Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 20:13 - ಪರಿಶುದ್ದ ಬೈಬಲ್‌

13 ಆ ನೀಚರನ್ನು ಗಿಬೆಯದಿಂದ ನಮ್ಮಲ್ಲಿಗೆ ಕಳುಹಿಸಿಕೊಡಿ; ಅವರನ್ನು ನಮಗೆ ಒಪ್ಪಿಸಿರಿ. ನಾವು ಅವರನ್ನು ಕೊಲ್ಲಬೇಕು; ಇಸ್ರೇಲರ ಮಧ್ಯದಲ್ಲಿರುವ ಈ ಪಾಪಿಗಳನ್ನು ನಿರ್ಮೂಲ ಮಾಡಬೇಕು.” ಆದರೆ ಬೆನ್ಯಾಮೀನ್ಯರು ತಮ್ಮ ಬಂಧುಗಳಾದ ಇಸ್ರೇಲರ ಸಂದೇಶವನ್ನು ಕೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಈಗ ಗಿಬೆಯ ಊರಲ್ಲಿರುವ ಆ ದುಷ್ಟರನ್ನು ನಮಗೆ ಒಪ್ಪಿಸಿರಿ; ನಾವು ಅವರನ್ನು ಕೊಂದು ಇಸ್ರಾಯೇಲರ ಮಧ್ಯದಿಂದ ಇಂಥ ದುಷ್ಟತನವನ್ನು ತೆಗೆದುಹಾಕುತ್ತೇವೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಈಗ ಗಿಬೆಯ ಊರಲ್ಲಿರುವ ಆ ನೀಚರನ್ನು ನಮಗೆ ಒಪ್ಪಿಸಿರಿ; ನಾವು ಅವರನ್ನು ಕೊಂದು ಇಸ್ರಯೇಲರ ಮಧ್ಯೆಯಿಂದ ಇಂಥ ದುಷ್ಟತನವನ್ನು ತೆಗೆದುಹಾಕುತ್ತೇವೆ,” ಎಂದು ಹೇಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಈಗ ಗಿಬೆಯ ಊರಲ್ಲಿರುವ ಆ ನೀಚರನ್ನು ನಮಗೆ ಒಪ್ಪಿಸಿರಿ; ನಾವು ಅವರನ್ನು ಕೊಂದು ಇಸ್ರಾಯೇಲ್ಯರ ಮಧ್ಯದಿಂದ ಇಂಥ ದುಷ್ಟತನವನ್ನು ತೆಗೆದುಹಾಕುತ್ತೇವೆ ಎಂದು ಹೇಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಗಿಬೆಯದಲ್ಲಿರುವ ದುಷ್ಟ ಮನುಷ್ಯರನ್ನು ನಾವು ಕೊಂದು, ಕೆಟ್ಟತನವನ್ನು ಇಸ್ರಾಯೇಲಿನಿಂದ ತೆಗೆದುಹಾಕುವ ಹಾಗೆ, ಅವರನ್ನು ಒಪ್ಪಿಸಿಕೊಡಿರಿ,” ಎಂದು ಹೇಳಿ ಕಳುಹಿಸಿದರು. ಆದರೆ ಬೆನ್ಯಾಮೀನ್ಯರು ಇಸ್ರಾಯೇಲರಾದ ತಮ್ಮ ಸಹೋದರರ ಮಾತನ್ನು ಕೇಳುವುದಕ್ಕೆ ಮನಸ್ಸಿಲ್ಲದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 20:13
30 ತಿಳಿವುಗಳ ಹೋಲಿಕೆ  

ಲೇವಿಯು ಮತ್ತು ಅವನ ಸಂಗಡಿಗರು ಸಂತೋಷದಿಂದ ಅಲ್ಲಿದ್ದಾಗ ಆ ನಗರದ ಕೆಲವು ಜನರು ಆ ಮನೆಗೆ ಮುತ್ತಿಗೆ ಹಾಕಿದರು. ಅವರು ಮಹಾ ನೀಚಜನರಾಗಿದ್ದರು. ಅವರು ಬಾಗಿಲು ತಟ್ಟತೊಡಗಿದರು. ಆ ಮನೆಯ ಯಜಮಾನನಾದ ವೃದ್ಧನಿಗೆ, “ನಿನ್ನ ಮನೆಗೆ ಬಂದ ಆ ಮನುಷ್ಯನನ್ನು ಹೊರಗೆ ಕರೆದುಕೊಂಡು ಬಾ. ನಾವು ಅವನೊಂದಿಗೆ ಸಂಭೋಗ ಮಾಡಬೇಕು”ಎಂದು ಕೂಗಾಡಿದರು.


“ನಿಮ್ಮ ದೇವರಾದ ಯೆಹೋವನ ಸೇವೆಮಾಡುತ್ತಿರುವ ಯಾಜಕನಾಗಲಿ ನ್ಯಾಯಾಧೀಶನಾಗಲಿ ಹೇಳಿದ ತೀರ್ಪನ್ನು ಉಲ್ಲಂಘಿಸಿದವನಿಗೆ ಮರಣದಂಡನೆ ಆಗಬೇಕು. ನೀವು ಆ ದುಷ್ಟನನ್ನು ಇಸ್ರೇಲಿನಿಂದ ನಿರ್ಮೂಲ ಮಾಡಬೇಕು.


ನಿಮ್ಮ ಸ್ವಂತ ದೇಶದಲ್ಲಿರುವ ಕೆಲವು ಕೆಟ್ಟ ಜನರು ಕೆಟ್ಟದ್ದನ್ನು ಮಾಡಲು ತಮ್ಮ ಪಟ್ಟಣದ ಜನರನ್ನು ಒತ್ತಾಯಪಡಿಸುತ್ತಿದ್ದಾರೆಂದು ನೀವು ಕೇಳಬಹುದು. ಅವರು ತಮ್ಮ ಪಟ್ಟಣದ ಜನರಿಗೆ, ‘ನಾವು ಹೋಗಿ ಬೇರೆ ದೇವರುಗಳ ಸೇವೆಮಾಡೋಣ’ ಎಂದು ಹೇಳಬಹುದು. (ಈ ದೇವರುಗಳನ್ನು ನೀವು ಹಿಂದೆಂದೂ ತಿಳಿದಿಲ್ಲ.)


ಇಂಥವರಿಗೆ ಮರಣದಂಡನೆ ಆಗಬೇಕೆಂದು ದೇವರ ಧರ್ಮಶಾಸ್ತ್ರ ಹೇಳುತ್ತದೆ ಎಂಬುದು ಅವರಿಗೆ ಗೊತ್ತಿದೆ. ಆದರೂ ಅವರು ಇಂಥ ಕಾರ್ಯಗಳನ್ನು ಮಾಡುತ್ತಾರೆ ಮತ್ತು ಇಂಥ ಕಾರ್ಯಗಳನ್ನು ಮಾಡುವ ಜನರಿಗೆ ಪ್ರೋತ್ಸಾಹ ನೀಡುತ್ತಾರೆ.


“ಇಸ್ರೇಲೇ, ನೀನು ಗಿಬ್ಯದವರ ಕಾಲದಿಂದಲೂ ಪಾಪ ಮಾಡುತ್ತಲೇ ಬಂದಿರುವೆ. (ಆ ಜನರು ಅಲ್ಲಿ ಪಾಪವನ್ನು ಮಾಡುತ್ತಲೇ ಇದ್ದಾರೆ.) ಗಿಬ್ಯದ ಆ ದುಷ್ಟ ಜನರನ್ನು ಯುದ್ಧವು ಹಿಡಿದುಕೊಳ್ಳುವುದು.


ಗಿಬ್ಯದ ಕಾಲದಂತೆ ಇಸ್ರೇಲರು ನಾಶನದ ಕಡೆಗೆ ಆಳವಾಗಿ ಇಳಿದಿದ್ದಾರೆ. ಯೆಹೋವನು ಇಸ್ರೇಲರ ಪಾಪಗಳನ್ನು ತನ್ನ ನೆನಪಿಗೆ ತಂದುಕೊಂಡು ಅವರನ್ನು ಶಿಕ್ಷಿಸುವನು.


ನಿಮ್ಮ ಕೋಪವು ನಿಮ್ಮನ್ನು ಹತೋಟಿಯಲ್ಲಿಡದಂತೆ ನೋಡಿಕೊಳ್ಳಿರಿ. ನಿಮ್ಮ ದೇಹವು ನಿಮ್ಮನ್ನು ಪಾಪಕ್ಕೆ ನಡೆಸದಂತೆ ನೋಡಿಕೊಳ್ಳಿರಿ. ಜನರು ಯೌವನಪ್ರಾಯದಲ್ಲಿರುವಾಗ, ಜೀವನದ ಆರಂಭದಲ್ಲಿಯೇ ಮೂಢಕಾರ್ಯಗಳನ್ನು ಮಾಡುವರು.


ಪದೇಪದೇ ಎಚ್ಚರಿಸಿದರೂ ಮೊಂಡನಾಗಿರುವವನು ಪಕ್ಕನೆ ಏಳದ ಹಾಗೆ ನಾಶವಾಗುವನು.


ಅಮಚ್ಯನು ಅವನ ಮಾತಿಗೆ ಲಕ್ಷ್ಯಕೊಡಲಿಲ್ಲ. ಇದು ದೇವರಿಂದಲೇ ಆಯಿತು. ಇಸ್ರೇಲ್ ಯೆಹೂದವನ್ನು ಸೋಲಿಸಬೇಕೆಂದು ದೇವರ ಇಚ್ಛೆಯಾಗಿತ್ತು. ಯಾಕೆಂದರೆ ಯೆಹೂದದ ಜನರು ಎದೋಮ್ಯರ ದೇವರುಗಳನ್ನು ಆರಾಧಿಸುತ್ತಿದ್ದರು.


ಆ ಪ್ರವಾದಿಯು ಈ ಮಾತುಗಳನ್ನು ಹೇಳಿದಾಗ ಅಮಚ್ಯನು, “ನಾವು ನಿನ್ನನ್ನು ಅರಸನ ಸಲಹೆಗಾರನನ್ನಾಗಿ ಮಾಡಲಿಲ್ಲವಲ್ಲಾ. ಆದ್ದರಿಂದ ಬಾಯಿಮುಚ್ಚಿಕೊಂಡು ಸುಮ್ಮನಿರು. ಇಲ್ಲದಿದ್ದರೆ ನೀನು ಸಾಯುವೆ” ಅಂದನು. ಆದರೆ ಅವನು, “ದೇವರು ನಿನ್ನನ್ನು ನಾಶಮಾಡಲು ನಿರ್ಧರಿಸಿದ್ದಾನೆ; ಯಾಕೆಂದರೆ ನೀನು ನನ್ನ ಸಲಹೆಯನ್ನು ಕೇಳದೆ ದುಷ್ಟತನ ಮಾಡುತ್ತಿರುವೆ?” ಎಂದು ಹೇಳಿದನು.


ಆಗ ಕೆಲಸಕ್ಕೆ ಬಾರದ ದುಷ್ಟಜನರು ಯಾರೊಬ್ಬಾಮನ ಸ್ನೇಹಿತರಾಗಿ ಅವನನ್ನು ಹಿಂಬಾಲಿಸಿ ರೆಹಬ್ಬಾಮನಿಗೆ ವಿರುದ್ಧವಾಗಿ ದಂಗೆ ಎದ್ದರು. ಸೊಲೊಮೋನನ ಮಗನಾದ ರೆಹಬ್ಬಾಮನು ಆಗ ಸಣ್ಣ ಪ್ರಾಯದವನಾಗಿ ಅನುಭವವಿಲ್ಲದವನಾಗಿದ್ದನು. ಆದ್ದರಿಂದ ಯಾರೊಬ್ಬಾಮನನ್ನೂ ಅವನ ದುಷ್ಟ ಹಿಂಬಾಲಕರನ್ನೂ ತಡೆಯಲು ಅವನಿಗೆ ಆಗಲಿಲ್ಲ.


ನಾಬೋತನು ದೇವರ ವಿರುದ್ಧವಾಗಿಯೂ ರಾಜನ ವಿರುದ್ಧವಾಗಿಯೂ ಮಾತನಾಡಿದ್ದನ್ನು ತಾವು ಕೇಳಿರುವುದಾಗಿ ಇಬ್ಬರು ಅಲ್ಲಿನ ಜನರಿಗೆ ಹೇಳಿದರು. ಜನರು ನಾಬೋತನನ್ನು ನಗರದ ಹೊರಕ್ಕೆ ಕರೆದೊಯ್ದು ಅವನನ್ನು ಕಲ್ಲೆಸೆದು ಕೊಂದರು.


“ಆದರೆ ಕೆಟ್ಟಜನರೆಲ್ಲರೂ ಮುಳ್ಳುಗಳಂತಿದ್ದಾರೆ. ಜನರು ಮುಳ್ಳುಗಳನ್ನು ಹಿಡಿದುಕೊಳ್ಳುವುದಿಲ್ಲ; ಅವರು ಅವುಗಳನ್ನು ಎಸೆದುಬಿಡುವರು.


ಬಿಕ್ರೀಯ ಮಗನಾದ ಶೆಬ ಅಲ್ಲಿದ್ದನು. ಇವನು ದುಷ್ಟನಾಗಿದ್ದನು; ಬೆನ್ಯಾಮೀನ್ ಕುಲದವನಾಗಿದ್ದ ಇವನು, ತುತ್ತೂರಿಯನ್ನು ಊದುತ್ತಾ, “ದಾವೀದನಲ್ಲಿ ನಮ್ಮ ಪಾಲು ಏನೂ ಇಲ್ಲ. ಇಷಯನ ಮಗನಲ್ಲಿ ನಮಗೇನೂ ಇಲ್ಲ. ನಾವೆಲ್ಲ, ಅಂದರೆ ಇಸ್ರೇಲರೆಲ್ಲ ನಮ್ಮನಮ್ಮ ಗುಡಾರಗಳಿಗೆ ಹೋಗೋಣ” ಎಂದು ಹೇಳಿದನು.


ಆದರೆ ದಾವೀದನ ಜೊತೆಯಲ್ಲಿ ಹೋಗಿದ್ದ ಜನರ ಗುಂಪಿನಲ್ಲಿ ಕೆಟ್ಟ ಜನರೂ ಕಿಡಿಗೇಡಿಗಳೂ ಇದ್ದರು. ಆ ಕೀಡಿಗೇಡಿಗಳು, “ಈ ಇನ್ನೂರು ಜನರು ನಮ್ಮೊಡನೆ ಬರಲಿಲ್ಲ. ಆದ್ದರಿಂದ ನಾವು ವಶಪಡಿಸಿಕೊಂಡ ವಸ್ತುಗಳಲ್ಲಿ ಯಾವುದನ್ನೂ ಇವರಿಗೆ ಕೊಡುವುದಿಲ್ಲ. ಇವರು ತಮ್ಮ ಹೆಂಡತಿಯರನ್ನು ಮತ್ತು ಮಕ್ಕಳನ್ನು ಮಾತ್ರ ತೆಗೆದುಕೊಳ್ಳಬಹುದು” ಎಂದು ಹೇಳಿದರು.


ಒಬ್ಬ ಮನುಷ್ಯನು ಬೇರೊಬ್ಬನ ವಿರುದ್ಧ ಅಪರಾಧ ಮಾಡಿದರೆ, ಯೆಹೋವನು ಅವನಿಗೆ ಸಹಾಯ ಮಾಡಬಹುದು, ಆದರೆ ಒಬ್ಬ ಮನುಷ್ಯನು ಯೆಹೋವನ ವಿರುದ್ಧವೇ ಅಪರಾಧ ಮಾಡಿದರೆ, ಆಗ ಅವನಿಗೆ ಸಹಾಯ ಮಾಡುವವರು ಯಾರು?” ಎಂದು ಬುದ್ಧಿಮಾತು ಹೇಳಿದನು. ಆದರೆ ಏಲಿಯ ಮಾತನ್ನು ಅವನ ಮಕ್ಕಳು ಕೇಳಲಿಲ್ಲ. ಆದ್ದರಿಂದ ಯೆಹೋವನು ಏಲಿಯ ಮಕ್ಕಳನ್ನು ಕೊಲ್ಲಲು ನಿರ್ಧರಿಸಿದನು.


“ಒಬ್ಬನು ಇನ್ನೊಬ್ಬ ಇಸ್ರೇಲನನ್ನು ಕದ್ದುಕೊಂಡು ಹೋಗಿ ಅವನನ್ನು ಗುಲಾಮನನ್ನಾಗಿ ಮಾರಬಾರದು. ಹಾಗೆ ಮಾಡಿದವನನ್ನು ಸಾಯಿಸಬೇಕು. ನಿಮ್ಮ ಕುಲದಿಂದ ಅಂಥಾ ಪಾಪವನ್ನು ತೆಗೆದುಹಾಕಬೇಕು.


ನಗರದ ಬಾಗಿಲಿನ ಬಳಿಯಿರುವ ಸಾರ್ವಜನಿಕ ಸ್ಥಳಕ್ಕೆ ನೀವು ಅವರಿಬ್ಬರನ್ನು ಕರೆದುಕೊಂಡು ಬಂದು ಅವರಿಬ್ಬರನ್ನೂ ಕಲ್ಲೆಸೆದು ಕೊಲ್ಲಬೇಕು. ನೀವು ಆ ಪುರುಷನನ್ನು ಕೊಲ್ಲಬೇಕು. ಏಕೆಂದರೆ ಅವನು ಮತ್ತೊಬ್ಬನ ಹೆಂಡತಿಯನ್ನು ಲೈಂಗಿಕವಾಗಿ ಹಿಂಸಿಸಿದನು. ನೀವು ಆ ಸ್ತ್ರೀಯನ್ನು ಕೊಲ್ಲಬೇಕು; ಯಾಕೆಂದರೆ ಆಕೆಯು ನಗರದಲ್ಲಿದ್ದರೂ ಸಹಾಯಕ್ಕಾಗಿ ಕೂಗಿಕೊಳ್ಳಲಿಲ್ಲ. ಆ ಕೆಡುಕನ್ನು ನೀವು ನಿಮ್ಮ ಜನರಿಂದ ತೆಗೆದುಹಾಕಬೇಕು.


ಊರಹಿರಿಯರು ಆ ಹುಡುಗಿಯನ್ನು ಆಕೆಯ ತಂದೆಯ ಮನೆಬಾಗಿಲಿಗೆ ತರಬೇಕು. ಅಲ್ಲಿ ಊರಜನರು ಆಕೆಯನ್ನು ಕಲ್ಲೆಸೆದು ಸಾಯಿಸಬೇಕು. ಯಾಕೆಂದರೆ ಆಕೆಯು ಇಸ್ರೇಲಿನಲ್ಲಿ ನಾಚಿಕೆಕರವಾದ ಕೃತ್ಯವನ್ನು ನಡೆಸಿದ್ದಾಳೆ; ತನ್ನ ತಂದೆಯ ಮನೆಯಲ್ಲಿದ್ದುಕೊಂಡು ವೇಶ್ಯಾವೃತ್ತಿ ನಡಿಸಿದ್ದಾಳೆ. ಅಂಥಾ ಪಾಪವನ್ನು ನೀವು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.


ಆಗ ಆ ಪಟ್ಟಣದ ಜನರು ಸೇರಿ ಆ ಮಗನನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ನಿಮ್ಮಲ್ಲಿರುವ ದುಷ್ಟತನವನ್ನು ತೆಗೆದುಹಾಕಬೇಕು. ಎಲ್ಲಾ ಇಸ್ರೇಲರು ಇದನ್ನು ಕೇಳಿ ಭಯಗ್ರಸ್ತರಾಗುವರು.


ಆ ಸಾಕ್ಷಿಯವನಿಗೆ ಶಿಕ್ಷೆ ವಿಧಿಸಬೇಕು. ತನ್ನ ವಿರೋಧಿಗೆ ಯಾವ ಶಿಕ್ಷೆ ಬರಬೇಕೆಂಬುದಾಗಿ ಅವನು ಸುಳ್ಳಾಡಿದ್ದನೋ, ಅದೇ ಶಿಕ್ಷೆಯನ್ನು ಅವನಿಗೆ ವಿಧಿಸಬೇಕು. ಈ ರೀತಿಯಾಗಿ ಆ ದುಷ್ಟತನವನ್ನು ನಿಮ್ಮ ಕುಲಗಳಿಂದ ತೆಗೆದುಹಾಕಬೇಕು.


ಸತ್ಯವೆಂದು ಹೇಳಿದ ಸಾಕ್ಷಿಗಳು ಮೊದಲು ಅವರ ಮೇಲೆ ಕಲ್ಲೆಸೆಯಬೇಕು. ಅನಂತರ ಬೇರೆಯವರು ಕಲ್ಲೆಸೆದು ಅವರನ್ನು ಸಾಯಿಸಬೇಕು. ಈ ರೀತಿಯಾಗಿ ನಿಮ್ಮ ಮಧ್ಯೆ ಇದ್ದ ದುಷ್ಕೃತ್ಯವನ್ನು ತೆಗೆದುಹಾಕಬೇಕು.


ಅಂಥ ಪ್ರವಾದಿ ಅಥವಾ ಕನಸಿನ ಅರ್ಥ ಹೇಳುವವನನ್ನು ಕೊಂದು ಹಾಕಬೇಕು. ಯಾಕೆಂದರೆ ಅವನು ಯೆಹೋವನನ್ನು ತೊರೆಯಲು ಪ್ರೇರೇಪಿಸಿದನಲ್ಲಾ? ದೇವರಾದ ಯೆಹೋವನೇ ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿದವನು. ಆತನು ನಿಮಗೆ ಹೇಳಿದ ನಿಯಮಗಳಿಗೆ ವಿರುದ್ಧವಾಗಿ ನಡೆಯಲು ಪ್ರೇರೇಪಿಸುವವನನ್ನು ಕೊಲ್ಲಬೇಕು; ನಿಮ್ಮ ಮಧ್ಯದಿಂದ ಅಂಥ ದುಷ್ಟತನವನ್ನು ತೆಗೆದುಹಾಕಬೇಕು.


ಕ್ರಿಸ್ತನೂ ಸೈತಾನನೂ ಅನ್ಯೋನ್ಯವಾಗಿರಲು ಸಾಧ್ಯವೇ? ವಿಶ್ವಾಸಿಗಳಿಗೂ ಅವಿಶ್ವಾಸಿಗಳಿಗೂ ಪಾಲುಗಾರಿಕೆಯೇನು?


ಇಸ್ರೇಲ್ ಕುಲದವರು ಬೆನ್ಯಾಮೀನ್ ಕುಲದವರಿಗೆ ಒಂದು ಸಂದೇಶವನ್ನು ದೂತನ ಮೂಲಕ ಕಳುಹಿಸಿದರು. ಆ ಸಂದೇಶ ಹೀಗಿತ್ತು: “ನಿಮ್ಮವರಾದ ಕೆಲವು ಜನರು ಮಾಡಿದ ಈ ದುಷ್ಕೃತ್ಯದ ಬಗ್ಗೆ ಏನು ಹೇಳುತ್ತೀರಿ.


ಬೆನ್ಯಾಮೀನ್ಯರು ತಮ್ಮ ನಗರಗಳನ್ನು ಬಿಟ್ಟು ಇಸ್ರೇಲಿನ ಬೇರೆ ಕುಲಗಳ ಜನರೊಂದಿಗೆ ಯುದ್ಧಮಾಡಲು ಗಿಬೆಯ ನಗರಕ್ಕೆ ಹೋದರು.


“ನಿಮ್ಮ ಹತ್ತಿರದ ಸಂಬಂಧಿಕರಲ್ಲಿ ಯಾರಾದರೂ ಇತರ ದೇವರುಗಳನ್ನು ಅನುಸರಿಸಲು ನಿಮ್ಮನ್ನು ಗುಪ್ತವಾಗಿ ಒತ್ತಾಯ ಮಾಡಬಹುದು. ಅವರು ನಿಮ್ಮ ಸ್ವಂತ ಸಹೋದರನಾಗಿರಬಹುದು, ನಿಮ್ಮ ಮಕ್ಕಳಾಗಿರಬಹುದು, ನಿಮ್ಮ ಹೆಂಡತಿಯಾಗಿರಬಹುದು, ಅಥವಾ ಆಪ್ತಗೆಳೆಯನಾಗಿರಬಹುದು. ಅವರು ಬಂದು, ‘ಬಾ, ನಾವು ಬೇರೆ ದೇವರನ್ನು ಹಿಂಬಾಲಿಸೋಣ’ (ಈ ದೇವರನ್ನು ನೀವಾಗಲಿ ನಿಮ್ಮ ಪೂರ್ವಿಕರಾಗಲಿ ತಿಳಿದಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು