Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 2:12 - ಪರಿಶುದ್ದ ಬೈಬಲ್‌

12 ಯೆಹೋವನು ಇಸ್ರೇಲರನ್ನು ಈಜಿಪ್ಟಿನಿಂದ ಬಿಡಿಸಿಕೊಂಡು ಬಂದಿದ್ದನು. ಅವರ ಪೂರ್ವಿಕರು ಯೆಹೋವನನ್ನು ಆರಾಧಿಸುತ್ತಿದ್ದರು. ಆದರೆ ಇಸ್ರೇಲರು ಯೆಹೋವನನ್ನು ಅನುಸರಿಸದೆ ತಮ್ಮ ಸುತ್ತಮುತ್ತಲಿನ ಜನರ ಸುಳ್ಳುದೇವರುಗಳನ್ನು ಪೂಜಿಸಲು ಆರಂಭಿಸಿದರು. ಆದ್ದರಿಂದ ಯೆಹೋವನಿಗೆ ಕೋಪ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ತಮ್ಮ ಪೂರ್ವಿಕರನ್ನು ಐಗುಪ್ತದಿಂದ ಕರತಂದ ದೇವರಾದ ಯೆಹೋವನನ್ನು ಬಿಟ್ಟು ಅನ್ಯದೇವತೆಗಳನ್ನು ಅಂದರೆ, ತಮ್ಮ ಸುತ್ತಣ ಜನಾಂಗಗಳ ದೇವರುಗಳನ್ನು ಅವಲಂಬಿಸಿ, ಅವುಗಳಿಗೆ ಅಡ್ಡಬಿದ್ದು ಯೆಹೋವನಿಗೆ ಸಿಟ್ಟು ಬರುವಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ತಮ್ಮ ಪೂರ್ವಜರನ್ನು ಈಜಿಪ್ಟಿನಿಂದ ಕರೆದುತಂದ ದೇವರಾದ ಸರ್ವೇಶ್ವರನನ್ನು ಬಿಟ್ಟು ಅನ್ಯದೇವತೆಗಳನ್ನು ಅಂದರೆ, ತಮ್ಮ ಸುತ್ತಮುತ್ತಲಿನ ಜನಾಂಗಗಳ ದೇವರುಗಳನ್ನು ಅವಲಂಬಿಸಿ ಅವುಗಳಿಗೆ ಅಡ್ಡಬಿದ್ದು ಸರ್ವೇಶ್ವರನನ್ನು ರೇಗಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ತಮ್ಮ ಪಿತೃಗಳನ್ನು ಐಗುಪ್ತದಿಂದ ಕರತಂದ ದೇವರಾದ ಯೆಹೋವನನ್ನು ಬಿಟ್ಟು ಅನ್ಯದೇವತೆಗಳನ್ನು ಅಂದರೆ ತಮ್ಮ ಸುತ್ತಣ ಜನಾಂಗಗಳ ದೇವರುಗಳನ್ನು ಅವಲಂಬಿಸಿ ಅವುಗಳಿಗೆ ಅಡ್ಡಬಿದ್ದು ಯೆಹೋವನನ್ನು ರೇಗಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ತಮ್ಮ ತಂದೆಗಳನ್ನು ಈಜಿಪ್ಟಿನಿಂದ ಹೊರಡಿಸಿದ ತಮ್ಮ ದೇವರಾದ ಯೆಹೋವ ದೇವರನ್ನು ಬಿಟ್ಟು, ತಮ್ಮ ಸುತ್ತಲಿರುವ ಜನಾಂಗಗಳ ದೇವರುಗಳ ಹಿಂದೆ ಹೋಗಿ, ಅವುಗಳಿಗೆ ಅಡ್ಡಬಿದ್ದು, ಯೆಹೋವ ದೇವರಿಗೆ ಕೋಪವನ್ನೆಬ್ಬಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 2:12
21 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವನೆಂಬ ನನಗೆ ಸಲ್ಲತಕ್ಕ ಗೌರವವನ್ನು ನೀವು ಬೇರೆಯವರಿಗೆ ಸಲ್ಲಿಸಿದರೆ ನಾನು ನಿಮ್ಮನ್ನು ದ್ವೇಷಿಸುತ್ತೇನೆ. ನನಗೆ ವಿರುದ್ಧವಾಗಿ ಪಾಪಮಾಡುವವರ ದೋಷಫಲವನ್ನು ಅವರ ಮೂರು ನಾಲ್ಕು ತಲೆಮಾರುಗಳವರೆಗೂ ಬರಮಾಡುವೆನು.


ಯಾಕೆಂದರೆ ‘ಇಸ್ರೇಲರು ತಮ್ಮ ಪೂರ್ವಿಕರ ದೇವರಾದ ಯೆಹೋವನೊಂದಿಗೆ ಮಾಡಿದ ಒಡಂಬಡಿಕೆಯನ್ನು ಬಿಟ್ಟು ತೊಲಗಿದರು. ಅವರನ್ನು ಈಜಿಪ್ಟಿನಿಂದ ಹೊರತರುವಾಗ ಯೆಹೋವನೊಂದಿಗೆ ಮಾಡಿದ ಒಡಂಬಡಿಕೆಯನ್ನು ಅನುಸರಿಸಲಿಲ್ಲ.


ಅಂಥ ಪ್ರವಾದಿ ಅಥವಾ ಕನಸಿನ ಅರ್ಥ ಹೇಳುವವನನ್ನು ಕೊಂದು ಹಾಕಬೇಕು. ಯಾಕೆಂದರೆ ಅವನು ಯೆಹೋವನನ್ನು ತೊರೆಯಲು ಪ್ರೇರೇಪಿಸಿದನಲ್ಲಾ? ದೇವರಾದ ಯೆಹೋವನೇ ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿದವನು. ಆತನು ನಿಮಗೆ ಹೇಳಿದ ನಿಯಮಗಳಿಗೆ ವಿರುದ್ಧವಾಗಿ ನಡೆಯಲು ಪ್ರೇರೇಪಿಸುವವನನ್ನು ಕೊಲ್ಲಬೇಕು; ನಿಮ್ಮ ಮಧ್ಯದಿಂದ ಅಂಥ ದುಷ್ಟತನವನ್ನು ತೆಗೆದುಹಾಕಬೇಕು.


ಇಲ್ಲಿರುವ ಯಾವ ಪುರುಷನಾಗಲಿ ಸ್ತ್ರೀಯಾಗಲಿ ಯಾವ ಗೋತ್ರದವರಾಗಲಿ ನಿಮ್ಮ ದೇವರಾದ ಯೆಹೋವನನ್ನು ಬಿಟ್ಟುಹೋಗದಂತೆ ನೋಡಿಕೊಳ್ಳಿರಿ. ಯಾವನೂ ಹೋಗಿ ಬೇರೆ ಜನಾಂಗಗಳ ದೇವರುಗಳ ಸೇವೆಮಾಡಬಾರದು. ಅಂಥದ್ದನ್ನು ಮಾಡುವ ಜನರು ಕಹಿಯಾದ ಮತ್ತು ವಿಷಭರಿತವಾದ ಹಣ್ಣನ್ನು ಬಿಡುವ ಗಿಡದಂತಿದ್ದಾರೆ.


ನಾನೇ ನಿಮ್ಮ ದೇವರಾದ ಯೆಹೋವನು. ಆದ್ದರಿಂದ ನೀವು ಯಾವ ವಿಗ್ರಹವನ್ನೂ ಪೂಜಿಸಬಾರದು ಮತ್ತು ಅದರ ಸೇವೆ ಮಾಡಬಾರದು. ನನ್ನ ಜನರು ಇತರ ದೇವರುಗಳನ್ನು ಆರಾಧಿಸುವುದನ್ನು ನಾನು ದ್ವೇಷಿಸುತ್ತೇನೆ. ನನಗೆ ವಿರುದ್ಧವಾಗಿ ಪಾಪ ಮಾಡಿದವರನ್ನು ನಾನು ಶಿಕ್ಷಿಸುತ್ತೇನೆ. ಅವರ ಮಕ್ಕಳು, ಮೊಮ್ಮಕ್ಕಳು ಮತ್ತು ಮರಿಮೊಮ್ಮಕ್ಕಳು ನನ್ನ ದಂಡನೆಗೆ ಗುರಿಯಾಗುವರು.


ಅವರು ಹೊಸ ದೇವರುಗಳನ್ನು ಆರಿಸಿಕೊಂಡರು; ಅದಕ್ಕಾಗಿ ಅವರು ತಮ್ಮ ಪಟ್ಟಣ ದ್ವಾರಗಳಲ್ಲಿ ಯುದ್ಧ ಮಾಡಬೇಕಾಯಿತು. ಇಸ್ರೇಲರ ನಲವತ್ತು ಸಾವಿರ ಸೈನಿಕರಲ್ಲಿ ಒಬ್ಬನಿಗೂ ಗುರಾಣಿ ಬರ್ಜಿಗಳಿರಲಿಲ್ಲ.


ಯೋಸೇಫನು ಬಲಶಾಲಿಯಾದ ಗೂಳಿಯಂತಿದ್ದಾನೆ. ಅವನ ಇಬ್ಬರು ಮಕ್ಕಳು ಗೂಳಿಯ ಕೊಂಬುಗಳಂತೆ ಬೇರೆಯವರನ್ನು ದೂಡಿ ಲೋಕದ ಅಂಚಿಗೆ ತಳ್ಳಿಬಿಡುತ್ತಾರೆ. ಮನಸ್ಸೆಯೊಂದಿಗೆ ಸಾವಿರಗಟ್ಟಲೆ ಜನರಿದ್ದಾರೆ. ಎಫ್ರಾಯೀಮನೊಂದಿಗೆ ಹತ್ತು ಸಾವಿರಗಟ್ಟಲೆ ಜನರಿದ್ದಾರೆ.”


“ಆದರೆ ಯೆಶುರೂನು ಕೊಬ್ಬಿದನು; ಕೊಬ್ಬಿದ ಹೋರಿಯಂತೆ ಒದ್ದನು; ಅವನು ಚೆನ್ನಾಗಿ ತಿಂದು ಕೊಬ್ಬಿ ಊದಿಕೊಂಡನು; ತನ್ನ ನಿರ್ಮಾಣಿಕನಾದ ಯೆಹೋವನನ್ನು ತೊರೆದನು; ತನ್ನನ್ನು ಸಂರಕ್ಷಿಸಿದ ಬಂಡೆಯಿಂದ ಓಡಿಹೋದನು;


ಗಿದ್ಯೋನನು ಸತ್ತಮೇಲೆ ಇಸ್ರೇಲರು ಯೆಹೋವನಿಗೆ ನಂಬಿಗಸ್ತರಾಗಿರಲಿಲ್ಲ. ಅವರು ಬಾಳನನ್ನು ಪೂಜಿಸಿದರು. ಬಾಳ್‌ಬೇರಿತನನ್ನು ತಮ್ಮ ದೇವರನ್ನಾಗಿ ಮಾಡಿಕೊಂಡರು.


ಯೆಹೋವನು ಇಸ್ರೇಲರಿಗೆ, “ಈಜಿಪ್ಟಿನವರು, ಅಮೋರಿಯರು, ಅಮ್ಮೋನಿಯರು ಮತ್ತು ಫಿಲಿಷ್ಟಿಯರು ನಿಮ್ಮನ್ನು ಪೀಡಿಸಿದಾಗ ನೀವು ನನಗೆ ಮೊರೆಯಿಟ್ಟಿರಿ. ನಾನು ನಿಮ್ಮನ್ನು ಅವರಿಂದ ರಕ್ಷಿಸಿದೆ.


ಇಸ್ರೇಲರು ಎತ್ತರವಾದ ಸ್ಥಳಗಳನ್ನು ನಿರ್ಮಿಸಿ, ಆತನನ್ನು ಕೋಪಗೊಳಿಸಿದರು. ಸುಳ್ಳುದೇವರುಗಳ ವಿಗ್ರಹಗಳನ್ನು ರೂಪಿಸಿ ಆತನನ್ನು ರೇಗಿಸಿದರು.


ಅವರು ದೇವಜನರಿಗೆ ಉರುಲಿನಂತಾದರು. ಅವರ ದೇವರುಗಳನ್ನು ದೇವಜನರು ಪೂಜಿಸತೊಡಗಿದರು.


ಮೋಶೆಯು ಜನರಿಗೆ, “ನೀವು ಈಜಿಪ್ಟಿನ ಗುಲಾಮತನದಿಂದ ಬಿಡುಗಡೆಯಾದ ಈ ದಿನವನ್ನು ಜ್ಞಾಪಕಮಾಡಿಕೊಳ್ಳಿರಿ. ಆದರೆ ಈ ದಿನದಲ್ಲಿ ಯೆಹೋವನು ತನ್ನ ಮಹಾಶಕ್ತಿಯಿಂದ ನಿಮ್ಮನ್ನು ಸ್ವತಂತ್ರರನ್ನಾಗಿ ಮಾಡಿದನು. ನೀವು ಹುಳಿಯಿರುವ ರೊಟ್ಟಿಯನ್ನು ತಿನ್ನಬಾರದು.


“ಈ ಹಬ್ಬವು ನಿಮ್ಮ ಕೈಗಳಲ್ಲಿ ಜ್ಞಾಪಕಪಟ್ಟಿಯಂತಿದ್ದು ಯೆಹೋವನು ತನ್ನ ಮಹಾಶಕ್ತಿಯಿಂದ ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿದ್ದನ್ನು ಮತ್ತು ನಿಮಗೆ ಆತನು ನೀಡಿದ ಉಪದೇಶಗಳನ್ನು ನೆನಪಿಗೆ ತರುತ್ತದೆ.


“ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು, ‘ನೀವು ಹೀಗೇಕೆ ಮಾಡುತ್ತೀರಿ?’ ಎಂದು ಕೇಳುವಾಗ ನೀವು, ‘ಯೆಹೋವನು ನಮ್ಮನ್ನು ಈಜಿಪ್ಟಿನಿಂದ ತನ್ನ ಮಹಾಶಕ್ತಿಯಿಂದ ರಕ್ಷಿಸಿದನು. ನಾವು ಅಲ್ಲಿ ಗುಲಾಮರಾಗಿದ್ದೆವು, ಆದರೆ ಯೆಹೋವನು ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದನು.


ಇದು ನಿಮ್ಮ ಕೈಗೆ ದಾರ ಕಟ್ಟಿದಂತಿರುತ್ತದೆ; ನಿಮ್ಮ ಕಣ್ಣುಗಳ ಮುಂದೆ ಒಂದು ಚಿಹ್ನೆಯಂತೆ ಇರುತ್ತದೆ. ಯೆಹೋವನು ತನ್ನ ಮಹಾಶಕ್ತಿಯಿಂದ ನಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದನೆಂಬುದನ್ನು ಜ್ಞಾಪಿಸಿಕೊಳ್ಳಲು ಇದು ಸಹಾಯ ಮಾಡುತ್ತದೆ.”


“ನೀವು ಹೋಗುವ ದೇಶದಲ್ಲಿ ಬಹಳ ವರ್ಷ ಬಾಳಿದ ನಂತರ ನಿಮಗೆ ಮಕ್ಕಳೂ ಮೊಮ್ಮಕ್ಕಳೂ ಆಗುವರು. ಬಳಿಕ ನೀವು ನಿಮ್ಮ ಜೀವಿತಗಳನ್ನು ಹಾಳುಮಾಡಿಕೊಳ್ಳುವಿರಿ. ನೀವು ಎಲ್ಲಾ ಬಗೆಯ ವಿಗ್ರಹಗಳನ್ನು ಮಾಡಿಕೊಳ್ಳುವಿರಿ. ಅದು ದೇವರಿಗೆ ಬಹಳ ಕೋಪವನ್ನು ಉಂಟುಮಾಡುವುದು!


“ನಿಮ್ಮ ದೇವರಾದ ಯೆಹೋವನನ್ನು ಸನ್ಮಾನಿಸಿ ಆತನನ್ನೇ ಸೇವಿಸಿರಿ. ಆತನನ್ನು ಮರೆತುಬಿಡಬೇಡಿರಿ. ಈಜಿಪ್ಟ್ ದೇಶದಲ್ಲಿ ಗುಲಾಮರಾಗಿದ್ದಾಗ ಆತನೇ ನಿಮ್ಮನ್ನು ವಿಮೋಚಿಸಿದನಲ್ಲಾ?


ನೀನು ಅವರಿಗೆ ಹೀಗೆ ಹೇಳಬೇಕು: ‘ನಿಮ್ಮ ಪೂರ್ವಿಕರು ನನ್ನ ಉಪದೇಶದಂತೆ ನಡೆಯುವದನ್ನು ಬಿಟ್ಟುಬಿಟ್ಟರು’ ಎಂದು ದೇವರು ಹೇಳುತ್ತಾನೆ. ‘ಅವರು ನನ್ನ ಅನುಸರಣೆಯನ್ನು ಬಿಟ್ಟು ಬೇರೆ ದೇವರುಗಳನ್ನು ಅನುಸರಿಸಲು ಮತ್ತು ಸೇವಿಸಲು ಪ್ರಾರಂಭಿಸಿದರು. ಅವರು ಅನ್ಯದೇವರುಗಳನ್ನು ಪೂಜಿಸಿದರು. ನಿಮ್ಮ ಪೂರ್ವಿಕರು ನನ್ನನ್ನು ತ್ಯಜಿಸಿ ನನ್ನ ಧರ್ಮವಿಧಿಗಳನ್ನು ಮೀರಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು