Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 18:15 - ಪರಿಶುದ್ದ ಬೈಬಲ್‌

15 ಅವರು ಯೌವನಸ್ಥನಾದ ಲೇವಿಯು ಇದ್ದ ಮೀಕನ ಮನೆಗೆ ಬಂದು ಇಳಿದುಕೊಂಡರು. ತರುಣನ ಯೋಗಕ್ಷೇಮವನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಈ ವಿಷಯದಲ್ಲಿ ಏನು ಮಾಡಬೇಕೆಂಬುದನ್ನು ಆಲೋಚಿಸಿರಿ” ಎಂದು ಹೇಳಿ ತಾವು ಅಲ್ಲಿಂದ ಮೀಕನ ಮನೆಯಲ್ಲಿದ್ದ ಆ ಯೌವನಸ್ಥನಾದ ಲೇವಿಯನ ಬಳಿಗೆ ಬಂದು ಅವನ ಕ್ಷೇಮಸಮಾಚಾರವನ್ನು ವಿಚಾರಿಸ ತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಈ ವಿಷಯದಲ್ಲಿ ಏನು ಮಾಡಬೇಕೆಂಬುದನ್ನು ಆಲೋಚಿಸಿರಿ,” ಎಂದು ಹೇಳಿ ಅಲ್ಲಿಂದ ಮೀಕನ ಮನೆಯಲ್ಲಿದ್ದ ಆ ಯೌವನಸ್ಥನಾದ ಲೇವಿಯನ ಬಳಿಗೆ ಬಂದರು. ಅವನ ಯೋಗಕ್ಷೇಮವನ್ನು ವಿಚಾರಿಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಈ ವಿಷಯದಲ್ಲಿ ಏನು ಮಾಡಬೇಕೆಂಬದನ್ನು ಆಲೋಚಿಸಿರಿ ಎಂದು ಹೇಳಿ ತಾವು ಅಲ್ಲಿಂದ ಮೀಕನ ಮನೆಯಲ್ಲಿದ್ದ ಆ ಯೌವನಸ್ಥನಾದ ಲೇವಿಯನ ಬಳಿಗೆ ಬಂದು ಅವನ ಕ್ಷೇಮಸಮಾಚಾರವನ್ನು ವಿಚಾರಿಸಹತ್ತಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅವರು ಅಲ್ಲಿಗೆ ಹೋಗಿ ಮೀಕನ ಮನೆಯಲ್ಲಿರುವ ಯುವಕನಾದ ಲೇವಿಯನ ಬಳಿಗೆ ಬಂದು ಅವನ ಕ್ಷೇಮಸಮಾಚಾರವನ್ನು ವಿಚಾರಿಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 18:15
10 ತಿಳಿವುಗಳ ಹೋಲಿಕೆ  

ಯೋಸೇಫನು ಅವರ ಯೋಗಕ್ಷೇಮವನ್ನು ವಿಚಾರಿಸಿದನು. ಯೋಸೇಫನು “ನೀವು ನನಗೆ ತಿಳಿಸಿದ ನಿಮ್ಮ ವೃದ್ಧನಾದ ತಂದೆ ಕ್ಷೇಮವಾಗಿದ್ದಾನೆಯೇ? ಇನ್ನೂ ಜೀವಂತವಾಗಿರುವನೇ?” ಎಂದು ಕೇಳಿದನು.


“ನಾನು ನಿಮಗೆ ಶಾಂತಿಯನ್ನು ನೀಡುತ್ತೇನೆ. ಈ ಲೋಕವು ಕೊಡುವುದಕ್ಕಿಂತ ಭಿನ್ನವಾದ ರೀತಿಯಲ್ಲಿ ನಾನು ನಿಮಗೆ ಶಾಂತಿಯನ್ನು ಕೊಡುತ್ತೇನೆ. ಆದ್ದರಿಂದ ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ಭಯಪಡಬೇಡಿರಿ.


ಅವಳನ್ನು ಭೇಟಿ ಮಾಡುವುದಕ್ಕೆ ಓಡಿಹೋಗಿ ಅವಳಿಗೆ, ‘ನೀನು ಕ್ಷೇಮವಾಗಿರುವೆಯಾ? ನಿನ್ನ ಗಂಡ ಕ್ಷೇಮವಾಗಿರುವನೇ? ನಿನ್ನ ಮಗು ಕ್ಷೇಮವಾಗಿರುವುದೇ?’ ಎಂದು ಕೇಳು” ಎಂಬುದಾಗಿ ಹೇಳಿ ಕಳುಹಿಸಿದನು. ಅಂತೆಯೇ ಗೇಹಜಿಯು ಆಕೆಯನ್ನು ಕೇಳಿದನು. ಅವಳು “ಹೌದು, ಕ್ಷೇಮವಾಗಿದ್ದೇವೆ” ಎಂದು ಉತ್ತರಿಸಿದಳು.


ದಾವೀದನು ತಾನು ತಂದಿದ್ದವುಗಳನ್ನು ಕಾವಲುಗಾರನ ಬಳಿಯಲ್ಲಿಟ್ಟು ಇಸ್ರೇಲ್ ಸೈನಿಕರಿದ್ದ ಸ್ಥಳಕ್ಕೆ ಓಡಿಹೋಗಿ ತನ್ನ ಸಹೋದರರ ಬಗ್ಗೆ ವಿಚಾರಿಸಿದನು.


ಇಸ್ರೇಲನು, “ನಿನ್ನ ಅಣ್ಣಂದಿರ ಮತ್ತು ಆಡುಕುರಿಗಳ ಕ್ಷೇಮವನ್ನು ವಿಚಾರಿಸಿಕೊಂಡು ಬಂದು ನನಗೆ ತಿಳಿಸು” ಎಂದು ಹೇಳಿ ಅವನನ್ನು ಹೆಬ್ರೋನಿನ ಕಣಿವೆಯಿಂದ ಶೆಕೆಮಿಗೆ ಕಳುಹಿಸಿಕೊಟ್ಟನು.


ಆಗ ಲಯಿಷ್ ದೇಶವನ್ನು ಸಂಚರಿಸಿ ನೋಡಲು ಹೋಗಿದ್ದ ಐದು ಜನರು ತಮ್ಮ ಬಂಧುಗಳಿಗೆ, “ಇಲ್ಲಿಯ ಒಂದು ಮನೆಯಲ್ಲಿ ಏಫೋದ್ ಇದೆ; ಮನೆದೇವರುಗಳೂ ಇವೆ. ಕೆತ್ತಿ ಮಾಡಿರುವ ಒಂದು ವಿಗ್ರಹವೂ ಇದೆ. ಈಗ ನೀವು ಹೋಗಿ ಅವುಗಳನ್ನು ತೆಗೆದುಕೊಂಡು ಬನ್ನಿರಿ” ಎಂದು ಹೇಳಿದರು.


ದಾನ್ಯರ ಆರುನೂರು ಜನರು ಪುರದ್ವಾರದಲ್ಲಿ ನಿಂತಿದ್ದರು. ಅವರು ಆಯುಧಗಳನ್ನು ಹಿಡಿದುಕೊಂಡು ಯುದ್ಧ ಸನ್ನದ್ಧರಾಗಿದ್ದರು.


ನಿನ್ನ ಸಹೋದರರ ಸಹಸ್ರಾಧಿಪತಿಗೆ ಹತ್ತು ಉಂಡೆ ಗಿಣ್ಣನ್ನೂ ತೆಗೆದುಕೊಂಡು ಹೋಗು. ನಿನ್ನ ಸಹೋದರರ ಕ್ಷೇಮ ಸಮಾಚಾರವನ್ನು ಕೇಳಿಕೊಂಡು, ಅವರು ಕ್ಷೇಮವಾಗಿದ್ದಾರೆಂಬುದಕ್ಕೆ ಒಂದು ಗುರುತನ್ನು ತೆಗೆದುಕೊಂಡು ಬಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು