Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 19:18 - ಪರಿಶುದ್ದ ಬೈಬಲ್‌

18 ಅದಕ್ಕೆ ಲೇವಿಯು, “ನಾವು ಯೆಹೂದದ ಬೆತ್ಲೆಹೇಮಿನಿಂದ ಹೊರಟಿದ್ದೇವೆ. ಎಫ್ರಾಯೀಮ್ ಬೆಟ್ಟಪ್ರದೇಶದ ಒಂದು ಮೂಲೆಯಲ್ಲಿರುವ ನಮ್ಮ ಮನೆಗೆ ಹೋಗುತ್ತಿದ್ದೇವೆ. ಆದರೆ ಈ ರಾತ್ರಿ ಇಲ್ಲಿ ತಂಗಲು ಯಾರೂ ನಮ್ಮನ್ನು ತಮ್ಮ ಮನೆಗೆ ಆಹ್ವಾನಿಸಲಿಲ್ಲ. ನಾನು ಯೆಹೂದದ ಬೆತ್ಲೆಹೇಮಿಗೆ ಹೋಗಿದ್ದೆ. ಈಗ ನಾನು ನಮ್ಮ ಮನೆಗೆ ಹೋಗುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆ ಲೇವಿಯನು ಅವನಿಗೆ, “ನಾವು ಯೆಹೂದದ ಬೇತ್ಲೆಹೇಮಿನಿಂದ ಎಫ್ರಾಯೀಮಿನ ಪರ್ವತಪ್ರದೇಶದ ಒಂದು ದೂರಸ್ಥಳದಲ್ಲಿರುವ ನಮ್ಮ ವಾಸಸ್ಥಳಕ್ಕೆ ಹೋಗುತ್ತಿದ್ದೇವೆ. ನಾನು ಯೆಹೂದದ ಬೇತ್ಲೆಹೇಮಿಗೆ ಹೋಗಿದ್ದೆನು; ಈಗ ತಿರುಗಿ ಯೆಹೋವನ ಮಂದಿರಕ್ಕೆ ಹೋಗುತ್ತೇನೆ. ಇಲ್ಲಿ ಯಾರೂ ನಮ್ಮನ್ನು ತಮ್ಮ ಮನೆಗೆ ಸೇರಿಸಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅವನು ಆ ಮುದುಕನಿಗೆ, “ನಾವು ಯೆಹೂದದ ಬೆತ್ಲೆಹೇಮಿನಿಂದ ಎಫ್ರಯಿಮ್ ಪರ್ವತಪ್ರದೇಶದ ಒಂದು ಮೂಲೆಯಲ್ಲಿರುವ ನಮ್ಮ ವಾಸಸ್ಥಳಕ್ಕೆ ಹೋಗುತ್ತಿದ್ದೇವೆ. ನಾನು ಅಲ್ಲಿಂದ ಯೆಹೂದದ ಬೆತ್ಲೆಹೇಮಿಗೆ ಹೋಗಿದ್ದೆ; ಈಗ ಮರಳಿ ಸರ್ವೇಶ್ವರನ ಮಂದಿರಕ್ಕೆ ಹೋಗುತ್ತಿದ್ದೇನೆ. ಇಲ್ಲಿ ಯಾರೂ ನಮ್ಮನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವನು ಇವನಿಗೆ - ನಾವು ಯೆಹೂದದ ಬೇತ್ಲೆಹೇವಿುನಿಂದ ಎಫ್ರಾಯೀಮ್ ಪರ್ವತಪ್ರದೇಶದ ಒಂದು ಮೂಲೆಯಲ್ಲಿರುವ ನಮ್ಮ ವಾಸಸ್ಥಳಕ್ಕೆ ಹೋಗುತ್ತಿದ್ದೇವೆ. ನಾನು ಅಲ್ಲಿಂದ ಯೆಹೂದದ ಬೇತ್ಲೆಹೇವಿುಗೆ ಹೋಗಿದ್ದೆನು; ಈಗ ತಿರಿಗಿ ಯೆಹೋವನ ಮಂದಿರಕ್ಕೆ ಹೋಗುತ್ತೇನೆ. ಇಲ್ಲಿ ಯಾರೂ ನಮ್ಮನ್ನು ತಮ್ಮ ಮನೆಗೆ ಕರಕೊಂಡು ಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವನು ಇವನಿಗೆ, “ನಾವು ಯೆಹೂದದ ಬೇತ್ಲೆಹೇಮಿನಿಂದ ಎಫ್ರಾಯೀಮ್ ಬೆಟ್ಟದ ಕಡೆಯಲ್ಲಿ ಹಾದು ಹೋಗುತ್ತೇವೆ. ನಾನು ಅಲ್ಲಿಯವನು. ಯೆಹೂದದ ಬೇತ್ಲೆಹೇಮಿಗೆ ಹೋಗಿದ್ದೆನು. ಈಗ ಯೆಹೋವ ದೇವರ ಮನೆಗೆ ಹೋಗುತ್ತೇನೆ. ಆದರೆ ನಮ್ಮನ್ನು ಯಾರೂ ಮನೆಗೆ ಸೇರಿಸಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 19:18
12 ತಿಳಿವುಗಳ ಹೋಲಿಕೆ  

ಮೀಕನು ಮಾಡಿದ್ದ ಆ ವಿಗ್ರಹಗಳನ್ನು ದಾನ್ಯರು ಪೂಜಿಸಿದರು. ಶೀಲೋವಿನಲ್ಲಿ ದೇವಸ್ಥಾನವಿದ್ದ ಕಾಲದಲ್ಲೆಲ್ಲಾ ಅವರು ಆ ವಿಗ್ರಹಗಳನ್ನು ಪೂಜಿಸಿದರು.


ನನ್ನಲ್ಲಿ ನೆಲೆಗೊಂಡಿಲ್ಲದವನು ಹೊರಗೆ ಬಿಸಾಡಲ್ಪಟ್ಟ ಕವಲಿನಂತಿರುವನು. ಆ ಕವಲು ಸತ್ತುಹೋಗುವುದು. ಸತ್ತ ಕವಲುಗಳನ್ನು ಜನರು ಒಟ್ಟುಗೂಡಿಸಿ ಬೆಂಕಿಯೊಳಕ್ಕೆ ಎಸೆದು ಸುಟ್ಟುಹಾಕುವರು.


ಆ ಪಾಪಿಗಳ ಗುಂಪಿನಲ್ಲಿ ನನ್ನನ್ನು ಸೇರಿಸಬೇಡ. ಆ ಕೊಲೆಗಾರರ ಜೀವದೊಂದಿಗೆ ನನ್ನ ಜೀವವನ್ನು ತೆಗೆಯಬೇಡ.


ಪ್ರತಿ ವರ್ಷವೂ ಶೀಲೋವಿನಲ್ಲಿದ್ದ ಯೆಹೋವನ ಆಲಯಕ್ಕೆ ಅವರ ಕುಟುಂಬವು ಹೋದಾಗಲೆಲ್ಲ ಪೆನಿನ್ನಳು ಹನ್ನಳನ್ನು ಕೆಣಕಿ ನೋವು ಮಾಡುತ್ತಿದ್ದಳು. ಒಂದು ದಿನ ಎಲ್ಕಾನನು ಯಜ್ಞವನ್ನು ಅರ್ಪಿಸುವಾಗ, ಹನ್ನಳು ನೊಂದುಕೊಂಡು ಅಳಲಾರಂಭಿಸಿದಳು. ಹನ್ನಳು ಊಟಮಾಡಲೇ ಇಲ್ಲ.


ಎಲ್ಕಾನನು ಪ್ರತಿ ವರ್ಷವೂ ತನ್ನ ಪಟ್ಟಣವಾದ ರಾಮಾತಯಿಮ್ ಬಿಟ್ಟು ಶೀಲೋವಿಗೆ ಹೋಗುತ್ತಿದ್ದನು. ಅವನು ಶೀಲೋವಿನಲ್ಲಿ ಸರ್ವಶಕ್ತನಾದ ಯೆಹೋವನನ್ನು ಆರಾಧಿಸಿ ಆತನಿಗೆ ಯಜ್ಞವನ್ನು ಅರ್ಪಿಸುತ್ತಿದ್ದನು. ಹೊಫ್ನಿ ಮತ್ತು ಫೀನೆಹಾಸರೆಂಬ ಯಾಜಕರು ಯೆಹೋವನ ಸೇವೆಮಾಡುವ ಸ್ಥಳವೇ ಶೀಲೋವ. ಹೊಫ್ನಿ ಮತ್ತು ಫೀನೆಹಾಸರು ಏಲಿಯನ ಮಕ್ಕಳು.


ಇಸ್ರೇಲಿನ ಜನರು ಬೇತೇಲಿಗೆ ಹೋದರು. ಬೇತೇಲಿನಲ್ಲಿ ಅವರು “ಯಾವ ಕುಲದವರು ಮೊದಲು ಬೆನ್ಯಾಮೀನ್ಯರ ಮೇಲೆ ಧಾಳಿಮಾಡಬೇಕು” ಎಂದು ಯೆಹೋವನನ್ನು ಕೇಳಿದರು. ಅದಕ್ಕೆ ಯೆಹೋವನು, “ಯೆಹೂದ ಕುಲದವರು ಮೊದಲು ಹೋಗಬೇಕು” ಎಂದು ಉತ್ತರಿಸಿದನು.


ನಾಲ್ಕನೆಯ ದಿನ ಅವರು ಬೆಳಗಿನ ಜಾವ ಬೇಗ ಎದ್ದರು. ಆ ಲೇವಿಯು ಹೊರಡುವದಕ್ಕೆ ಸಿದ್ಧನಾಗುತ್ತಿದ್ದನು. ಆದರೆ ಮಾವನು ತನ್ನ ಅಳಿಯನಿಗೆ, “ಸ್ವಲ್ಪ ಊಟಮಾಡು; ಆಮೇಲೆ ಹೋಗುವಿಯಂತೆ” ಎಂದನು.


ಇಸ್ರೇಲರೆಲ್ಲರು ಶೀಲೋವಿನಲ್ಲಿ ಒಟ್ಟಾಗಿ ಸೇರಿದರು. ಆ ಸ್ಥಳದಲ್ಲಿ ಅವರು ದೇವದರ್ಶನ ಗುಡಾರವನ್ನು ನಿಲ್ಲಿಸಿದರು. ಇಸ್ರೇಲರು ಆ ದೇಶವನ್ನು ಸ್ವಾಧೀನ ಮಾಡಿಕೊಂಡಿದ್ದರು. ಅವರು ಆ ದೇಶದ ಎಲ್ಲ ಶತ್ರುಗಳನ್ನು ಸೋಲಿಸಿದ್ದರು.


ಲೇವಿಯ ಕುಲದ ಒಬ್ಬ ತರುಣನಿದ್ದನು. ಅವನು ಯೆಹೂದದ ಬೆತ್ಲೆಹೇಮಿನವನಾಗಿದ್ದು ಯೆಹೂದ್ಯರ ಸಂಗಡ ವಾಸಮಾಡುತ್ತಿದ್ದನು.


ಆ ವೃದ್ಧನು ಬೀದಿಯ ಮುಖ್ಯಸ್ಥಳದಲ್ಲಿ ಪ್ರಯಾಣಿಕನನ್ನು (ಲೇವಿಯನ್ನು) ನೋಡಿದನು. ಆ ವೃದ್ಧನು, “ನೀನು ಎಲ್ಲಿಗೆ ಹೋಗಬೇಕು? ಎಲ್ಲಿಂದ ಬಂದಿರುವೆ?” ಎಂದು ಅವನನ್ನು ಕೇಳಿದನು.


ನಮ್ಮ ಕತ್ತೆಗಳಿಗೆ ಮೇವು ಮತ್ತು ಹುಲ್ಲು ಇವೆ. ನನಗೂ ಈ ಸ್ತ್ರೀಗೂ ನನ್ನ ಸೇವಕನಿಗೂ ರೊಟ್ಟಿ ಮತ್ತು ದ್ರಾಕ್ಷಾರಸ ಇವೆ. ನಮಗೆ ಏನೂ ಬೇಕಾಗಿಲ್ಲ” ಎಂದು ಉತ್ತರಕೊಟ್ಟನು.


ಅಂತೆಯೇ, ನಿನ್ನ ನೆರೆಯವನ ಮನೆಗೆ ಪದೇಪದೇ ಹೋಗಬೇಡ. ನೀನು ಹೋದರೆ, ಅವನು ನಿನ್ನ ಮೇಲೆ ಬೇಸರಗೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು