Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 19:19 - ಪರಿಶುದ್ದ ಬೈಬಲ್‌

19 ನಮ್ಮ ಕತ್ತೆಗಳಿಗೆ ಮೇವು ಮತ್ತು ಹುಲ್ಲು ಇವೆ. ನನಗೂ ಈ ಸ್ತ್ರೀಗೂ ನನ್ನ ಸೇವಕನಿಗೂ ರೊಟ್ಟಿ ಮತ್ತು ದ್ರಾಕ್ಷಾರಸ ಇವೆ. ನಮಗೆ ಏನೂ ಬೇಕಾಗಿಲ್ಲ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಮ್ಮ ಕತ್ತೆಗಳಿಗೆ ಹುಲ್ಲೂ ಕಾಳೂ ಇವೆ; ನನಗೂ ನಿನ್ನ ಸೇವಕಿಗೂ, ನಿನ್ನ ಸೇವಕನ ಸಂಗಡ ಬಂದಿರುವ ಈ ಪ್ರಾಯಸ್ಥನಿಗೂ ಸಾಕಾಗುವಷ್ಟು ರೊಟ್ಟಿಯೂ, ದ್ರಾಕ್ಷಾರಸವೂ ಇರುತ್ತವೆ. ನಮಗೆ ಹೆಚ್ಚು ಏನೂ ಬೇಕಾಗಿರುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನಮ್ಮ ಕತ್ತೆಗಳಿಗೆ ಹುಲ್ಲೂ ಕಾಳೂ ಇವೆ. ನನಗೂ ನಿನ್ನ ಸೇವಕಿಗೂ ನಿನ್ನ ಸೇವಕನ ಸಂಗಡ ಬಂದಿರುವ ಈ ಪ್ರಾಯಸ್ಥನಿಗೂ ಸಾಕಾಗುವಷ್ಟು ರೊಟ್ಟಿಯೂ ದ್ರಾಕ್ಷಾರಸವೂ ಇರುತ್ತವೆ; ನಮಗೆ ಹೆಚ್ಚು ಏನೂ ಬೇಕಾಗಿರುವುದಿಲ್ಲ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಮ್ಮ ಕತ್ತೆಗಳಿಗೆ ಹುಲ್ಲೂ ಕಾಳೂ ಇವೆ; ನನಗೂ ನಿನ್ನ ಸೇವಕಿಗೂ ನಿನ್ನ ಸೇವಕನ ಸಂಗಡ ಬಂದಿರುವ ಈ ಪ್ರಾಯಸ್ಥನಿಗೂ ಸಾಕಾಗುವಷ್ಟು ರೊಟ್ಟಿಯೂ ದ್ರಾಕ್ಷಾರಸವೂ ಇರುತ್ತವೆ; ನಮಗೆ ಹೆಚ್ಚು ಏನೂ ಬೇಕಾಗಿರುವದಿಲ್ಲ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆದರೂ ನಮ್ಮ ಕತ್ತೆಗಳಿಗೆ ಮೇವೂ, ನಿನ್ನ ಸೇವಕನಾದ ನನಗೂ, ನಿನ್ನ ಸೇವಕಿಗೂ, ನಿನ್ನ ಸೇವಕನ ಸಂಗಡ ಇರುವ ಪ್ರಾಯಸ್ಥನಿಗೂ ಸಾಕಾಗುವಷ್ಟು ರೊಟ್ಟಿ ಮತ್ತು ದ್ರಾಕ್ಷಾರಸವು ಉಂಟು. ಏನೂ ಕೊರತೆ ಇಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 19:19
6 ತಿಳಿವುಗಳ ಹೋಲಿಕೆ  

ಬಳಿಕ, “ಹೌದು, ನಿನ್ನ ಒಂಟೆಗಳಿಗೆ ಹುಲ್ಲೂ ಮೇವೂ ನಮ್ಮಲ್ಲಿವೆ ಮತ್ತು ನೀವು ಇಳಿದುಕೊಳ್ಳಲೂ ಸ್ಥಳವಿದೆ” ಎಂದಳು.


ಹೊತ್ತು ಮುಳುಗುವುದರಲ್ಲಿತ್ತು. ಅವರು ಯೆಬೂಸ್ ನಗರದ ಹತ್ತಿರ ಬಂದಿದ್ದರು. ಆಗ ಅವನ ಸೇವಕನು ತನ್ನ ಒಡೆಯನಾದ ಆ ಲೇವಿಯನಿಗೆ, “ಈ ಯೆಬೂಸಿಯರ ನಗರದಲ್ಲಿ ಇದ್ದು ಬಿಡೋಣ, ಈ ರಾತ್ರಿ ಇಲ್ಲಿಯೇ ಕಳೆಯೋಣ” ಎಂದನು.


ಅದಕ್ಕೆ ಲೇವಿಯು, “ನಾವು ಯೆಹೂದದ ಬೆತ್ಲೆಹೇಮಿನಿಂದ ಹೊರಟಿದ್ದೇವೆ. ಎಫ್ರಾಯೀಮ್ ಬೆಟ್ಟಪ್ರದೇಶದ ಒಂದು ಮೂಲೆಯಲ್ಲಿರುವ ನಮ್ಮ ಮನೆಗೆ ಹೋಗುತ್ತಿದ್ದೇವೆ. ಆದರೆ ಈ ರಾತ್ರಿ ಇಲ್ಲಿ ತಂಗಲು ಯಾರೂ ನಮ್ಮನ್ನು ತಮ್ಮ ಮನೆಗೆ ಆಹ್ವಾನಿಸಲಿಲ್ಲ. ನಾನು ಯೆಹೂದದ ಬೆತ್ಲೆಹೇಮಿಗೆ ಹೋಗಿದ್ದೆ. ಈಗ ನಾನು ನಮ್ಮ ಮನೆಗೆ ಹೋಗುತ್ತಿದ್ದೇನೆ.


“ಇಟ್ಟಿಗೆಗಳನ್ನು ಮಾಡುವುದಕ್ಕೆ ಬೇಕಾದ ಹುಲ್ಲನ್ನು ನೀವು ಜನರಿಗೆ ಇಲ್ಲಿಯವರೆಗೆ ಕೊಟ್ಟಿದ್ದೀರಿ. ಆದರೆ ಈಗ ಇಟ್ಟಿಗೆಗಳನ್ನು ಮಾಡಲು ಅವರೇ ಹುಲ್ಲನ್ನು ಕಂಡುಕೊಳ್ಳಬೇಕೆಂದು ಅವರಿಗೆ ಹೇಳಿರಿ.


ಪೇತ್ರನು ಅವರನ್ನು ಒಳಗೆ ಕರೆದು, ಆ ರಾತ್ರಿ ಅಲ್ಲೇ ಇರಬೇಕೆಂದು ಕೇಳಿಕೊಂಡನು. ಮರುದಿನ ಪೇತ್ರನು ಸಿದ್ಧನಾಗಿ, ಆ ಮೂವರೊಂದಿಗೆ ಹೊರಟನು. ಜೊಪ್ಪದ ವಿಶ್ವಾಸಿಗಳಲ್ಲಿ ಕೆಲವರು ಅವನೊಂದಿಗೆ ಹೋದರು.


ಆಕೆ ಮತ್ತು ಆಕೆಯ ಮನೆಯಲ್ಲಿ ವಾಸವಾಗಿದ್ದ ಎಲ್ಲಾ ಜನರು ದೀಕ್ಷಾಸ್ನಾನ ಮಾಡಿಸಿಕೊಂಡರು. ಆಕೆಯು, “ನಾನು ಪ್ರಭು ಯೇಸುವಿನಲ್ಲಿ ನಿಜವಾದ ವಿಶ್ವಾಸಿಯೆಂದು ನೀವು ಯೋಚಿಸುವುದಾಗಿದ್ದರೆ, ನನ್ನ ಮನೆಗೆ ಬಂದು ತಂಗಿರಿ” ಎಂದು ಕೇಳಿಕೊಂಡು ನಮ್ಮನ್ನು ಒತ್ತಾಯ ಮಾಡಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು