Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 19:5 - ಪರಿಶುದ್ದ ಬೈಬಲ್‌

5 ನಾಲ್ಕನೆಯ ದಿನ ಅವರು ಬೆಳಗಿನ ಜಾವ ಬೇಗ ಎದ್ದರು. ಆ ಲೇವಿಯು ಹೊರಡುವದಕ್ಕೆ ಸಿದ್ಧನಾಗುತ್ತಿದ್ದನು. ಆದರೆ ಮಾವನು ತನ್ನ ಅಳಿಯನಿಗೆ, “ಸ್ವಲ್ಪ ಊಟಮಾಡು; ಆಮೇಲೆ ಹೋಗುವಿಯಂತೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವರು ನಾಲ್ಕನೆಯ ದಿನ ಬೆಳಿಗ್ಗೆ ಎದ್ದು ಹೋಗುವುದಕ್ಕೆ ಸಿದ್ಧರಾಗಲು ಆ ಸ್ತ್ರೀಯ ತಂದೆಯು ತನ್ನ ಅಳಿಯನಿಗೆ, “ಮೊದಲು ಸ್ವಲ್ಪ ಊಟಮಾಡಿ ಬಲಹೊಂದು; ಆಮೇಲೆ ಹೋಗಬಹುದು” ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅವರು ನಾಲ್ಕನೆಯ ದಿನ ಬೆಳಿಗ್ಗೆ ಎದ್ದು ಹೋಗುವುದಕ್ಕೆ ಸಿದ್ಧರಾದರು. ಆ ಸ್ತ್ರೀಯ ತಂದೆ ಅಳಿಯನಿಗೆ, “ಮೊದಲು ಸ್ವಲ್ಪ ಊಟಮಾಡಿ ಚೇತರಿಸಿಕೊ, ಆಮೇಲೆ ಹೋಗಬಹುದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವರು ನಾಲ್ಕನೆಯ ದಿನ ಬೆಳಿಗ್ಗೆ ಎದ್ದು ಹೋಗುವದಕ್ಕೆ ಸಿದ್ಧರಾಗಲು ಆ ಸ್ತ್ರೀಯ ತಂದೆಯು ತನ್ನ ಅಳಿಯನಿಗೆ - ಮೊದಲು ಸ್ವಲ್ಪ ಊಟಮಾಡಿ ಬಲಹೊಂದು; ಆಮೇಲೆ ಹೋಗಬಹುದು ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಾಲ್ಕನೆಯ ದಿನ ಅವರು ಬೇಗನೆ ಎದ್ದು, ಹೊರಡಲಿಕ್ಕೆ ಸಿದ್ಧರಾದರು. ಆದರೆ ಆ ಸ್ತ್ರೀಯ ತಂದೆಯು ತನ್ನ ಅಳಿಯನಿಗೆ, “ಸ್ವಲ್ಪ ಊಟಮಾಡಿ ಚೇತರಿಸಿಕೋ, ಆಮೇಲೆ ನೀವು ಹೋಗಬಹುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 19:5
9 ತಿಳಿವುಗಳ ಹೋಲಿಕೆ  

ಐದನೆಯ ದಿನ ಆ ಲೇವಿಯು ಬೆಳಗಿನ ಜಾವ ಬೇಗ ಎದ್ದು ಹೊರಡಲು ಸಿದ್ಧನಾಗಿದ್ದನು. ಆದರೆ ಆ ಸ್ತ್ರೀಯ ತಂದೆಯು ತನ್ನ ಅಳಿಯನಿಗೆ, “ಮೊದಲು ಊಟಮಾಡು; ವಿಶ್ರಾಂತಿ ತೆಗೆದುಕೋ. ಈ ರಾತ್ರಿ ಇಲ್ಲಿಯೇ ಇರು” ಎಂದು ಕೇಳಿಕೊಂಡನು. ಅವರಿಬ್ಬರು ಮತ್ತೆ ಊಟ ಮಾಡಿದರು.


ನಾನು ನಿಮಗೆ ಊಟವನ್ನು ತಂದುಕೊಡುವೆನು. ನೀವು ಬೇಕಾದಷ್ಟು ಊಟ ಮಾಡಿದ ನಂತರ ನಿಮ್ಮ ಪ್ರಯಾಣವನ್ನು ಮುಂದುವರಿಸಬಹುದು” ಎಂದು ಹೇಳಿದನು. ಆ ಮೂವರು ಪುರುಷರು, “ಸರಿ, ನೀನು ಹೇಳಿದಂತೆಯೇ ಮಾಡು” ಅಂದರು.


ಬಳಿಕ ಅವನು ಊಟಮಾಡಿ ಚೇತರಿಸಿಕೊಂಡನು. ಸೌಲನು ದಮಸ್ಕದಲ್ಲಿ ಯೇಸುವಿನ ಶಿಷ್ಯರೊಂದಿಗೆ ಕೆಲವು ದಿನಗಳವರೆಗೆ ಇದ್ದನು.


ಯೇಸು, “ನನ್ನನ್ನು ಕಳುಹಿಸಿದಾತನು (ದೇವರು) ನಾನು ಏನು ಮಾಡಬೇಕೆಂದು ಬಯಸುವನೋ ಅದನ್ನು ಮಾಡುವುದೇ ನನಗೆ ಆಹಾರವಾಗಿದೆ. ಆತನು ನನಗೆ ಕೊಟ್ಟಿರುವ ಕೆಲಸವನ್ನು ಪೂರೈಸುವುದೇ ನನಗೆ ಆಹಾರವಾಗಿದೆ.


ನಮ್ಮನ್ನು ಸಂತೋಷಪಡಿಸುವ ದ್ರಾಕ್ಷಾರಸವನ್ನೂ ನಮ್ಮ ಚರ್ಮವನ್ನು ಮೃದುಗೊಳಿಸುವ ಎಣ್ಣೆಯನ್ನೂ ನಮ್ಮನ್ನು ಬಲಗೊಳಿಸುವ ಆಹಾರವನ್ನೂ ನಮಗೆ ದೇವರು ಕೊಡುತ್ತಾನೆ.


ಆಗ ರಾಜನು ದೇವಮನುಷ್ಯನಿಗೆ, “ದಯವಿಟ್ಟು ನನ್ನೊಡನೆ ಮನೆಗೆ ಬಾ. ನನ್ನೊಡನೆ ಊಟಮಾಡು. ನಾನು ನಿನಗೆ ಒಂದು ಕಾಣಿಕೆಯನ್ನು ಕೊಡುತ್ತೇನೆ” ಎಂದು ಹೇಳಿದನು.


ಅವರು ಈಜಿಪ್ಟಿನವನಿಗೆ ಅಂಜೂರದ ಹಣ್ಣಿನ ಉಂಡೆಯನ್ನೂ ಎರಡು ಗೊಂಚಲು ಒಣ ದ್ರಾಕ್ಷಿಯನ್ನೂ ಕೊಟ್ಟರು. ಅವನು ತಿಂದನಂತರ ಚೇತರಿಸಿಕೊಂಡನು. ಅವನು ಮೂರು ದಿವಸ ಹಗಲಿರುಳು ಆಹಾರವನ್ನೇನೂ ತಿಂದಿರಲಿಲ್ಲ; ನೀರನ್ನೂ ಕುಡಿದಿರಲಿಲ್ಲ.


ಅವಳ ತಂದೆಯು ಆ ಲೇವಿಯನನ್ನು ತನ್ನ ಮನೆಯೊಳಗೆ ಕರೆದುಕೊಂಡು ಹೋಗಿ, ಅಲ್ಲೇ ಇರುವಂತೆ ಕೇಳಿಕೊಂಡನು. ಆದ್ದರಿಂದ ಆ ಲೇವಿಯು ಅಲ್ಲಿ ಮೂರು ದಿನ ಇದ್ದನು. ಅವನು ಅನ್ನಪಾನಮಾಡಿ ಮಾವನ ಮನೆಯಲ್ಲಿ ಮಲಗುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು