Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 17:6 - ಪರಿಶುದ್ದ ಬೈಬಲ್‌

6 (ಆ ಕಾಲದಲ್ಲಿ ಇಸ್ರೇಲರಿಗೆ ಅರಸನಿರಲಿಲ್ಲ. ಪ್ರತಿಯೊಬ್ಬರೂ ತಮಗೆ ಸರಿ ತೋರಿದಂತೆ ನಡೆದುಕೊಳ್ಳುತ್ತಿದ್ದರು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆ ಕಾಲದಲ್ಲಿ ಇಸ್ರಾಯೇಲರೊಳಗೆ ಅರಸನಿರಲಿಲ್ಲ. ಪ್ರತಿಯೊಬ್ಬನೂ ಮನಸ್ಸಿಗೆ ಬಂದ ಹಾಗೆಯೇ ನಡೆದುಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆ ಕಾಲದಲ್ಲಿ ಇಸ್ರಯೇಲರಲ್ಲಿ ಅರಸನಿರಲಿಲ್ಲ. ಪ್ರತಿಯೊಬ್ಬನು ಮನಸ್ಸಿಗೆ ಬಂದಹಾಗೆ ನಡೆಯುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆ ಕಾಲದಲ್ಲಿ ಇಸ್ರಾಯೇಲ್ಯರೊಳಗೆ ಅರಸನಿರಲಿಲ್ಲ. ಪ್ರತಿಯೊಬ್ಬನೂ ಮನಸ್ಸಿಗೆ ಬಂದ ಹಾಗೆಯೇ ನಡೆಯುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆ ದಿವಸಗಳಲ್ಲಿ ಇಸ್ರಾಯೇಲಿನಲ್ಲಿ ಅರಸನು ಇರಲಿಲ್ಲ. ಒಬ್ಬೊಬ್ಬನು ತನ್ನ ದೃಷ್ಟಿಗೆ ಸರಿಯಾಗಿ ತೋಚಿದ್ದನ್ನು ಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 17:6
13 ತಿಳಿವುಗಳ ಹೋಲಿಕೆ  

ಒಳ್ಳೆಯದೆಂದು ಜನರು ಭಾವಿಸಿಕೊಂಡಿರುವ ಮಾರ್ಗವೊಂದುಂಟು. ಆದರೆ ಅದರ ಅಂತ್ಯ ಮರಣವೇ.


“ನೀವು ಇನ್ನೂ ವಾಗ್ದಾನದ ದೇಶವನ್ನು ಪ್ರವೇಶಿಸಲಿಲ್ಲದ ಕಾರಣ ನೀವು ಯೆಹೋವನಿಗೆ ನಿಮ್ಮ ಇಷ್ಟಾನುಸಾರವಾಗಿ ಆರಾಧನೆ ಮಾಡುತ್ತಿದ್ದೀರಿ. ಆದರೆ ಇದನ್ನೇ ಮುಂದುವರಿಸಬೇಡಿ.


ಮೂಢನು ತನ್ನ ದಾರಿಯನ್ನೇ ಒಳ್ಳೆಯದೆಂದು ಭಾವಿಸಿಕೊಂಡಿರುತ್ತಾನೆ. ಜ್ಞಾನಿಯಾದರೋ ಉಪದೇಶಕ್ಕೆ ಕಿವಿಗೊಡುತ್ತಾನೆ.


ಆ ಕಾಲದಲ್ಲಿ ಇಸ್ರೇಲರಿಗೆ ಅರಸನಿರಲಿಲ್ಲ. ಪ್ರತಿಯೊಬ್ಬನೂ ತನಗೆ ಸರಿತೋರಿದಂತೆ ಮಾಡುತ್ತಿದ್ದನು.


ಆಗಿನ ಕಾಲದಲ್ಲಿ ಇಸ್ರೇಲರಿಗೆ ಅರಸನಿರಲಿಲ್ಲ. ಎಫ್ರಾಯೀಮ್ ಬೆಟ್ಟಪ್ರದೇಶದ ಒಂದು ಮೂಲೆಯಲ್ಲಿ ಒಬ್ಬ ಲೇವಿಯು ವಾಸಮಾಡುತ್ತಿದ್ದನು. ಆ ಮನುಷ್ಯನಿಗೆ ಒಬ್ಬ ಉಪಪತ್ನಿ ಇದ್ದಳು. ಅವಳು ಯೆಹೂದದ ಬೆತ್ಲೆಹೇಮಿನವಳಾಗಿದ್ದಳು.


ಆ ಕಾಲದಲ್ಲಿ ಇಸ್ರೇಲರಿಗೆ ಅರಸನಿರಲಿಲ್ಲ. ಆ ಸಮಯದಲ್ಲಿ ದಾನ್ ಕುಲದವರು ಇನ್ನೂ ತಮ್ಮ ವಾಸಕ್ಕಾಗಿ ಒಂದು ಸ್ಥಳವನ್ನು ಹುಡುಕುತ್ತಿದ್ದರು. ಇನ್ನೂ ಅವರಿಗೆ ತಮ್ಮದೇ ಆದ ಒಂದು ಪ್ರದೇಶವೂ ಇರಲಿಲ್ಲ. ಇಸ್ರೇಲಿನ ಬೇರೆ ಕುಲಗಳಿಗೆ ತಮ್ಮದೇ ಆದ ಪ್ರದೇಶ ಇತ್ತು. ಆದರೆ ದಾನ್ ಕುಲದವರು ಮಾತ್ರ ಇನ್ನೂ ತಮ್ಮ ಪ್ರದೇಶವನ್ನು ಹೊಂದಿಕೊಂಡಿರಲಿಲ್ಲ.


ಜನರು ತಮ್ಮ ಕಾರ್ಯಗಳೆಲ್ಲಾ ಸರಿಯೆಂದು ಆಲೋಚಿಸಿಕೊಂಡರೂ ಅವುಗಳ ಉದ್ದೇಶಕ್ಕನುಸಾರವಾಗಿ ತೀರ್ಪು ಕೊಡುವವನು ಯೆಹೋವನೇ.


ಆದ್ದರಿಂದ ಯೌವನಸ್ಥರೇ, ನಿಮ್ಮ ಯೌವನ ಕಾಲದಲ್ಲಿ ಆನಂದಿಸಿರಿ! ಸಂತೋಷವಾಗಿರಿ! ನಿಮ್ಮ ಹೃದಯವು ನಿಮ್ಮನ್ನು ನಡೆಸಿದಂತೆ ಮಾಡಿರಿ. ನೀವು ಬಯಸುವುದನ್ನೆಲ್ಲಾ ಮಾಡಿರಿ. ಆದರೆ ನೀವು ಮಾಡುವ ಪ್ರತಿಯೊಂದಕ್ಕೂ ದೇವರು ನಿಮಗೆ ನ್ಯಾಯತೀರಿಸುವನು ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಿರಿ.


“ನಾವು ಪ್ರಮುಖರಾಗಲು ನಮ್ಮ ಸುಳ್ಳುಗಳೇ ನಮಗೆ ಆಧಾರ. ನಮ್ಮ ನಾಲಿಗೆಗಳು ಇರುವಾಗ ನಮಗೆ ಒಡೆಯರಾಗಲು ಯಾರಿಗೆ ಸಾಧ್ಯ?” ಎಂದು ಅವರು ಹೇಳುತ್ತಾರೆ.


ಅವರು ದೇವರಿಗೆ, “ಯೆಹೋವನೇ, ನೀನು ಇಸ್ರೇಲರ ದೇವರು. ನಮಗೆ ಇಂಥ ಭಯಾನಕ ಪರಿಸ್ಥಿತಿ ಏಕೆ ಉಂಟಾಯಿತು? ಇಸ್ರೇಲಿನ ಒಂದು ಕುಲವು ನಾಶವಾಯಿತಲ್ಲಾ?” ಎಂದು ಮೊರೆಯಿಟ್ಟರು.


ಆಗ ಇಸ್ರೇಲಿನ ಜನರು ತಮ್ಮ ನಾಯಕರೊಂದಿಗೆ ಒಟ್ಟಾಗಿ ಸೇರಿದರು. ಯೆಹೋವನು ತಾನೇ ಯೆಶುರೂನಿನಲ್ಲಿ ಅರಸನಾದನು.


ಆ ಸಮಯದಲ್ಲಿ ಎದೋಮಿನಲ್ಲಿ ರಾಜರುಗಳಿದ್ದರು. ಇಸ್ರೇಲರಿಗಿಂತಲೂ ಮುಂಚೆ ಎದೋಮಿಗೆ ರಾಜರುಗಳಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು