Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 2:10 - ಪರಿಶುದ್ದ ಬೈಬಲ್‌

10 ಈ ಪೀಳಿಗೆಯವರೆಲ್ಲರು ಸತ್ತುಹೋದ ಮೇಲೆ ಮುಂದಿನ ಪೀಳಿಗೆಯು ಬೆಳೆಯಿತು. ಈ ಹೊಸ ಪೀಳಿಗೆಗೆ ಯೆಹೋವನ ಬಗ್ಗೆ ಮತ್ತು ಯೆಹೋವನು ಇಸ್ರೇಲಿನ ಜನರಿಗಾಗಿ ಮಾಡಿದ ಮಹತ್ಕಾರ್ಯಗಳ ಬಗ್ಗೆ ಏನೂ ಗೊತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವನ ಕಾಲದವರೆಲ್ಲರೂ ಪೂರ್ವಿಕರ ಬಳಿಗೆ ಸೇರಿದರು. ಆನಂತರ ಯೆಹೋವನನ್ನೂ, ಆತನು ಇಸ್ರಾಯೇಲರಿಗೋಸ್ಕರ ಮಾಡಿದ ಮಹತ್ಕಾರ್ಯಗಳನ್ನೂ ಅರಿಯದಿದ್ದ ಬೇರೊಂದು ಸಂತಾನವು ಹುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅವನ ಕಾಲದವರೆಲ್ಲರೂ ತಮ್ಮ ಪೂರ್ವಜರಂತೆ ದೈವಾಧೀನರಾದ ಮೇಲೆ ಬೇರೊಂದು ಸಂತಾನ ಹುಟ್ಟಿಕೊಂಡಿತು. ಇವರು ಸರ್ವೇಶ್ವರಸ್ವಾಮಿಯನ್ನು ಮರೆತರು; ಇಸ್ರಯೇಲರಿಗೆ ಮಾಡಿದ ಮಹತ್ಕಾರ್ಯಗಳ ನೆನಪು ಇವರಿಗೆ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವನ ಕಾಲದವರೆಲ್ಲರೂ ಪಿತೃಗಳ ಬಳಿಗೆ ಸೇರಿದ ಮೇಲೆ ಯೆಹೋವನನ್ನೂ ಆತನು ಇಸ್ರಾಯೇಲ್ಯರಿಗೋಸ್ಕರ ಮಾಡಿದ ಮಹತ್ಕಾರ್ಯಗಳನ್ನೂ ಅರಿಯದಿದ್ದ ಬೇರೊಂದು ಸಂತಾನವು ಹುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವನ ಕಾಲದವರೆಲ್ಲರೂ ಪಿತೃಗಳ ಬಳಿಗೆ ಸೇರಿದ ಮೇಲೆ, ಯೆಹೋವ ದೇವರನ್ನೂ ಅವರು ಇಸ್ರಾಯೇಲರಿಗೋಸ್ಕರ ಮಾಡಿದ ಮಹತ್ಕಾರ್ಯಗಳನ್ನೂ ಅರಿಯದಿದ್ದ ಬೇರೊಂದು ಸಂತಾನವು ಹುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 2:10
26 ತಿಳಿವುಗಳ ಹೋಲಿಕೆ  

ಏಲಿಯ ಮಕ್ಕಳು ದುಷ್ಟರಾಗಿದ್ದರು. ಅವರು ಯೆಹೋವನನ್ನು ಲಕ್ಷಿಸುತ್ತಿರಲಿಲ್ಲ.


ಆದರೆ ಫರೋಹನು, “ಯೆಹೋವನು ಯಾರು? ನಾನು ಆತನಿಗೆ ಯಾಕೆ ವಿಧೇಯನಾಗಬೇಕು. ಇಸ್ರೇಲರನ್ನು ನಾನು ಯಾಕೆ ಹೋಗಗೊಡಿಸಬೇಕು. ನೀವು ಯೆಹೋವನೆಂದು ಕರೆಯುವ ಆತನನ್ನು ನಾನು ಅರಿಯೆನು, ಆದ್ದರಿಂದ ಇಸ್ರೇಲರನ್ನು ಹೋಗಗೊಡಿಸುವುದಿಲ್ಲ” ಅಂದನು.


ದೇವರ ಬಗ್ಗೆ ತಮಗೆ ತಿಳಿದಿದೆಯೆಂದು ಅವರು ಹೇಳಿದರೂ ಅವರು ದೇವರನ್ನು ತಿಳಿದಿಲ್ಲವೆಂದು ಅವರ ಕೆಟ್ಟಕಾರ್ಯಗಳೇ ಸ್ಪಷ್ಟಪಡಿಸುತ್ತವೆ. ಅವರು ಭಯಂಕರವಾದ ಜನರು ಮತ್ತು ಅವಿಧೇಯರು. ಯಾವ ಸತ್ಕಾರ್ಯಗಳನ್ನು ಮಾಡುವುದಕ್ಕೂ ಅವರು ಯೋಗ್ಯರಲ್ಲ.


“ದಾವೀದನು ತನ್ನ ಜೀವಮಾನಕಾಲದಲ್ಲಿ ದೇವರ ಚಿತ್ತಕ್ಕನುಸಾರವಾಗಿ ಬಾಳಿದನು. ಬಳಿಕ ಅವನು ಸತ್ತುಹೋದನು. ದಾವೀದನನ್ನು ಅವನ ಪಿತೃಗಳೊಂದಿಗೆ ಸಮಾಧಿಮಾಡಲಾಯಿತು. ಅವನ ದೇಹ ಸಮಾಧಿಯಲ್ಲಿ ಕೊಳೆತುಹೋಯಿತು!


ತಮ್ಮ ನೆರೆಮನೆಯವರಿಗೂ ತಮ್ಮ ಬಂಧುಬಳಗದವರಿಗೂ ಯಾರೂ ಯೆಹೋವನ ಬಗ್ಗೆ ಹೇಳಿಕೊಡಬೇಕಾಗಿಲ್ಲ. ಯಾಕೆಂದರೆ ಅತಿ ಕನಿಷ್ಠರಿಂದ ಅತಿ ಪ್ರಮುಖರವರೆಗೆ ಎಲ್ಲರೂ ನನ್ನನ್ನು ತಿಳಿದುಕೊಂಡಿರುವರು. ಅವರು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ಅವರನ್ನು ಕ್ಷಮಿಸುವೆನು. ನಾನು ಅವರ ಪಾಪಗಳನ್ನು ಮರೆತುಬಿಡುವೆನು.” ಇದು ಯೆಹೋವನ ನುಡಿ.


ನೀವು ಕುಡಿಯುತ್ತಾ ಹಾರ್ಪ್‌ವಾದ್ಯಗಳನ್ನೂ ದಮ್ಮಡಿಗಳನ್ನೂ ಕೊಳಲುಗಳನ್ನೂ ಬಾರಿಸುತ್ತಾ ನೃತ್ಯಮಾಡುವಿರಿ. ಆದರೆ ಯೆಹೋವನು ಮಾಡಿದ ಕಾರ್ಯಗಳನ್ನು ನೀವು ಗಮನಿಸುವುದಿಲ್ಲ. ಯೆಹೋವನ ಹಸ್ತವು ಅನೇಕಾನೇಕ ಕಾರ್ಯಗಳನ್ನು ಮಾಡಿದೆ. ಆದರೆ ನೀವು ಅವುಗಳನ್ನು ಲಕ್ಷಿಸುವುದಿಲ್ಲ. ಆದ್ದರಿಂದ ನಿಮಗೆ ಕೇಡಾಗುವುದು.


“ನನ್ನ ಮಗನಾದ ಸೊಲೊಮೋನನೇ, ನಿನ್ನ ತಂದೆಯ ದೇವರನ್ನು ನೀನು ಚೆನ್ನಾಗಿ ಅರಿತುಕೋ. ನೀನು ಪೂರ್ಣಹೃದಯದಿಂದಲೂ ಪೂರ್ಣಮನಸ್ಸಿನಿಂದಲೂ ನಿನ್ನ ದೇವರನ್ನು ಸೇವಿಸು. ದೇವರು ಪ್ರತಿಯೊಬ್ಬನ ಹೃದಯ ಮನಸ್ಸುಗಳನ್ನು ನೋಡುತ್ತಾನೆ. ನೀನು ದೇವರ ಸಹಾಯವನ್ನು ಕೇಳಿದರೆ ಆತನು ನಿನ್ನ ಪ್ರಾರ್ಥನೆಯನ್ನು ಲಾಲಿಸುವನು. ಆದರೆ ನೀನು ದೇವರನ್ನು ಬಿಟ್ಟರೆ ಆತನು ನಿನ್ನನ್ನು ಬಿಟ್ಟುಹೋಗುವನು.


“‘ನಿನ್ನ ದಿನಗಳು ಮುಗಿದುಹೋಗುತ್ತವೆ; ನೀನು ನಿನ್ನ ಪೂರ್ವಿಕರ ಜೊತೆಯಲ್ಲಿ ಸೇರುತ್ತಿ. ಆ ಸಮಯದಲ್ಲಿ, ನಿನ್ನ ಮಕ್ಕಳಲ್ಲಿ ಒಬ್ಬನನ್ನು ರಾಜನನ್ನಾಗಿ ಮಾಡಿ ಅವನ ರಾಜ್ಯವನ್ನು ಭದ್ರಗೊಳಿಸುತ್ತೇನೆ.


ಪ್ರಭು ಯೇಸು ಪರಲೋಕದಿಂದ ಬೆಂಕಿಯ ಜ್ವಾಲೆಗಳೊಡನೆ ಪ್ರತ್ಯಕ್ಷನಾದಾಗ ದೇವರನ್ನು ತಿಳಿದಿಲ್ಲದವರಿಗೂ ಸುವಾರ್ತೆಗೆ ವಿಧೇಯರಾಗಿಲ್ಲದವರಿಗೂ ದಂಡನೆಯನ್ನು ಬರಮಾಡುತ್ತಾನೆ.


ಯೋಷೀಯನು ದೀನದರಿದ್ರರಿಗೆ ಸಹಾಯ ಮಾಡುತ್ತಿದ್ದನು. ಯೋಷೀಯನು ಹಾಗೆ ಮಾಡಿದ್ದರಿಂದ ಎಲ್ಲವೂ ಸರಿಹೋಯಿತು. ಯೆಹೋಯಾಕೀಮನೇ, ‘ದೇವರನ್ನು ಅರಿತುಕೊಳ್ಳುವುದು ಎಂದರೇನು?’ ನ್ಯಾಯ ಮತ್ತು ನೀತಿಯಿಂದ ನಡೆದುಕೊಳ್ಳುವುದು, ನನ್ನನ್ನು ಅರಿತುಕೊಳ್ಳಲು ಬೇಕಾದದ್ದು ಅದೇ. ಇದು ಯೆಹೋವನಿಂದ ಬಂದ ಸಂದೇಶ:


“ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಉಪಯೋಗಿಸುತ್ತಿದ್ದಾರೆ. ಅವರ ಬಾಯಿಂದ ಬಾಣಗಳಂತೆ ಸುಳ್ಳುಗಳು ಬರುತ್ತಿವೆ. ಈ ನಾಡಿನಲ್ಲಿ ಸತ್ಯವಲ್ಲ, ‘ಅಸತ್ಯ’ ಪ್ರಬಲವಾಗುತ್ತಿದೆ. ಅವರು ಒಂದು ಪಾಪದಿಂದ ಮತ್ತೊಂದು ಪಾಪಕ್ಕೆ ಹೋಗುತ್ತಿದ್ದಾರೆ. ಅವರು ನನ್ನನ್ನು ಅರಿತಿಲ್ಲ.” ಯೆಹೋವನು ಈ ಮಾತನ್ನು ಹೇಳಿದನು.


ಆದರೆ ದುಷ್ಟರು ದೇವರಿಗೆ, ‘ನಮ್ಮನ್ನು ನಮ್ಮಷ್ಟಕ್ಕೇ ಬಿಟ್ಟುಕೊಡು! ನಿನ್ನ ಮಾರ್ಗದ ತಿಳುವಳಿಕೆಯೇ ನಮಗೆ ಬೇಡ’ ಎನ್ನುವರು.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ನೀನು ಬೇಗನೇ ಸಾಯುವೆ. ನಿನ್ನ ಪೂರ್ವಿಕರ ಬಳಿಗೆ ನೀನು ಸೇರಿದಾಗ ಈ ಜನರು ನನಗೆ ನಂಬಿಗಸ್ತರಾಗಿರುವುದಿಲ್ಲ. ನಾನು ಅವರೊಡನೆ ಮಾಡಿರುವ ಒಡಂಬಡಿಕೆಯನ್ನು ಅವರು ಮುರಿಯುವರು. ಅವರು ನನ್ನನ್ನು ತೊರೆದು ತಾವು ಸ್ವಾಧೀನಮಾಡಿಕೊಳ್ಳುವ ದೇಶದ ಅನ್ಯದೇವತೆಗಳನ್ನು ಪೂಜಿಸುವರು.


ಆ ದೇಶವನ್ನು ನೋಡಿದ ನಂತರ ನಿನ್ನ ಅಣ್ಣನಾದ ಆರೋನನಂತೆ ನೀನೂ ಸಾಯುವೆ.


ಯಾಕೋಬನು ತನ್ನ ಗಂಡುಮಕ್ಕಳೊಂದಿಗೆ ಮಾತನಾಡಿದ ಮೇಲೆ ತನ್ನ ಹಾಸಿಗೆಯ ಮೇಲೆ ಕಾಲುಗಳನ್ನು ಮುದುರಿಕೊಂಡು ಪ್ರಾಣಬಿಟ್ಟನು.


ಅವನು ಪೂರ್ಣಾಯುಷ್ಯದಿಂದ ದಿನತುಂಬಿದ ವೃದ್ಧನಾಗಿ ಪ್ರಾಣಬಿಟ್ಟು ತನ್ನ ಪಿತೃಗಳ ಬಳಿಗೆ ಸೇರಿದನು.


“ನೀನು ತುಂಬಾ ಮುದುಕನಾಗುವ ತನಕ ಜೀವಿಸಿ ಸಮಾಧಾನದಿಂದ ಸಾಯುವೆ; ನಿನ್ನನ್ನು ನಿನ್ನ ಕುಟುಂಬದವರೊಡನೆ ಸಮಾಧಿ ಮಾಡುವರು.


ಇಷ್ಮಾಯೇಲನು ನೂರ ಮೂವತ್ತೇಳು ವರ್ಷ ಬದುಕಿದನು. ಅವನು ಸತ್ತ ನಂತರ ಅವನನ್ನು ತನ್ನ ಪೂರ್ವಜರ ಸಮಾಧಿಯಲ್ಲಿ ಹೂಣಿಟ್ಟರು.


ಬಳಿಕ ಯೋಸೇಫನೂ ಅವನ ಸಹೋದರರೂ ಮತ್ತು ಆ ತಲೆಮಾರಿನ ಜನರೆಲ್ಲರೂ ಸತ್ತುಹೋದರು.


ಬಳಿಕ ಒಬ್ಬ ಹೊಸ ರಾಜನು ಈಜಿಪ್ಟನ್ನು ಆಳತೊಡಗಿದನು. ಈ ರಾಜನಿಗೆ ಯೋಸೇಫನ ವಿಷಯವಾಗಿ ತಿಳಿದಿರಲಿಲ್ಲ.


ಯೆಹೋಶುವನು ಜೀವಿಸಿದಾಗ ಇಸ್ರೇಲರು ಯೆಹೋವನ ಸೇವೆಮಾಡಿದರು; ಯೆಹೋಶುವನ ಮರಣಾನಂತರವೂ ಅವರು ಯೆಹೋವನ ಸೇವೆಯನ್ನು ಮುಂದುವರೆಸಿದರು. ಯೆಹೋವನು ಇಸ್ರೇಲರಿಗಾಗಿ ಮಾಡಿದ ಮಹತ್ಕಾರ್ಯಗಳನ್ನು ನೋಡಿದ್ದ ಅವರ ನಾಯಕರು ಜೀವಿಸಿದ್ದಾಗಲೂ ಇಸ್ರೇಲರು ಯೆಹೋವನ ಸೇವೆಮಾಡಿದರು.


ಮರಳುಗಾಡಿನಲ್ಲಿ ನನಗೊಂದು ಸ್ಥಳವಿದ್ದಿದ್ದರೆ, ಪ್ರಯಾಣಿಕರು ರಾತ್ರಿಯಲ್ಲಿ ತಂಗುವ ಮನೆ ಇದ್ದಿದ್ದರೆ, ನಾನು ನನ್ನ ಜನರನ್ನು ಅಲ್ಲಿ ಬಿಟ್ಟು, ಅವರಿಂದ ದೂರ ಹೋಗಬಹುದಾಗಿತ್ತು. ಏಕೆಂದರೆ ಅವರೆಲ್ಲರೂ ದೇವರಿಗೆ ದ್ರೋಹ ಮಾಡುತ್ತಿದ್ದಾರೆ, ಅವರೆಲ್ಲರೂ ಆತನಿಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ.


ಪ್ರತಿಯೊಬ್ಬನೂ ತನ್ನ ನೆರೆಯವನಿಗೆ ಸುಳ್ಳು ಹೇಳುತ್ತಾನೆ. ಒಬ್ಬನೂ ಸತ್ಯವನ್ನು ನುಡಿಯುವದಿಲ್ಲ. ಯೆಹೂದದ ಜನರು ತಮ್ಮ ನಾಲಿಗೆಗಳಿಗೆ ಸುಳ್ಳು ಹೇಳುವದನ್ನು ಕಲಿಸಿದ್ದಾರೆ. ಅವರು ಹಿಂತಿರುಗಿ ಬರಲು ಆಯಾಸವಾಗುವಷ್ಟು ಪಾಪಗಳನ್ನು ಮಾಡಿದ್ದಾರೆ.


ಕೊನೆಯಲ್ಲಿ ಆ ಸ್ತ್ರೀಯೂ ಸತ್ತಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು