Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 17:4 - ಪರಿಶುದ್ದ ಬೈಬಲ್‌

4 ಆದರೆ ಮೀಕನು ಆ ಬೆಳ್ಳಿಯನ್ನು ತನ್ನ ತಾಯಿಗೆ ಹಿಂದಿರುಗಿಸಿದನು. ಅವಳು ಸುಮಾರು ಐದು ತೊಲೆಯಷ್ಟು ಬೆಳ್ಳಿಯ ನಾಣ್ಯಗಳನ್ನು ಒಬ್ಬ ಅಕ್ಕಸಾಲಿಗನಿಗೆ ಕೊಟ್ಟಳು. ಆ ಅಕ್ಕಸಾಲಿಗನು ಅದರಿಂದ ಒಂದು ವಿಗ್ರಹವನ್ನು ಮಾಡಿ ಅದಕ್ಕೆ ಬೆಳ್ಳಿಯ ಹೊದಿಕೆ ಹಾಕಲು ಉಪಯೋಗಿಸಿದನು. ಆ ವಿಗ್ರಹವನ್ನು ಮೀಕನ ಮನೆಯಲ್ಲಿ ಇಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮಗನು ಹಿಂದಕ್ಕೆ ಕೊಟ್ಟ ರೂಪಾಯಿಗಳಲ್ಲಿ ಇನ್ನೂರು ರೂಪಾಯಿಗಳನ್ನು ತೆಗೆದು ಅಕ್ಕಸಾಲಿಗನಿಗೆ ಕೊಟ್ಟಳು. ಅವನು ಅವುಗಳಿಂದ ಕೆತ್ತನೆಯ ಮತ್ತು ಎರಕದ ವಿಗ್ರಹಗಳನ್ನು ಮಾಡಿಕೊಟ್ಟನು. ಮೀಕನು ಅದನ್ನು ತನ್ನ ಮನೆಯಲ್ಲಿಟ್ಟುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಮಗನು ಹಿಂದಕ್ಕೆ ಕೊಟ್ಟ ನಾಣ್ಯಗಳಲ್ಲಿ ಇನ್ನೂರು ನಾಣ್ಯಗಳನ್ನು ತೆಗೆದು ಅಕ್ಕಸಾಲಿಗನಿಗೆ ಕೊಟ್ಟಳು. ಅವನು ಅವುಗಳಿಂದ ಕೆತ್ತನೆಯ ಮತ್ತು ಎರಕದ ವಿಗ್ರಹಗಳನ್ನು ಮಾಡಿಕೊಟ್ಟನು. ಮೀಕನು ಅದನ್ನು ತನ್ನ ಮನೆಯಲ್ಲೇ ಇಟ್ಟುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮಗನು ಹಿಂದಕ್ಕೆ ಕೊಟ್ಟ ರೂಪಾಯಿಗಳಲ್ಲಿ ಇನ್ನೂರು ರೂಪಾಯಿಗಳನ್ನು ತೆಗೆದು ಅಕ್ಕಸಾಲಿಗನಿಗೆ ಕೊಟ್ಟಳು. ಅವನು ಅವುಗಳಿಂದ ಕೆತ್ತನೆಯ ಮತ್ತು ಎರಕದ ವಿಗ್ರಹಗಳನ್ನು ಮಾಡಿಕೊಟ್ಟನು. ಮೀಕನು ಅದನ್ನು ತನ್ನ ಮನೆಯಲ್ಲಿಟ್ಟುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದರೆ ಅವನು ಆ ಹಣವನ್ನು ತನ್ನ ತಾಯಿಗೆ ತಿರುಗಿ ಕೊಟ್ಟನು. ಆಗ ಅವನ ತಾಯಿ ಇನ್ನೂರು ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು ಅಕ್ಕಸಾಲಿಗನ ಕೈಯಲ್ಲಿ ಕೊಟ್ಟಳು. ಅವನು ಅವುಗಳಿಂದ ಕೆತ್ತಿದ ವಿಗ್ರಹವನ್ನೂ, ಎರಕದ ವಿಗ್ರಹವನ್ನೂ ಮಾಡಿದನು. ಅವು ಮೀಕನ ಮನೆಯಲ್ಲಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 17:4
9 ತಿಳಿವುಗಳ ಹೋಲಿಕೆ  

ಮೀಕನು ಇಪ್ಪತ್ತೆಂಟು ತೊಲೆ ಬೆಳ್ಳಿಯನ್ನು ತನ್ನ ತಾಯಿಗೆ ಕೊಟ್ಟನು. ಆಗ ಅವಳು, “ನಾನು ಈ ಬೆಳ್ಳಿಯನ್ನು ಯೆಹೋವನಿಗೆ ವಿಶೇಷ ಹರಕೆಯಾಗಿ ಕೊಡುವೆನು. ಇದನ್ನು ನಾನು ನನ್ನ ಮಗನಿಗೆ ಕೊಡುವೆನು, ಅವನು ಅದರಿಂದ ಒಂದು ವಿಗ್ರಹವನ್ನು ಮಾಡಿಸಿ ಅದಕ್ಕೆ ಬೆಳ್ಳಿಯ ಹೊದಿಕೆಯನ್ನು ಹಾಕಿಸುವನು” ಎಂದು ಹೇಳಿ ಆ ಬೆಳ್ಳಿಯನ್ನು ಮಗನ ಕೈಯಲ್ಲಿ ಕೊಟ್ಟಳು.


ವಿಗ್ರಹಗಳನ್ನು ಪೂಜಿಸುವುದಕ್ಕಾಗಿ ಮೀಕನಿಗೆ ಒಂದು ಮಂದಿರವಿತ್ತು. ಮೀಕನು ಏಫೋದನ್ನೂ ವಿಗ್ರಹಗಳನ್ನೂ ಪೂಜಿಸಲು ತನ್ನ ಒಬ್ಬ ಮಗನನ್ನು ಅರ್ಚಕನನ್ನಾಗಿ ನೇಮಿಸಿದನು.


ನಿಮ್ಮಲ್ಲಿ ಬೆಳ್ಳಿಬಂಗಾರಗಳ ವಿಗ್ರಹಗಳಿವೆ. ಆ ಸುಳ್ಳುದೇವರುಗಳು ನಿಮ್ಮನ್ನು ಹೊಲೆಯನ್ನಾಗಿ ಮಾಡಿವೆ. ನೀವು ಅವುಗಳ ಸೇವೆಯನ್ನು ನಿಲ್ಲಿಸುವಿರಿ. ಅವು ಹೊಲಸು ವಸ್ತುಗಳೋ ಎಂಬಂತೆ ಅವುಗಳನ್ನೆತ್ತಿ ಬಿಸಾಡಿಬಿಡುವಿರಿ.


ಇನ್ನೊಬ್ಬ ಕುಶಲಕರ್ಮಿಯು ತನ್ನ ನೂಲಿನಿಂದಲೂ ಅಡಿಕೋಲುಗಳಿಂದಲೂ ಮರದ ಮೇಲೆ ಗುರುತು ಮಾಡುವನು. ತಾನು ಎಲ್ಲಿ ಮರವನ್ನು ತುಂಡುಮಾಡಬೇಕೆಂದು ಇದರಿಂದ ಗೊತ್ತುಪಡಿಸಿಕೊಳ್ಳುತ್ತಾನೆ. ಅವನು ತನ್ನ ಉಳಿಗಳಿಂದ ಒಂದು ವಿಗ್ರಹವನ್ನು ಮನುಷ್ಯಾಕಾರದಲ್ಲಿ ಕೆತ್ತುತ್ತಾನೆ. ಈ ವಿಗ್ರಹವು ಬೇರೆ ಏನೂ ಮಾಡದೆ ಮನೆಯೊಳಗೆ ಇಟ್ಟ ಸ್ಥಳದಲ್ಲಿಯೇ ಇರುವದು.


“‘ಸುಳ್ಳುದೇವರನ್ನು ಮಾಡಿ ಗುಪ್ತ ಸ್ಥಳದಲ್ಲಿಡುವವನು ಶಾಪಗ್ರಸ್ತನಾಗಲಿ; ಆ ದೇವರುಗಳು ಮನುಷ್ಯನ ಕೈಕೆಲಸವೇ; ಕಲ್ಲು, ಮರ, ಹಿತ್ತಾಳೆಗಳಿಂದ ಮಾಡಿದವುಗಳೇ. ಯೆಹೋವನು ಅವುಗಳನ್ನು ದ್ವೇಷಿಸುತ್ತಾನೆ.’ “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.


ಆ ಐದು ಜನ ಗೂಢಚಾರರು ಮನೆಯೊಳಗೆ ಪ್ರವೇಶ ಮಾಡಿದರು. ಯಾಜಕನು ಹೊರಗೆ ಬಾಗಿಲ ಬಳಿಯಲ್ಲಿ ಯುದ್ಧ ಸನ್ನದ್ಧರಾದ ಆರುನೂರು ಜನರ ಸಂಗಡ ನಿಂತಿದ್ದನು. ಆಗ ಆ ಐದು ಮಂದಿ ಮನೆಯೊಳಗೆ ಹೋಗಿ ಕೆತ್ತನೆಯ ವಿಗ್ರಹವನ್ನೂ ಏಫೋದನ್ನೂ ಬೆಳ್ಳಿವಿಗ್ರಹಗಳನ್ನೂ ಗೃಹದೇವತೆಗಳ ವಿಗ್ರಹಗಳನ್ನೂ ತೆಗೆದುಕೊಂಡರು. ಅವರನ್ನು ಕಂಡ ತರುಣ ಲೇವಿಯು, “ನೀವು ಏನು ಮಾಡುತ್ತಿದ್ದೀರಿ?” ಎಂದು ಕೇಳಿದನು.


ಆ ಮನುಷ್ಯನ ಸುಳ್ಳು ದೇವರು ಅವನಿಗೆ ಸಹಾಯ ಮಾಡಲಾರದು. ಯಾಕೆಂದರೆ ಅದು ಒಬ್ಬನು ಲೋಹದಿಂದ ಮಾಡಿದ ಕೇವಲ ವಿಗ್ರಹವಷ್ಟೆ. ಅದು ಕೇವಲ ಜಡಮೂರ್ತಿ. ಅದನ್ನು ಮಾಡಿದವನು, ಅದು ಅವನಿಗೆ ಸಹಾಯ ಮಾಡುವದೆಂದು ಯೋಚಿಸುವದು ಶುದ್ಧ ಮೂರ್ಖತನ. ಆ ಮೂರ್ತಿಯು ಮಾತಾಡುವೂದೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು