Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 19:11 - ಪರಿಶುದ್ದ ಬೈಬಲ್‌

11 ಹೊತ್ತು ಮುಳುಗುವುದರಲ್ಲಿತ್ತು. ಅವರು ಯೆಬೂಸ್ ನಗರದ ಹತ್ತಿರ ಬಂದಿದ್ದರು. ಆಗ ಅವನ ಸೇವಕನು ತನ್ನ ಒಡೆಯನಾದ ಆ ಲೇವಿಯನಿಗೆ, “ಈ ಯೆಬೂಸಿಯರ ನಗರದಲ್ಲಿ ಇದ್ದು ಬಿಡೋಣ, ಈ ರಾತ್ರಿ ಇಲ್ಲಿಯೇ ಕಳೆಯೋಣ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರು ಯೆಬೂಸಿಯರ ಊರಾದ ಯೆರೂಸಲೇಮಿನ ಸಮೀಪಕ್ಕೆ ಬಂದಾಗ ಹೊತ್ತುಮುಳುಗುವ ಸಮಯವಾಗಿದ್ದರಿಂದ ಸೇವಕನು ದಣಿಗೆ, “ದಯವಿಟ್ಟು ಬಾ; ನಾವು ಯೆಬೂಸಿಯರ ಈ ಪಟ್ಟಣಕ್ಕೆ ಹೋಗಿ, ಅಲ್ಲಿ ರಾತ್ರಿಯನ್ನು ಕಳೆಯೋಣ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅವರು ಯೆಬೂಸಿಯರ ಊರಾದ ಜೆರುಸಲೇಮಿನ ಸಮೀಪಕ್ಕೆ ಬಂದಾಗ ಹೊತ್ತು ಮುಳುಗುವ ಕಾಲವಾದುದರಿಂದ ಸೇವಕನು ದಣಿಗೆ, “ದಯವಿಟ್ಟು ಬನ್ನಿ, ನಾವು ಯೆಬೂಸಿಯರ ಈ ಪಟ್ಟಣಕ್ಕೆ ಹೋಗಿ ಅಲ್ಲಿ ರಾತ್ರಿಯನ್ನು ಕಳೆಯೋಣ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವರು ಯೆಬೂಸಿಯರ ಊರಾದ ಯೆರೂಸಲೇವಿುನ ಸಮೀಪಕ್ಕೆ ಬಂದಾಗ ಹೊತ್ತು ಮುಣುಗುವ ಕಾಲವಾದದರಿಂದ ಸೇವಕನು ದಣಿಗೆ - ದಯವಿಟ್ಟು ಬಾ; ನಾವು ಯೆಬೂಸಿಯರ ಈ ಪಟ್ಟಣಕ್ಕೆ ಹೋಗಿ ಅಲ್ಲಿ ರಾತ್ರಿಯನ್ನು ಕಳೆಯೋಣ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವರು ಯೆಬೂಸಿಗೆ ಸಮೀಪಿಸಿದಾಗ, ಹೊತ್ತು ಬಹಳ ಹೋಗಿತ್ತು. ಆಗ ಸೇವಕನು ತನ್ನ ಯಜಮಾನನಿಗೆ, “ನೀನು ದಯಮಾಡಿ ಬಾ; ಈ ಯೆಬೂಸಿಯರ ಪಟ್ಟಣಕ್ಕೆ ತಿರುಗಿಕೊಂಡು, ಅಲ್ಲಿ ರಾತ್ರಿಯಲ್ಲಿ ಇಳಿದುಕೊಳ್ಳೋಣ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 19:11
8 ತಿಳಿವುಗಳ ಹೋಲಿಕೆ  

ದಾವೀದನು ಯೆಬೂಸಿಯರಿಗೆ ವಿರುದ್ಧವಾಗಿ ಜೆರುಸಲೇಮಿಗೆ ತನ್ನ ಜನರೊಂದಿಗೆ ಹೋದನು. (ಯೆಬೂಸಿಯರು ಆ ದೇಶದ ಮೂಲನಿವಾಸಿಗಳು.) ಯೆಬೂಸಿಯರು ದಾವೀದನಿಗೆ, “ನೀನು ನಮ್ಮ ನಗರದೊಳಕ್ಕೆ ಬರಲಾಗದು. ಕುರುಡರು ಮತ್ತು ಕುಂಟರು ಸಹ ನಿನ್ನನ್ನು ತಡೆಯಬಲ್ಲರು” ಎಂದು ಹೇಳಿದರು. (ದಾವೀದನು ಅವರ ನಗರದೊಳಕ್ಕೆ ಪ್ರವೇಶಿಸಲು ಸಮರ್ಥನಲ್ಲವೆಂದು ಅವರು ಈ ರೀತಿ ಹೇಳಿದರು.


ಆದರೆ ಆ ಲೇವಿಯು ಇನ್ನೊಂದು ರಾತ್ರಿ ಅಲ್ಲಿ ಇರಲು ಇಷ್ಟಪಡಲಿಲ್ಲ. ಅವನು ತನ್ನ ಎರಡು ಕತ್ತೆಗಳನ್ನು ತೆಗೆದುಕೊಂಡು ಮತ್ತು ತನ್ನ ಉಪಪತ್ನಿಯನ್ನು ಕರೆದುಕೊಂಡು ಹೊರಟನು. ಅವನು ಜೆರುಸಲೇಮ್ ಎಂದು ಕರೆಯಲ್ಪಡುವ ಯೆಬೂಸ್ ನಗರದವರೆಗೆ ಪ್ರಯಾಣ ಮಾಡಿದನು.


ಬೆನ್ಯಾಮೀನನ ಕುಲದವರಿಗೆ ಯೆಬೂಸಿಯರನ್ನು ಜೆರುಸಲೇಮಿನಿಂದ ಹೊರದೂಡುವುದು ಸಾಧ್ಯವಾಗಲಿಲ್ಲ. ಅದಕ್ಕಾಗಿ ಇಂದಿನವರೆಗೂ ಅವರು ಬೆನ್ಯಾಮೀನರೊಡನೆ ಜೆರುಸಲೇಮಿನಲ್ಲಿಯೇ ವಾಸವಾಗಿದ್ದಾರೆ.


ಜೆರುಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಹಾಕಲು ಯೆಹೂದ ಕುಲದವರಿಗೆ ಸಾಧ್ಯವಾಗಲಿಲ್ಲ. ಆದ್ದರಿಂದ ಯೆಬೂಸಿಯರು ಇಂದಿನವರೆಗೂ ಜೆರುಸಲೇಮಿನಲ್ಲಿ ಯೆಹೂದ ಕುಲದವರೊಡನೆ ವಾಸವಾಗಿದ್ದಾರೆ.


ಕಾನಾನನು ಯೆಬೂಸಿಯರಿಗೆ, ಅಮೋರಿಯರಿಗೆ, ಗಿರ್ಗಾಷಿಯರಿಗೆ, ಹಿವ್ವಿಯರಿಗೆ, ಅರ್ಕಿಯರಿಗೆ, ಸೀನಿಯರಿಗೆ, ಅರ್ವಾದಿಯರಿಗೆ, ಚೆಮಾರಿಯರಿಗೆ ಮತ್ತು ಹಮಾತಿಯರಿಗೆ ಮೂಲಪುರುಷನು. ಕಾನಾನನ ಕುಟುಂಬಗಳು ಪ್ರಪಂಚದ ನಾನಾ ಭಾಗಗಳಲ್ಲಿ ಹರಡಿಕೊಂಡಿದ್ದವು.


ಆದರೆ ಆ ಲೇವಿಯು, “ಬೇಡ, ನಾವು ಪರಿಚಯವಿಲ್ಲದವರ ನಗರದಲ್ಲಿ ಇರುವುದು ಬೇಡ. ಆ ಜನರು ಇಸ್ರೇಲರಲ್ಲ. ನಾವು ಗಿಬೆಯ ನಗರಕ್ಕೆ ಹೋಗೋಣ” ಎಂದನು.


ನಮ್ಮ ಕತ್ತೆಗಳಿಗೆ ಮೇವು ಮತ್ತು ಹುಲ್ಲು ಇವೆ. ನನಗೂ ಈ ಸ್ತ್ರೀಗೂ ನನ್ನ ಸೇವಕನಿಗೂ ರೊಟ್ಟಿ ಮತ್ತು ದ್ರಾಕ್ಷಾರಸ ಇವೆ. ನಮಗೆ ಏನೂ ಬೇಕಾಗಿಲ್ಲ” ಎಂದು ಉತ್ತರಕೊಟ್ಟನು.


ಇದಲ್ಲದೆ ಯೆಬೂಸಿಯರಿಗೆ, ಅಮೋರಿಯರಿಗೆ, ಗಿರ್ಗಾಷಿಯರಿಗೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು