Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 19:16 - ಪರಿಶುದ್ದ ಬೈಬಲ್‌

16 ಆ ಸಾಯಂಕಾಲ ಒಬ್ಬ ವೃದ್ಧನು ಹೊಲದಿಂದ ಮನೆಗೆ ಬರುತ್ತಿದ್ದನು. ಅವನು ಎಫ್ರಾಯೀಮ್ ಬೆಟ್ಟಪ್ರದೇಶದವನಾಗಿದ್ದು, ಈಗ ಗಿಬೆಯ ನಗರದಲ್ಲಿ ವಾಸಮಾಡುತ್ತಿದ್ದನು. (ಗಿಬೆಯದ ನಿವಾಸಿಗಳು ಬೆನ್ಯಾಮೀನ್ಯರಾಗಿದ್ದರು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅಷ್ಟರಲ್ಲಿ ಎಫ್ರಾಯೀಮಿನ ಪರ್ವತಪ್ರದೇಶಕ್ಕೆ ಸೇರಿದ ಒಬ್ಬ ಮುದುಕನು, ಬೆನ್ಯಾಮೀನ್ಯರ ಊರಾದ ಗಿಬೆಯದಲ್ಲಿ ವಾಸವಾಗಿದ್ದ ಆ ಮುದುಕನು ಸಾಯಂಕಾಲವಾದ್ದರಿಂದ ಕೆಲಸವನ್ನು ಮುಗಿಸಿ ಹೊಲದಿಂದ ಮನೆಗೆ ಬರುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅಷ್ಟರಲ್ಲಿ ಎಫ್ರಯಿಮ್ ಪರ್ವತಪ್ರದೇಶಕ್ಕೆ ಸೇರಿದವನು ಹಾಗು ಬೆನ್ಯಾಮೀನ್ಯರ ಊರಾದ ಗಿಬೆಯದಲ್ಲಿ ವಾಸಿಸುವವನು ಆಗಿದ್ದ ಯಾರೋ ಒಬ್ಬ ಮುದುಕ ಸಾಯಂಕಾಲವಾದ್ದರಿಂದ ಕೆಲಸವನ್ನು ಬಿಟ್ಟು ಹೊಲದಿಂದ ಮನೆಗೆ ಬರುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅಷ್ಟರಲ್ಲಿ ಎಫ್ರಾಯೀಮ್ ಪರ್ವತ ಪ್ರದೇಶಕ್ಕೆ ಸೇರಿದವನೂ ಬೆನ್ಯಾಮೀನ್ಯರ ಊರಾದ ಗಿಬೆಯದಲ್ಲಿ ವಾಸಿಸುವವನೂ ಆಗಿದ್ದ ಒಬ್ಬಾನೊಬ್ಬ ಮುದುಕನು ಸಾಯಂಕಾಲವಾದದರಿಂದ ಕೆಲಸವನ್ನು ಬಿಟ್ಟು ಹೊಲದಿಂದ ಮನೆಗೆ ಬರುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಗ ಒಬ್ಬ ಮುದುಕನು ಹೊಲದಲ್ಲಿ ತನ್ನ ಕೆಲಸಮಾಡಿ ಬರುತ್ತಿದ್ದನು. ಆ ಮನುಷ್ಯನು ಎಫ್ರಾಯೀಮ್ ಬೆಟ್ಟದ ಪ್ರದೇಶಕ್ಕೆ ಸೇರಿದವನೂ ಬೆನ್ಯಾಮೀನರ ಊರಾದ ಗಿಬೆಯದಲ್ಲಿ ಪ್ರವಾಸಿಯಾಗಿಯೂ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 19:16
16 ತಿಳಿವುಗಳ ಹೋಲಿಕೆ  

ಬಳಿಕ ಜನರು ಕೆಲಸಕಾರ್ಯಗಳಿಗಾಗಿ ಹೊರಟು ಸಾಯಂಕಾಲದವರೆಗೂ ದುಡಿಯುವರು.


ಆಗಿನ ಕಾಲದಲ್ಲಿ ಇಸ್ರೇಲರಿಗೆ ಅರಸನಿರಲಿಲ್ಲ. ಎಫ್ರಾಯೀಮ್ ಬೆಟ್ಟಪ್ರದೇಶದ ಒಂದು ಮೂಲೆಯಲ್ಲಿ ಒಬ್ಬ ಲೇವಿಯು ವಾಸಮಾಡುತ್ತಿದ್ದನು. ಆ ಮನುಷ್ಯನಿಗೆ ಒಬ್ಬ ಉಪಪತ್ನಿ ಇದ್ದಳು. ಅವಳು ಯೆಹೂದದ ಬೆತ್ಲೆಹೇಮಿನವಳಾಗಿದ್ದಳು.


ನಾವು ನಿಮ್ಮ ಸಂಗಡವಿದ್ದಾಗ, “ಕೆಲಸ ಮಾಡದವನು ಊಟವನ್ನೂ ಮಾಡಕೂಡದು” ಎಂಬ ನಿಯಮವನ್ನು ವಿಧಿಸಿದೆವು.


ಕಳ್ಳನು ಕದಿಯುವುದನ್ನು ನಿಲ್ಲಿಸಿ ತಾನೇ ದುಡಿದು ಸಂಪಾದಿಸಲಿ; ಅವನು ತನ್ನ ಕೈಗಳನ್ನು ಒಳ್ಳೆಯದನ್ನು ಮಾಡುವುದಕ್ಕಾಗಿ ಉಪಯೋಗಿಸಲಿ. ಆಗ ಬಡವರಿಗೂ ಸಹಾಯ ಮಾಡಲು ಅವನಿಗೆ ಸಾಧ್ಯವಾಗುವುದು.


ದಿನವೆಲ್ಲಾ ಪ್ರಯಾಸಪಟ್ಟು ದುಡಿಯುವವನು ಸಮಾಧಾನದಿಂದ ಮಲಗಿಕೊಳ್ಳುವನು. ಅವನಿಗೆ ತಿನ್ನಲು ಸ್ವಲ್ಪವೇ ಇರಲಿ ಅಥವಾ ಹೆಚ್ಚೇ ಇರಲಿ, ಅದು ಮುಖ್ಯವಲ್ಲ. ಐಶ್ವರ್ಯವಂತನಿಗಾದರೋ ತನ್ನ ಸಂಪತ್ತಿನ ಕುರಿತು ಚಿಂತಿಸುತ್ತಾ ನಿದ್ರಿಸಲಾರನು.


ಈ ಜೀವಿತದ ಎಲ್ಲಾ ವಿಷಯಗಳನ್ನು ಜ್ಞಾನದಿಂದ ವಿಮರ್ಶಿಸಿ ಕಲಿತುಕೊಳ್ಳಲು ನಿರ್ಧರಿಸಿದೆನು. ದೇವರು ಮನುಷ್ಯರಿಗೆ ಕೊಟ್ಟಿರುವ ಕೆಲಸವೆಲ್ಲ ಬಹು ಪ್ರಯಾಸವೇ.


ಹೊಲಗಳಲ್ಲಿ ಬಿತ್ತುವ ಮೊದಲು ಮನೆಯನ್ನು ಕಟ್ಟಬೇಡ. ವಾಸಕ್ಕಾಗಿ ಮನೆಯನ್ನು ಕಟ್ಟುವ ಮೊದಲೇ ನೀನು ಬೇಸಾಯ ಮಾಡಲು ಸಿದ್ಧನಾಗಿರುವಿಯೋ ಎಂಬುದನ್ನು ಖಾತರಿಪಡಿಸಿಕೊ.


ಕಷ್ಟಪಟ್ಟು ದುಡಿದರೆ, ಸಮೃದ್ಧಿಯಿರುವುದು. ಕೇವಲ ಮಾತಾಡಿದರೆ ಬಡತನ ಬರುವುದು.


ಮೋಸದಿಂದ ಸಂಪಾದಿಸಿದ ಹಣವು ಕ್ಷಯಿಸಿ ಹೋಗುವುದು. ದುಡಿದು ಸಂಪಾದಿಸಿದ ಹಣ ಹೆಚ್ಚುತ್ತಾ ಹೋಗುವುದು.


ನೀನು ದುಡಿದು ಸಂಪಾದಿಸಿದ್ದನ್ನು ನೀನೇ ಅನುಭವಿಸುವೆ. ನೀನು ಸಂತೋಷದಿಂದಿರುವೆ. ನಿನಗೆ ಒಳ್ಳೆಯದಾಗುವುದು.


ಆ ಲೇವಿಯು ಮತ್ತು ಅವನ ಸಂಗಡ ಇದ್ದ ಜನರು ಪ್ರಯಾಣ ಮುಂದುವರಿಸಿದರು. ಅವರು ಗಿಬೆಯ ನಗರವನ್ನು ಪ್ರವೇಶ ಮಾಡಿದ ಸಮಯದಲ್ಲಿ ಸೂರ್ಯನು ಮುಳುಗುತ್ತಿದ್ದನು. ಗಿಬೆಯ ನಗರವು ಬೆನ್ಯಾಮೀನ್ಯರ ಪ್ರದೇಶದಲ್ಲಿದೆ.


ನಿನ್ನ ಮುಖದಲ್ಲಿ ಬೆವರು ಹರಿಯುವ ತನಕ ನೀನು ಆಹಾರಕ್ಕಾಗಿ ಕಷ್ಟಪಟ್ಟು ದುಡಿಯುವೆ. ನೀನು ಸಾಯುವ ದಿನದವರೆಗೆ ಕಷ್ಟಪಟ್ಟು ಕೆಲಸ ಮಾಡುವೆ. ಆಮೇಲೆ ನೀನು ಮಣ್ಣಾಗುವೆ. ನಾನು ನಿನ್ನನ್ನು ನಿರ್ಮಿಸಲು ಮಣ್ಣನ್ನು ಉಪಯೋಗಿಸಿದೆ. ನೀನು ಸತ್ತಾಗ ಮತ್ತೆ ಮಣ್ಣೇ ಆಗುವೆ” ಎಂದನು.


ಅವರು ಗಿಬೆಯದಲ್ಲಿ ತಮ್ಮ ಪ್ರಯಾಣವನ್ನು ನಿಲ್ಲಿಸಿದರು. ಅಂದು ರಾತ್ರಿ ಆ ನಗರದಲ್ಲಿ ಇರುವುದಕ್ಕೆ ನಿರ್ಧಾರ ಮಾಡಿದರು. ಅವರು ನಗರದ ಬೀದಿಯ ಮುಖ್ಯಸ್ಥಳಕ್ಕೆ ಬಂದು ಅಲ್ಲಿ ಕುಳಿತುಕೊಂಡರು. ಯಾರೂ ಅವರನ್ನು ಆ ರಾತ್ರಿ ತಮ್ಮ ಮನೆಯಲ್ಲಿ ಇರಲು ಕರೆಯಲಿಲ್ಲ.


ಆ ವೃದ್ಧನು ಬೀದಿಯ ಮುಖ್ಯಸ್ಥಳದಲ್ಲಿ ಪ್ರಯಾಣಿಕನನ್ನು (ಲೇವಿಯನ್ನು) ನೋಡಿದನು. ಆ ವೃದ್ಧನು, “ನೀನು ಎಲ್ಲಿಗೆ ಹೋಗಬೇಕು? ಎಲ್ಲಿಂದ ಬಂದಿರುವೆ?” ಎಂದು ಅವನನ್ನು ಕೇಳಿದನು.


ಗಿಬ್ಯದ ಕಾಲದಂತೆ ಇಸ್ರೇಲರು ನಾಶನದ ಕಡೆಗೆ ಆಳವಾಗಿ ಇಳಿದಿದ್ದಾರೆ. ಯೆಹೋವನು ಇಸ್ರೇಲರ ಪಾಪಗಳನ್ನು ತನ್ನ ನೆನಪಿಗೆ ತಂದುಕೊಂಡು ಅವರನ್ನು ಶಿಕ್ಷಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು