Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 19:9 - ಪರಿಶುದ್ದ ಬೈಬಲ್‌

9 ಆಮೇಲೆ ಆ ಲೇವಿಯೂ ಅವನ ಉಪಪತ್ನಿಯೂ ಅವನ ಆಳೂ ಹೊರಡಲು ಎದ್ದರು. ಆದರೆ ಆ ಸ್ತ್ರೀಯ ತಂದೆಯು, “ಈಗ ಕತ್ತಲಾಗುತ್ತಾ ಬಂತು, ಹೊತ್ತು ಮುಳುಗುವುದರಲ್ಲಿದೆ. ಈ ರಾತ್ರಿ ಇಲ್ಲಿಯೇ ಸಂತೋಷದಿಂದ ಕಾಲ ಕಳೆಯಿರಿ. ನಾಳೆ ಬೆಳಿಗ್ಗೆ ನೀವು ಬೇಗನೆ ಎದ್ದು ಪ್ರಯಾಣಮಾಡಬಹುದು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅನಂತರ ಅವನೂ, ಅವನ ಉಪಪತ್ನಿಯೂ, ಸೇವಕನೂ ಹೋಗುವುದಕ್ಕೆ ಸಿದ್ಧರಾಗಲು ಆ ಸ್ತ್ರೀಯ ತಂದೆಯು ತನ್ನ ಅಳಿಯನಿಗೆ, “ಹೊತ್ತು ಹೋಯಿತು; ಸಾಯಂಕಾಲವಾಗುತ್ತಿದೆ, ದಯವಿಟ್ಟು ಈ ಹೊತ್ತಿನ ರಾತ್ರಿ ಇಲ್ಲೇ ಇರು; ನೋಡು, ಈ ರಾತ್ರಿ ಇಲ್ಲಿದ್ದು ನಮ್ಮೊಡನೆ ಸಂತೋಷಪಡು; ನಾಳೆ ಬೆಳಿಗ್ಗೆ ಎದ್ದು ನಿನ್ನ ಮನೆಗೆ ಹೋಗಬಹುದು” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅನಂತರ ಅವನು, ಅವನ ಉಪಪತ್ನಿ ಹಾಗು ಸೇವಕನು ಹೋಗುವುದಕ್ಕ ಸಿದ್ಧರಾಗಲು ಆ ಸ್ತ್ರೀಯ ತಂದೆ ಅಳಿಯನಿಗೆ, “ಹೊತ್ತುಮೀರಿತು; ಸಂಜೆ ಆಯಿತು. ದಯವಿಟ್ಟು ಈ ದಿನ ರಾತ್ರಿ ಇಲ್ಲೇ ಇರು; ನೋಡು, ಸಂಜೆಯಾಗಿಹೋಯಿತು. ಈ ರಾತ್ರಿ ಇಲ್ಲಿದ್ದು ನಮ್ಮೊಡನೆ ಸಂತೋಷಪಡು; ನಾಳೆ ಬೆಳಿಗ್ಗೆ ಎದ್ದು ನಿನ್ನ ಮನೆಗೆ ಹೋಗಬಹುದು,” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅನಂತರ ಅವನೂ ಅವನ ಉಪಪತ್ನಿಯೂ ಸೇವಕನೂ ಹೋಗುವದಕ್ಕೆ ಸಿದ್ಧರಾಗಲು ಆ ಸ್ತ್ರೀಯ ತಂದೆಯು ತನ್ನ ಅಳಿಯನಿಗೆ - ಹೊತ್ತು ಹೋಯಿತು; ಸಂಜೆಯಾಯಿತು. ದಯವಿಟ್ಟು ಈ ಹೊತ್ತಿನ ರಾತ್ರಿ ಇಲ್ಲೇ ಇರು; ನೋಡು, ಸಾಯಂಕಾಲವಾಯಿತು. ಈ ರಾತ್ರಿ ಇಲ್ಲಿದ್ದು ನಮ್ಮೊಡನೆ ಸಂತೋಷಪಡು; ನಾಳೆ ಬೆಳಿಗ್ಗೆ ಎದ್ದು ನಿನ್ನ ಮನೆಗೆ ಹೋಗಬಹುದು ಎಂದು ಬೇಡಿಕೊಂಡರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವನೂ, ಅವನ ಉಪಪತ್ನಿಯೂ ಅವನ ಸೇವಕನೂ ಹೋಗುವುದಕ್ಕೆ ಎದ್ದಾಗ, ಅವನ ಮಾವನು ಅವನಿಗೆ, “ಇಗೋ, ಹೊತ್ತು ಹೋಗಿ ಸಂಜೆ ಆಯಿತು. ಈ ರಾತ್ರಿ ನೀನು ದಯಮಾಡಿ ಇಲ್ಲೇ ಇರು; ಹೊತ್ತು ಮುಣುಗುತ್ತಾ ಬಂತು. ನೀನು ಈ ರಾತ್ರಿ ಇಲ್ಲಿದ್ದು, ನಿನ್ನ ಗುಡಾರಕ್ಕೆ ನಾಳೆ ಬೆಳಿಗ್ಗೆ ಎದ್ದು, ನಿಮ್ಮ ಮಾರ್ಗ ಹಿಡಿದು ಹೋಗಬಹುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 19:9
8 ತಿಳಿವುಗಳ ಹೋಲಿಕೆ  

ಆದರೆ ಅವರು ಆತನಿಗೆ, “ಈಗ ಹೊತ್ತಾಯಿತು, ರಾತ್ರಿಯಾಗುತ್ತಾ ಬಂದಿದೆ. ನಮ್ಮೊಂದಿಗೆ ಇರು” ಎಂದು ಬೇಡಿಕೊಂಡರು. ಆದ್ದರಿಂದ ಆತನು ಅವರೊಂದಿಗಿರಲು ಊರೊಳಗೆ ಹೋದನು.


ಭವಿಷ್ಯತ್ತಿನ ಕುರಿತು ಜಂಬಪಡಬೇಡ. ನಾಳೆ ಏನಾಗುವುದೋ ನಿನಗೆ ತಿಳಿಯದು.


ಆದ್ದರಿಂದ ಆ ಲೇವಿಯು ಮತ್ತು ಅವನ ಮಾವನು ಒಟ್ಟಿಗೆ ಅನ್ನಪಾನಗಳನ್ನು ತೆಗೆದುಕೊಂಡರು. ಬಳಿಕ ಆ ಸ್ತ್ರೀಯ ತಂದೆಯು, “ದಯವಿಟ್ಟು ಈ ರಾತ್ರಿ ಇದ್ದುಬಿಡು. ವಿಶ್ರಮಿಸಿಕೋ, ಸಂತೋಷಪಡು” ಎಂದನು.


ಐದನೆಯ ದಿನ ಆ ಲೇವಿಯು ಬೆಳಗಿನ ಜಾವ ಬೇಗ ಎದ್ದು ಹೊರಡಲು ಸಿದ್ಧನಾಗಿದ್ದನು. ಆದರೆ ಆ ಸ್ತ್ರೀಯ ತಂದೆಯು ತನ್ನ ಅಳಿಯನಿಗೆ, “ಮೊದಲು ಊಟಮಾಡು; ವಿಶ್ರಾಂತಿ ತೆಗೆದುಕೋ. ಈ ರಾತ್ರಿ ಇಲ್ಲಿಯೇ ಇರು” ಎಂದು ಕೇಳಿಕೊಂಡನು. ಅವರಿಬ್ಬರು ಮತ್ತೆ ಊಟ ಮಾಡಿದರು.


ಆದರೆ ಆ ಲೇವಿಯು ಇನ್ನೊಂದು ರಾತ್ರಿ ಅಲ್ಲಿ ಇರಲು ಇಷ್ಟಪಡಲಿಲ್ಲ. ಅವನು ತನ್ನ ಎರಡು ಕತ್ತೆಗಳನ್ನು ತೆಗೆದುಕೊಂಡು ಮತ್ತು ತನ್ನ ಉಪಪತ್ನಿಯನ್ನು ಕರೆದುಕೊಂಡು ಹೊರಟನು. ಅವನು ಜೆರುಸಲೇಮ್ ಎಂದು ಕರೆಯಲ್ಪಡುವ ಯೆಬೂಸ್ ನಗರದವರೆಗೆ ಪ್ರಯಾಣ ಮಾಡಿದನು.


ಅನ್ನಪಾನಗಳನ್ನು ತೆಗೆದುಕೊಂಡು ಸಂತೃಪ್ತನಾಗಿದ್ದ ಬೋವಜನು ಧಾನ್ಯದ ರಾಶಿಯ ಹತ್ತಿರ ಮಲಗಲು ಹೋದನು. ಆಗ ರೂತಳು ರಹಸ್ಯವಾಗಿ ಬಂದು ಅವನ ಪಾದಗಳ ಮೇಲಿನ ಹೊದಿಕೆಯನ್ನು ತೆಗೆದು ಅವನ ಪಾದಗಳ ಬಳಿಯಲ್ಲಿಯೇ ಮಲಗಿದಳು.


ಆಗ ಅಬ್ಷಾಲೋಮನು ತನ್ನ ಸೇವಕರಿಗೆ ಈ ರೀತಿ ಆಜ್ಞೆ ಮಾಡಿದನು: “ಅಮ್ನೋನನನ್ನು ಗಮನಿಸುತ್ತಿರಿ. ಅವನು ಮತ್ತನಾಗಿ ಆನಂದಿಸುತ್ತಿರುವಾಗ ನಾನು ಆಜ್ಞೆಯನ್ನು ಕೊಡುತ್ತೇನೆ. ಆಗ ನೀವು ಅವನ ಮೇಲೆ ಆಕ್ರಮಣಮಾಡಿ ಕೊಲ್ಲಬೇಕು. ನಿಮಗೆ ಶಿಕ್ಷೆಯಾಗುತ್ತದೆ ಎಂಬ ಭಯವಿಲ್ಲದಿರಲಿ, ಯಾಕೆಂದರೆ ನೀವು ನನ್ನ ಆಜ್ಞೆಯನ್ನು ಪಾಲಿಸಿದಿರಷ್ಟೇ, ಆದ್ದರಿಂದ ಶಕ್ತರಾಗಿಯೂ ಧೈರ್ಯವಂತರಾಗಿಯೂ ಇರಿ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು