Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 2:14 - ಪರಿಶುದ್ದ ಬೈಬಲ್‌

14 ಯೆಹೋವನು ಇಸ್ರೇಲರ ಮೇಲೆ ಕೋಪಗೊಂಡನು. ಶತ್ರುಗಳು ಇಸ್ರೇಲರ ಮೇಲೆ ಧಾಳಿಮಾಡಿ ಅವರ ಸ್ವತ್ತನ್ನು ತೆಗೆದುಕೊಳ್ಳುವಂತೆ ಯೆಹೋವನು ಮಾಡಿದನು. ಸುತ್ತಮುತ್ತಲಿದ್ದ ಅವರ ಶತ್ರುಗಳು ಅವರನ್ನು ಸೋಲಿಸುವಂತೆ ಯೆಹೋವನು ಮಾಡಿದನು. ಇಸ್ರೇಲರು ಶತ್ರುಗಳಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಯೆಹೋವನ ಕೋಪವು ಅವರ ಮೇಲೆ ಹೆಚ್ಚಾಯಿತು. ಆತನು ಅವರನ್ನು ಸೂರೆಮಾಡುವವರ ಕೈಗೆ ಒಪ್ಪಿಸಲು ಅವರು ಅವರನ್ನು ಸೂರೆಮಾಡಿದರು. ಆತನು ಅವರನ್ನು ಸುತ್ತಣ ವೈರಿಗಳಿಗೆ ಮಾರಿಬಿಟ್ಟನು. ಅವರು ಆ ಶತ್ರುಗಳ ಮುಂದೆ ನಿಲ್ಲಲಾರದವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆದ್ದರಿಂದ ಸರ್ವೇಶ್ವರನ ಕೋಪ ಅವರ ಮೇಲೆ ಉರಿಯಹತ್ತಿತು; ಅವರನ್ನು ಕೊಳ್ಳೆಹೊಡೆಯುವವರ ಕೈಗೆ ಒಪ್ಪಿಸಿದರು. ಶತ್ರುಗಳು ಅವರನ್ನು ಸುಲಿಗೆ ಮಾಡಿದರು. ಸರ್ವೇಶ್ವರ ಅವರನ್ನು ಅಕ್ಕಪಕ್ಕದ ವೈರಿಗಳಿಗೆ ಮಾರಿಬಿಟ್ಟರು. ಆ ಶತ್ರುಗಳ ಮುಂದೆ ಇಸ್ರಯೇಲರು ನಿಲ್ಲಲಾರದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆಹೋವನ ಕೋಪವು ಅವರ ಮೇಲೆ ಉರಿಯಹತ್ತಿತು. ಆತನು ಅವರನ್ನು ಸೂರೆಮಾಡುವವರ ಕೈಗೆ ಒಪ್ಪಿಸಲು ಅವರು ಅವರನ್ನು ಸೂರೆಮಾಡಿದರು. ಆತನು ಅವರನ್ನು ಸುತ್ತಣ ವೈರಿಗಳಿಗೆ ಮಾರಿ ಬಿಟ್ಟನು; ಅವರು ಆ ಶತ್ರುಗಳ ಮುಂದೆ ನಿಲ್ಲಲಾರದವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದ್ದರಿಂದ ಯೆಹೋವ ದೇವರು ಇಸ್ರಾಯೇಲಿಗೆ ವಿರೋಧವಾಗಿ ಉರಿಗೊಂಡು, ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟರು. ಅವರು ಇನ್ನು ಮೇಲೆ ತಮ್ಮ ಶತ್ರುಗಳಿಗೆ ಎದುರಾಗಿ ನಿಲ್ಲದ ಹಾಗೆ, ಅವರ ಸುತ್ತಲಿರುವ ಅವರ ಶತ್ರುಗಳ ಕೈಗೆ ಅವರನ್ನು ಮಾರಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 2:14
35 ತಿಳಿವುಗಳ ಹೋಲಿಕೆ  

ಯೆಹೋವನು ಇಸ್ರೇಲಿನ ಜನರೆಲ್ಲರನ್ನೂ ತಿರಸ್ಕರಿಸಿದನು. ಅವನು ಅವರಿಗೆ ಅನೇಕ ತೊಂದರೆಗಳನ್ನು ಉಂಟುಮಾಡಿದನು. ಅವರನ್ನು ನಾಶಗೊಳಿಸಲು ನಾಶಕರಿಗೆ ಆತನು ಅವಕಾಶ ನೀಡಿದನು. ಕೊನೆಗೆ, ಆತನು ಅವರನ್ನು ದೂರತಳ್ಳಿ, ತನ್ನ ದೃಷ್ಟಿಯಿಂದ ಅವರನ್ನೂ ದೂರಮಾಡಿದನು.


ಒಬ್ಬನು ಸಾವಿರ ಮಂದಿಯನ್ನು ಓಡಿಸಬಲ್ಲನೇ? ಇಬ್ಬರು ಹತ್ತು ಸಾವಿರ ಮಂದಿಯನ್ನು ಓಡಿಸುವರೇ? ಯೆಹೋವನು ಅವರನ್ನು ಅವರ ಶತ್ರುಗಳಿಗೆ ಒಪ್ಪಿಸುವಾಗ ಹಾಗೆಯೇ ಆಗುವುದು, ಅವರ ಬಂಡೆಯಾದ ದೇವರು ಅವರನ್ನು ಗುಲಾಮರನ್ನಾಗಿ ಮಾರುವನು;


ಆದ್ದರಿಂದ ಯೆಹೋವನು ಇಸ್ರೇಲರ ಮೇಲೆ ಕೋಪಗೊಂಡನು. ಫಿಲಿಷ್ಟಿಯರು ಮತ್ತು ಅಮ್ಮೋನಿಯರು ಅವರನ್ನು ಸೋಲಿಸುವಂತೆ ಮಾಡಿದನು.


ಆದ್ದರಿಂದ ಕಾನಾನ್ಯರ ಅರಸನಾದ ಯಾಬೀನನು ಇಸ್ರೇಲರನ್ನು ಸೋಲಿಸುವಂತೆ ಯೆಹೋವನು ಅವಕಾಶ ಮಾಡಿದನು. ಯಾಬೀನನು ಹಾಚೋರ್ ಎಂಬ ನಗರದಲ್ಲಿ ಆಳುತ್ತಿದ್ದನು. ಸೀಸೆರ ಎಂಬವನು ಅವನ ಸೇನಾಧಿಪತಿಯಾಗಿದ್ದನು. ಸೀಸೆರನು ಹರೋಷೆತ್ ಹಗ್ಗೋಯಿಮ್ ಎಂಬ ಪಟ್ಟಣದಲ್ಲಿ ವಾಸವಾಗಿದ್ದನು.


ಒಬ್ಬನು ಕತ್ತಿಯನ್ನು ಹಿಡಿದುಕೊಂಡು ಬೆನ್ನಟ್ಟುವಾಗ ಓಡಿಹೋಗುವಂತೆ ಅವರು ಓಡಿಹೋಗುವರು. ಯಾರೂ ಅವರನ್ನು ಬೆನ್ನಟ್ಟದಿದ್ದಾಗಲೂ ಅವರು ಒಬ್ಬರ ಮೇಲೊಬ್ಬರು ಬೀಳುವರು. “ನೀವು ನಿಮ್ಮ ವೈರಿಗಳ ವಿರುದ್ಧವಾಗಿ ನಿಲ್ಲುವಷ್ಟು ಶಕ್ತಿಯುಳ್ಳವರಾಗಿರುವುದಿಲ್ಲ.


ಆದರೆ ಆತನ ಜನರು ಪ್ರವಾದಿಗಳನ್ನು ಹಾಸ್ಯಮಾಡಿದರು; ಅವರ ಮಾತುಗಳನ್ನು ಕೇಳಲು ನಿರಾಕರಿಸಿದರು; ದೇವರ ಸಂದೇಶವನ್ನು ದ್ವೇಷಿಸಿದರು. ಆಗ ದೇವರ ಕೋಪವು ಅವರ ಮೇಲೆ ಉರಿಯತೊಡಗಿತು. ಅದನ್ನು ನಿಲ್ಲಿಸಲು ಯಾರಿಗೂ ಸಾಧ್ಯವಾಗಲಿಲ್ಲ.


ಜೆರುಸಲೇಮಿನ ಜನರೇ, ನಿಮ್ಮ ಮೇಲೆ ಧಾಳಿ ಮಾಡುವ ಬಾಬಿಲೋನಿನ ಎಲ್ಲಾ ಸೈನಿಕರನ್ನು ನೀವು ಸೋಲಿಸಿದರೂ ಅವರ ಗುಡಾರದಲ್ಲಿ ಕೆಲವು ಜನ ಗಾಯಗೊಂಡವರು ಉಳಿದಿರುತ್ತಾರೆ. ಆ ಗಾಯಾಳುಗಳೇ ತಮ್ಮ ಗುಡಾರದಿಂದ ಹೊರಬಂದು ಜೆರುಸಲೇಮನ್ನು ಸುಟ್ಟುಹಾಕುವರು.’”


ಯೆಹೋವನು ಹೇಳುವುದೇನೆಂದರೆ: “ಇಸ್ರೇಲ್ ಜನರೇ, ನಾನು ನಿಮ್ಮ ತಾಯಿಯಾದ ಜೆರುಸಲೇಮಿಗೆ ವಿವಾಹವಿಚ್ಛೇದನ ಕೊಟ್ಟಿರುವುದಾಗಿ ಹೇಳುತ್ತೀರಿ. ಆದರೆ ನಾನು ಆಕೆಗೆ ವಿವಾಹವಿಚ್ಛೇದನ ಕೊಟ್ಟಿರುವುದಕ್ಕೆ ದಾಖಲೆ ಪತ್ರವೆಲ್ಲಿದೆ? ನನ್ನ ಮಕ್ಕಳೇ, ನಿಮ್ಮಲ್ಲಿ ಯಾರಿಗಾದರೂ ನಾನು ಸಾಲ ತೀರಿಸಬೇಕಿತ್ತೇ? ಆ ಸಾಲವನ್ನು ತೀರಿಸಲು ನಾನು ನಿಮ್ಮನ್ನು ಮಾರಿದ್ದೆನೋ, ಇಲ್ಲ. ನಾನು ನಿಮ್ಮನ್ನು ಮಾರಿಬಿಟ್ಟಿದ್ದು ನೀವು ಮಾಡಿದ ದುಷ್ಟತನಕ್ಕಾಗಿಯೇ. ನಿಮ್ಮ ತಾಯಿಯಾದ ಜೆರುಸಲೇಮನ್ನು ಕಳುಹಿಸಿಬಿಟ್ಟದ್ದು ನಿಮ್ಮ ಅಪರಾಧಗಳಿಗಾಗಿಯೇ.


ನಿನ್ನ ಜನರನ್ನು ಅತ್ಯಲ್ಪ ಬೆಲೆಗೆ ಮಾರಿಬಿಟ್ಟೆ. ಬೆಲೆಯ ಬಗ್ಗೆ ವಾದವನ್ನೂ ನೀನು ಮಾಡಲಿಲ್ಲ.


ಆ ಕಷ್ಟದ ಸಮಯದಲ್ಲಿ ಯಾರೂ ಸುರಕ್ಷಿತವಾಗಿ ಪ್ರಯಾಣ ಮಾಡುವಂತಿರಲಿಲ್ಲ. ಎಲ್ಲಾ ದೇಶಗಳಲ್ಲಿಯೂ ಕಷ್ಟ ತೊಂದರೆಗಳು ತುಂಬಿದ್ದವು.


ಅಮೋರಿಯರು ದಾನ್ ಕುಲದವರನ್ನು ಬೆಟ್ಟಪ್ರದೇಶದಲ್ಲಿಯೇ ವಾಸಿಸುವಂತೆ ಮಾಡಿದರು. ಅಮೋರಿಯರು ಕಣಿವೆಗೆ ಬರಲು ಅವಕಾಶ ಕೊಡಲಿಲ್ಲವಾದ್ದರಿಂದ ದಾನ್ ಕುಲದವರು ಬೆಟ್ಟಪ್ರದೇಶದಲ್ಲಿಯೇ ಉಳಿಯಬೇಕಾಯಿತು.


ಯೆಹೂದ್ಯರು ಯುದ್ಧಮಾಡುವಾಗ ಯೆಹೋವನು ಅವರ ಸಂಗಡ ಇದ್ದುದರಿಂದ ಅವರು ಬೆಟ್ಟಪ್ರದೇಶವನ್ನೆಲ್ಲಾ ಸ್ವಾಧೀನಪಡಿಸಿಕೊಂಡರು. ಆದರೆ ಕಣಿವೆಯಲ್ಲಿ ವಾಸ ಮಾಡುತ್ತಿದ್ದ ಜನರಲ್ಲಿ ಕಬ್ಬಿಣದ ರಥಗಳಿದ್ದದರಿಂದ ಯೆಹೂದ್ಯರು ಅವರನ್ನು ಸೋಲಿಸಲಾಗಲಿಲ್ಲ.


“ಈ ಪುಸ್ತಕದಲ್ಲಿ ಬರೆದಿರುವ ಎಲ್ಲಾ ಆಜ್ಞೆಗಳಿಗೂ ಉಪದೇಶಗಳಿಗೂ ನೀವು ವಿಧೇಯರಾಗಬೇಕು. ನಿಮ್ಮ ದೇವರಾದ ಯೆಹೋವನು ಅದ್ಭುತನೂ ಭಯಂಕರನೂ ಆಗಿರುವುದರಿಂದ ಆತನ ಹೆಸರನ್ನು ನೀವು ಗೌರವಿಸಬೇಕು.


“ನಿಮ್ಮ ವೈರಿಗಳು ಬಂದು ನಿಮ್ಮನ್ನು ಸೋಲಿಸಿಬಿಡುವಂತೆ ಮಾಡುವನು. ನೀವು ಒಂದು ದಾರಿಯಿಂದ ನಿಮ್ಮ ವೈರಿಗೆ ಎದುರಾಗಿ ಯುದ್ಧಕ್ಕೆ ಇಳಿದರೆ ಏಳುದಾರಿಗಳಿಂದ ರಣರಂಗದಿಂದ ಪಲಾಯನ ಮಾಡುವಿರಿ. ನಿಮಗೆ ಸಂಭವಿಸುವ ಬಾಧೆಗಳನ್ನು ನೋಡಿ ಇತರ ಜನಾಂಗದವರು ಭಯಪಡುವರು.


“ನೀವು ಕೆಟ್ಟಕಾರ್ಯಗಳನ್ನು ಮಾಡಿ ಯೆಹೋವನಿಂದ ದೂರವಾಗಿ ಹೋದರೆ ನಿಮಗೆ ಕೆಟ್ಟಸಂಗತಿಗಳು ಉಂಟಾಗುವವು. ನಿಮಗೆ ಉಪದ್ರವಗಳೂ ಮನಸ್ಸಿಗೆ ಅಸಮಾಧಾನವೂ ಉಂಟಾಗುವವು. ನೀವು ಸಂಪೂರ್ಣವಾಗಿ ನಾಶವಾಗುವ ತನಕ ಈ ಸಂಗತಿಗಳು ನಿಮ್ಮನ್ನು ಬಾಧಿಸುವವು. ನೀವು ಆತನನ್ನು ತೊರೆದದ್ದರಿಂದ ನಿಮಗೆ ಹಾಗೆ ಮಾಡುವನು.


ದುಷ್ಟ ಸಂತತಿಯವರೇ, ಈಗ ನೀವು ಯೆಹೋವನ ಭಯಂಕರವಾದ ಕೋಪವನ್ನು ಇನ್ನೂ ಹೆಚ್ಚಾಗಿ ಮಾಡಲು ನಿಮ್ಮ ಪೂರ್ವಿಕರ ಸ್ಥಾನವನ್ನು ತೆಗೆದುಕೊಂಡಿದ್ದೀರಿ.


ನಾನು ನಿಜವಾಗಿ ನನ್ನ ಕೋಪವನ್ನು ತೋರಿಸುವೆನು. ಹೌದು, ನಾನೇ ನಿಮ್ಮ ಪಾಪಗಳಿಗಾಗಿ ನಿಮ್ಮನ್ನು ಏಳರಷ್ಟಾಗಿ ದಂಡಿಸುವೆನು.


ಹೀಗಾಗಿ ಯೆಹೋವನು ಇಸ್ರೇಲರ ಮೇಲೆ ಕೋಪಗೊಂಡು, “ಈ ಜನಾಂಗದವರು ಅವರ ಪೂರ್ವಿಕರ ಸಂಗಡ ನಾನು ಮಾಡಿಕೊಂಡ ಒಡಂಬಡಿಕೆಯನ್ನು ಮುರಿದಿದ್ದಾರೆ. ಇವರು ನನ್ನ ಮಾತನ್ನು ಕೇಳಲಿಲ್ಲ.


ಇಸ್ರೇಲರು ಪುನಃ ದುಷ್ಕೃತ್ಯಗಳನ್ನು ಮಾಡುವುದನ್ನು ಯೆಹೋವನು ನೋಡಿದನು. ಆದ್ದರಿಂದ ಆತನು ಮೋವಾಬ್ಯರ ಅರಸನಾದ ಎಗ್ಲೋನನಿಗೆ ಇಸ್ರೇಲರನ್ನು ಸೋಲಿಸುವ ಶಕ್ತಿಯನ್ನು ಕೊಟ್ಟನು.


ಆಗ ಯೆಹೋವನು ಇಸ್ರೇಲಿಗೆ ವಿರುದ್ಧವಾಗಿ ಕೋಪಗೊಂಡು ಅರಾಮ್ಯರ ರಾಜನಾದ ಹಜಾಯೇಲನ ಮತ್ತು ಅವನ ಮಗನಾದ ಬೆನ್ಹದದನ ಅಧೀನಕ್ಕೆ ಇಸ್ರೇಲನ್ನು ಒಪ್ಪಿಸಿದನು.


ಆದ್ದರಿಂದ ಅವರ ಶತ್ರುಗಳು ಅವರನ್ನು ಸದೆಬಡಿಯುವಂತೆ ಮಾಡಿದೆ. ವೈರಿಗಳು ಅವರಿಗೆ ತುಂಬಾ ಕಷ್ಟಕೊಟ್ಟರು. ಕಷ್ಟಬಂದಾಗ ನಮ್ಮ ಪೂರ್ವಿಕರು ನಿನಗೆ ಮೊರೆಯಿಟ್ಟರು. ಪರಲೋಕದಿಂದ ನೀನು ಅವರನ್ನು ಆಲೈಸಿದೆ. ನಿನ್ನ ಮಹಾಕರುಣೆಗನುಸಾರವಾಗಿ ನೀನು ಅವರ ಬಳಿಗೆ ಜನರನ್ನು ಕಳುಹಿಸಿ ಅವರನ್ನು ಅವರ ವೈರಿಗಳ ಕೈಗಳಿಂದ ರಕ್ಷಿಸಿದೆ.


ನಾನು ನಿಮಗೆ ವಿಮುಖನಾಗಿರುವುದರಿಂದ ಆ ವೈರಿಗಳು ನಿಮ್ಮನ್ನು ಸೋಲಿಸುವರು. ಆ ವೈರಿಗಳು ನಿಮ್ಮನ್ನು ದ್ವೇಷಿಸುವರು ಮತ್ತು ನಿಮ್ಮನ್ನು ಆಳುವರು. ಯಾರೂ ನಿಮ್ಮನ್ನು ಬೆನ್ನಟ್ಟದಿದ್ದರೂ ಹೆದರಿಕೊಂಡು ಓಡುವಿರಿ.


“ಆದ್ದರಿಂದ ಯೆಹೋವನು ಇಸ್ರೇಲರ ಮೇಲೆ ಕೋಪಗೊಂಡು, ತನ್ನನ್ನು ಬೇಸರಗೊಳಿಸಿದ್ದ ಇಡೀ ತಲೆಮಾರು ಸಾಯುವತನಕ ಇಸ್ರೇಲರನ್ನು ಮರುಭೂಮಿಯಲ್ಲಿ ನಲವತ್ತು ವರ್ಷಗಳ ಕಾಲ ಅಲೆದಾಡಿಸಿದನು.


ನಿಮ್ಮ ದೇವರಾದ ಯೆಹೋವನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಪಾಲಿಸದೆ ಬೇರೆ ದೇವರುಗಳ ಸೇವೆಮಾಡಿದರೆ ಈ ದೇಶವನ್ನು ಕಳೆದುಕೊಳ್ಳುವಿರಿ. ನೀವು ಅನ್ಯದೇವರುಗಳನ್ನು ಪೂಜಿಸಬಾರದು. ಇಲ್ಲವಾದರೆ, ಯೆಹೋವನು ನಿಮ್ಮ ಮೇಲೆ ಬಹು ಕೋಪಗೊಂಡು ಆತನು ನಿಮಗೆ ಕೊಟ್ಟ ಈ ಒಳ್ಳೆಯ ದೇಶದಿಂದ ಬಲವಂತವಾಗಿ ಹೊರಡಿಸುವನು,” ಅಂದನು.


ಯೆಹೋವನು ಇಸ್ರೇಲರ ಮೇಲೆ ಮತ್ತೆ ಕೋಪಗೊಂಡು ಇಸ್ರೇಲರ ವಿರುದ್ಧನಾಗುವಂತೆ ದಾವೀದನನ್ನು ಪ್ರೇರೇಪಿಸಿದನು. ದಾವೀದನು, “ಇಸ್ರೇಲಿನ ಮತ್ತು ಯೆಹೂದದ ಜನಗಣತಿ ಮಾಡಿರಿ” ಎಂದು ಆಜ್ಞಾಪಿಸಿದನು.


ಆಹಾಜನು ಪಾಪಮಾಡಿದ್ದರಿಂದ ದೇವರು ಅರಾಮ್ಯರನ್ನು ಅವನ ವಿರುದ್ಧವಾಗಿ ಕಳುಹಿಸಿ ಅವನು ಸೋತು ಹೋಗುವಂತೆ ಮಾಡಿದನು. ಅವರಲ್ಲಿ ಬಹುಮಂದಿ ಸೆರೆಹಿಡಿಯಲ್ಪಟ್ಟರು. ಅರಾಮ್ಯರ ಅರಸನು ಅವರನ್ನೆಲ್ಲಾ ದಮಸ್ಕಕ್ಕೆ ಒಯ್ದನು. ಇಸ್ರೇಲರ ಅರಸನಾದ ಪೆಕಹನು ಬಂದು ಆಹಾಜನನ್ನು ಸೋಲಿಸುವಂತೆ ಯೆಹೋವನು ಮಾಡಿದನು. ಪೆಕಹನ ತಂದೆಯ ಹೆಸರು ರೆಮಲ್ಯ. ಪೆಕಹನೂ ಅವನ ಸೈನ್ಯವೂ ಯೆಹೂದ ಸೈನಿಕರಲ್ಲಿ ಒಂದೇ ದಿವಸದಲ್ಲಿ ಒಂದು ಲಕ್ಷದ ಇಪ್ಪತ್ತು ಸಾವಿರ ಮಂದಿ ಧೈರ್ಯಶಾಲಿ ಸೈನಿಕರನ್ನು ಕೊಂದರು. ಯೆಹೂದದ ಜನರನ್ನು ಪೆಕಹನು ಸೋಲಿಸಿದನು. ಯಾಕೆಂದರೆ ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ವಿಧೇಯರಾಗಲು ನಿರಾಕರಿಸಿದರು.


ಕೊಯ್ಯಲ್ಪಡುವ ಕುರಿಗಳೋ ಎಂಬಂತೆ ನೀನು ನಮ್ಮನ್ನು ಅವರಿಗೆ ಒಪ್ಪಿಸಿಕೊಟ್ಟಿರುವೆ; ಅನ್ಯ ಜನಾಂಗಗಳ ಮಧ್ಯದಲ್ಲಿ ಚದರಿಸಿಬಿಟ್ಟಿರುವೆ.


ಯಾಕೋಬ್ ಮತ್ತು ಇಸ್ರೇಲ್ ಜನರಿಂದ ಅವರ ಸಂಪತ್ತನ್ನು ದೋಚಿಕೊಳ್ಳಲು ಅವರನ್ನು ಬಿಟ್ಟವರು ಯಾರು? ಯೆಹೋವನು ತಾನೇ ಅವರಿಗೆ ಹಾಗೆ ಮಾಡಿಬಿಟ್ಟನು. ನಾವು ಆತನ ವಿರುದ್ಧವಾಗಿ ಪಾಪಮಾಡಿದೆವು. ಆದ್ದರಿಂದ, ಆತನು ನಮ್ಮ ಆಸ್ತಿಯನ್ನು ದೋಚಿ ಹೋಗುವಂತೆ ಮಾಡಿದನು. ಯೆಹೋವನು ಬಯಸಿದ ರೀತಿಯಲ್ಲಿ ನಡೆಯಲು ಇಸ್ರೇಲರಿಗೆ ಇಷ್ಟವಿರಲಿಲ್ಲ, ಆತನ ಉಪದೇಶಗಳಿಗೆ ಕಿವಿಗೊಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು