Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 16:20 - ಪರಿಶುದ್ದ ಬೈಬಲ್‌

20 ಆಮೇಲೆ ದೆಲೀಲಳು ಅವನನ್ನು, “ಸಂಸೋನನೇ, ಫಿಲಿಷ್ಟಿಯರು ನಿನ್ನನ್ನು ಬಂಧಿಸಲಿದ್ದಾರೆ” ಎಂದು ಕೂಗಿದಳು. ಅವನು ಎಚ್ಚೆತ್ತನು. “ಮುಂಚಿನಂತೆಯೇ ನಾನು ತಪ್ಪಿಸಿಕೊಳ್ಳುವೆನು” ಎಂದು ಅವನು ತಿಳಿದಿದ್ದನು. ಆದರೆ ಯೆಹೋವನು ಅವನನ್ನು ಬಿಟ್ಟುಹೋಗಿದ್ದಾನೆಂಬುದು ಅವನಿಗೆ ಗೊತ್ತಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಗ ಅವಳು, “ಸಂಸೋನನೇ, ಫಿಲಿಷ್ಟಿಯರು ಬಂದಿದ್ದಾರೆ” ಎಂದು ಕೂಗಲು ಅವನು ಎಚ್ಚೆತ್ತು, ಮುಂಚಿನಂತೆ ಈಗಲೂ ಕೊಸರಿಕೊಂಡು ಹೋಗುವೆನು ಅಂದುಕೊಂಡನು; ಆದರೆ ಯೆಹೋವನು ತನ್ನನ್ನು ಬಿಟ್ಟುಹೋಗಿದ್ದಾನೆಂಬದು ಅವನಿಗೆ ತಿಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅವನ ಶಕ್ತಿ ಇಂಗಿಹೋಯಿತು. ಆಗ ಅವಳು, “ಸಂಸೋನರೇ, ಫಿಲಿಷ್ಟಿಯರು ಬಂದಿದ್ದಾರೆ” ಎಂದು ಕೂಗಿದಳು. ಅವನು ಎಚ್ಚೆತ್ತು, “ಮುಂಚಿನಂತೆಯೇ ಈಗಲೂ ಕೊಸರಿಕೊಂಡು ಹೋಗುವೆನು,” ಎಂದುಕೊಂಡನು. ಆದರೆ ಸರ್ವೇಶ್ವರ ತನ್ನನ್ನು ಬಿಟ್ಟುಹೋಗಿ ಇದ್ದಾರೆಂಬುದು ಅವನಿಗೆ ತಿಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆಗ ಅವಳು - ಸಂಸೋನನೇ, ಫಿಲಿಷ್ಟಿಯರು ಬಂದಿದ್ದಾರೆಂದು ಕೂಗಲು ಅವನು ಎಚ್ಚತ್ತು - ಮುಂಚಿನಂತೆ ಈಗಲೂ ಕೊಸರಿಕೊಂಡು ಹೋಗುವೆನು ಅಂದುಕೊಂಡನು; ಆದರೆ ಯೆಹೋವನು ತನ್ನನ್ನು ಬಿಟ್ಟುಹೋಗಿದ್ದಾನೆಂಬದು ಅವನಿಗೆ ತಿಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅವಳು, “ಸಂಸೋನನೇ, ಫಿಲಿಷ್ಟಿಯರು ನಿನ್ನ ಮೇಲೆ ಬಂದಿದ್ದಾರೆ,” ಎಂದಳು. ಅವನು ತನ್ನ ನಿದ್ರೆಯಿಂದ ಎಚ್ಚತ್ತು, “ಮೊದಲಿನಂತೆಯೇ ನಾನು ಹೊರಗೆ ಹೋಗಿ ಬಿಡುಗಡೆಯಾಗುವೆನು,” ಎಂದುಕೊಂಡನು. ಆದರೆ ಯೆಹೋವ ದೇವರು ತನ್ನನ್ನು ಬಿಟ್ಟು ಹೋಗಿದ್ದಾರೆಂದು ಅವನು ಅರಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 16:20
21 ತಿಳಿವುಗಳ ಹೋಲಿಕೆ  

ಯೆಹೋವನ ಆತ್ಮವು ಸೌಲನನ್ನು ಬಿಟ್ಟುಹೋಯಿತು. ನಂತರ ಯೆಹೋವನು ದುರಾತ್ಮವೊಂದನ್ನು ಸೌಲನ ಬಳಿಗೆ ಕಳುಹಿಸಿದನು. ಅದು ಅವನಿಗೆ ಬಹಳ ತೊಂದರೆ ಮಾಡಿತು.


ಯೆಹೋವನು ಸೌಲನನ್ನು ಬಿಟ್ಟು ದಾವೀದನ ಜೊತೆಗಿದ್ದನು. ಆದ್ದರಿಂದ ಸೌಲನು ದಾವೀದನಿಗೆ ಭಯಪಟ್ಟನು.


ಅದಕ್ಕಾಗಿಯೇ ಇಸ್ರೇಲಿನ ಸೈನ್ಯವು ಯುದ್ಧದಿಂದ ವಿಮುಖವಾಗಿ ಓಡಿಬಂತು. ಅವರು ತಪ್ಪನ್ನು ಮಾಡಿದ್ದರಿಂದಲೇ ಶಾಪಕ್ಕೆ ಗುರಿಯಾಗಿದ್ದಾರೆ. ಆ ಪಾಪವನ್ನು ನಿಮ್ಮಿಂದ ತೆಗೆದುಹಾಕಬೇಕು, ಅಲ್ಲಿಯವರೆಗೆ ನಾನು ನಿಮಗೆ ಸಹಾಯ ಮಾಡುವುದಿಲ್ಲ, ನಾನು ನಿಮ್ಮ ಸಂಗಡ ಬರುವುದೇ ಇಲ್ಲ.


ನಮ್ಮ ಸ್ವಂತ ಶಕ್ತಿಯಿಂದಲೇ ನಾವು ಯಾವ ಒಳ್ಳೆಯದನ್ನಾದರೂ ಮಾಡಬಲ್ಲೆವೆಂದು ನಾನು ಹೇಳುತ್ತಿಲ್ಲ. ನಾವು ಮಾಡುವ ಕಾರ್ಯಗಳನ್ನು ದೇವರು ಒದಗಿಸಿದ ಸಾಮರ್ಥ್ಯದಿಂದಲೇ ಮಾಡುತ್ತೇವೆ.


ಅನ್ಯರು ಎಫ್ರಾಯೀಮನ ಶಕ್ತಿಯನ್ನು ಮುರಿಯುವರು. ಆದರೆ ಅವನಿಗೆ ಅದು ತಿಳಿದಿರುವದಿಲ್ಲ. ಎಫ್ರಾಯೀಮನ ತಲೆಯಲ್ಲಿ ನರೆಕೂದಲು ಬಂದಾಗ್ಯೂ ಅದಕ್ಕೆ ತಿಳಿವಳಿಕೆ ಬಂದಿರುವುದಿಲ್ಲ.


ಯಾಕೋಬ್ ಮತ್ತು ಇಸ್ರೇಲ್ ಜನರಿಂದ ಅವರ ಸಂಪತ್ತನ್ನು ದೋಚಿಕೊಳ್ಳಲು ಅವರನ್ನು ಬಿಟ್ಟವರು ಯಾರು? ಯೆಹೋವನು ತಾನೇ ಅವರಿಗೆ ಹಾಗೆ ಮಾಡಿಬಿಟ್ಟನು. ನಾವು ಆತನ ವಿರುದ್ಧವಾಗಿ ಪಾಪಮಾಡಿದೆವು. ಆದ್ದರಿಂದ, ಆತನು ನಮ್ಮ ಆಸ್ತಿಯನ್ನು ದೋಚಿ ಹೋಗುವಂತೆ ಮಾಡಿದನು. ಯೆಹೋವನು ಬಯಸಿದ ರೀತಿಯಲ್ಲಿ ನಡೆಯಲು ಇಸ್ರೇಲರಿಗೆ ಇಷ್ಟವಿರಲಿಲ್ಲ, ಆತನ ಉಪದೇಶಗಳಿಗೆ ಕಿವಿಗೊಡಲಿಲ್ಲ.


ಸಂಸೋನನು ಮಲಗಿಕೊಂಡಿರುವಾಗ ದೆಲೀಲಳು ಅವನ ತಲೆಕೂದಲಿನ ಏಳು ಜಡೆಗಳನ್ನು ಮಗ್ಗದಲ್ಲಿ ನೇಯ್ದಳು. ಆಮೇಲೆ ಆ ಮಗ್ಗವನ್ನು ಒಂದು ಗೂಟದಿಂದ ಭದ್ರಪಡಿಸಿದಳು. ಬಳಿಕ, “ಸಂಸೋನನೇ, ಫಿಲಿಷ್ಟಿಯರು ನಿನ್ನನ್ನು ಬಂಧಿಸಲಿದ್ದಾರೆ” ಎಂದು ಮತ್ತೆ ಕೂಗಿಕೊಂಡಳು. ಸಂಸೋನನು ಗೂಟವನ್ನೂ ಮಗ್ಗವನ್ನೂ ಲಾಳಿಯನ್ನೂ ಕಿತ್ತುಹಾಕಿದನು.


ಅದಕ್ಕೆ ಯೇಸು, “ನಿಮ್ಮ ಅಲ್ಪವಿಶ್ವಾಸವೇ ಅದಕ್ಕೆ ಕಾರಣ. ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಿಮ್ಮ ನಂಬಿಕೆಯು ಸಾಸಿವೆ ಕಾಳಿನಷ್ಟಿದ್ದರೂ, ಈ ಪರ್ವತಕ್ಕೆ ‘ಇಲ್ಲಿಂದ ಅಲ್ಲಿಗೆ ಹೋಗು’ ಎಂದು ನೀವು ಹೇಳಿದರೂ ಅದು ಹೋಗುತ್ತದೆ. ನಿಮಗೆ ಅಸಾಧ್ಯವಾಗದ ಕಾರ್ಯಗಳೇ ಇರದು” ಎಂದನು.


ನಾನು ನನ್ನ ಮಗನನ್ನು ನಿನ್ನ ಶಿಷ್ಯರ ಬಳಿಗೆ ತಂದೆನು. ಆದರೆ ಅವನನ್ನು ಗುಣಪಡಿಸಲು ಅವರಿಗೆ ಸಾಧ್ಯವಾಗಲಿಲ್ಲ” ಎಂದನು.


ಪಕ್ಕದ ಕೋಣೆಯಲ್ಲಿ ಕೆಲವು ಜನ ಅಡಗಿಕೊಂಡಿದ್ದರು. ಆಗ ದೆಲೀಲಳು ಸಂಸೋನನಿಗೆ, “ಸಂಸೋನನೇ, ಫಿಲಿಷ್ಟಿಯರು ನಿನ್ನನ್ನು ಬಂಧಿಸಲಿದ್ದಾರೆ” ಎಂದು ಹೇಳಿದಳು. ಆದರೆ ಸಂಸೋನನು ಸುಲಭವಾಗಿ ಆ ಬಿಲ್ಲಿನ ತಂತಿಗಳನ್ನು ಕಿತ್ತುಹಾಕಿದನು; ಸುಟ್ಟದಾರದಿಂದ ಬೂದಿ ಉದುರಿ ಬೀಳುವಂತೆ ಆ ತಂತಿಗಳು ಕಿತ್ತುಬಿದ್ದವು. ಹೀಗಾಗಿ ಫಿಲಿಷ್ಟಿಯರಿಗೆ ಸಂಸೋನನ ಬಲದ ರಹಸ್ಯ ತಿಳಿಯಲಿಲ್ಲ.


ಆದರೆ ಸಂಸೋನನು ಆ ವೇಶ್ಯೆಯ ಜೊತೆಯಲ್ಲಿ ಮಧ್ಯರಾತ್ರಿಯವರೆಗೆ ಮಾತ್ರ ಇದ್ದನು. ಸಂಸೋನನು ಮಧ್ಯರಾತ್ರಿಯಲ್ಲಿ ಎದ್ದುಬಿಟ್ಟನು. ಸಂಸೋನನು ನಗರ ದ್ವಾರದ ಬಾಗಿಲನ್ನು ಗಟ್ಟಿಯಾಗಿ ಹಿಡಿದು ಎಳೆದನು. ಕದಗಳು ಗೋಡೆಗಳಿಂದ ಕಿತ್ತುಬಂದವು. ಸಂಸೋನನು ಬಾಗಿಲಕದಗಳನ್ನೂ ಅದರ ನಿಲುವುಪಟ್ಟಿಗಳನ್ನೂ ಅಗುಳಿಗಳನ್ನೂ ಕಿತ್ತು ತನ್ನ ಹೆಗಲ ಮೇಲೆ ಹೊತ್ತು ಹೆಬ್ರೋನ್ ನಗರದ ಹತ್ತಿರವಿರುವ ಪರ್ವತ ಶಿಖರಕ್ಕೆ ತೆಗೆದುಕೊಂಡು ಹೋದನು.


ಒಬ್ಬನು ಸಾವಿರ ಮಂದಿಯನ್ನು ಓಡಿಸಬಲ್ಲನೇ? ಇಬ್ಬರು ಹತ್ತು ಸಾವಿರ ಮಂದಿಯನ್ನು ಓಡಿಸುವರೇ? ಯೆಹೋವನು ಅವರನ್ನು ಅವರ ಶತ್ರುಗಳಿಗೆ ಒಪ್ಪಿಸುವಾಗ ಹಾಗೆಯೇ ಆಗುವುದು, ಅವರ ಬಂಡೆಯಾದ ದೇವರು ಅವರನ್ನು ಗುಲಾಮರನ್ನಾಗಿ ಮಾರುವನು;


ಹೀಗಿರುವುದರಿಂದ ಯೆಹೋವನಿಗೆ ವಿರುದ್ಧವಾಗಿ ಏಳಬೇಡಿರಿ. ಆ ದೇಶದ ಜನರಿಗೆ ಭಯಪಡಬೇಡಿರಿ. ನಾವು ಅವರನ್ನು ಸೋಲಿಸಬಹುದು. ಅವರಿಗೆ ಯಾವ ಸಂರಕ್ಷಣೆ ಇರುವುದಿಲ್ಲ. ಆದರೆ ನಮ್ಮ ಕಡೆ ಯೆಹೋವನು ಇದ್ದಾನೆ. ಆದ್ದರಿಂದ ಭಯಪಡಬೇಡಿರಿ” ಅಂದರು.


ಸಂಸೋನನು ಅವಳ ತೊಡೆಯ ಮೇಲೆ ಮಲಗಿ ನಿದ್ರೆಮಾಡಿದನು. ಆಗ ಅವಳು ಸಂಸೋನನ ಏಳುಜಡೆಗಳನ್ನು ಬೋಳಿಸಲು ಒಬ್ಬ ಮನುಷ್ಯನನ್ನು ಒಳಗೆ ಕರೆದಳು. ಅವನು ಆ ಏಳು ಜಡೆಗಳನ್ನು ಬೋಳಿಸಲು, ಅವನು ಇತರರಂತೆ ದುರ್ಬಲನಾದನು.


ಫಿಲಿಷ್ಟಿಯರು ಸಂಸೋನನನ್ನು ಬಂಧಿಸಿ ಅವನ ಕಣ್ಣುಗಳನ್ನು ಕಿತ್ತು ಗಾಜಾ ನಗರಕ್ಕೆ ತೆಗೆದುಕೊಂಡು ಹೋದರು. ಅವನು ಓಡಿಹೋಗದಂತೆ ಅವನಿಗೆ ಸಂಕೋಲೆಗಳನ್ನು ಬಿಗಿದರು. ಅವರು ಸಂಸೋನನನ್ನು ಒಂದು ಸೆರೆಮನೆಯಲ್ಲಿಟ್ಟು ಧಾನ್ಯಬೀಸುವ ಕೆಲಸಕ್ಕೆ ಹಚ್ಚಿದರು.


ಮಾರನೆಯ ದಿನ, ದೇವರಿಂದ ಬಂದ ದುರಾತ್ಮವು ಸೌಲನನ್ನು ಸಂಪೂರ್ಣವಾಗಿ ವಶಪಡಿಸಿಕೊಂಡಿತು. ಸೌಲನು ತನ್ನ ಮನೆಯಲ್ಲಿ ಹುಚ್ಚನಂತೆ ಕೂಗಿಕೊಳ್ಳುತ್ತಿದ್ದನು. ಆಗ ದಾವೀದನು ಎಂದಿನಂತೆ ಕಿನ್ನರಿಯನ್ನು ಬಾರಿಸುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು