Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 20:47 - ಪರಿಶುದ್ದ ಬೈಬಲ್‌

47 ಆದರೆ ಬೆನ್ಯಾಮೀನ್ಯರ ಆರುನೂರು ಜನರು ತಪ್ಪಿಸಿಕೊಂಡು ಮರುಭೂಮಿಗೆ ಓಡಿಹೋದರು. ಅವರು ರಿಮ್ಮೋನ್ ಗಿರಿ ಎಂಬ ಸ್ಥಳಕ್ಕೆ ಓಡಿಹೋದರು. ಅಲ್ಲಿ ಅವರು ನಾಲ್ಕು ತಿಂಗಳುಗಳವರೆಗೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಆದರೆ ಆರು ನೂರು ಮಂದಿ ಅರಣ್ಯಮಾರ್ಗವಾಗಿ ಓಡಿಹೋಗಿ, ರಿಮ್ಮೋನ್ ಗಿರಿಯನ್ನು ಸೇರಿ ಅಲ್ಲಿ ನಾಲ್ಕು ತಿಂಗಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ಆದರೆ ಆರುನೂರು ಮಂದಿ ಮರುಭೂಮಿ ಮಾರ್ಗವಾಗಿ ಓಡಿಹೋಗಿ ರಿಮ್ಮೋನ್ ಗಿರಿಯನ್ನು ಸೇರಿ ಅಲ್ಲಿ ನಾಲ್ಕು ತಿಂಗಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ಆದರೆ ಆರು ನೂರು ಮಂದಿ ಅರಣ್ಯಮಾರ್ಗವಾಗಿ ಓಡಿಹೋಗಿ ರಿಮ್ಮೋನ್ ಗಿರಿಯನ್ನು ಸೇರಿ ಅಲ್ಲಿ ನಾಲ್ಕು ತಿಂಗಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 ಆದರೆ ಆರುನೂರು ಮಂದಿ ತಿರುಗಿಕೊಂಡು ಮರುಭೂಮಿಯಲ್ಲಿರುವ ರಿಮ್ಮೋನ್ ಬೆಟ್ಟಕ್ಕೆ ಓಡಿಹೋಗಿ, ರಿಮ್ಮೋನ್ ಗುಡ್ಡದಲ್ಲಿ ನಾಲ್ಕು ತಿಂಗಳು ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 20:47
9 ತಿಳಿವುಗಳ ಹೋಲಿಕೆ  

ಯೆಹೋವನೇ, ನಾನು ನಿನ್ನ ವಿಚಾರ ಕೇಳಿದೆನು. ಯೆಹೋವನೇ, ನೀನು ಹಿಂದಿನ ಕಾಲದಲ್ಲಿ ಮಾಡಿದ ಮಹತ್ಕಾರ್ಯಗಳು ನನ್ನನ್ನು ಚಕಿತಗೊಳಿಸಿವೆ. ನಮ್ಮ ಕಾಲದಲ್ಲಿಯೂ ಮಹತ್ಕಾರ್ಯಗಳನ್ನು ಮಾಡಬೇಕೆಂದು ಪ್ರಾರ್ಥಿಸುತ್ತೇನೆ. ದಯಮಾಡಿ, ಆ ಘಟನೆಗಳು ನಮ್ಮ ದಿವಸಗಳಲ್ಲೂ ನೆರವೇರುವಂತೆ ಮಾಡು. ಅದರ ಜೊತೆಯಲ್ಲಿ ನಮ್ಮ ಮೇಲೆ ಕರುಣೆ ತೋರಿಸಲು ಮರೆಯಬೇಡ.


ಯೆಹೋವನು ಶಿಕ್ಷಿಸುವಾಗ ಕರುಣೆಯುಳ್ಳವನೂ ಆಗಿರುತ್ತಾನೆ. ಆತನು ತನ್ನ ಮಹಾಪ್ರೀತಿ ಮತ್ತು ಕನಿಕರಗಳಿಂದಲೇ ಕರುಣೆಯುಳ್ಳವನಾಗಿರುತ್ತಾನೆ.


“ಯೆಹೋವನೇ, ಅದು ನಮ್ಮ ಪಾಪಗಳ ಫಲವೆಂಬುದು ನಮಗೆ ತಿಳಿದಿದೆ. ನಮ್ಮ ಪಾಪಗಳಿಂದಾಗಿ ನಾವು ಈಗ ತೊಂದರೆಗಳನ್ನು ಅನುಭವಿಸುತ್ತಿದ್ದೇವೆ. ಯೆಹೋವನೇ, ನಿನ್ನ ಒಳ್ಳೆಯ ಹೆಸರಿಗಾಗಿ ನಮಗೇನಾದರೂ ಸಹಾಯಮಾಡು. ನಾವು ನಿನ್ನನ್ನು ಅನೇಕ ಸಲ ತ್ಯಜಿಸಿದ್ದೇವೆಂದು ಒಪ್ಪಿಕೊಳ್ಳುತ್ತೇವೆ. ನಾವು ನಿನ್ನ ವಿರುದ್ಧ ಪಾಪಮಾಡಿದ್ದೇವೆ.


ಆದರೆ ಸರ್ವಶಕ್ತನಾದ ಯೆಹೋವನು ಸ್ವಲ್ಪ ಮಂದಿಯನ್ನಾದರೂ ಉಳಿಸಿ ಅಲ್ಲಿ ವಾಸಿಸುವಂತೆ ಮಾಡಿದ್ದಾನೆ. ನಾವು ಸೊದೋಮ್ ಗೊಮೋರ ಪಟ್ಟಣಗಳಂತೆ ಸಂಪೂರ್ಣವಾಗಿ ನಾಶವಾಗಲಿಲ್ಲ.


ಇಸ್ರೇಲರು ಬೆನ್ಯಾಮೀನ್ಯರಿಗೆ ಒಂದು ಸಂದೇಶವನ್ನು ಕಳುಹಿಸಿದರು. ಅವರು ಬೆನ್ಯಾಮೀನ್ಯರೊಂದಿಗೆ ಶಾಂತಿಯ ಪ್ರಸ್ತಾಪವನ್ನು ಮಾಡಿದರು. ಬೆನ್ಯಾಮೀನ್ಯರು ರಿಮ್ಮೋನ್‌ಗಿರಿ ಎಂಬ ಸ್ಥಳದಲ್ಲಿದ್ದರು.


ಆ ದಿನ ಬೆನ್ಯಾಮೀನ್ಯರ ಇಪ್ಪತ್ತೈದು ಸಾವಿರ ಜನ ಸೈನಿಕರು ಕೊಲ್ಲಲ್ಪಟ್ಟರು. ಅವರೆಲ್ಲರೂ ಕೈಯಲ್ಲಿ ಖಡ್ಗ ಹಿಡಿದು ಬಹಳ ಶೂರತನದಿಂದ ಯುದ್ಧ ಮಾಡಿದರು.


ಇಸ್ರೇಲರು ಬೆನ್ಯಾಮೀನ್ಯರ ಪ್ರದೇಶಕ್ಕೆ ಹಿಂತಿರುಗಿ ಹೋದರು. ಅವರು ಹೋದ ಪ್ರತಿಯೊಂದು ನಗರದಲ್ಲಿ ಅವರ ಎಲ್ಲ ಪಶುಗಳನ್ನು ಸಹ ಕೊಂದರು. ತಮ್ಮ ಕಣ್ಣಿಗೆ ಬಿದ್ದ ಎಲ್ಲವನ್ನೂ ಅವರು ನಾಶಮಾಡಿದರು. ಅವರು ಹೋದ ಪ್ರತಿಯೊಂದು ನಗರವನ್ನು ಸುಟ್ಟುಹಾಕಿದರು.


ಆ ಸಮಯದಲ್ಲಿ ಜೆರುಸಲೇಮಿನ ಸುತ್ತಮುತ್ತ ಇರುವ ಜಾಗವು ನಿರ್ಜನವಾಗಿದ್ದು ಅರಾಬಾ ಮರುಭೂಮಿಯಂತಿರುವದು. ದೇಶವು ಗೆಬದಿಂದ ಹಿಡಿದು ನೆಗೆವ್‌ನಲ್ಲಿರುವ ರಿಮ್ಮೋನ್ ತನಕ ಮರುಭೂಮಿಯಂತಿರುವದು. ಆದರೆ ಜೆರುಸಲೇಮ್ ನಗರವು ತಿರುಗಿ ಕಟ್ಟಲ್ಪಡುವದು. ಬೆನ್ಯಾಮೀನ್ ದ್ವಾರದಿಂದ ಮೂಲೇ ದ್ವಾರ ಅಥವಾ ಮೊದಲನೇ ದ್ವಾರದ ತನಕ ಮತ್ತು ಹನನೇಲ್ ಬುರುಜಿನಿಂದ ಹಿಡಿದು ಅರಸನ ದ್ರಾಕ್ಷಿತೊಟ್ಟಿಯ ತನಕ ಹೊಸದಾಗಿ ಕಟ್ಟಲ್ಪಡುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು