21 ಆದ್ದರಿಂದ ಇನ್ನುಮುಂದೆ ನಾನು ಬೇರೆ ಜನಾಂಗಗಳನ್ನು ಸೋಲಿಸಿ ಇಸ್ರೇಲರ ಮಾರ್ಗವನ್ನು ಸರಾಗಮಾಡುವುದಿಲ್ಲ. ಯೆಹೋಶುವನು ಮರಣ ಹೊಂದಿದಾಗ ಆ ಜನಾಂಗದವರು ಇನ್ನೂ ಈ ಪ್ರದೇಶದಲ್ಲಿದ್ದರು. ಈ ಪ್ರದೇಶದಲ್ಲಿ ವಾಸಿಸಲು ಆ ಜನಾಂಗಗಳಿಗೆ ಇನ್ನು ಮೇಲೆಯೂ ಆಸ್ಪದಕೊಡುತ್ತೇನೆ.
ನಿಮ್ಮ ದೇವರಾದ ಯೆಹೋವನು ಶತ್ರುಗಳನ್ನು ಸೋಲಿಸಲು ನಿಮಗೆ ಸಹಾಯ ಮಾಡುವುದಿಲ್ಲ, ಅವರು ನಿಮಗೆ ಉರುಲಿನಂತಾಗುತ್ತಾರೆ. ಹೊಗೆ ಮತ್ತು ಧೂಳು ನಿಮ್ಮ ಕಣ್ಣಿಗೆ ನೋವನ್ನುಂಟು ಮಾಡುವಂತೆ ಅವರು ನಿಮಗೆ ನೋವನ್ನುಂಟು ಮಾಡುತ್ತಾರೆ; ಈ ಒಳ್ಳೆಯ ದೇಶದಿಂದ ನಿಮ್ಮನ್ನು ಬಲಾತ್ಕಾರದಿಂದ ಹೊರಗಟ್ಟಲಾಗುವುದು. ನಿಮ್ಮ ದೇವರಾದ ಯೆಹೋವನು ಈ ದೇಶವನ್ನು ನಿಮಗೆ ಕೊಟ್ಟಿದ್ದಾನೆ. ಆದರೆ ಯೆಹೋವನ ಆಜ್ಞೆಯನ್ನು ಪಾಲಿಸದಿದ್ದಲ್ಲಿ ನೀವು ಇದನ್ನು ಕಳೆದುಕೊಳ್ಳಬೇಕಾಗುತ್ತದೆ.
“ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ‘ಈ ಪ್ರದೇಶವನ್ನು ಬಿಟ್ಟುಹೋಗುವಂತೆ ನಾನು ಈ ಜನರನ್ನು ಬಲವಂತ ಮಾಡುವುದಿಲ್ಲ. ಈ ಜನರು ನಿಮಗೊಂದು ಸಮಸ್ಯೆಯಾಗುತ್ತಾರೆ. ಅವರು ನಿಮಗೊಂದು ಉರುಲಾಗುತ್ತಾರೆ. ಅವರ ಸುಳ್ಳುದೇವರುಗಳು ನಿಮಗೆ ಬಲೆಯಂತೆ ಉರುಲಾಗುತ್ತವೆ.’”
“‘ಇಸ್ರೇಲ್ ಜನರು ನನ್ನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ. ನನ್ನ ಕಟ್ಟಳೆಗಳಿಗೆ ವಿಧೇಯರಾಗಲು ನಿರಾಕರಿಸಿದರು. ನಾನು ನೇಮಿಸಿದ ಸಬ್ಬತ್ ದಿವಸಗಳನ್ನು ಅಲಕ್ಷ್ಯಮಾಡಿದರು. ಮತ್ತು ಅವರ ಪೂರ್ವಿಕರ ಹೊಲಸು ವಿಗ್ರಹಗಳನ್ನು ಪೂಜಿಸಿದರು.
ಪಶ್ಚಿಮದಲ್ಲಿ ಮೆಡಿಟರೇನಿಯನ್ ಸಮುದ್ರವನ್ನು ಮತ್ತು ಜೋರ್ಡನ್ ನದಿಯ ಮಧ್ಯದ ಪ್ರದೇಶವನ್ನು ನೀವು ಸ್ವಾಧೀನಪಡಿಸಿಕೊಳ್ಳಬಹುದೆಂದು ನಾನು ನಿಮಗೆ ತಿಳಿಸಿದ್ದನ್ನು ಸ್ಮರಿಸಿಕೊಳ್ಳಿ. ನಾನು ಆ ಪ್ರದೇಶವನ್ನು ನಿಮಗೆ ಕೊಡುವುದಾಗಿ ವಾಗ್ದಾನ ಮಾಡಿದ್ದೆ. ಆದರೆ ಇಲ್ಲಿಯವರೆಗೂ ಅದು ನಿಮ್ಮ ಅಧೀನಕ್ಕೆ ಬಂದಿಲ್ಲ.
ಆದರೆ ನಿಮ್ಮ ದೇವರಾದ ಯೆಹೋವನು ಅಲ್ಲಿಯ ನಿವಾಸಿಗಳನ್ನು ಬಲವಂತದಿಂದ ಹೊರಡಿಸುತ್ತಾನೆ. ಆ ಪ್ರದೇಶವನ್ನು ನೀವು ಪಡೆದುಕೊಳ್ಳುತ್ತೀರಿ. ನಿಮ್ಮ ದೇವರಾದ ಯೆಹೋವನು ನಿಮಗಾಗಿ ಇದನ್ನು ಮಾಡುವುದಾಗಿ ವಾಗ್ದಾನ ಮಾಡಿದ್ದಾನೆ.
ಇಸ್ರೇಲರ ಪ್ರದೇಶವನ್ನು ಬಿಟ್ಟುಹೋಗುವಂತೆ ಯೆಹೋವನು ಉಳಿದೆಲ್ಲ ಜನಾಂಗದವರನ್ನು ಒತ್ತಾಯಪಡಿಸಲಿಲ್ಲ. ಯೆಹೋವನು ಇಸ್ರೇಲರನ್ನು ಪರೀಕ್ಷಿಸಬೇಕೆಂದಿದ್ದನು. ಈಗ ಬದುಕಿದ್ದ ಇಸ್ರೇಲರಲ್ಲಿ ಯಾರೂ ಕಾನಾನ್ಯರ ಭೂಮಿಯನ್ನು ತೆಗೆದುಕೊಳ್ಳುವುದಕ್ಕಾಗಿ ಯುದ್ಧ ಮಾಡಿರಲಿಲ್ಲ. ಅದಕ್ಕಾಗಿ ಯೆಹೋವನು ಆ ಬೇರೆ ಜನಾಂಗದವರನ್ನು ಅವರ ದೇಶದಲ್ಲಿ ವಾಸಿಸಲು ಬಿಟ್ಟನು. (ಆ ಯುದ್ಧಗಳಲ್ಲಿ ಭಾಗವಹಿಸದ ಈ ಇಸ್ರೇಲರಿಗೆ ಯುದ್ಧ ಮಾಡುವುದನ್ನು ಕಲಿತುಕೊಳ್ಳಲು ಒಂದು ಅವಕಾಶ ದೊರೆಯುವಂತೆ ಯೆಹೋವನು ಹೀಗೆ ಮಾಡಿದ್ದನು.) ಯೆಹೋವನು ಆ ಭೂಮಿಯಲ್ಲಿ ವಾಸಿಸಲು ಬಿಟ್ಟ ಜನಾಂಗಗಳ ಹೆಸರುಗಳು ಇಂತಿವೆ: