Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 20:10 - ಪರಿಶುದ್ದ ಬೈಬಲ್‌

10 ನಾವು ಇಸ್ರೇಲಿನ ಎಲ್ಲ ಕುಲಗಳಲ್ಲಿ ಪ್ರತಿ ನೂರು ಮಂದಿಗೆ ಹತ್ತು ಮಂದಿಯನ್ನು ಆರಿಸಿಕೊಳ್ಳೋಣ. ಪ್ರತಿ ಸಾವಿರ ಮಂದಿಗೆ ನೂರು ಮಂದಿಯನ್ನು ಆರಿಸಿಕೊಳ್ಳೋಣ. ಪ್ರತಿ ಹತ್ತು ಸಾವಿರ ಮಂದಿಗೆ ಒಂದು ಸಾವಿರ ಮಂದಿಯನ್ನು ಆರಿಸಿಕೊಳ್ಳೋಣ. ಹೀಗೆ, ನಾವು ಆರಿಸಿಕೊಂಡ ಜನರು ಸೈನ್ಯಕ್ಕೆ ಆಹಾರ ಸರಬರಾಜು ಮಾಡಲಿ. ಆಮೇಲೆ ಬೆನ್ಯಾಮೀನ್ಯರ ಪ್ರದೇಶದಲ್ಲಿರುವ ಗಿಬೆಯಕ್ಕೆ ಸೈನ್ಯ ಕಳುಹಿಸೋಣ. ಇಸ್ರೇಲರಿಗೆ ಹೀಗೆ ನಿಂದೆಗೆ ಗುರಿಮಾಡಿದ ದುಷ್ಕರ್ಮಿಗಳಿಗೆ ತಕ್ಕ ಶಿಕ್ಷೆ ದೊರಕಲಿ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇಸ್ರಾಯೇಲ್ಯರ ಕುಲಗಳಲ್ಲಿ ನೂರಕ್ಕೆ ಹತ್ತು, ಸಾವಿರಕ್ಕೆ ನೂರು, ಹತ್ತು ಸಾವಿರಕ್ಕೆ ಸಾವಿರ ಈ ಪ್ರಕಾರ ಜನರನ್ನು ಆರಿಸಿಕೊಂಡು ಅವರನ್ನು ಆಹಾರ ತರುವುದಕ್ಕಾಗಿ ಕಳುಹಿಸೋಣ. ಅವರು ಬಂದ ಮೇಲೆ ಬೆನ್ಯಾಮೀನ್ಯರಾದ ಗಿಬೆಯದವರು ಇಸ್ರಾಯೇಲರಲ್ಲಿ ನಡೆಸಿದ ದುಷ್ಟ ಕಾರ್ಯಕ್ಕಾಗಿ ಅವರಿಗೆ ದಂಡನೆಮಾಡೋಣ” ಅಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇಸ್ರಯೇಲರ ಕುಲಗಳಲ್ಲಿ ನೂರಕ್ಕೆ ಹತ್ತು, ಸಾವಿರಕ್ಕೆ ನೂರು, ಹತ್ತು ಸಾವಿರಕ್ಕೆ ಸಾವಿರ ಈ ಪ್ರಕಾರವೇ ಜನರನ್ನು ಆರಿಸಿಕೊಂಡು ಅವರನ್ನು ಆಹಾರ ತರುವುದಕ್ಕಾಗಿ ಕಳುಹಿಸೋಣ. ಅವರು ಬಂದ ಮೇಲೆ ಬೆನ್ಯಾಮೀನ್ಯರಾದ ಗಿಬೆಯದವರು ಇಸ್ರಯೇಲರಲ್ಲಿ ನಡೆಸಿದ ದುಷ್ಕರ್ಮಕ್ಕಾಗಿ ಅವರನ್ನು ದಂಡಿಸೋಣ,” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇಸ್ರಾಯೇಲ್ಯರ ಕುಲಗಳಲ್ಲಿ ನೂರಕ್ಕೆ ಹತ್ತು, ಸಾವಿರಕ್ಕೆ ನೂರು, ಹತ್ತು ಸಾವಿರಕ್ಕೆ ಸಾವಿರ ಈ ಪ್ರಕಾರ ಜನರನ್ನು ಆರಿಸಿಕೊಂಡು ಅವರನ್ನು ಆಹಾರ ತರುವದಕ್ಕಾಗಿ ಕಳುಹಿಸೋಣ. ಅವರು ಬಂದ ಮೇಲೆ ಬೆನ್ಯಾಮೀನ್ಯರಾದ ಗಿಬೆಯದವರು ಇಸ್ರಾಯೇಲ್ಯರಲ್ಲಿ ನಡಿಸಿದ ದುಷ್ಕರ್ಮಕ್ಕಾಗಿ ಅವರಿಗೆ ದಂಡನೆ ಮಾಡೋಣ ಅಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದರೆ ಬೆನ್ಯಾಮೀನನ ಗೋತ್ರದವರಾದ ಗಿಬೆಯದವರು ಇಸ್ರಾಯೇಲಿನಲ್ಲಿ ಮಾಡಿದ ಈ ಅತಿರೇಕದ ಕೆಲಸಕ್ಕೆ ತಕ್ಕ ಪ್ರಕಾರ ಮಾಡುವ ಹಾಗೆ ನಾವು ಆಹಾರವನ್ನು ತೆಗೆದುಕೊಂಡು ಬರುವುದಕ್ಕೆ ಇಸ್ರಾಯೇಲಿನ ಸಕಲ ಗೋತ್ರಗಳಲ್ಲಿ ನೂರಕ್ಕೆ ಹತ್ತು ಸಾವಿರಕ್ಕೆ ನೂರು, ಹತ್ತು ಸಾವಿರಕ್ಕೆ ಸಾವಿರ ಜನರನ್ನು ತೆಗೆದುಕೊಂಡು ಕಳುಹಿಸುತ್ತೇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 20:10
7 ತಿಳಿವುಗಳ ಹೋಲಿಕೆ  

ಈಗ ಗಿಬೆಯ ನಗರದ ಬಗ್ಗೆ ನಾವು ಚೀಟು ಹಾಕೋಣ. ಆ ಜನರಿಗೆ ಏನು ಮಾಡಬೇಕೆಂಬುದನ್ನು ದೇವರೇ ನಮಗೆ ತೋರಿಸಿಕೊಡಲಿ.


ಇಸ್ರೇಲಿನ ಎಲ್ಲಾ ಜನರು ಗಿಬೆಯದಲ್ಲಿ ಸೇರಿದರು. ಅವರು ಏನು ಮಾಡಬೇಕೆಂಬುದನ್ನು ಒಮ್ಮತದಿಂದ ನಿರ್ಧರಿಸಿದರು.


“ಆ ದುರಾಚಾರಗಳಲ್ಲಿ ಯಾವುದರಿಂದಲೂ ನಿಮ್ಮನ್ನು ಅಶುದ್ಧರನ್ನಾಗಿ ಮಾಡಿಕೊಳ್ಳಬೇಡಿರಿ. ನಾನು ಜನಾಂಗಗಳನ್ನು ಅವರ ದೇಶಗಳಿಂದ ಹೊರಡಿಸಿ ಅವರ ದೇಶವನ್ನು ನಿಮಗೆ ಕೊಡುತ್ತಿದ್ದೇನೆ. ಯಾಕೆಂದರೆ ಅವರು ಅಂಥ ಭಯಂಕರ ಪಾಪಗಳನ್ನು ಮಾಡಿದರು.


ಊರಹಿರಿಯರು ಆ ಹುಡುಗಿಯನ್ನು ಆಕೆಯ ತಂದೆಯ ಮನೆಬಾಗಿಲಿಗೆ ತರಬೇಕು. ಅಲ್ಲಿ ಊರಜನರು ಆಕೆಯನ್ನು ಕಲ್ಲೆಸೆದು ಸಾಯಿಸಬೇಕು. ಯಾಕೆಂದರೆ ಆಕೆಯು ಇಸ್ರೇಲಿನಲ್ಲಿ ನಾಚಿಕೆಕರವಾದ ಕೃತ್ಯವನ್ನು ನಡೆಸಿದ್ದಾಳೆ; ತನ್ನ ತಂದೆಯ ಮನೆಯಲ್ಲಿದ್ದುಕೊಂಡು ವೇಶ್ಯಾವೃತ್ತಿ ನಡಿಸಿದ್ದಾಳೆ. ಅಂಥಾ ಪಾಪವನ್ನು ನೀವು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.


ಆಗ ನಾವು ನಾಶಪಡಿಸಬೇಕಾಗಿದ್ದ ವಸ್ತುಗಳನ್ನು ಇಟ್ಟುಕೊಂಡ ಮನುಷ್ಯನು ಸಿಕ್ಕಿಬೀಳುತ್ತಾನೆ. ಬಳಿಕ ಆ ಮನುಷ್ಯನು ಬೆಂಕಿಯಿಂದ ನಾಶವಾಗುವನು. ಅವನ ಎಲ್ಲಾ ಸ್ವತ್ತು ಅವನೊಂದಿಗೆ ನಾಶವಾಗುವುದು. ಆ ಮನುಷ್ಯನು ಯೆಹೋವನ ಆಜ್ಞೆಯನ್ನು ಮೀರಿದ್ದಾನೆ. ಇಸ್ರೇಲರಿಗೆ ಕೇಡನ್ನು ಬರಮಾಡಿದ್ದಾನೆ’” ಎಂದನು.


ಬಳಿಕ ನಾನು ನನ್ನ ಉಪಪತ್ನಿಯ ದೇಹವನ್ನು ತುಂಡುತುಂಡಾಗಿ ಕತ್ತರಿಸಿ ಇಸ್ರೇಲರ ಪ್ರತಿಯೊಂದು ಕುಲಕ್ಕೂ ಒಂದು ತುಂಡನ್ನು ಕಳುಹಿಸಿದೆ. ಹೀಗೆ ನಾವು ಪಡೆದುಕೊಂಡ ಪ್ರದೇಶಗಳಿಗೆ ಹನ್ನೆರಡು ತುಂಡುಗಳನ್ನು ಕಳುಹಿಸಿದೆ. ಇಸ್ರೇಲಿನಲ್ಲಿ ಬೆನ್ಯಾಮೀನ್ಯರು ಇಂಥ ಭಯಾನಕ ಕೃತ್ಯವನ್ನು ಮಾಡಿದ್ದಕ್ಕಾಗಿ ನಾನು ಇದನ್ನು ಮಾಡಿದೆ.


ಮಿಚ್ಛೆಯಲ್ಲಿ ಇಸ್ರೇಲಿನ ಜನರು ಒಂದು ಪ್ರತಿಜ್ಞೆಯನ್ನು ಮಾಡಿದ್ದರು. “ನಮ್ಮಲ್ಲಿ ಯಾರೂ ನಮ್ಮ ಹೆಣ್ಣುಮಕ್ಕಳನ್ನು ಬೆನ್ಯಾಮೀನ್ಯರಿಗೆ ಮದುವೆ ಮಾಡಿಕೊಡುವುದಿಲ್ಲ” ಎಂಬುದೇ ಆ ಪ್ರತಿಜ್ಞೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು