Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 2:22 - ಪರಿಶುದ್ದ ಬೈಬಲ್‌

22 ಇಸ್ರೇಲರು ತಮ್ಮ ಪೂರ್ವಿಕರಂತೆ ಯೆಹೋವನ ಆಜ್ಞೆಗಳನ್ನು ಪಾಲಿಸುತ್ತಾರೆಯೇ ಎಂಬುದನ್ನು ನಾನು ಆ ಜನಾಂಗಗಳ ಮೂಲಕ ಪರೀಕ್ಷಿಸಿ ನೋಡುತ್ತೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಇವರೂ ತಮ್ಮ ಹಿರಿಯರಂತೆ ಜಾಗರೂಕತೆಯಿಂದ ಯೆಹೋವನಾದ ನನ್ನ ಮಾರ್ಗದಲ್ಲಿ ನಡೆಯುವರೋ ಇಲ್ಲವೋ ಎಂದು ಈ ಜನಾಂಗಗಳ ಮೂಲಕವಾಗಿ ಪರೀಕ್ಷಿಸುವೆನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಇವರು ತಮ್ಮ ಹಿರಿಯರಂತೆ ಜಾಗರೂಕತೆಯಿಂದ ಸರ್ವೇಶ್ವರನಾದ ನನ್ನ ಮಾರ್ಗದಲ್ಲಿ ನಡೆಯುವರೋ ಇಲ್ಲವೋ ಎಂದು ಈ ಜನಾಂಗಗಳ ಮುಖಾಂತರವೇ ಪರೀಕ್ಷಿಸುವೆನು,” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಇವರೂ ತಮ್ಮ ಹಿರಿಯರಂತೆ ಜಾಗರೂಕತೆಯಿಂದ ಯೆಹೋವನಾದ ನನ್ನ ಮಾರ್ಗದಲ್ಲಿ ನಡೆಯುವರೋ ಇಲ್ಲವೋ ಎಂದು ಈ ಜನಾಂಗಗಳ ಮೂಲಕವಾಗಿ ಪರೀಕ್ಷಿಸುವೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಇಸ್ರಾಯೇಲರು ತಮ್ಮ ತಂದೆಗಳು ಕೈಗೊಂಡು ನಡೆದ ಯೆಹೋವ ದೇವರ ಮಾರ್ಗದಲ್ಲಿ ತಾವು ಕೈಗೊಂಡು ನಡೆಯುವರೋ ಇಲ್ಲವೋ ಎಂದು ಪರೀಕ್ಷಿಸುವ ಹಾಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 2:22
12 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವನು ಈ ನಲವತ್ತು ವರ್ಷಗಳ ಕಾಲ ನಿಮ್ಮನ್ನು ಅರಣ್ಯ ಪ್ರಯಾಣದಲ್ಲಿ ಮೊದಲು ನಡೆಸಿದ್ದನ್ನು ನೀವು ಯಾವಾಗಲೂ ಸ್ಮರಿಸಬೇಕು. ಯೆಹೋವನು ನಿಮ್ಮನ್ನು ಪರೀಕ್ಷಿಸುತ್ತಿದ್ದನು ಮತ್ತು ನಿಮ್ಮನ್ನು ದೀನರನ್ನಾಗಿ ಮಾಡಬೇಕೆಂದಿದ್ದನು. ನಿಮ್ಮ ಹೃದಯದ ಆಲೋಚನೆಗಳನ್ನು ಆತನು ತಿಳಿದುಕೊಳ್ಳಬೇಕೆಂದಿದ್ದನು; ನೀವು ಆತನ ಆಜ್ಞೆಗಳಿಗೆ ವಿಧೇಯರಾಗುವಿರೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಬೇಕೆಂದಿದ್ದನು.


ನಿಮ್ಮ ಪೂರ್ವಿಕರು ನೋಡಿಲ್ಲದ ಮನ್ನವನ್ನು ಯೆಹೋವನು ನಿಮಗೆ ಮರುಭೂಮಿಯಲ್ಲಿ ತಿನ್ನಲು ಕೊಟ್ಟನು. ಯೆಹೋವನು ನಿಮ್ಮನ್ನು ಪರೀಕ್ಷಿಸಿದನು. ನೀವು ಒಳ್ಳೆಯ ಫಲಭರಿತವಾದ ಜೀವಿತವನ್ನು ನಡೆಸಬೇಕೆಂದು ಯೆಹೋವನು ನಿಮ್ಮನ್ನು ದೀನರನ್ನಾಗಿ ಮಾಡಿದನು.


ಅಂಥ ಮನುಷ್ಯನಿಗೆ ಕಿವಿಗೊಡಬೇಡಿ. ದೇವರು ನಿಮ್ಮನ್ನು ಪರೀಕ್ಷೆ ಮಾಡುತ್ತಿದ್ದಾನೆ. ನಿಮ್ಮ ದೇವರಾದ ಯೆಹೋವನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪ್ರೀತಿಸುತ್ತೀರೋ ಇಲ್ಲವೋ ಎಂದು ನಿಮ್ಮನ್ನು ಪರೀಕ್ಷಿಸುವನು.


ಜನರು ಬೆಳ್ಳಿಬಂಗಾರವನ್ನು ಬೆಂಕಿಗೆ ಹಾಕಿ ಶುದ್ಧಮಾಡುವರು. ಆದರೆ ಮನುಷ್ಯರ ಹೃದಯಗಳನ್ನು ಶುದ್ಧಮಾಡುವವನು ಯೆಹೋವನೇ.


ಇವುಗಳಾದ ಮೇಲೆ, ದೇವರು ಅಬ್ರಹಾಮನ ನಂಬಿಕೆಯನ್ನು ಪರೀಕ್ಷಿಸಲು ನಿರ್ಧರಿಸಿ, “ಅಬ್ರಹಾಮನೇ!” ಎಂದು ಕರೆದನು. ಅಬ್ರಹಾಮನು, “ಇಗೋ ಇದ್ದೇನೆ” ಅಂದನು.


ಜನರು ಬೆಳ್ಳಿಯನ್ನು ಬೆಂಕಿಯಿಂದ ಶೋಧಿಸುವಂತೆ ದೇವರು ನಮ್ಮನ್ನು ಪರೀಕ್ಷಿಸಿದನು.


ಆದರೆ ನನ್ನ ಪ್ರತಿಯೊಂದು ಹೆಜ್ಜೆಯನ್ನೂ ದೇವರು ಬಲ್ಲನು. ಆತನು ನನ್ನನ್ನು ಪರೀಕ್ಷಿಸಿ ನೋಡಿದಾಗ ನಾನು ಅಪ್ಪಟ ಬಂಗಾರದಂತಿರುವುದನ್ನು ಕಂಡುಕೊಳ್ಳುವನು.


ಒಂದು ಸಾರಿ ಬಾಬಿಲೋನಿನವರು ಹಿಜ್ಕೀಯನ ಬಳಿಗೆ ದೂತರನ್ನು ಕಳುಹಿಸಿದರು. ಅವರು ದೇಶದಲ್ಲಿ ಆದ ಅದ್ಭುತ ವಿಷಯದ ಬಗ್ಗೆ ವಿಚಾರಿಸಿದರು. ಅವರು ಹಿಜ್ಕೀಯನ ಬಳಿಗೆ ಬಂದಾಗ ದೇವರು ಅವನನ್ನು ಪರೀಕ್ಷಿಸುವುದಕ್ಕಾಗಿಯೂ ಅವನ ಹೃದಯದಲ್ಲಿದ್ದ ಪ್ರತಿಯೊಂದು ಆಲೋಚನೆಯನ್ನು ತಿಳಿದುಕೊಳ್ಳುವುದಕ್ಕಾಗಿಯೂ ಅವನನ್ನು ತೊರೆದುಬಿಟ್ಟನು.


ಮೋಶೆಯು ಯೆಹೋವನಿಗೆ ಪ್ರಾರ್ಥಿಸಲು ಆತನು ಅವನಿಗೆ ಒಂದು ಗಿಡವನ್ನು ತೋರಿಸಿದನು. ಮೋಶೆಯು ಆ ಗಿಡವನ್ನು ನೀರಿನಲ್ಲಿ ಹಾಕಿದಾಗ ಕಹಿನೀರು ಸಿಹಿ ನೀರಾಯಿತು. ಆ ಸ್ಥಳದಲ್ಲಿ ಯೆಹೋವನು ಅವರಿಗಾಗಿ ನಿಯಮವನ್ನು ಮಾಡಿದನು. ಯೆಹೋವನು ಅವರ ನಂಬಿಕೆಯನ್ನು ಸಹ ಪರೀಕ್ಷಿಸಿದನು.


ಯೆಹೋವನು ಆ ಜನಾಂಗಗಳನ್ನು ಆ ಪ್ರದೇಶದಲ್ಲಿ ಇರುವುದಕ್ಕೆ ಬಿಟ್ಟನು. ಆ ಜನಾಂಗಗಳು ಈ ದೇಶವನ್ನು ಬಿಟ್ಟು ಹೋಗುವಂತೆ ಯೆಹೋವನು ಒತ್ತಾಯಪಡಿಸಲಿಲ್ಲ. ಅವರನ್ನು ಸೋಲಿಸಲು ಯೆಹೋಶುವನ ಸೈನ್ಯಕ್ಕೆ ಸಹಾಯ ಮಾಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು