ನ್ಯಾಯಸ್ಥಾಪಕರು 18:17 - ಪರಿಶುದ್ದ ಬೈಬಲ್17-18 ಆ ಐದು ಜನ ಗೂಢಚಾರರು ಮನೆಯೊಳಗೆ ಪ್ರವೇಶ ಮಾಡಿದರು. ಯಾಜಕನು ಹೊರಗೆ ಬಾಗಿಲ ಬಳಿಯಲ್ಲಿ ಯುದ್ಧ ಸನ್ನದ್ಧರಾದ ಆರುನೂರು ಜನರ ಸಂಗಡ ನಿಂತಿದ್ದನು. ಆಗ ಆ ಐದು ಮಂದಿ ಮನೆಯೊಳಗೆ ಹೋಗಿ ಕೆತ್ತನೆಯ ವಿಗ್ರಹವನ್ನೂ ಏಫೋದನ್ನೂ ಬೆಳ್ಳಿವಿಗ್ರಹಗಳನ್ನೂ ಗೃಹದೇವತೆಗಳ ವಿಗ್ರಹಗಳನ್ನೂ ತೆಗೆದುಕೊಂಡರು. ಅವರನ್ನು ಕಂಡ ತರುಣ ಲೇವಿಯು, “ನೀವು ಏನು ಮಾಡುತ್ತಿದ್ದೀರಿ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಯಾಜಕನೂ ಬಂದು ಇವರೊಡನೆ ಬಾಗಿಲಲ್ಲಿ ನಿಂತಿದ್ದಾಗ, ಆ ಐದು ಮಂದಿ ಮನೆಯನ್ನು ಹೊಕ್ಕು, ಕೆತ್ತನೆಯ ಮತ್ತು ಎರಕದ ವಿಗ್ರಹಗಳನ್ನೂ, ಏಫೋದನ್ನೂ, ದೇವತಾಪ್ರತಿಮೆಗಳನ್ನೂ ತೆಗೆದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಯಾಜಕನೂ ಬಂದು ಇವರೊಡನೆ ಬಾಗಿಲಲ್ಲಿ ನಿಂತಿದ್ದಾಗ ಆ ಐದು ಮಂದಿ ಮನೆಯನ್ನು ಹೊಕ್ಕು ಕೆತ್ತನೆಯ ಮತ್ತು ಎರಕದ ವಿಗ್ರಹಗಳನ್ನೂ ‘ಏಫೋದ’ನ್ನೂ ದೇವತಾಪ್ರತಿಮೆಗಳನ್ನೂ ತೆಗೆದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಯಾಜಕನೂ ಬಂದು ಇವರೊಡನೆ ಬಾಗಲಲ್ಲಿ ನಿಂತಿದ್ದಾಗ ಆ ಐದು ಮಂದಿ ಮನೆಯನ್ನು ಹೊಕ್ಕು ಕೆತ್ತನೆಯ ಮತ್ತು ಎರಕದ ವಿಗ್ರಹಗಳನ್ನೂ ಏಫೋದನ್ನೂ ದೇವತಾ ಪ್ರತಿಮೆಗಳನ್ನೂ ತೆಗೆದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆದರೆ ದೇಶವನ್ನು ಸಂಚರಿಸಿ ನೋಡಿ ಬಂದ ಆ ಐದು ಮಂದಿ ಒಳಗೆ ಹೋಗಿ, ಕೆತ್ತಿದ ವಿಗ್ರಹವನ್ನೂ, ಏಫೋದನ್ನೂ, ಪ್ರತಿಮೆಗಳನ್ನೂ, ಎರಕದ ವಿಗ್ರಹವನ್ನೂ ತೆಗೆದುಕೊಂಡರು. ಆಗ ಯಾಜಕನೂ, ಯುದ್ಧದ ಆಯುಧಗಳನ್ನು ಕಟ್ಟಿಕೊಂಡ ಆರುನೂರು ಜನರೂ ಬಾಗಿಲ ಬಳಿಯಲ್ಲಿ ನಿಂತಿದ್ದರು. ಅಧ್ಯಾಯವನ್ನು ನೋಡಿ |
ದಾನ್ ಕುಲದವರು ತಮಗೆ ಭೂಮಿಯನ್ನು ಹುಡುಕುವುದಕ್ಕಾಗಿ ಐದು ಮಂದಿ ಸೈನಿಕರನ್ನು ಕಳುಹಿಸಿದರು. ಅವರು ತಮ್ಮ ವಾಸಕ್ಕಾಗಿ ಒಳ್ಳೆಯ ಸ್ಥಳವನ್ನು ಹುಡುಕಲು ಹೋದರು. ಆ ಐದು ಮಂದಿ ಚೊರ್ಗಾ ಮತ್ತು ಎಷ್ಟಾವೋಲ್ ನಗರದವರಾಗಿದ್ದರು. ಅವರು ದಾನ್ ಕುಲದವರ ಮನೆತನಕ್ಕೆ ಸೇರಿದವರಾದ ಕಾರಣ “ಭೂಮಿಯನ್ನು ಹುಡುಕಲು” ಅವರನ್ನು ಕಳುಹಿಸಲಾಗಿತ್ತು. ಆ ಐದು ಜನರು ಎಫ್ರಾಯೀಮ್ ಬೆಟ್ಟದ ಸೀಮೆಗೆ ಬಂದು ಮೀಕನ ಮನೆಯಲ್ಲಿ ಇಳಿದುಕೊಂಡರು.
ಅವರು ಆ ವಿಗ್ರಹವನ್ನು ಹೆಗಲ ಮೇಲೆ ಕುಳ್ಳಿರಿಸಿಕೊಂಡು ಹೊರುತ್ತಾರೆ. ಆ ಸುಳ್ಳುದೇವರುಗಳು ನಿಷ್ಪ್ರಯೋಜಕವಾಗಿವೆ. ಜನರೇ ಅವುಗಳನ್ನು ಹೊತ್ತುಕೊಳ್ಳಬೇಕು. ಜನರು ಅವುಗಳನ್ನು ನೆಲದ ಮೇಲೆ ಇಟ್ಟಾಗ ಅವು ಅಲ್ಲಾಡುವದಿಲ್ಲ. ತಮ್ಮ ಸ್ಥಳದಿಂದ ಆ ಸುಳ್ಳುದೇವರುಗಳು ಎದ್ದುಹೋಗುವದಿಲ್ಲ. ಜನರು ಅದರ ಮುಂದೆ ಕೂಗಿಕೊಂಡರೂ ಅವು ಕೇಳಿಸಿಕೊಳ್ಳುವದಿಲ್ಲ. ಆ ಸುಳ್ಳುದೇವರುಗಳು ಕೇವಲ ವಿಗ್ರಹಗಳಷ್ಟೇ. ಅವು ಜನರನ್ನು ಅವರ ಕಷ್ಟಗಳಿಂದ ಬಿಡಿಸಲಾರವು.