Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 20:42 - ಪರಿಶುದ್ದ ಬೈಬಲ್‌

42 ಬೆನ್ಯಾಮೀನ್ಯರ ಸೈನಿಕರು ಇಸ್ರೇಲ್ ಸೈನಿಕರಿಂದ ತಪ್ಪಿಸಿಕೊಂಡು ಓಡತೊಡಗಿದರು. ಅವರು ಮರುಭೂಮಿಯ ಕಡೆಗೆ ಓಡಿದರು. ಆದರೆ ಯುದ್ಧದಿಂದ ತಪ್ಪಿಸಿಕೊಳ್ಳುವುದು ಅವರಿಂದ ಆಗಲಿಲ್ಲ. ನಗರಗಳಿಂದ ಇಸ್ರೇಲರು ಹೊರಬಂದು ಅವರನ್ನು ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಅವರು ಇಸ್ರಾಯೇಲರಿಗೆ ಬೆನ್ನು ತೋರಿಸಿ ಅರಣ್ಯಮಾರ್ಗವಾಗಿ ಓಡಿಹೋದರು. ಆದರೆ ಯುದ್ಧವೀರರು ಅವರನ್ನು ಹಿಂದಟ್ಟಿದ್ದರಿಂದಲೂ, ಪಟ್ಟಣಕ್ಕೆ ಬೆಂಕಿ ಹೊತ್ತಿಸಿದವರು ಹೊರಗೆ ಬಂದುಬಿಟ್ಟಿದ್ದರಿಂದಲೂ, ಅವರು ಇಬ್ಬರ ಮಧ್ಯದಲ್ಲಿ ಸಿಕ್ಕಿಹಾಕಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಅವರು ಇಸ್ರಯೇಲರಿಗೆ ಬೆನ್ನುತೋರಿಸಿ ಅರಣ್ಯಮಾರ್ಗವಾಗಿ ಓಡಿಹೋದರು. ಆದರೆ ಸೈನಿಕರು ಅವರನ್ನು ಹಿಂದಟ್ಟಿದ್ದರಿಂದಲೂ ಪಟ್ಟಣಕ್ಕೆ ಬೆಂಕಿಹೊತ್ತಿಸಿದವರು ಬಂದುಬಿಟ್ಟದ್ದರಿಂದಲೂ ಅವರು ಉಭಯರ ಮಧ್ಯದಲ್ಲಿ ಸಿಕ್ಕಿ ಹಾಳಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಅವರು ಇಸ್ರಾಯೇಲ್ಯರಿಗೆ ಬೆನ್ನುತೋರಿಸಿ ಅರಣ್ಯಮಾರ್ಗವಾಗಿ ಓಡಿಹೋದರು. ಆದರೆ ಯುದ್ಧಸ್ಥರು ಅವರನ್ನು ಹಿಂದಟ್ಟಿದ್ದರಿಂದಲೂ ಪಟ್ಟಣಕ್ಕೆ ಬೆಂಕಿ ಹೊತ್ತಿಸಿದವರು ಬಂದುಬಿಟ್ಟದ್ದರಿಂದಲೂ ಅವರು ಉಭಯರ ಮಧ್ಯದಲ್ಲಿ ಸಿಕ್ಕಿ ಹಾಳಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಅವರು ಇಸ್ರಾಯೇಲರ ಮುಂದೆ ಮರುಭೂಮಿಯ ಮಾರ್ಗಕ್ಕೆ ತಿರುಗಿಕೊಂಡು ಹೋದರು. ಆದರೆ ಸೈನಿಕರು ಅವರನ್ನು ಹಿಡಿದು, ಪಟ್ಟಣದಿಂದ ಹೊರಟು ಬರುವ ಜನರನ್ನು ಮಧ್ಯದಲ್ಲೇ ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 20:42
5 ತಿಳಿವುಗಳ ಹೋಲಿಕೆ  

“ಇಸ್ರೇಲೇ, ನೀನು ಗಿಬ್ಯದವರ ಕಾಲದಿಂದಲೂ ಪಾಪ ಮಾಡುತ್ತಲೇ ಬಂದಿರುವೆ. (ಆ ಜನರು ಅಲ್ಲಿ ಪಾಪವನ್ನು ಮಾಡುತ್ತಲೇ ಇದ್ದಾರೆ.) ಗಿಬ್ಯದ ಆ ದುಷ್ಟ ಜನರನ್ನು ಯುದ್ಧವು ಹಿಡಿದುಕೊಳ್ಳುವುದು.


ಗಿಬ್ಯದ ಕಾಲದಂತೆ ಇಸ್ರೇಲರು ನಾಶನದ ಕಡೆಗೆ ಆಳವಾಗಿ ಇಳಿದಿದ್ದಾರೆ. ಯೆಹೋವನು ಇಸ್ರೇಲರ ಪಾಪಗಳನ್ನು ತನ್ನ ನೆನಪಿಗೆ ತಂದುಕೊಂಡು ಅವರನ್ನು ಶಿಕ್ಷಿಸುವನು.


ಅತಿ ಕಷ್ಟಗಳನ್ನು ಅನುಭವಿಸಿದ ಮೇಲೆ ಯೆಹೂದ ಬಂಧನಕ್ಕೊಳಗಾಗಿದ್ದಾಳೆ. ಅತಿ ಶ್ರಮಪಟ್ಟ ಮೇಲೆಯೂ ಅವಳು ಸೆರೆ ಒಯ್ಯಲ್ಪಟ್ಟಿದ್ದಾಳೆ. ಯೆಹೂದ ಬೇರೆ ಜನಾಂಗಗಳ ಜೊತೆಯಲ್ಲಿ ವಾಸಿಸುತ್ತಾಳೆ. ಆದರೆ ಅವಳಿಗೆ ವಿಶ್ರಾಂತಿ ಸಿಕ್ಕಿಲ್ಲ. ಅವಳನ್ನು ಬೆನ್ನಟ್ಟಿದ ಜನರು ಆಕೆಯು ಬಳಲಿ ಹೋಗಿದ್ದಾಗಲೇ ಅವಳನ್ನು ಹಿಡಿದುಕೊಂಡರು.


ಯುದ್ಧದಲ್ಲಿ ಇಸ್ರೇಲರು “ಆಯಿ”ಯ ಜನರನ್ನು ಬೆನ್ನಟ್ಟಿ ಬಯಲುಗಳಲ್ಲಿಯೂ ಅರಣ್ಯದಲ್ಲಿಯೂ ಕೊಂದುಹಾಕಿದರು. ಬಳಿಕ ಇಸ್ರೇಲರು “ಆಯಿ”ಗೆ ಹಿಂತಿರುಗಿ ಪಟ್ಟಣದಲ್ಲಿ ಜೀವಸಹಿತ ಉಳಿದಿದ್ದ ಎಲ್ಲರನ್ನು ಕೊಂದುಹಾಕಿದರು.


ಯೆಹೋಶುವನು ಮತ್ತು ಇಸ್ರೇಲರ ಎಲ್ಲ ಜನರು “ಆಯಿ”ಯ ಸೈನ್ಯವು ತಮ್ಮನ್ನು ಹಿಮ್ಮೆಟ್ಟುವುದಕ್ಕೆ ಅವಕಾಶ ಮಾಡಿಕೊಟ್ಟರು. ಯೆಹೋಶುವನು ಮತ್ತು ಅವನ ಜನರು ಪೂರ್ವಕ್ಕೆ ಮರಭೂಮಿಯ ಕಡೆಗೆ ಓಡಲು ಪ್ರಾರಂಭಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು