Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 20:22 - ಪರಿಶುದ್ದ ಬೈಬಲ್‌

22-23 ಇಸ್ರೇಲರು ಯೆಹೋವನ ಬಳಿಗೆ ಹೋಗಿ ಸಾಯಂಕಾಲದವರೆಗೂ ಮೊರೆಯಿಟ್ಟರು. “ನಾವು ಮತ್ತೆ ಬೆನ್ಯಾಮೀನ್ಯರೊಡನೆ ಯುದ್ಧ ಮಾಡಲು ಹೋಗಬೇಕೇ? ಅವರು ನಮ್ಮ ಬಂಧುಗಳು” ಎಂದು ಅವರು ಯೆಹೋವನನ್ನು ಕೇಳಿದರು. ಅದಕ್ಕೆ ಯೆಹೋವನು, “ಹೋಗಿರಿ, ಅವರ ವಿರುದ್ಧ ಯುದ್ಧ ಮಾಡಿರಿ” ಎಂದು ಉತ್ತರಿಸಿದನು. ಇಸ್ರೇಲರು ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿದರು. ಮೊದಲನೇ ದಿನದಂತೆ ಅವರು ಮತ್ತೊಮ್ಮೆ ಯುದ್ಧಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಇಸ್ರಾಯೇಲ್ಯರು ತಿರುಗಿ ಧೈರ್ಯ ತಂದುಕೊಂಡು ಮೊದಲನೆಯ ದಿನದಲ್ಲಿ ವ್ಯೂಹಕಟ್ಟಿದ ಸ್ಥಳದಲ್ಲೇ ತಿರುಗಿ ವ್ಯೂಹಕಟ್ಟಿ ಯುದ್ಧಕ್ಕೆ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಇಸ್ರಯೇಲರು ಪುನಃ ಧೈರ್ಯ ತಂದುಕೊಂಡು ಮೊದಲನೆಯ ದಿನ ವ್ಯೂಹಕಟ್ಟಿದ ಸ್ಥಳದಲ್ಲೇ ಮತ್ತೆ ವ್ಯೂಹಕಟ್ಟಿ ಯುದ್ಧಕ್ಕೆ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಇಸ್ರಾಯೇಲ್ಯರು ತಿರಿಗಿ ಧೈರ್ಯ ತಂದುಕೊಂಡು ಮೊದಲನೆಯ ದಿನದಲ್ಲಿ ವ್ಯೂಹ ಕಟ್ಟಿದ ಸ್ಥಳದಲ್ಲೇ ತಿರಿಗಿ ವ್ಯೂಹಕಟ್ಟಿ ಯುದ್ಧಕ್ಕೆ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಇಸ್ರಾಯೇಲರಾದ ಜನರು ಬಲಗೊಂಡು, ಮೊದಲನೆಯ ದಿವಸ ಯುದ್ಧಕ್ಕೆ ವ್ಯೂಹ ಕಟ್ಟಿದ ಸ್ಥಳದಲ್ಲಿ ತಿರುಗಿ ವ್ಯೂಹ ಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 20:22
7 ತಿಳಿವುಗಳ ಹೋಲಿಕೆ  

ಕೇಡುಮಾಡಲು ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿ ಬಲೆಯೊಡ್ಡಲು ಆಲೋಚಿಸುವರು. “ತಮ್ಮ ಬಲೆಗಳು ಯಾರಿಗೂ ಕಾಣುವುದಿಲ್ಲ” ಎಂದು ಮಾತಾಡಿಕೊಳ್ಳುವರು.


ದಾವೀದನು ಸಂದೇಶಕನಿಗೆ, “ನೀನು ಹೋಗಿ ಯೋವಾಬನಿಗೆ: ‘ಇದರಿಂದ ನೀನು ತಳಮಳಗೊಳ್ಳಬೇಡ. ಒಂದೇ ಖಡ್ಗವು ಈ ಹೊತ್ತು ಒಬ್ಬನನ್ನು ಕೊಂದರೆ, ಇನ್ನೊಂದು ದಿನ ಇನ್ನೊಬ್ಬನನ್ನು ಕೊಲ್ಲುವುದು. ರಬ್ಬ ನಗರದ ಮೇಲೆ ಧೈರ್ಯವಾಗಿ ಆಕ್ರಮಣಮಾಡು. ಆಗ ನೀನು ನಗರವನ್ನು ಗೆಲ್ಲುವೆ!’ ಈ ಮಾತುಗಳಿಂದ ಯೋವಾಬನನ್ನು ಹುರಿದುಂಬಿಸು” ಎಂಬುದಾಗಿ ಹೇಳಿದನು.


ಸೈನ್ಯದಲ್ಲಿದ್ದ ಎಲ್ಲರೂ ದುಃಖತಪ್ತರಾಗಿದ್ದರು ಮತ್ತು ಕೋಪಗೊಂಡಿದ್ದರು; ಯಾಕೆಂದರೆ ಅವರ ಗಂಡು ಮತ್ತು ಹೆಣ್ಣುಮಕ್ಕಳೆಲ್ಲ ಸೆರೆಯಾಳುಗಳಾಗಿ ಒಯ್ಯಲ್ಪಟ್ಟಿದರು. ದಾವೀದನನ್ನು ಕಲ್ಲುಗಳಿಂದ ಕೊಲ್ಲಬೇಕೆಂದು ಅವರು ಮಾತಾಡಿಕೊಳ್ಳುತ್ತಿದ್ದರು. ದಾವೀದನು ಇದರಿಂದ ತಳಮಳಗೊಂಡರೂ ತನ್ನ ದೇವರಾದ ಯೆಹೋವನಲ್ಲಿ ತನ್ನನ್ನು ಬಲಪಡಿಸಿಕೊಂಡನು.


ಬೆನ್ಯಾಮೀನ್ಯರನ್ನು ಬಿಟ್ಟು ಉಳಿದೆಲ್ಲ ಇಸ್ರೇಲ್ ಕುಲಗಳವರು ಸೇರಿದ್ದರು. ಅವರಲ್ಲಿ ನಾಲ್ಕು ಲಕ್ಷ ಸೈನಿಕರಿದ್ದರು. ಈ ನಾಲ್ಕು ಲಕ್ಷ ಜನರ ಹತ್ತಿರ ಕತ್ತಿಗಳಿದ್ದವು. ಅವರಲ್ಲಿ ಪ್ರತಿಯೊಬ್ಬನು ತರಬೇತಿ ಪಡೆದ ಸೈನಿಕನಾಗಿದ್ದನು.


ಬೆನ್ಯಾಮೀನ್ ಕುಲದವರು ಇಪ್ಪತ್ತಾರು ಸಾವಿರ ಸೈನಿಕರನ್ನು ಒಟ್ಟುಗೂಡಿಸಿದರು. ಆ ಸೈನಿಕರೆಲ್ಲರು ಯುದ್ಧದ ತರಬೇತಿಯನ್ನು ಪಡೆದವರಾಗಿದ್ದರು. ಗಿಬೆಯ ನಗರದಲ್ಲಿಯೂ ಏಳುನೂರು ಜನರು ತರಬೇತಿ ಪಡೆದ ಸೈನಿಕರಾಗಿದ್ದರು.


ಆಗ ಬೆನ್ಯಾಮೀನ್ಯರ ಸೈನ್ಯವು ಗಿಬೆಯ ನಗರದಿಂದ ಹೊರಗೆ ಬಂದಿತು. ಆ ದಿನದ ಯುದ್ಧದಲ್ಲಿ ಬೆನ್ಯಾಮೀನ್ಯರ ಸೈನ್ಯವು ಇಸ್ರೇಲ್ ಸೈನ್ಯದ ಇಪ್ಪತ್ತೆರಡು ಸಾವಿರ ಜನರನ್ನು ಕೊಂದುಹಾಕಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು