮಗನನ್ನು ನೋಡಿದಾಗ, ‘ಇವನು ತೋಟದ ಒಡೆಯನ ಮಗನು. ಈ ತೋಟ ಇವನದಾಗುವುದು. ನಾವು ಇವನನ್ನು ಕೊಂದರೆ, ಈ ತೋಟ ನಮ್ಮದಾಗುವುದು’ ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.


ಸೌಲನು ದಾವೀದನ ಮನೆಗೆ ತನ್ನ ಜನರನ್ನು ಕಳುಹಿಸಿದನು. ಅವರು ದಾವೀದನ ಮನೆಯನ್ನು ಕಾಯ್ದರು. ಅವರು ರಾತ್ರಿಯೆಲ್ಲಾ ಅಲ್ಲಿಯೇ ಇದ್ದರು. ಅವರು ದಾವೀದನನ್ನು ಬೆಳಿಗ್ಗೆ ಕೊಲ್ಲಲು ಕಾಯುತ್ತಿದ್ದರು. ಆದರೆ ದಾವೀದನ ಹೆಂಡತಿಯಾದ ಮೀಕಲಳು ಅವನಿಗೆ, “ನೀನು ಈ ರಾತ್ರಿಯೇ ಓಡಿಹೋಗಿ, ನಿನ್ನ ಜೀವವನ್ನು ಕಾಪಾಡಿಕೋ. ಇಲ್ಲವಾದರೆ, ನಿನ್ನನ್ನು ಅವರು ಕೊಂದುಬಿಡುತ್ತಾರೆ” ಎಂದು ಎಚ್ಚರಿಸಿದಳು.


ಸಂಸೋನನಿಗೆ ತುಂಬ ನೀರಡಿಕೆಯಾಗಿತ್ತು. ಅವನು ಯೆಹೋವನಿಗೆ, “ನಾನು ನಿನ್ನ ಸೇವಕನಾಗಿದ್ದೇನೆ. ನೀನು ನನಗೆ ಈ ಮಹಾವಿಜಯವನ್ನು ಕೊಟ್ಟಿರುವೆ. ದಯವಿಟ್ಟು ಈಗ ನಾನು ನೀರಡಿಕೆಯಿಂದ ಸಾಯಲು ಬಿಡಬೇಡ. ಸುನ್ನತಿ ಮಾಡಿಸಿಕೊಂಡಿಲ್ಲದವರು ನನ್ನನ್ನು ಹಿಡಿದುಕೊಡುವಂತೆ ಮಾಡಬೇಡ” ಎಂದು ಪ್ರಾರ್ಥಿಸಿದನು.


“ಜೆರುಸಲೇಮಿನ ಸುತ್ತಲೂ ಸೈನ್ಯಗಳು ಮುತ್ತಿಗೆ ಹಾಕುವುದನ್ನು ನೀವು ನೋಡುವಿರಿ. ಆಗ ಜೆರುಸಲೇಮಿನ ನಾಶನದ ಕಾಲ ಬಂತೆಂದು ನೀವು ತಿಳಿದುಕೊಳ್ಳಿರಿ.


ಆದರೆ ಸಂಸೋನನು ಆ ವೇಶ್ಯೆಯ ಜೊತೆಯಲ್ಲಿ ಮಧ್ಯರಾತ್ರಿಯವರೆಗೆ ಮಾತ್ರ ಇದ್ದನು. ಸಂಸೋನನು ಮಧ್ಯರಾತ್ರಿಯಲ್ಲಿ ಎದ್ದುಬಿಟ್ಟನು. ಸಂಸೋನನು ನಗರ ದ್ವಾರದ ಬಾಗಿಲನ್ನು ಗಟ್ಟಿಯಾಗಿ ಹಿಡಿದು ಎಳೆದನು. ಕದಗಳು ಗೋಡೆಗಳಿಂದ ಕಿತ್ತುಬಂದವು. ಸಂಸೋನನು ಬಾಗಿಲಕದಗಳನ್ನೂ ಅದರ ನಿಲುವುಪಟ್ಟಿಗಳನ್ನೂ ಅಗುಳಿಗಳನ್ನೂ ಕಿತ್ತು ತನ್ನ ಹೆಗಲ ಮೇಲೆ ಹೊತ್ತು ಹೆಬ್ರೋನ್ ನಗರದ ಹತ್ತಿರವಿರುವ ಪರ್ವತ ಶಿಖರಕ್ಕೆ ತೆಗೆದುಕೊಂಡು ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು