Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 19:25 - ಪರಿಶುದ್ದ ಬೈಬಲ್‌

25 ಆದರೆ ಆ ನೀಚರು ಆ ವೃದ್ಧನ ಮಾತನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಆಗ ಆ ಲೇವಿಯು ತನ್ನ ಉಪಪತ್ನಿಯನ್ನು ಹೊರಗೆ ಕರೆದುಕೊಂಡು ಹೋಗಿ ಆ ನೀಚರಿಗೆ ಒಪ್ಪಿಸಿದನು. ಆ ನೀಚರು ಅವಳನ್ನು ಪೀಡಿಸಿ ಇಡೀ ರಾತ್ರಿ ಅವಳನ್ನು ಸಂಭೋಗಿಸಿದರು. ಬೆಳಗಿನ ಜಾವ ಅವಳನ್ನು ಹೋಗಲು ಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆದರೆ ಅವರು ಆ ಮುದುಕನಿಗೆ ಕಿವಿಗೊಡದೆ ಹೋದುದರಿಂದ ಆ ಮನುಷ್ಯನು ತನ್ನ ಉಪಪತ್ನಿಯನ್ನು ಹೊರಗೆ ಅವರ ಬಳಿಗೆ ಕಳುಹಿಸಿಬಿಟ್ಟನು. ಅವರು ಆಕೆಯನ್ನು ಕೆಡಿಸಿ, ರಾತ್ರಿಯೆಲ್ಲಾ ಬಹುಕ್ರೂರತನದಿಂದ ವರ್ತಿಸಿ, ಬೆಳಗಾಗುವಾಗ ಆಕೆಯನ್ನು ಬಿಟ್ಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆದರೆ ಅವರು ಆ ಮುದುಕನಿಗೆ ಕಿವಿಗೊಡಲೊಲ್ಲದೆ ಹೋದರು. ಆದುದರಿಂದ ಆ ಲೇವಿಯನು ತನ್ನ ಉಪಪತ್ನಿಯನ್ನು ಹೊರಗೆ ಅವರ ಮಧ್ಯಕ್ಕೆ ಕಳುಹಿಸಿಬಿಟ್ಟನು. ಅವರು ಆಕೆಯನ್ನು ರಾತ್ರಿಯೆಲ್ಲಾ ಬಹುಕ್ರೂರತನದಿಂದ ನಡಿಸಿ, ಕೋಳಿ ಕೂಗುವ ಹೊತ್ತಾಗಲು ಬಿಟ್ಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆದರೆ ಅವರು ಆ ಮುದುಕನಿಗೆ ಕಿವಿಗೊಡಲೊಲ್ಲದೆ ಹೋದದರಿಂದ ಆ ಮನುಷ್ಯನು ತನ್ನ ಉಪಪತ್ನಿಯನ್ನು ಹೊರಗೆ ಅವರ ಮಧ್ಯಕ್ಕೆ ಕಳುಹಿಸಿಬಿಟ್ಟನು. ಅವರು ಆಕೆಯನ್ನು ಕೆಡಿಸಿ ರಾತ್ರಿಯಲ್ಲೆಲ್ಲಾ ಬಹುಕ್ರೂರತನದಿಂದ ನಡಿಸಿ ಕೋಳಿಕೂಗುವ ಹೊತ್ತಾಗಲು ಬಿಟ್ಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆದರೆ ಆ ಮನುಷ್ಯರು ಅವನ ಮಾತನ್ನು ಕೇಳಲೊಲ್ಲದೆ ಹೋದರು. ಆದ್ದರಿಂದ ಆ ಮನುಷ್ಯನು ತನ್ನ ಉಪಪತ್ನಿಯನ್ನು ಹಿಡಿದು ಹೊರಗೆ ಅವರ ಬಳಿಯಲ್ಲಿ ತಂದು ಬಿಟ್ಟನು. ಅವರು ಅವಳನ್ನು ತೆಗೆದುಕೊಂಡು ಉದಯಕಾಲದ ಪರ್ಯಂತರ ರಾತ್ರಿಯೆಲ್ಲಾ ಕೆಡಿಸಿ, ಉದಯವಾಗುವಾಗ ಅವಳನ್ನು ಬಿಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 19:25
9 ತಿಳಿವುಗಳ ಹೋಲಿಕೆ  

ಅವರಿಗೆ ನಾಚಿಕೆಯೇ ಇಲ್ಲ. ಅವರು ತಮ್ಮ ಜೀವಿತಗಳನ್ನು ದುಷ್ಕೃತ್ಯಗಳಿಗೆ ಉಪಯೋಗಿಸುತ್ತಾರೆ; ಎಲ್ಲಾ ಬಗೆಯ ಕೆಟ್ಟಕಾರ್ಯಗಳನ್ನು ಇನ್ನೂ ಹೆಚ್ಚೆಚ್ಚಾಗಿ ಮಾಡಲು ತವಕಪಡುತ್ತಾರೆ.


“ಇಸ್ರೇಲೇ, ನೀನು ಗಿಬ್ಯದವರ ಕಾಲದಿಂದಲೂ ಪಾಪ ಮಾಡುತ್ತಲೇ ಬಂದಿರುವೆ. (ಆ ಜನರು ಅಲ್ಲಿ ಪಾಪವನ್ನು ಮಾಡುತ್ತಲೇ ಇದ್ದಾರೆ.) ಗಿಬ್ಯದ ಆ ದುಷ್ಟ ಜನರನ್ನು ಯುದ್ಧವು ಹಿಡಿದುಕೊಳ್ಳುವುದು.


ಗಿಬ್ಯದ ಕಾಲದಂತೆ ಇಸ್ರೇಲರು ನಾಶನದ ಕಡೆಗೆ ಆಳವಾಗಿ ಇಳಿದಿದ್ದಾರೆ. ಯೆಹೋವನು ಇಸ್ರೇಲರ ಪಾಪಗಳನ್ನು ತನ್ನ ನೆನಪಿಗೆ ತಂದುಕೊಂಡು ಅವರನ್ನು ಶಿಕ್ಷಿಸುವನು.


ಆದಾಮ ಮತ್ತು ಹವ್ವಳು ಕೂಡಿದರು. ಆದ್ದರಿಂದ ಹವ್ವಳಿಗೆ ಒಂದು ಮಗು ಜನಿಸಿತು. ಹವ್ವಳು, “ಯೆಹೋವನ ಸಹಾಯದಿಂದ ಗಂಡುಮಗುವನ್ನು ಪಡೆದಿದ್ದೇನೆ” ಎಂದು ಹೇಳಿ ಆ ಮಗುವಿಗೆ ಕಾಯಿನ ಎಂದು ಹೆಸರಿಟ್ಟಳು.


ಇಲ್ಲಿ ನೋಡಿರಿ, ನನ್ನ ಮಗಳಿದ್ದಾಳೆ. ಅವಳು ಯಾರೊಂದಿಗೂ ಈವರೆಗೆ ಸಂಭೋಗ ಮಾಡಿಲ್ಲ. ನಾನು ಅವಳನ್ನೂ ಅವನ ಉಪಪತ್ನಿಯನ್ನೂ ಹೊರಗೆ ಕರೆದುಕೊಂಡು ಬರುತ್ತೇನೆ. ನಿಮ್ಮ ಮನಸ್ಸಿಗೆ ಬಂದಂತೆ ಅವರನ್ನು ಬಳಸಿಕೊಳ್ಳಿ. ನೀವು ಅವರನ್ನು ಹಿಂಸಿಸಿದರೂ ಆ ಮನುಷ್ಯನ ವಿರೋಧವಾಗಿ ಅಂಥ ಭಯಂಕರ ಪಾಪವನ್ನು ಮಾಡಬೇಡಿ” ಎಂದು ಅವರನ್ನು ಬೇಡಿಕೊಂಡನು.


ಬೆಳಗಿನ ಜಾವ ಅವಳು ತನ್ನ ಒಡೆಯನಿದ್ದ ಮನೆಗೆ ಬಂದಳು. ಅವಳು ಮನೆಯ ಮುಖ್ಯದ್ವಾರದಲ್ಲಿ ಬಿದ್ದುಬಿಟ್ಟಳು. ಬೆಳಗಾಗುವವರೆಗೂ ಅವಳು ಅಲ್ಲಿಯೇ ಬಿದ್ದಿದ್ದಳು.


ಆದರೆ ರಾತ್ರಿ ಸಮಯದಲ್ಲಿ ಗಿಬೆಯ ನಗರದ ಮುಖಂಡರು ಬಂದು ನಾವು ಇಳಿದುಕೊಂಡ ಮನೆಗೆ ಮುತ್ತಿಗೆ ಹಾಕಿದರು. ಅವರು ನನ್ನನ್ನು ಕೊಲ್ಲಬೇಕೆಂದಿದ್ದರು. ಅವರು ನನ್ನ ಉಪಪತ್ನಿಯ ಮೇಲೆ ಬಲಾತ್ಕಾರ ಮಾಡಿದರು; ಆಗ ಅವಳು ಸತ್ತುಹೋದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು