Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 20:2 - ಪರಿಶುದ್ದ ಬೈಬಲ್‌

2 ಇಸ್ರೇಲಿನ ಎಲ್ಲ ಕುಲಾಧಿಪತಿಗಳು ಅಲ್ಲಿದ್ದರು. ಅವರು ದೈವಭಕ್ತರ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿದ್ದರು. ಯುದ್ಧ ಸನ್ನದ್ಧರಾದ ನಾಲ್ಕು ಲಕ್ಷ ಜನರು ಅಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆ ದೇವಜನರ ಸಭೆಯಲ್ಲಿ ಎಲ್ಲಾ ಕುಲಾಧಿಪತಿಗಳೂ, ಯುದ್ಧಸನ್ನದ್ಧರಾದ ನಾಲ್ಕು ಲಕ್ಷ ಕಾಲಾಳುಗಳೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆ ದೇವಪ್ರಜಾಸಭೆಯಲ್ಲಿ ಎಲ್ಲಾ ಕುಲಾಧಿಪತಿಗಳೂ ಯುದ್ಧಸನ್ನದ್ಧರಾದ ನಾಲ್ಕು ಲಕ್ಷ ಕಾಲಾಳುಗಳೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆ ದೇವಪ್ರಜಾಸಭೆಯಲ್ಲಿ ಎಲ್ಲಾ ಕುಲಾಧಿಪತಿಗಳೂ ಯುದ್ಧಸನ್ನದ್ಧರಾದ ನಾಲ್ಕು ಲಕ್ಷ ಕಾಲಾಳುಗಳೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇದಲ್ಲದೆ ಇಸ್ರಾಯೇಲಿನ ಸಮಸ್ತ ಗೋತ್ರಗಳಾದ ಸಮಸ್ತ ಜನರ ಮುಖ್ಯಸ್ಥರು ಬಿಚ್ಚು ಖಡ್ಗ ಹಿಡಿದುಕೊಂಡ ನಾಲ್ಕು ಲಕ್ಷ ಕಾಲಾಳುಗಳು ದೇವರ ಸಮೂಹದ ಜನರಲ್ಲಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 20:2
9 ತಿಳಿವುಗಳ ಹೋಲಿಕೆ  

ಜೆಬಹ ಮತ್ತು ಚಲ್ಮುನ್ನ ಮತ್ತು ಅವರ ಸೈನಿಕರು ಕರ್ಕೋರ ಎಂಬ ನಗರದಲ್ಲಿದ್ದರು. ಅವರ ಸೈನ್ಯದಲ್ಲಿ ಹದಿನೈದು ಸಾವಿರ ಸೈನಿಕರಿದ್ದರು. ಪೂರ್ವದೇಶದವರ ಸೈನ್ಯದಲ್ಲಿ ಉಳಿದವರು ಇಷ್ಟೇ ಜನ. ಆ ಸೈನ್ಯದ ಒಂದು ಲಕ್ಷದ ಇಪ್ಪತ್ತು ಸಾವಿರ ಜನರು ಈಗಾಗಲೇ ಯುದ್ಧದಲ್ಲಿ ಸತ್ತಿದ್ದರು.


ಬೆನ್ಯಾಮೀನ್ಯರನ್ನು ಬಿಟ್ಟು ಉಳಿದೆಲ್ಲ ಇಸ್ರೇಲ್ ಕುಲಗಳವರು ಸೇರಿದ್ದರು. ಅವರಲ್ಲಿ ನಾಲ್ಕು ಲಕ್ಷ ಸೈನಿಕರಿದ್ದರು. ಈ ನಾಲ್ಕು ಲಕ್ಷ ಜನರ ಹತ್ತಿರ ಕತ್ತಿಗಳಿದ್ದವು. ಅವರಲ್ಲಿ ಪ್ರತಿಯೊಬ್ಬನು ತರಬೇತಿ ಪಡೆದ ಸೈನಿಕನಾಗಿದ್ದನು.


ಬೆನ್ಯಾಮೀನ್ ಕುಲದವರು ಇಪ್ಪತ್ತಾರು ಸಾವಿರ ಸೈನಿಕರನ್ನು ಒಟ್ಟುಗೂಡಿಸಿದರು. ಆ ಸೈನಿಕರೆಲ್ಲರು ಯುದ್ಧದ ತರಬೇತಿಯನ್ನು ಪಡೆದವರಾಗಿದ್ದರು. ಗಿಬೆಯ ನಗರದಲ್ಲಿಯೂ ಏಳುನೂರು ಜನರು ತರಬೇತಿ ಪಡೆದ ಸೈನಿಕರಾಗಿದ್ದರು.


ಆ ಯುದ್ಧವು ತನ್ನ ಶಕ್ತಿಯನ್ನು ಮೀರಿ ಹೋಯಿತೆಂದು ಮೋವಾಬಿನ ರಾಜನು ಗ್ರಹಿಸಿಕೊಂಡನು. ಆದ್ದರಿಂದ ಅವನು ಎದೋಮಿನ ರಾಜನನ್ನು ಕೊಂದುಹಾಕಲು ಖಡ್ಗಗಳನ್ನು ಹಿಡಿದ ತನ್ನ ಏಳುನೂರು ಜನರೊಂದಿಗೆ ನುಗ್ಗಿಹೋಗಲು ಪ್ರಯತ್ನಿಸಿದನು. ಆದರೆ ಅವರು ಎದೋಮಿನ ರಾಜನ ಬಳಿಗೆ ನುಗ್ಗಿ ಹೋಗಲಾಗಲಿಲ್ಲ.


ಯೋವಾಬನು ರಾಜನಿಗೆ ಜನರ ಪಟ್ಟಿಯನ್ನು ಕೊಟ್ಟನು. ಇಸ್ರೇಲಿನಲ್ಲಿ ಕತ್ತಿಯನ್ನು ಬಳಸಬಲ್ಲ ಎಂಟು ಲಕ್ಷ ಜನರಿದ್ದರು. ಯೆಹೂದದಲ್ಲಿ ಐದು ಲಕ್ಷ ಜನರಿದ್ದರು.


ಮಿಚ್ಛೆಯಲ್ಲಿ ಎಲ್ಲಾ ಇಸ್ರೇಲರು ಒಟ್ಟುಗೂಡುತ್ತಿದ್ದಾರೆ ಎಂಬ ಸಮಾಚಾರ ಬೆನ್ಯಾಮೀನ್ಯರಿಗೆ ತಿಳಿಯಿತು. ಇಸ್ರೇಲರು, “ಈ ಭಯಾನಕ ಕೃತ್ಯ ಹೇಗೆ ನಡೆಯಿತು. ಎಂಬುದನ್ನು ನಮಗೆ ಹೇಳು” ಎಂದು ಕೇಳಿದರು.


ಸೌಲನು ಬೆಜೆಕಿನಲ್ಲಿ ಅವರೆಲ್ಲರನ್ನೂ ಒಟ್ಟುಗೂಡಿಸಿದನು. ಅಲ್ಲಿ ಮೂರು ಲಕ್ಷ ಇಸ್ರೇಲರೂ ಮೂವತ್ತು ಸಾವಿರ ಯೆಹೂದ್ಯರೂ ಇದ್ದರು.


ಇಸ್ರೇಲರೆಲ್ಲರು ಈ ಮೂರು ಕುಲಗಳ ಮೇಲೆ ತುಂಬ ಕೋಪಗೊಂಡರು. ಅವರು ಒಟ್ಟಿಗೆ ಮೂರು ಕುಲಗಳ ವಿರುದ್ಧ ಯುದ್ಧಮಾಡಲು ನಿರ್ಧರಿಸಿದರು.


ಆಗ ಆ ಸ್ತ್ರೀಯು, “ದೇವರ ಜನರ ವಿರುದ್ಧವಾಗಿ ನೀನು ಈ ಕಾರ್ಯಗಳನ್ನು ಮಾಡಲು ಯೋಚಿಸಿರುವುದಾದರೂ ಏಕೆ? ಹೌದು, ನೀನು ಕೊಟ್ಟ ತೀರ್ಪಿನ ಮೂಲಕ ನೀನು ನನ್ನನ್ನು ತಪ್ಪಿತಸ್ಥನೆಂದು ತೋರಿಸಿ ಕೊಟ್ಟಿರುವೆ. ಏಕೆಂದರೆ ನೀನು ಬಲಾತ್ಕಾರದಿಂದ ಮನೆ ಬಿಡಿಸಿದ ಮಗನನ್ನು ಮನೆಗೆ ಕರೆದು ತಂದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು